ಪೋರ್ಟಲ್ಗಳು, ಯೂಟ್ಯೂಬ್, ಫೇಸ್ಬುಕ್ ಮತ್ತು ಟ್ವಿಟರ್ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ
ಸುಳ್ಳು ಹಾಗೂ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂಥ ಸುದ್ದಿಗಳ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ಕಳವಳ ವ್ಯಕ್ತಪಡಿಸಿದ್ದು ಸಾಮಾಜಿಕ ಮಾಧ್ಯಮ ಕಂಪೆನಿಗಳು ನ್ಯಾಯಾಧೀಶರಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದೆ.
ಇಂತಹ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳು ಕೇವಲ ಬಲಾಢ್ಯರ ಮಾತುಗಳನ್ನು ಕೇಳುತ್ತವೆ ಮತ್ತು ನ್ಯಾಯಾಂಗ ಸಂಸ್ಥೆಗಳ ಬಗ್ಗೆ ಯಾವುದೇ ಉತ್ತರಾದಾಯಿತ್ವ ಹೊಂದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಜಮಿಯಾತ್ ಉಲೇಮಾ–ಐ–ಹಿಂದ್ ಸಂಘಟನೆ ಸಲ್ಲಿಸಿದ್ದಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ಎ.ಎಸ್.ಬೋ ಪಣ್ಣಅವರಿರುವ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.
ದೆಹಲಿಯ ಮರ್ಕಜ್ ನಿಜಾಮುದ್ದೀನ್ನಲ್ಲಿ ನಡೆದಿದ್ದ ಧಾರ್ಮಿಕ ಸಮಾವೇಶಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಸುಳ್ಳು ಸುದ್ದಿಗಳನ್ನು ಹರಡಿದವರ ವಿರುದ್ಧಶಿಸ್ತುಕ್ರಮ ಕೈಗೊ ಳ್ಳಬೇಕು ಎಂದು ಸಂಸ್ಥೆಮನವಿ ಮಾಡಿತ್ತು.
‘ಕೆಲವು ಖಾಸಗಿ ಸುದ್ದಿವಾಹಿನಿಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿಗಳಿಗೆ ಕೋಮು ಬಣ್ಣ ಬಳಿಯಲಾಗುತ್ತದೆ. ಅಂತಿಮವಾಗಿ ಇದರಿಂದ ದೇಶಕ್ಕೆ ಕೆಟ್ಟ ಹೆಸರು ಬರುತ್ತದೆ’ ಎಂದು ಕಳವಳ ವ್ಯಕ್ತಪಡಿಸಿದ ನ್ಯಾಯಪೀಠ, ‘ಖಾಸಗಿ ಸುದ್ದಿವಾಹಿನಿಗಳ ನಿಯಂತ್ರಣಕ್ಕೆ ಏನಾದರೂ ಕ್ರಮ ಕೈಗೊಳ್ಳಲಾಗಿದೆಯೇ’ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತು.
‘ಸಾಮಾಜಿಕ ಮಾಧ್ಯಮಗಳಲ್ಲಿನ್ಯಾಯಾಧೀಶರು, ಸಂಸ್ಥೆಗಳ ವಿರುದ್ಧವೂ ಬರೆಯಲಾಗುತ್ತಿದೆ. ಇಂಥ ಕೃತ್ಯಗಳಿಗೆ ಉತ್ತರದಾಯಿತ್ವವೇ ಇರುವುದಿಲ್ಲ. ಯೂಟ್ಯೂಬ್ ಚಾನೆಲ್ಗಳಲ್ಲಿ ಪ್ರಸಾರವಾಗುವ ಸುಳ್ಳು ಸುದ್ದಿಗಳ ಮೇಲೆ ನಿಯಂತ್ರಣವೇ ಇಲ್ಲ. ಯಾರು ಬೇಕಾದರೂ ಯೂಟ್ಯೂಬ್ ಚಾನೆಲ್ ಆರಂಭಿಸಬಹುದಾಗಿದೆ’ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.
“ನಾನು ಯಾವುದೇ ಸಾರ್ವಜನಿಕ ಚಾನೆಲ್, ಟ್ವಿಟರ್, ಫೇಸ್ಬುಕ್ ಅಥವಾ ಯೂಟ್ಯೂಬ್ ನೋಡುವುದಿಲ್ಲ. ಅವರು ಎಂದಿಗೂ ನಮಗೆ ಪ್ರತಿಕ್ರಿಯಿಸುವುದಿಲ್ಲ ಮತ್ತು ಯಾವುದೇ ಜವಾಬ್ದಾರಿ ಹೊಂದಿಲ್ಲ. ಕೆಟ್ಟದಾಗಿ ಬರೆದಿವೆ. ಈ ಬಗ್ಗೆ ಅವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಮತ್ತು ಇದು ತಮ್ಮ ಹಕ್ಕು ಎಂದು ಭಾವಿಸಿವೆ” ಎಂಬುದಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್ ವಿ ರಮಣ ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ವೇದಿಕೆಗಳಲ್ಲಿ ಪ್ರಸಾರವಾಗುವ ಸುದ್ದಿಗಳಿಗೆ ಹಲವು ಬಾರಿ ಕೋಮು ಬಣ್ಣ ನೀಡಲಾಗುತ್ತಿದ್ದು ಇದು ದೇಶಕ್ಕೆ ಕೆಟ್ಟ ಹೆಸರು ತರುತ್ತದೆ ಎಂದು ಕೂಡ ಅವರು ಹೇಳಿದ್ದಾರೆ.
ನೀವು ಯುಟ್ಯೂಬ್ ನೋಡಿದರೆ ಅಲ್ಲಿ ಸಾಕಷ್ಟು ನಕಲಿ ಸುದ್ದಿಗಳು ಗೋಚರಿಸುತ್ತವೆ. ವೆಬ್ ಪೋರ್ಟಲ್ಗಳಿಗೆ ಯಾವುದೇ ನಿಯಂತ್ರಣವಿಲ್ಲ . ಸುದ್ದಿಗೆ ಕೋಮು ಬಣ್ಣವನ್ನು ನೀಡುವ ಪ್ರಯತ್ನವಿದ್ದು ಅದು ಸಮಸ್ಯೆಯಾಗಿದೆ. ಇದು ಅಂತಿಮವಾಗಿ ದೇಶಕ್ಕೆ ಕೆಟ್ಟ ಹೆಸರನ್ನು ತರುತ್ತದೆ ಎಂದು ಕೋರ್ಟ್ ಹೇಳಿದೆ.
ಕೋವಿಡ್ ಸೋಂಕು ಹರಡುವುದಕ್ಕೂ ಮಾರ್ಚ್ 2020ರಲ್ಲಿ ನಡೆದ ತಬ್ಲಿಘಿ ಜಮಾತ್ ಸಭೆಗೂ ಸಂಪರ್ಕ ಕಲ್ಪಿಸಿ ಮಾಧ್ಯಮಗಳು ನಕಲಿ ಸುದ್ದಿ ಹರಡುವುದಕ್ಕೆ ತಡೆ ನೀಡಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು.
ನೂತನ ಮಾಹಿತಿ ತಂತ್ರಜ್ಞಾನ ನಿಯಮಾವಳಿ 2021 ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮವನ್ನು ನಿಯಂತ್ರಿಸಲು ಪ್ರಯತ್ನಿಸುತ್ತದೆ ಎಂದು ಇದೇ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿಕ್ರಿಯಿಸಿದರು. ಅಲ್ಲದೆ ಅವರು ಐಟಿ ನಿಯಮಾವಳಿಗಳನ್ನು ಕುರಿತು ವಿವಿಧ ಹೈಕೋರ್ಟ್ಗಳಲ್ಲಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಬೇಕೆಂದು ಕೇಂದ್ರ ಸರ್ಕಾರ ಕೋರಿರುವ ಮನವಿಯನ್ನು ಗಣನೆಗೆ ತೆಗೆದುಕೊಳ್ಳುವಂತೆ ಅವರು ಮನವಿ ಮಾಡಿದರು. ಬೇರೆ ಬೇರೆ ಹೈಕೋರ್ಟ್ಗಳು ವಿಭಿನ್ನ ಆದೇಶ ನೀಡುತ್ತಿದ್ದು ಸುಪ್ರೀಂಕೋರ್ಟ್ನಲ್ಲಿ ಅದರ ವಿಚಾರಣೆ ನಡೆದರೆ ಸಮಗ್ರ ಚಿತ್ರಣ ದೊರೆಯುತ್ತದೆ. ಏಕೆಂದರೆ ಇದು ದೇಶವ್ಯಾಪಿ ಸಮಸ್ಯೆಯಾಗಿದೆ” ಎಂದಿದ್ದಾರೆ.
ಇದಕ್ಕೆ ಸಮ್ಮತಿಸಿದ ಸಿಜೆಐ ಜಮೀಯತ್ ಉಲಮಾ-ಇ-ಹಿಂದ್ ಮತ್ತು ಪೀಸ್ ಪಾರ್ಟಿ ಸಲ್ಲಿಸಿರುವ ಪ್ರಸ್ತುತ ಅರ್ಜಿಯನ್ನು ವರ್ಗಾವಣೆ ಮನವಿಯೊಂದಿಗೆ ಪಟ್ಟಿ ಮಾಡಿದ್ದು ಆರು ವಾರಗಳ ಬಳಿಕ ಪ್ರಕರಣದ ವಿಚಾರಣೆ ನಡೆಯಲಿದೆ.