• Home
  • About Us
  • ಕರ್ನಾಟಕ
Wednesday, October 29, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅರಿವು ಕೇಂದ್ರಗಳಿಗೆ ವಿಶೇಷ ಚೇತನ ಸ್ನೇಹಿ ಸಾಧನಗಳ ಪೂರೈಕೆಅರಿವು ಕೇಂದ್ರಗಳಿಗೆ ವಿಶೇಷ ಚೇತನ ಸ್ನೇಹಿ ಸಾಧನಗಳ ಪೂರೈಕೆ

ಪ್ರತಿಧ್ವನಿ by ಪ್ರತಿಧ್ವನಿ
February 6, 2025
in Top Story, ಕರ್ನಾಟಕ, ರಾಜಕೀಯ
0
ಅರಿವು ಕೇಂದ್ರಗಳಿಗೆ ವಿಶೇಷ ಚೇತನ ಸ್ನೇಹಿ ಸಾಧನಗಳ ಪೂರೈಕೆಅರಿವು ಕೇಂದ್ರಗಳಿಗೆ ವಿಶೇಷ ಚೇತನ ಸ್ನೇಹಿ ಸಾಧನಗಳ ಪೂರೈಕೆ
Share on WhatsAppShare on FacebookShare on Telegram




ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಗಳಾಗುವ ಅಭ್ಯರ್ಥಿಗಳಿಗೆ ಮಾಹಿತಿ ನೀಡುವಲ್ಲಿ ಹಾಗೂ ಉದ್ಯೋಗಾವಕಾಶಗಳನ್ನು ಅರಸುವವರಿಗೆ ಮಾರ್ಗದರ್ಶಿಯಾಗಿವೆ, ಇದರೊಂದಿಗೆ ವಿಶೇಷ ಚೇತನರಿಗೆ ವಿಶೇಷ ಅರಿವು ನೀಡುವಲ್ಲಿಯೂ ಸುಸಜ್ಜಿತವಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ADVERTISEMENT
Priyanka Gandhi: ಅಮೆರಿಕದಿಂದ ಭಾರತೀಯರ ವಾಪಸ್ ಬಗ್ಗೆ ಪ್ರಿಯಾಂಕಾ ಗಾಂಧಿ ಹೇಳಿದ್ದೇನು..! #modi #trump

ಅರಿವು ಕೇಂದ್ರಗಳಲ್ಲಿ ವಿಶೇಷ ಚೇತನರಿಗೆ ಸ್ನೇಹಮಯಿ ಸಾಧನಗಳನ್ನು ವಿತರಿಸುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ವಿಡಿಯೊ ಸಭೆ ಮೂಲಕ ಚಾಲನೆ ನೀಡಿ ಮಾತನಾಡಿದರು. ರಾಜ್ಯದ 6,000 ಗ್ರಾಮ ಪಂಚಾಯತಿಗಳು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವಿಡಿಯೊ ಸಭೆಯಲ್ಲಿ ಭಾಗಿಗಳಾಗಿದ್ದರು.

ಇಡೀ ಭಾರತ ದೇಶಕ್ಕೆ ಮಾದರಿಯಾಗುವಂತಹ ಕಾರ್ಯಕ್ರಮ ಇದಾಗಿದ್ದು, ವಿಶೇಷ ಚೇತನ ವ್ಯಕ್ತಿಗಳು ಅರಿವು ಕೇಂದ್ರಗಳನ್ನು ಸುಲಭವಾಗಿ ಬಳಸಲು ಅಗತ್ಯವಾದ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ವಿಶೇಷವಾಗಿ, ದೃಷ್ಟಿ ಹೀನತೆ ಹೊಂದಿರುವ ವ್ಯಕ್ತಿಗಳಿಗೆ ಬ್ರೈಲ್ ಸಾಹಿತ್ಯ ಮತ್ತು ಇತರ ಸಹಾಯಕ ತಂತ್ರಜ್ಞಾನಗಳು ಲಭಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಈ ಸಂದರ್ಭದಲ್ಲಿ ಸಚಿವರು ಹೇಳಿದರು.
ರಾಷ್ಟ್ರೀಯ ಅಂಧರ ಸಂಸ್ಥೆ ಇಂಟರ್‌ಪಾಯಿಂಟ್ ಬ್ರೈಲ್ ಸ್ಲೇಟು ಮತ್ತು ಸ್ಟೈಲಸ್, ಕಾನ್ಕ್ಲೇವ್ ಹೆಡ್ ಪ್ಲಾಸ್ಟಿಕ್ ಸ್ಟೈಲಸ್, ಟ್ಯಾಕ್ಟೈಲ್ ಚೆಸ್ ಬೋರ್ಡ್ (ಇನ್‌ಕ್ಲೂಸಿವ್ ಡಿಸೈನ್), ಆಡಿಯೋ ಬಾಲ್, ಪಜಲ್, ಸ್ನೇಕ್ ಮತ್ತು ಲಾಡರ್ ಡೈಸ್ ಜೊತೆ ಪ್ಲೇಟ್ ಮತ್ತು ಆಬಾಕಸ್ ಉಪಕರಣಗಳನ್ನು ಅರಿವು ಕೇಂದ್ರಗಳಿಗೆ ಒದಗಿಸಲಾಗಿದೆ. ಇದರೊಂದಿಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಮತ್ತು ಯುಪಿಎಸ್‌ ಖರೀದಿಸಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದೂ ಸಚಿವರು ತಿಳಿಸಿದರು.

ಈಗಾಗಲೇ ಡಿಜಿಟಲ್‌ ಕಲಿಕಾ ಸಾಮಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ, ಸಂವಿಧಾನದ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನಾರ್ಜನೆ ಮುಂತಾದ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ, ಗ್ರಾಮೀಣ ಪ್ರದೇಶದಲ್ಲಿ ಒಟ್ಟು 5888 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, 5767 ಅರಿವು ಕೇಂದ್ರಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ, ಈ ಕೇಂದ್ರಗಳಲ್ಲಿ ʼಓದುವ ಬೆಳಕುʼ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಸುಮಾರು 50 ಲಕ್ಷ ಮಕ್ಕಳು ನೋಂದಾಯಿಸಲ್ಪಟ್ಟಿದ್ದಾರೆ ಎಂದೂ ಸಚಿವರು ಮಾಹಿತಿ ನೀಡಿದರು.

ಪ್ರತಿ ಮಾಹೆ ಚಟುವಟಿಕೆಗಳು
ಅರಿವು ಕೇಂದ್ರಗಳಲ್ಲಿ ಪ್ರತಿ ಮಾಹೆ ಮಕ್ಕಳ ಬೌದ್ಧಿಕ ವಿಕಸನಕ್ಕೆ ಅನುವಾಗುವಂತಹ ಓದಿನ ಮನೆಗೆ ಹೋಗೋಣ, ಚದುರಂಗ ಆಟ ಆಡೋಣ, ಗಟ್ಟಿ ಓದು, ಅಮ್ಮನಿಗಾಗಿ ಒಂದು ಪುಸ್ತಕ, ಪತ್ರ ಬರೆಯುವ ಅಭಿಯಾನ, ಚಿಣ್ಣರ ಚಿತ್ತಾರ, ಮಕ್ಕಳಿಗೆ ಬೇಸಿಗೆ ಶಿಬಿರ, ಸಣ್ಣ ಕಥೆ ಬರೆಯುವುದು, ನನ್ನ ಪ್ರೀತಿಯ ಗ್ರಂಥಾಲಯ ಅಭಿಯಾನಗಳ ಮೂಲಕ ಚಟುವಟಿಕೆಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಅರಿವು ಕೇಂದ್ರಗಳು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದು ರಾಷ್ಟ್ರದಲ್ಲಿಯೇ ಮಾದರಿಯಾಗಿವೆ. 6600 ಹೊಸ ಗ್ರಾಮ ಗ್ರಂಥಾಲಯಗಳನ್ನು ಪ್ರಾರಂಭಿಸುತ್ತಿದ್ದು, ಜ್ಞಾನದ ಹರಿವು ಗ್ರಾಮೀಣ ಪ್ರದೇಶದ ಶೈಕ್ಷಣಿಕ ಅಭ್ಯುದಯಕ್ಕೆ ನಾಂದಿ ಹಾಡಿದೆ ಎಂದೂ ಸಚಿವರು ಹೇಳಿದರು. ಹಲವಾರು ಸಂಸ್ಥೆಗಳು ಅರಿವು ಕೇಂದ್ರಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದೂ ಸಚಿವರು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್‌, ವಿಷಯ ಪರಿಣಿತರಾದ ಡಾ.ಇಂದುಮತಿ ರಾವ್‌ ಮತ್ತು ಪ್ರಶಾಂತ್‌ ಮಾತನಾಡಿದರು. ಕರ್ನಾಟಕ ಪಂಚಾಯತ್‌ ರಾಜ್‌ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Tags: bengaluru underworldBollywoodcomedy movieshindi dubbed moviehindi dubbed movieshindi moviesMoviesnew hindi dubbed movienew south indian movies dubbed in hindi 2022 fullnew south movie 2022 hindi dubbedrashmika mandanasandalwood actorsSandalwood actresssandalwood heroinessandhna maramsanthana maram kadathal veerappansanthana maram valarpusauth new movie 2022 hindi dubbedsouth movie
Previous Post

ಕುಮಾರಸ್ವಾಮಿ ಮೊದಲು ಮೇಕೆದಾಟಿಗೆ ಅನುಮತಿ ಕೊಡಿಸಲಿ ; ಆಮೇಲೆ ಉಳಿದ ವಿಚಾರ ಮಾತಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್

Next Post

ನಟ ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗುಡ್ ನ್ಯೂಸ್ – ಮತ್ತೆ ತೆರೆಗೆ ಬರ್ತಿದೆ ‘ ನಮ್ಮ ಪ್ರೀತಿಯ ರಾಮು ‘ 

Related Posts

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
0

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

October 28, 2025

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

October 28, 2025
Next Post
ನಟ ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗುಡ್ ನ್ಯೂಸ್ – ಮತ್ತೆ ತೆರೆಗೆ ಬರ್ತಿದೆ ‘ ನಮ್ಮ ಪ್ರೀತಿಯ ರಾಮು ‘ 

ನಟ ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗುಡ್ ನ್ಯೂಸ್ - ಮತ್ತೆ ತೆರೆಗೆ ಬರ್ತಿದೆ ‘ ನಮ್ಮ ಪ್ರೀತಿಯ ರಾಮು ‘ 

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada