• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Supreme Court: ಸುಪ್ರೀಂ ಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಭರ್ಜರಿ ಜಯ..!

ಪ್ರತಿಧ್ವನಿ by ಪ್ರತಿಧ್ವನಿ
February 14, 2026
in Top Story, ಕರ್ನಾಟಕ, ರಾಜಕೀಯ
0
Supreme Court: ಸುಪ್ರೀಂ ಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಭರ್ಜರಿ ಜಯ..!
Share on WhatsAppShare on FacebookShare on Telegram

ವಿಜಯಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ(Vijayapura )ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ(Supreme Court) ಮುಖಭಂಗವಾಗಿದೆ.

ADVERTISEMENT
HAMPI UTSAV 2026:  ಏಯ್.. ಏನಮ್ಮಾ.. ಹೇಗಿದ್ದೀಯಾ ತುಂಬಾ ದಿನವಾಯ್ತು ನೋಡಿ..?  #pratidhvani

ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರು ಅಕ್ರಮ ಎಸಗಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಮುಶ್ರೀಫ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಕಲಬುರಗಿ ಪೀಠವು ಹೈಕೋರ್ಟ್‌ 2025ರ ಜುಲೈ 18ರಂದು ಅರ್ಜಿಯನ್ನು ವಜಾಗೊಳಿಸಿತ್ತು. ಜೊತೆಗೆ ಅರ್ಜಿದಾರರಿಗೆ ದಂಡವನ್ನೂ ವಿಧಿಸಿತ್ತು.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮುಶ್ರೀಫ್ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಆದರೆ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದು, ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ ತೀರ್ಪಿನಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸ್ಥಾನಕ್ಕೆ ಸಂಬಂಧಿಸಿದ ಅನುಮಾನಗಳು ದೂರವಾಗಿವೆ.

ಈ ಬಗ್ಗೆ ಖುಷಿ ಹಂಚಿಕೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಚುನಾವಣೆಯಲ್ಲಿ ಅಕ್ರಮವೆಸಗಿದ್ದಾರೆ ಎಂದು ನನ್ನ ಮೇಲೆ ಸುಳ್ಳು ಆರೋಪ ಮಾಡಿ ದಾಖಲು ಮಾಡಿದ್ದ ಅಬ್ದುಲ್ ಹಮೀದ್ ಖಾಜಾ ಎಂಬುವವರ ಅರ್ಜಿಯನ್ನು ಕಲ್ಬುರ್ಗಿ ಉಚ್ಚ ನ್ಯಾಯಾಲಯವು ದಿನಾಂಕ 18.07.2025 ರಂದು ವಜಾ ಮಾಡಿತ್ತು ಹಾಗೂ ಅರ್ಜಿದಾರರಿಗೆ ದಂಡ ವಿಧಿಸಿತ್ತು.

HAMPI UTSAV 2026 : ವೇದಿಕೆ ಮೇಲೆ ಜಮೀರ್ ಭಾಷಣಕ್ಕೆ ಸಿಳ್ಳೆ ಚಪ್ಪಾಳೆಯದ್ದೇ ಸದ್ದು.. #pratidhvani

ಉಚ್ಚ ನ್ಯಾಯಾಲಯದ ತೀರ್ಪನ್ನು ಖಾಜಾ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು.ಸರ್ವೋಚ್ಛ ನ್ಯಾಯಾಲಯವು ಇವರ ಅರ್ಜಿಯನ್ನು [CIVIL APPEAL No. 12194 OF 2024] ವಜಾ ಮಾಡಿತ್ತು, ಹಾಗೂ ದಂಡವನ್ನೂ ವಿಧಿಸಿತ್ತು. ಈ ಸರ್ವೋಚ್ಚ ನ್ಯಾಯಾಲಯದ ಆದೇಶದ ವಿಮರ್ಶೆ ಮಾಡಲು (Review Petition) ಮತ್ತೊಮ್ಮೆ ಅರ್ಜಿ ಸಲ್ಲಿಸಿ , ರಾಜಕೀಯವಾಗಿ ಲಾಭ ಪಡೆಯಬೇಕೆಂದು ಮಾಡಿದ್ದ ಷಡ್ಯಂತ್ರಕ್ಕೆ ಮುಖಭಂಗ ಆಗಿದೆ.

ಈ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾ ಗೊಳಿಸಿದೆ. ಈ ರೀತಿಯಾದ ಗೊಡ್ಡು ಬೆದರಿಕೆಗಳಿಗೆ ನಾನು ಹೆದರುವವನಲ್ಲ ಹಾಗೂ ನನ್ನ ಮೇಲೆ ರಾಜಕೀಯ ಪ್ರೇರಿತ, ಆಧಾರರಹಿತ ಆರೋಪಗಳನ್ನು ಮಾಡುವವರ ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಂಡು ಅದನ್ನು ತಾರ್ಕಿಕ ಅಂತ್ಯದ ವರೆಗೂ ಕೊಂಡೊಯುತ್ತೇನೆ.

Hampi Utsava 2026 : ಓಡಿ ಬಂದು ಸಿದ್ದರಾಮಯ್ಯ ಕಾಲಿಗೆ ಬಿದ್ದ ಶಿವರಾಜ್ ಕುಮಾರ್.. #pratidhvani

ಸತ್ಯವನ್ನು ಮರೆಮಾಚಲು ಯಾರಿಂದಲೂ ಸಾಧ್ಯವಿಲ್ಲ. ವಿಜಯಪುರದ ಜನತೆ ನನ್ನೊಂದಿಗೆ ಸದಾ ಇರುತ್ತಾರೆ ಹಾಗೂ ಅವರ ಆಶಿರ್ವಾಯಾದ ನನ್ನ ಮೇಲೆ ಸದಾ ಇರುತ್ತದೆ ಎಂಬ ಅಚಲ ವಿಶ್ವಾಸ ನನ್ನಲ್ಲಿದೆ. ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡುವ ಈ ರಾಜಕೀಯ ನಿರುದ್ಯೋಗಿಗಳಿಗೆ ನ್ಯಾಯಾಲಯ ದಂಡ ವಿಧಿಸುವ ಮೂಲಕ ಕ್ರಮ ಜರುಗಿಸಿದೆ ಎಂದು ಯತ್ನಾಳ್‌ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Tags: Assembly electionsBasangouda Patil YatnalBJPcongressElectionKarnatakaKranataka PoliticsPoliticssupreme courtVijayapura
Previous Post

ನಮ್ಮನ್ನು ಟೀಕಿಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ, ನಾಲ್ಕು ವರ್ಷಗಳಲ್ಲಿ ಅವರೇನು ಮಾಡಿದ್ದಾರೆ : ಸಿಎಂ ಪ್ರಶ್ನೆ

Next Post

ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post
ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada