• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುರತ್ಕಲ್​ ಜಲೀಲ್ ಹತ್ಯೆ ಕೇಸ್‌: ಪೊಲೀಸರು ಕ್ರಮ ಕೈಗೊಂಡಿಲ್ಲ ಯು.ಟಿ.ಖಾದರ್ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
December 25, 2022
in Top Story, ರಾಜಕೀಯ, ಶೋಧ
0
ಸುರತ್ಕಲ್​ ಜಲೀಲ್ ಹತ್ಯೆ ಕೇಸ್‌: ಪೊಲೀಸರು ಕ್ರಮ ಕೈಗೊಂಡಿಲ್ಲ ಯು.ಟಿ.ಖಾದರ್ ಆರೋಪ
Share on WhatsAppShare on FacebookShare on Telegram

ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ನಿಜವಾದ ಆರೋಪಿಗಳನ್ನು ಹಿಡಿಯುವ ಕೆಲಸ ಮಾಡಬೇಕು. ಕಳೆದ 2 ತಿಂಗಳಿಂದ ನೈತಿಕ ಪೊಲೀಸ್​ಗಿರಿ, ಅನೈತಿಕ ದಾಳಿ ನಡೆಯುತ್ತಿದೆ.

ADVERTISEMENT


ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್​​ನ ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ ನಿನ್ನೆ ಅಬ್ದುಲ್​ ಜಲೀಲ್ ಎಂಬುವವರಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದರು. ಈ ಘಟನೆ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತರಿಂದ ಮಾಜಿ ಸಿಎಂ ಸಿದ್ದರಾಮಯ್ಯದೂರವಾಣಿ ಮೂಲಕ ಮಾಹಿತಿ ಸಂಗ್ರಹಿಸಿದ್ದಾರೆ. ನಾಯಕ ಸಿದ್ದರಾಮಯ್ಯ ಘಟನೆ ಬಗ್ಗೆ ಮಾಹಿತಿ ಪಡೆಯಲು ಮಾಜಿ ಶಾಸಕ ಮೊಯ್ದೀನ್​ಗೆ ಕರೆ ಮಾಡಿದ್ದ ಕಮಿಷನರ್​​ ಅಲ್ಲೇ ಇದ್ದಿದ್ರಿಂದ ಮೊಬೈಲ್ ಕೊಡಲು ಹೇಳಿದ್ರು. ಆಗ ಮೊಯ್ದೀನ್ ಪೊಲೀಸ್​ ಕಮಿಷನರ್​ ಶಶಿಕುಮಾರ್​ಗೆ ಮೊಬೈಲ್ ನೀಡಿದ್ದು ಸಿದ್ದರಾಮಯ್ಯ ಮಾಹಿತಿ ಪಡೆದಿದ್ದಾರೆ.

ಅಬ್ದುಲ್​ ಜಲೀಲ್ ಕೊಲೆಯಾದ ವ್ಯಕ್ತಿ


ಇನ್ನು ಘಟನೆ ಸಂಬಂಧ ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ನಿಜವಾದ ಆರೋಪಿಗಳನ್ನು ಹಿಡಿಯುವ ಕೆಲಸ ಮಾಡಬೇಕು. ಕಳೆದ 2 ತಿಂಗಳಿಂದ ನೈತಿಕ ಪೊಲೀಸ್​ಗಿರಿ, ಅನೈತಿಕ ದಾಳಿ ನಡೆಯುತ್ತಿದೆ. ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲವೆಂದು ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್​ ಆಕ್ರೋಶ ಹೊರ ಹಾಕಿದ್ದಾರೆ. ಬೇಲೆಬಲ್​ ಸೆಕ್ಷನ್ ಹಾಕುವುದರಿಂದ ಬೇಲ್ ಪಡೆದು ಹೊರಬರುತ್ತಾರೆ. ಹೀಗಾಗಿ ಪದೇಪದೆ ಅಂತಹ ಘಟನೆಗಳು ನಡೆಯುತ್ತಿವೆ. ಗೃಹಸಚಿವರ ಜತೆ ನಿನ್ನೆ ಇದೇ ವಿಚಾರದ ಬಗ್ಗೆ ನಾನು ಚರ್ಚೆ ಮಾಡಿದ್ದೆ ಎಂದರು.

ಇನ್ನು ಘಟನೆ ಸಂಬಂಧ ಮಾಜಿ ಶಾಸಕ ಮೊಯ್ದೀನ್ ಬಾವಾ ಪ್ರತಿಕ್ರಿಯೆ ನೀಡಿದ್ದಾರೆ. ನೈತಿಕ ಪೊಲೀಸ್​ಗಿರಿ ಪ್ರಕರಣಕ್ಕೆ ತಕ್ಕ ಶಿಕ್ಷೆ ಆಗದಿರುವುದರಿಂದ ಮಂಗಳೂರಿನಲ್ಲಿ ಪದೇಪದೆ ಇಂತಹ ಘಟನೆ ಮರುಕಳಿಸುತ್ತಿವೆ. ಗೃಹಸಚಿವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಇದ್ದಾರೆ. ಗೃಹಸಚಿವರು ಜಿಲ್ಲೆಯಲ್ಲಿ ಇದ್ದಾಗಲೇ ಇಂತಹ ಕೃತ್ಯವೆಸಗಿದ್ದಾರೆ. ಈ ಹಿಂದೆ ಸಿಎಂ ಜಿಲ್ಲೆಯಲ್ಲಿ ಇದ್ದಾಗ ಸುರತ್ಕಲ್​ನಲ್ಲಿ ಹತ್ಯೆಯಾಗಿತ್ತು. ಇವರ ಕುಮ್ಮಕ್ಕಿನಿಂದಲೇ ಮಂಗಳೂರಿನಲ್ಲಿ ಹೀಗೆ ನಡೆಯುತ್ತಿದೆ ಎಂದು ಮಂಗಳೂರಿನ ಖಾಸಗಿ ಆಸ್ಪತ್ರೆ ಬಳಿ ಮೊಯ್ದೀನ್ ಬಾವಾ ಪ್ರತಿಕ್ರಿಯಿಸಿದರು.

Tags: ಜಲೀಲ್ ಹತ್ಯೆಮಂಗಳೂರುಯು.ಟಿ.ಖಾದರ್ಸುರತ್ಕಲ್​
Previous Post

ಸರ್ಕಾರಕ್ಕೆ ವಿಶಿಷ್ಟ ಬೇಡಿಕೆಯನ್ನಿಟ್ಟ ಮದ್ಯಪಾನ ಪ್ರಿಯರು

Next Post

ಬೆಂಗಳೂರು ಜನರೇ .. ರೋಡ್ ಸೈಡ್ ಬೈಕ್ ಪಾರ್ಕ್ ಮಾಡುವಾಗ ಎಚ್ಚರ..!

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

by ಪ್ರತಿಧ್ವನಿ
May 1, 2026
0

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಹಾಗೂ ಮಾಗ್ರಾಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರಗಳ ಒಟ್ಟು 15 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಭಾರತೀಯ ಚುನಾವಣಾ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post
ಬೆಂಗಳೂರು ಜನರೇ .. ರೋಡ್ ಸೈಡ್ ಬೈಕ್ ಪಾರ್ಕ್ ಮಾಡುವಾಗ ಎಚ್ಚರ..!

ಬೆಂಗಳೂರು ಜನರೇ .. ರೋಡ್ ಸೈಡ್ ಬೈಕ್ ಪಾರ್ಕ್ ಮಾಡುವಾಗ ಎಚ್ಚರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada