ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ ಅವರನ್ನು ಕ್ಷೇತ್ರದ ಮತದಾರರು ಬೆಂಬಲಿಸಬೇಕೆಂದು ರಾಜ್ಯ ವಿಧಾನಪರಿಷತ್ ಮಾಜಿ ಸದಸ್ಯ ಮೋಹನ್ ಕುಮಾರ್ ಕೊಂಡಜ್ಜಿ,ಮನವಿ ಮಾಡಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಅವರು ಈಗ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆಯಲ್ಲಿದ್ದಾರೆ. ಅವರು ಬಹಳ ದೂರದೃಷ್ಟಿಯುಳ್ಳ ಮತ್ತು ನಿಷ್ಠಾವಂತ ರಾಜಕಾರಣಿಯಾಗಿದ್ದಾರೆ ಎಂದು ಹೇಳಿದ್ದಾರೆ.

2022ರಲ್ಲಿ ಕರ್ನಾಟಕದ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವೈಯಕ್ತಿಕವಾಗಿ ಮನವೊಲಿಸಿ, ಕರ್ನಾಟಕದ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವೈಯಕ್ತಿಕವಾಗಿ ಸಂಪರ್ಕಿಸಿ ಹೊಸೂರ್ ಮತ್ತು ಬೆಂಗಳೂರು ನಡುವೆ ಮೆಟ್ರೋ ರೈಲು ಸೇವೆ ಜಾರಿಗೊಳಿಸುವುದಕ್ಕಾಗಿ ಕೋರುವಂತೆ ಮಾಡಿದ್ದರು.

ಅದರಿಂದ ಪ್ರತಿದಿನ ಉದ್ಯೋಗ ಮತ್ತು ವ್ಯಾಪಾರಕ್ಕಾಗಿ ಪ್ರಯಾಣಿಸುವ ಸಾವಿರಾರು ಪ್ರಯಾಣಿಕರಿಗೆ ಸಹಾಯಕವಾಗುತ್ತದೆ ಎಂದು ಆಗ ಮನ ವೊಲಿಸಿದ್ದರು. ಮೂಲತಃ ಕೇಂದ್ರ ಸರ್ಕಾರ ಮತ್ತು ನಮ್ಮ ಕರ್ನಾಟಕ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿತ್ತು. ಕಾರಣಾಂತರದಿಂದ ಆ ಕೆಲಸ ಆಗಲಿಲ್ಲ. ಈ ಬಾರಿ ಅವರು ತಮಿಳುನಾಡು ವಿಧಾನಸಭೆಯ ಸದಸ್ಯರಾಗಿ ಗೆದ್ದರೆ, ಕರ್ನಾಟಕ ಮತ್ತು ತಮಿಳುನಾಡಿನ ಜನರಿಗಾಗಿ ಬಲವಾಗಿ ಲಾಬಿ ಮಾಡಿ ಮೆಟ್ರೋ ರೈಲಿನ ಈ ಚಿಂತನೆ ಮತ್ತು ದೂರದೃಷ್ಟಿಯ ಯೋಜನೆಯನ್ನು ನಿಜವಾಗಿಸುತ್ತಾರೆ. ಆದ್ದರಿಂದ ದಯವಿಟ್ಟು ಅವರಿಗೆ ಓಟ್ ಮಾಡಿ ಗೆಲಿಸಿ ಎಂದು ಮೋಹನ್ ಕುಮಾರ್ ಕೊಂಡಜ್ಜಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು ಚೆಲ್ಲ ಕುಮಾರ್ ಆಶೀರ್ವಾದ ಮಾಡುವಂತೆ ಕೋರಿದ್ದಾರೆ.





