• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸುಪ್ರೀಂಕೋರ್ಟ್ ತರಾಟೆಯ ನಂತರ ಉಚಿತ ಲಸಿಕೆ ಘೋಷಿಸಿದ ಪ್ರಧಾನಿ ಮೋದಿ: ಇಲ್ಲಿದೆ ಕಂಪ್ಲೀಟ್ ಸುದ್ದಿ

Any Mind by Any Mind
June 7, 2021
in ಕರ್ನಾಟಕ, ದೇಶ, ರಾಜಕೀಯ
0
ಸುಪ್ರೀಂಕೋರ್ಟ್ ತರಾಟೆಯ ನಂತರ ಉಚಿತ ಲಸಿಕೆ ಘೋಷಿಸಿದ ಪ್ರಧಾನಿ ಮೋದಿ: ಇಲ್ಲಿದೆ ಕಂಪ್ಲೀಟ್ ಸುದ್ದಿ
Share on WhatsAppShare on FacebookShare on Telegram

18-44ರ ವಯೋಮಾನದ ಗುಂಪಿನವರಿಗೆ ಮೊದಲಿಗೆ ಉಚಿತ ಎಂದು ಘೋಷಿಸಿ ನಂತರ ಶುಲ್ಕ ಪಾವತಿಸಬೇಕು ಎಂದು ಹೇಳಿರುವುದು ಮೇಲ್ನೋಟಕ್ಕೆ ನಿರಂಕುಶ ಹಾಗೂ ಅತಾರ್ಕಿಕವಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾ. ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಲಸಿಕೆ ನೀತಿಯ ಹಿಂದಿರುವ ತನ್ನ ಚಿಂತನೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಜೂನ್ 2 ರಂದು ವಿವರಣೆ ಕೇಳಿತ್ತು. ಇದಾದ ಬೆನ್ನಲ್ಲೇ ಮಾನ್ಯ ನರೇಂದ್ರ ಮೋದಿ ಅವರು ಇವತ್ತು ದೇಶವನ್ನು ಉದ್ದೇಶಿಸಿ ಮಾತಾಡಿ ದೇಶದ ಎಲ್ಲರಿಗೂ ಉಚಿತ ಲಸಿಕೆ ನೀಡುವುದಾಗಿ ಘೋಷಣೆ ಮಾಡಿದೆ.

ADVERTISEMENT

ಏನಿದು ಸುಪ್ರೀಂ ಕೋರ್ಟ್ ಕೇಸ್?

ಮೇ 31ರಂದು ದಾಖಲಿಸಿಕೊಳ್ಳಲಾಗಿದ್ದ ಸ್ವಯಂಪ್ರೇರಿತ ದೂರಿನ ಕುರಿತು ಜೂ. 2 ರಂದು ನ್ಯಾ. ಡಿ.ವೈ. ಚಂದ್ರಚೂಡ್ ನೇತೃತ್ವದಲ್ಲಿ ನ್ಯಾ. ಎಲ್. ನಾಗೇಶ್ವರ ರಾವ್ ಹಾಗೂ ನ್ಯಾ. ಎಸ್. ರವೀಂದ್ರ ಭಟ್ ಒಳಗೊಂಡಿದ್ದ ಪೀಠವು, ಭಾರತ ಸರ್ಕಾರವು ಲಸಿಕೆ ನೀತಿಯನ್ನು ಬಿಂಬಿಸುವ ಅದರ ಚಿಂತನೆ ಹಾಗೂ ಲಸಿಕೆ ನೀತಿ ಸಮಾಪ್ತಿಯಾಗುವ ಕುರಿತ ಎಲ್ಲ ಪ್ರಸ್ತುತ ದಾಖಲೆಗಳ ಪ್ರತಿಗಳನ್ನು ನ್ಯಾಯಾಲಯಕ್ಕೆ ಎರಡು ವಾರಗಳಲ್ಲಿ ಒದಗಿಸುವುದನ್ನು ಖಾತ್ರಿಗೊಳಿಸಬೇಕು ಎಂದು ಸೂಚಿಸಿತ್ತು.

ಎಲ್ಲಾ ಲಸಿಕೆಗಳ ಕುರಿತು ನಿರ್ದಿಷ್ಟ ದಿನಾಂಕಗಳನ್ನು ಒದಗಿಸಬೇಕು. ಬೇಡಿಕೆಯಿಟ್ಟ, ಖರೀದಿಸಿದ, ಸರಬರಾಜು ಮಾಡಿದ ಎಲ್ಲಾ ಲಸಿಕೆಗಳ ದತ್ತಾಂಶಗಳು ಇರಬೇಕು ಎಂದು ಹೇಳಿದೆ. ಇನ್ನುಳಿದ ಜನತೆಗೆ ಯಾವಾಗ ಕೇಂದ್ರ ಲಸಿಕೆ ನೀಡುತ್ತದೆ ಎಂಬ ಕುರಿತು ಒಂದು ಸ್ಥೂಲ ಮಾಹಿತಿ ನೀಡಬೇಕು ಎಂದು ಆದೇಶಿಸಿತ್ತು. ಇದುವರೆಗೂ ಲಸಿಕೆ ನೀಡಿದ ಜನಸಂಖ್ಯೆಯ ವಿವರ, ಒಂದು ಡೋಸ್, ಎರಡು ಡೋಸ್ ಲಸಿಕೆ ಪಡೆದವರ ವಿವರ, ಗ್ರಾಮೀಣ ಪ್ರದೇಶದಲ್ಲಿ ಲಸಿಕೆ ನೀಡಿದ ಪ್ರಮಾಣ ಎಲ್ಲವನ್ನೂ ನಮೂದಿಸಬೇಕೆಂದು ತಿಳಿಸಿತ್ತು.

ಇದರ ಜೊತೆ ಪ್ರಮುಖ ಪ್ರಶ್ನೆಗಳು ಎತ್ತಿರುವ ಸುಪ್ರೀಂ; ಕೇಂದ್ರಕ್ಕೆ ಕೋರ್ಟ್‌ ಕೇಳಿದ 5 ಪ್ರಮುಖ ಪ್ರಶ್ನೆಗಳು:

  1. ಕಾರ್ಯಾಂಗದ ವಿಷಯದಲ್ಲಿ ಕೋರ್ಟ್‌ ಮಧ್ಯ ಪ್ರವೇಶಿಸಬಾರದು ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ, ಜನರ ಹಕ್ಕು ಉಲ್ಲಂಘನೆ ಆದರೆ ಕೋರ್ಟ್‌ ಮೌನವಾಗಿರಲು ಸಾಧ್ಯವಿಲ್ಲ.

2. ಲಸಿಕೆ ಖರೀದಿಗೆ ಕೇಂದ್ರ ಬಜೆಟ್‌ನಲ್ಲಿ 35 ಸಾವಿರ ಕೋಟಿ ರು.ಗಳನ್ನು ಮೀಸಲಿಡಲಾಗಿದೆ. ಇದರಲ್ಲಿ ಎಷ್ಟುಬಳಸಿದ್ದೀರಿ? ಈ ಹಣವನ್ನು 18-44 ವರ್ಷದೊಳಗಿನವರಿಗೆ ಲಸಿಕೆ ಖರೀದಿಗಾಗಿ ಏಕೆ ಬಳಕೆ ಆಗುತ್ತಿಲ್ಲ?

3. ಇದುವರೆಗೆ ಖರೀದಿಸಲಾದ ಕೋವ್ಯಾಕ್ಸಿನ್‌, ಕೋವಿಶೀಲ್ಡ್‌ ಮತ್ತು ಸ್ಪುಟ್ನಿಕ್‌-5 ಲಸಿಕೆಯ ಬಗ್ಗೆ ಸಮಗ್ರ ಮಾಹಿತಿ ಸಲ್ಲಿಸಿ

4. ಭಾರತದಲ್ಲಿ ಲಭ್ಯವಿರುವ ಲಸಿಕೆಯ ದರ ಹಾಗೂ ಅವುಗಳ ಅಂತಾರಾಷ್ಟ್ರೀಯ ದರದ ಹೋಲಿಕೆಯನ್ನು ನೀಡಿ

5. 2021ರ ಡಿಸೆಂಬರ್‌ವರೆಗೆ ದೇಶದಲ್ಲಿ ಎಷ್ಟುಪ್ರಮಾಣ ಲಸಿಕೆ ಲಭ್ಯವಾಗಲಿದೆ ಎಂಬ ಕುರಿತು ಅಂದಾಜು ವರದಿ ಸಲ್ಲಿಸಿ

ಈ ಎಲ್ಲಾ ಪ್ರಶ್ನೆಗಳಿಗೆ ಮತ್ತು ಸುಪ್ರೀಂ ಕೋರ್ಟ್ ಕೇಳಿರುವ ದಾಖಲೆಗಳನ್ನು ಒದಗಿಸಲು ಹೆಚ್ಚು ಸಮಯವು ಇಲ್ಲ. ಸುಪ್ರೀಂಕೋರ್ಟ್ ಕೇಂದ್ರಕ್ಕೆ ದಾಖಲೆ ಕೇಳಿ ಇವತ್ತಿಗೆ ಎರಡನೇ ವಾರಕ್ಕೆ ಕಾಲಿಟ್ಟಿದೆ. ಹಾಗಾಗಿಯೇ ಪ್ರಧಾನಿ ಇವತ್ತು ಅಂದರೆ ಸೋಮವಾರ ದೇಶವನ್ನು ಉದ್ದೇಶಿ ಮಾತಾಡಿ, ರಾಜ್ಯದ ಲಸಿಕೆ ಜವಾಬ್ದಾರಿಯಲ್ಲಿ ಕೇಂದ್ರವೇ ವಹಿಸಿಕೊಂಡು, ಎಲ್ಲರಿಗೂ ಉಚಿತ ಲಸಿಕೆ ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ 2 ವಾರಗಳ ಬಳಿಕ ಕೇಂದ್ರವೇ ಲಸಿಕೆ ನೀಡಲಿದೆ ಎಂದು ಹೇಳಿದ್ದಾರೆ. ಶೇಕಡಾ 25 ರಷ್ಟು ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳು ಖರೀದಿ ಮಾಡಬಹುದು. ಇನ್ನು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲು ಇಚ್ಚಿಸುವವರು, ಕೇವಲ ಸರ್ವೀಸ್ ಚಾರ್ಜ್ 150 ರೂಪಾಯಿ ನೀಡಿ ಲಸಿಕೆ ಪಡೆಯಬಹುದು ಎಂದು ತಿಳಿಸಿದ್ದಾರೆ. ಇನ್ನೂ ಕೇಂದ್ರಕ್ಕೆ ಕೋರ್ಟ್ ದಾಖಲೆಗಳನ್ನು ಕೇಳಿದ್ದು ಶೀಘ್ರದಲ್ಲೇ ಅದರ ತೀರ್ಪು ಹೊರಬೀಳಲಿದೆ.

ಈ ಕುರಿತು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರ ಕಛೇರಿ ಟ್ವೀಟ್ ಮಾಡಿದ್ದು, ಪ್ರತಿಪಕ್ಷ ಮತ್ತು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯ ನಂತರ ಪಿಎಂ ನರೇಂದ್ರ ಮೋದಿ ಅವರು ವ್ಯಾಕ್ಸಿನೇಷನ್ ಖರೀದಿ ನೀತಿಯನ್ನು ಬದಲಾಯಿಸುವಂತೆ ಒತ್ತಾಯಿಸಲಾಗಿದೆ. ಯೋಜಿಸಿದಂತೆ ಜುಲೈ ವೇಳೆಗೆ ಹೆಚ್ಚು ದುರ್ಬಲ ಜನರಿಗೆ ಲಸಿಕೆ ಹಾಕಲು ಸರ್ಕಾರಕ್ಕೆ ಸಾಕಷ್ಟು ಪ್ರಮಾಣವಿದೆಯೇ ಎಂಬ ಪ್ರಶ್ನೆ ಇನ್ನೂ ಉಳಿದಿದೆ. ಅದಕ್ಕೆ ನೀಲನಕ್ಷೆ ಎಲ್ಲಿದೆ? ಎಂಬ ಗಂಭೀರ ಪ್ರಶ್ನೆಯನ್ನು ಮೋದಿಯವರಿಗೆ ಕೇಳಿದ್ದಾರೆ.

Tags: coronaviruscovid-19 vaccineModi GovernmentSupreme Court of India
Previous Post

ಕಾಲಮಿತಿಯೊಳಗೆ ಲಸಿಕೆ‌ ಕೊಡಿ, ಕೋವಿಡ್ನಿಂದ ರಕ್ಷಣೆ ನೀಡಿ- ಕರ್ನಾಟಕ ರಕ್ಷಣಾ ವೇದಿಕೆ

Next Post

ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಹೆಚ್.ಎಸ್. ಸಚ್ಚಿದಾನಂದ ಮೂರ್ತಿ ವಿರುದ್ಧ ದೂರ ದಾಖಲು

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಹೆಚ್.ಎಸ್. ಸಚ್ಚಿದಾನಂದ ಮೂರ್ತಿ ವಿರುದ್ಧ ದೂರ ದಾಖಲು

ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಹೆಚ್.ಎಸ್. ಸಚ್ಚಿದಾನಂದ ಮೂರ್ತಿ ವಿರುದ್ಧ ದೂರ ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada