ದೆಹಲಿ : ರಾಜ್ಯ ಸರ್ಕಾರವು ರದ್ದುಪಡಿಸಿದ್ದ ಮುಸ್ಲಿಮರ 2 ಬಿ ಮೀಸಲಾತಿ ರದ್ದತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಮುಸ್ಲಿಂ ಸಮುದಾಯದ ಜನರಿಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ಮುನ್ನಡೆ ಆದಂತಾಗಿದೆ.
![](https://pratidhvani.com/wp-content/uploads/2023/04/supreme-court1666452822-2-1024x524.jpg)
ಮುಸ್ಲಿಮರಿಗೆ ಈವರೆಗೆ ನೀಡಲಾಗುತ್ತಿದ್ದ 2 ಬಿ ಮೀಸಲಾತಿಯನ್ನು ರದ್ದುಗೊಳಿಸಿ ರಾಜ್ಯ ಸರ್ಕಾರವು ಮಾರ್ಚ್ 27ರಂದು ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ವಿಪಕ್ಷಗಳ ವಿರೋಧದ ನಡುವೆಯೇ ಈ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಎಲ್ ಗುಲಾಮ್ ರಸೂಲ್ ಸೇರಿದಂತೆ ಇತರರು ಮೇಲ್ಮನವಿ ಸಲ್ಲಿಸಿದ್ದರು.
ಈ ಸಂಬಂಧ ಏಪ್ರಿಲ್ 13ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರದ ಈ ಆದೇಶದಿಂದ ಅನೇಕರು ಮೀಸಲಾತಿಯಿಂದ ವಂಚಿತರಾಗುವಂತೆ ಕಾಣುತ್ತಿದೆ . ಮೇಲ್ನೋಟಕ್ಕೆ ಈ ಆದೇಶವು ದೋಷಪೂರಿತವಾಗಿದೆ ಎಂದೆನಿಸುತ್ತಿದೆ ಎಂದು ಅಭಿಪ್ರಾಯಪಟ್ಟಿತ್ತು.