• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

‘ರಾಷ್ಟ್ರೀಯ ರಕ್ಷಣಾ ಪರೀಕ್ಷೆ ಬರೆಯಲು ಮಹಿಳೆಯರಿಗೆ ಅವಕಾಶ’ ವಾದ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ : ಕೇಂದ್ರ ಸರ್ಕಾರಕ್ಕೆ ಮುಖಭಂಗ!

ಕರ್ಣ by ಕರ್ಣ
September 23, 2021
in ದೇಶ
0
‘ರಾಷ್ಟ್ರೀಯ ರಕ್ಷಣಾ ಪರೀಕ್ಷೆ ಬರೆಯಲು ಮಹಿಳೆಯರಿಗೆ ಅವಕಾಶ’ ವಾದ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ : ಕೇಂದ್ರ ಸರ್ಕಾರಕ್ಕೆ ಮುಖಭಂಗ!
Share on WhatsAppShare on FacebookShare on Telegram

ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆಗಳಿಗೆ ಈ ವರ್ಷ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡುವ ಆದೇಶವನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ (NDA) ಪ್ರವೇಶಕ್ಕಾಗಿ ಮಹಿಳಾ ಅಭ್ಯರ್ಥಿಗಳ ಪ್ರವೇಶ ಪರೀಕ್ಷೆಯನ್ನು ಅನುಮತಿಸುವ ಅಧಿಸೂಚನೆಯನ್ನು ಮುಂದಿನ ವರ್ಷ ಅಂದರೆ ಮೇ 2022 ರಲ್ಲಿ ಹೊರಡಿಸಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವಾಲಯ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ಎನ್‌ಡಿಎಯಲ್ಲಿ ಮಹಿಳಾ ಅಭ್ಯರ್ಥಿಗಳಿಗಾಗಿ ತ್ವರಿತಗತಿಯಲ್ಲಿ ಪಠ್ಯಕ್ರಮ ರೂಪಿಸಲು ರಕ್ಷಣಾ ಪಡೆಯಲ್ಲಿ ಅಧ್ಯಯನ ಸಮಿತಿಯೊಂದನ್ನು ರಚಿಸಲಾಗಿದ್ದು ಮಹಿಳಾ ಅಭ್ಯರ್ಥಿಗಳ ತರಬೇತಿಗಾಗಿ ಭವಿಷ್ಯದ ಯೋಜನೆ ರೂಪಿಸಲು ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ADVERTISEMENT

ಆದರೆ ಅಭ್ಯರ್ಥಿಗಳಿಗೆ ಈಗಾಗಲೇ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯಲು ಮಹಿಳೆಯರಿಗೆ ಅವಕಾಶ ನೀಡುವ ತನ್ನ ಹಿಂದಿನ ಆದೇಶ ತೆರವುಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಪರೀಕ್ಷೆಗೆ ಇಚ್ಛಿಸುವ ಅಭ್ಯರ್ಥಿಗಳ ಆಕಾಂಕ್ಷೆಗಳನ್ನು ಗಮನಿಸುವಾಗ ಕೇಂದ್ರದವಾದ ಒಪ್ಪಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಗಡಿ ಮತ್ತು ದೇಶದ ಒಳಭಾಗದಲ್ಲಿ ಸಶಸ್ತ್ರ ಪಡೆಗಳು ತುಂಬಾ ತುರ್ತು ಸ್ಥಿತಿಯಲ್ಲಿರುತ್ತವೆ. ಅಂತಹ ತರಬೇತಿ ಇಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ನಮಗೆ ಖಚಿತವಾಗಿದೆ. ಆದ್ದರಿಂದ ನಮ್ಮಿಂದ ನೀಡಲಾದ ಆದೇಶವನ್ನು ನಾವು ತೆರವುಗೊಳಿಸುವುದಿಲ್ಲ. ನಾವು ಪ್ರಕರಣವನ್ನು ಬಾಕಿ ಉಳಿಸುತ್ತಿದ್ದು ಇದರಿಂದ ಸಂದರ್ಭಗಳು ಉದ್ಭವಿಸಿದಂತೆ ನಿರ್ದೇಶನ ನೀಡಲು ಸಾಧ್ಯವಾಗುತ್ತದೆ ಎಂದೂ ಪೀಠ ತಿಳಿಸಿದೆ.

ಅಗತ್ಯ ಬಿದ್ದರೆ ಮುಂದಿನ ನಿರ್ದೇಶನಗಳಿಗಾಗಿ ಜನವರಿ 2022ರಲ್ಲಿ ವಿಚಾರಣೆ ನಡೆಸಲಾಗುವುದು. ಪ್ರಸಕ್ತ ಸಾಲಿನ ಪರೀಕ್ಷೆ ನವೆಂಬರ್‌ ಮಧ್ಯ ಭಾಗದಲ್ಲಿ ನಡೆಯಲಿದ್ದು ಫಲಿತಾಂಶ ಪ್ರಕಟಣೆಗೆ ಸುಮಾರು ಎರಡು ತಿಂಗಳು ಹಿಡಿಯುತ್ತದೆ. ಮುಂದಿನ ವರ್ಷ ಮಹಿಳೆಯರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವ ಬದಲು, ಕೇಂದ್ರ ಸರ್ಕಾರ ಮಹಿಳಾ ಅಭ್ಯರ್ಥಿಗಳಿಗಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕಡೆ ಗಮ‌ನ ಕೊಡಬೇಕು ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.  

ಪರೀಕ್ಷೆಯನ್ನು ತೆಗೆದುಕೊಳ್ಳಲು ಮುಂದಾಗಿರುವ ವಿದ್ಯಾರ್ಥಿಗಳಿಗೆ ನಾವು ಯಾವ ಉತ್ತರವನ್ನು ನೀಡುವುದು.? ಆದೇಶವನ್ನು ತೆರವುಗೊಳಿಸುವಂತೆ ಮತ್ತೆ ಮನವಿಮಾಡಿಕೊಳ್ಳ ಕೂಡದು. ನೀವು ಕೆಲಸ ಮುಂದುವರಿಸಿ. ಫಲಿತಾಂಶವನ್ನು ನೋಡೋಣ. ಜೊತೆಗೆ ಎಷ್ಟು ಮಹಿಳೆಯರು ಪರೀಕ್ಷೆ ಬರೆಯುತ್ತಾರೆ ಎಂಬುದನ್ನು ನೋಡೋಣ ಎಂದು ಸುಪ್ರೀಂಕೋರ್ಟ್‌ ಕೇಂದ್ರದ ಕಿವಿ‌ ಹಿಂಡಿದೆ. 

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಚಿನ್ಮಯ್ ಪ್ರದೀಪ್ ಶರ್ಮಾ ಮತ್ತು ಅಡ್ವೋಕೇಟ್ ಆನ್ ರೆಕಾರ್ಡ್ ಮೋಹಿತ್ ಪಾಲ್ ಮತ್ತು ನ್ಯಾಯವಾದಿ ಸುನೈನಾ ಫುಲ್ ವಾದಿಸಿದರು. ಕೇಂದ್ರ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಹಾಜರಾದರು. ಕಳೆದ ತಿಂಗಳು ಮಧ್ಯಂತರ ಆದೇಶವೊಂದನ್ನು ಜಾರಿಗೊಳಿಸಿದ್ದ ಸುಪ್ರೀಂಕೋರ್ಟ್, ಸೆಪ್ಟೆಂಬರ್ 5ರಂದು ನಡೆದ ಈ ವರ್ಷದ ಎನ್‌ಡಿಎ ಪರೀಕ್ಷೆಗೆ ಮಹಿಳಾ ಅಭ್ಯರ್ಥಿಗಳು ಹಾಜರಾಗಲು ಅವಕಾಶ ನೀಡಿತ್ತು.

 
Tags: Armed Forces TrainedBJPCovid 19Emergenciesnad examsupreme courtWomenನರೇಂದ್ರ ಮೋದಿಬಿಜೆಪಿರಾಷ್ಟ್ರೀಯ ರಕ್ಷಣಾ ಪರೀಕ್ಷೆ
Previous Post

ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಆಪರೇಷನ್ ಹಸ್ತದ ಸದ್ದು; BSY ಹೇಳಿದ್ದೇನು ಗೊತ್ತೇ?

Next Post

ರಾಹುಲ್, ಪ್ರಿಯಾಂಕ ಅನನುಭವಿಗಳು; ಸಿಧು ಅಪಾಯಕಾರಿ- ಮಾಜಿ ಸಿಎಂ ಅಮರಿಂದರ್ ಸಿಂಗ್

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ರಾಹುಲ್, ಪ್ರಿಯಾಂಕ ಅನನುಭವಿಗಳು; ಸಿಧು ಅಪಾಯಕಾರಿ- ಮಾಜಿ ಸಿಎಂ ಅಮರಿಂದರ್ ಸಿಂಗ್

ರಾಹುಲ್, ಪ್ರಿಯಾಂಕ ಅನನುಭವಿಗಳು; ಸಿಧು ಅಪಾಯಕಾರಿ- ಮಾಜಿ ಸಿಎಂ ಅಮರಿಂದರ್ ಸಿಂಗ್

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada