ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾದ ವಿದ್ಯಾರ್ಥಿನಿಯರ ಹಿಜಾಬ್ ವಿವಾದ ಕುರಿತ ಮೇಲ್ಮನವಿಗಳ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಕರ್ನಾಟಕ ಶಿಕ್ಷಣ ಇಲಾಖೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಗಳ ಕುರಿತು ಸುಪ್ರೀಂಕೋರ್ಟ್ 10 ದಿನಗಳ ವಿಚಾರಣೆ ಪೂರ್ಣಗೊಳಿಸಿದೆ.
ಹಿಜಾಬ್ ವಿವಾದದಲ್ಲಿ ಪಿಎಫ್ ಐ ಪಾತ್ರದ ಕುರಿತು ಆರೋಪಗಳು ಕೇಳಿ ಬಂದಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಾದವನ್ನೂ ಸುಪ್ರೀಂಕೋರ್ಟ್ ಆಲಿಸಿದ್ದು, ತೀರ್ಪು ಕಾಯ್ದಿರಿಸಿದ್ದರೂ ದಿನಾಂಕ ಘೋಷಿಸಿಲ್ಲ.
ಹಿಜಾಬ್ ವಿವಾದದಲ್ಲಿ ಸಮುದಾಯ ಹಾಗೂ ಪಿಎಫ್ ಐ ಪಾತ್ರವಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮೇಲ್ಮನವಿಗಳು ಸಲ್ಲಿಕೆಯಾಗಿದ್ದವು.
ಕೇಂದ್ರ ಸರಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕರ್ನಾಟಕದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆಎಂ ನಾಗರಾಜ್ ಹಾಗೂ ಮುಸ್ಲಿಮ್ ಅರ್ಜಿದಾರರ ಪರ ಹಿರಿಯ ವಕೀಲರಾದ ದುಷ್ಯಂತ್ ದೇವ್, ಸಲ್ಮಾನ್ ಖುರ್ಷಿದ್ ವಾದ ಮಂಡಿಸಿದರು.