ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಕಳೆದ ವರ್ಷ ರಾಜ್ಯದಲ್ಲಿ ರಾಜ್ಯಪಾಲರು ಬದಲಾವಣೆಗೆ ಕಾರಣವಾದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ಉದ್ಧವ್ ಠಾಕ್ರೆ ಮತ್ತು ಸಿಎಂ ಏಕನಾಥ್ ಶಿಂಧೆ ಬಣಗಳು ಸಲ್ಲಿಸಿದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಕಟಿಸಿದೆ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹಾಗೂ ಅವರ ಬಣದ 15 ಶಾಸಕರನ್ನ ಅನರ್ಹಗೊಳಿಸಲು ಸಾಧ್ಯವಿಲ್ಲ ಅಂತ ಸುಪ್ರೀಂಕೋರ್ಟ್ ತಿಳಿಸಿದೆ. ಕೋರ್ಟ್ ತೀರ್ಪಿನಿಂದ ಶಿಂಧೆ ಬಣಕ್ಕೆ ರಿಲೀಫ್ ಸಿಕ್ಕಂತಾಗಿದೆ.

ಠಾಕ್ರೆ ಅವರ ಸರ್ಕಾರವನ್ನು ಮರುಸ್ಥಾಪಿಸುವ ವಿನಂತಿಯನ್ನು ಸಹ ಸುಪ್ರೀಂ ತಿರಸ್ಕರಿಸಿದೆ. ಉದ್ದವ್ ಠಾಕ್ರೆ ಫ್ಲೋರ್ ಟೆಸ್ಟ್ ಎದುರಿಸಿಲ್ಲ. ಅವರು ರಾಜೀನಾಮೆ ನೀಡಿದ ಕಾರಣ ಯಥಾಸ್ಥಿತಿಯನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ. ಹೀಗಾಗಿ ರಾಜ್ಯಪಾಲರು ಬಿಜೆಪಿಯನ್ನು ಸರ್ಕಾರ ರಚನೆಗೆ ಕರೆದಿರುವುದು ಸರಿಯಾಗಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಸ್ಪೀಕರ್ ನಡೆಗೆ ಸುಪ್ರೀಂ ಅಸಮಾಧಾನ ವ್ಯಕ್ತಪಡಿಸಿದೆ. ಉದ್ಧವ್ ಠಾಕ್ರೆ ಅವರು ಬಹುಪಾಲು ಶಾಸಕರ ಬೆಂಬಲವನ್ನು ಕಳೆದುಕೊಂಡಿದ್ದಾರೆ ಎಂದು ತೀರ್ಮಾನಿಸುವಲ್ಲಿ ರಾಜ್ಯಪಾಲರು ತಪ್ಪು ಎಸಗಿದ್ದಾರೆ ಎಂದು ಶಿಂಧೆ ಬಣಕ್ಕೆ ಸಹಾಯ ಮಾಡುವ ನಿರ್ಧಾರಗಳನ್ನು ತೆಗೆದುಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಕೋರ್ಟ್ ಖಂಡಿಸಿದೆ.