• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಪ್ರತಿಧ್ವನಿ by ಪ್ರತಿಧ್ವನಿ
August 21, 2023
in ಇದೀಗ, ದೇಶ
0
ಸುಪ್ರೀಂ ಕೋರ್ಟ್‌

ಸುಪ್ರೀಂ ಕೋರ್ಟ್‌

Share on WhatsAppShare on FacebookShare on Telegram

ವಿವಾಹೇತರ ಗರ್ಭಧಾರಣೆಯು ಅಪಾಯಕಾರಿಯಾಗಿದೆ. ಆದ್ದರಿಂದ ಅತ್ಯಾಚಾರ ಸಂತ್ರಸ್ತೆಗೆ ತಮ್ಮ 27 ವಾರಗಳ ಭ್ರೂಣ ತೆಗೆಸಲು (ಗರ್ಭಪಾತಕ್ಕೆ) ಸುಪ್ರೀಂ ಕೋರ್ಟ್ ಸೋಮವಾರ (ಆಗಸ್ಟ್ 21) ಅನುಮತಿ ನೀಡಿ ಆದೇಶಿಸಿದೆ.

ADVERTISEMENT

ಅತ್ಯಾಚಾರ ಸಂತ್ರಸ್ತೆಯ ವೈದ್ಯಕೀಯ ವರದಿಗಳನ್ನು ಪರಿಶೀಲಿಸಿದ ನ್ಯಾ. ಬಿ.ವಿ. ನಾಗರತ್ನಾ ಮತ್ತು ನ್ಯಾ.ಉಜ್ಜಲ್ ಭುಯಾನ್ ಅವರಿದ್ದ ಪೀಠ, ಗುಜರಾತ್ ಹೈಕೋರ್ಟ್ ಗರ್ಭಪಾತಕ್ಕೆ ನಿರಾಕರಿಸಿರುವುದು ಸರಿಯಲ್ಲ ಎಂದು ಹೇಳಿದೆ.

ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿನ ವಿವಾಹ ಚೌಕಟ್ಟಿನಲ್ಲಿ ಗರ್ಭಧರಿಸುವುದು ಕೇವಲ ದಂಪತಿಗಳಿಗೆ ಮಾತ್ರವಲ್ಲ, ಅದು ಕುಟುಂಬ ಮತ್ತು ಸ್ನೇಹಿತರಿಗೂ ಸಂತಸದ ಸಂಗತಿ ಎಂದು ಪೀಠ ಅಭಿಪ್ರಾಯಪಟ್ಟಿದೆ.

“ವಿವಾಹೇತರ ಗರ್ಭಾವಸ್ಥೆಯು ಅಪಾಯಕಾರಿ. ಅದರಲ್ಲೂ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳಲ್ಲಿ ಅದು ಸಂತ್ರಸ್ತೆಗೆ ಆಘಾತ, ಮಾನಸಿಕ ಮತ್ತು ದೈಹಿಕ ಒತ್ತಡ ಉಂಟುಮಾಡುತ್ತದೆ. ಲೈಂಗಿಕ ದೌರ್ಜನ್ಯವು ಯಾತನಾದಾಯಕವಾದದ್ದು ಮತ್ತು ಗರ್ಭಾವಸ್ಥೆಯಲ್ಲಿ ಕೇಳುಬರುವ ನಿಂದನೆಗಳು ಘಾಸಿಗೊಳಿಸುತ್ತವೆ. ಏಕೆಂದರೆ ಇಂತಹ ಗರ್ಭಾವಸ್ಥೆಯು ಸ್ವಯಂಪ್ರೇರಿತವಾಗಿರುವುದಿಲ್ಲ” ಎಂದು ಹೇಳಿದೆ.

“ಚರ್ಚೆ ಮತ್ತು ವೈದ್ಯಕೀಯ ವರದಿಗಳನ್ನು ಪರಿಗಣಿಸಿ, ಸಂತ್ರಸ್ತೆಗೆ ಗರ್ಭಪಾತಕ್ಕೆ ಅನುಮತಿ ನೀಡುತ್ತಿದ್ದೇವೆ. ಮಹಿಳೆಯು ಗರ್ಭಪಾತ ಮಾಡಿಸಿಕೊಳ್ಳಲು ನಾಳೆ ಆಸ್ಪತ್ರೆಗೆ ಹಾಜರಾಗುವಂತೆ ನಿರ್ದೇಶನ ನೀಡುತ್ತಿದ್ದೇವೆ” ಎಂದು ಸುಪ್ರೀಂ ಕೋರ್ಟ್ ಪೀಠ ತಿಳಿಸಿದೆ.

ಒಂದು ವೇಳೆ ಭ್ರೂಣ ಬದುಕುಳಿಯುವ ಸಾಧ್ಯತೆ ಕಂಡುಬಂದರೆ, ಅದನ್ನು ಉಳಿಸಿಕೊಳ್ಳಲು ಇನ್ಕ್ಯೂಬೇಷನ್ ಸೇರಿದಂತೆ ಸೂಕ್ತ ಕ್ರಮಗಳನ್ನು ಆಸ್ಪತ್ರೆ ಕೈಗೊಳ್ಳಬೇಕು. ಭ್ರೂಣ ಉಳಿದರೆ, ಕಾನೂನಿನ ಪ್ರಕಾರ ರಾಜ್ಯ ಸರ್ಕಾರ ಮಗುವನ್ನು ದತ್ತು ಪಡೆಯಲಿದೆ ಎಂದೂ ತಿಳಿಸಿದೆ.

“ಸಂತ್ರಸ್ತೆಯೊಬ್ಬರು ಗರ್ಭಪಾತಕ್ಕಾಗಿ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಗುಜರಾತ್ ಹೈಕೋರ್ಟ್ ಮುಂದೂಡಿರುವ ಬಗ್ಗೆ ಶನಿವಾರ ನಡೆಸಿದ ವಿಶೇಷ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ವಿಚಾರಣೆ ಬಾಕಿ ಉಳಿಸುವುದರೊಂದಿಗೆ ‘ಅಮೂಲ್ಯ ಸಮಯ ಹಾಳು ಮಾಡಲಾಗಿದೆ” ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.

ವೈದ್ಯಕೀಯ ಗರ್ಭಪಾತ (ಎಂಟಿಪಿ) ಕಾಯ್ದೆಯ ಪ್ರಕಾರ, ಅತ್ಯಾಚಾರವೂ ಸೇರಿದಂತೆ ವಿಭಿನ್ನ ಪ್ರಕರಣಗಳಲ್ಲಿ ಭ್ರೂಣಕ್ಕೆ ಗರಿಷ್ಠ 24 ವಾರ ತುಂಬುವುದರಳೊಗೆ ಗರ್ಭಪಾತ ಮಾಡಿಸಿಕೊಳ್ಳಬೇಕು.

Tags: AbortionRape Survivorsupreme courtಅಪ್ರಾಪ್ತೆ ಅತ್ಯಾಚಾರಗರ್ಭಪಾತಸುಪ್ರೀಂ ಕೋರ್ಟ್
Previous Post

Breaking: ದೆಹಲಿ | ಅತ್ಯಾಚಾರ ಆರೋಪದಲ್ಲಿ ಅಮಾನತುಗೊಂಡ ಅಧಿಕಾರಿ ಪೊಲೀಸ್ ವಶ

Next Post

ಅಧ್ಯಯನ, ಸಂಶೋಧನೆಗಳು ಗ್ರಂಥಾಲಯಗಳಲ್ಲಿ ಕೊಳೆಯಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
0

ಸಿದ್ದರಾಮಯ್ಯ (Siddaramaiah) ಲಕ್ಕಿ ಲಾಟರಿ ಹೊಡೆದುಬಿಟ್ಟ. ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು (Sonia gandhi) ಮೊದಲು ಭೇಟಿ ಮಾಡಿಸಿದವನೇ ನಾನು.ಆದ್ರೆ ಅವನ ಗ್ರಹಚಾರ ಚೆನ್ನಾಗಿತ್ತು...

Read moreDetails
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ಅಧ್ಯಯನ, ಸಂಶೋಧನೆಗಳು ಗ್ರಂಥಾಲಯಗಳಲ್ಲಿ ಕೊಳೆಯಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada