ಇಂಡಿಯಾದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅನೇಕ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದು, ಭಾರತಸ ಅಗ್ರ ಅಥ್ಲೀಟ್ಗಳು ದೆಹಲಿಯ ಜಂತರ್ ಮಂತರ್ನಲ್ಲಿ ತಮ್ಮ ಮೀಟೂ ಪ್ರೊಟೆಸ್ಟ್ನ್ನ ಮತ್ತೆ ಆರಂಭಿಸಿದ್ದಾರೆ. ಈ ಹಿಂದೆ ಆರೋಪಗಳ ಬಗ್ಗೆ ಸಮಿತಿ ತನಿಖೆ ನಡೆಸಿರೋದಾಗಿ ಭರವಸೆ ನೀಡಿದ ಬಳಿಕ ಈ ವರ್ಷದ ಆರಂಭದಲ್ಲಿ ಪ್ರತಿಭಟನೆಯನ್ನ ಹಿಂಪಡೆದಿದ್ದ ಕುಸ್ತಿಪಟುಗಳು , ಪ್ರಕರಣದಲ್ಲಿ ಪೊಲೀಸರು ಎಫ್ಐಆರ್ ದಾಖಲಿಸುವವರೆಗೆ ಪ್ರತಿಭಟನಾ ಸ್ಥಳದಲ್ಲಿ ಇರುವುದಾಗಿ ಪಟ್ಟು ಹಿಡಿದಿದ್ದಾರೆ.

ನಾವು ಯಾರನ್ನೂ ಕಣ್ಣು ಮುಚ್ಚಿ ನಂಬುವುದಿಲ್ಲ. ಕಳೆದ ಬಾರಿ ನಮ್ಮ ದಾರಿ ತಪ್ಪಿಸಲಾಗಿತ್ತು. ಈ ಸಲ ಈ ಪ್ರಕರಣದಲ್ಲಿ ರಾಜಕೀಯವಿಲ್ಲ ಎಂದ ನಾವು ಭಾವಿಸುತ್ತೇವೆಎಂದು ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ. ಈ ಬಾರಿ, ಬಿಜೆಪಿ, ಕಾಂಗ್ರೆಸ್, ಎಎಪಿ, ಅಥವಾ ಯಾವುದೇ ಪಕ್ಷವಾಗಲಿ ನಮ್ಮ ಪ್ರೊಟೆಸ್ಟ್ಗೆ ಸೇರಲು ಎಲ್ಲಾ ಪಕ್ಷಗಳಿಗೆ ಸ್ವಾಗತವಿದೆ. ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಅಂತ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದಾರೆ.






