• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Caste Census: ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ

ಪ್ರತಿಧ್ವನಿ by ಪ್ರತಿಧ್ವನಿ
October 6, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ADVERTISEMENT

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೊಪ್ಪಳದಲ್ಲಿ ಶೇ.97ರಷ್ಟು ಸಮೀಕ್ಷೆ ಪೂರ್ಣ
ಕೊಪ್ಪಳ ಜಿ್ಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಸಮಾಜದಲ್ಲಿ ಬದಲಾವಣೆಯನ್ನು ವಿರೋಧಿಸುವವರು ಸಮೀಕ್ಷೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದರು. ಕೊಪ್ಪಳದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದಾ, ಕಡಿಮೆ ಅಂತರದಲ್ಲಿ ಸೋತಿದ್ದರೂ, ಕೊಪ್ಪಳದ ಜನ ತನ್ನನ್ನು ಆಶೀರ್ವದಿಸಿದ್ದರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಜನತೆಗೆ ಧನ್ಯವಾದಗಳನ್ನು ತಿಳಿಸಿದರು.

ಬಲ್ಡೋಟಾ ಕಾರ್ಖಾನೆ :
ಬಲ್ಡೋಟಾ ಕಾರ್ಖಾನೆ ಯೋಜನೆ ಕುರಿತಂತೆ ಕೊಪ್ಪಳದಲ್ಲಿ ಹೋರಾಟಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಲ್ಡೋಟಾ ಕಾರ್ಖಾನೆಯ ವಿಚಾರ ನ್ಯಾಯಾಲಯದಲ್ಲಿ ವಿಲೇ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರಿಸರ ಮಾಲಿನ್ಯ ತಡೆಯಲು ಕ್ರಮ
ಎಂಎಸ್ ಪಿ ಎಲ್ ಸೇರಿದಂತೆ ವಿವಿಧ ಕೈಗಾರಿಕೆಗಳಿಂದ ಬರುವ ಧೂಳಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರದ ಕ್ರಮ ತೆಗೆದುಕೊಳ್ಳುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕಾರ್ಖಾನೆಗಳಿಂದ ಬರುವ ಧೂಳನ್ನು ಪರೀಕ್ಷೆ ನಡೆಸಿ, ಧೂಳು ಬರದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ಕೇಂದ್ರ ಸರ್ಕಾರವೂ ಜಾತಿಗಣತಿ ನಡೆಸಲಿದೆ
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿಗಣತಿಗೂ ವಿರೋಧ ವ್ಯಕ್ತಪಡಿಸುತ್ತಾರೆಯೇ ? ಎಂದು ಪ್ರಶ್ನಿಸಿದರು.

ಲಿಂಗಾಯಿತ ಪ್ರತ್ಯೇಕ ಧರ್ಮ: ಜನರೇ ನಿಲುವೇ ನನ್ನ ನಿಲುವು
ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಎನ್ನುವ ಬಗ್ಗೆ ಮುಖ್ಯಮಂತ್ರಿಗಳ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿ, ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ, ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದರು.

ಗ್ಯಾರಂಟಿಗಳು ಸಮರ್ಪಕವಾಗಿ ತಲುಪುತ್ತಿದೆ
ಗ್ಯಾರಂಟಿಗಳು ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ ಎಂಬುದಕ್ಕೆ ಉತ್ತರಿಸಿ, ಗ್ಯಾರಂಟಿಗಳನ್ನು ಸಮರ್ಪಕವಾಗಿ ತಲುಪಿಸಲಾಗುತ್ತಿದೆ ಎಂದರು.

ಕೆಮ್ಮಿನ ಔಷಧಿ-ಎಚ್ಚರಿಕೆ ವಹಿಸುವಂತೆ ಇಲಾಖೆಗೆ ಸೂಚನೆ
ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ರಾಜ್ಯಸರ್ಕಾರದ ಕ್ರಮವೇನು ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

Tags: CM Siddaramaiahcm siddaramaiah budgetcm siddaramaiah cabinetcm siddaramaiah dancecm siddaramaiah dasaracm siddaramaiah latest newscm siddaramaiah livecm siddaramaiah newscm siddaramaiah patriotic momentcm siddaramaiah press meetcm siddaramaiah speechcm siddaramaiah speech 2025cm siddaramaiah statuscm siddaramaiah today newscm siddaramaiah videokarnataka cm siddaramaiahkarnataka next cm siddaramaiahSiddaramaiah CMsiddaramaiah karnataka cm
Previous Post

ಬಿಜೆಪಿ ಮತ ಪರಿಷ್ಕರಣೆಯನ್ನು ಪರಿಶುದ್ಧವಾಗಿ ಮಾಡಿದೆ

Next Post

BY Vijayendra: ಸಿದ್ದರಾಮಯ್ಯರ ಅಂತರಂಗದಲ್ಲಿ ಏನಿದೆ?

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post

BY Vijayendra: ಸಿದ್ದರಾಮಯ್ಯರ ಅಂತರಂಗದಲ್ಲಿ ಏನಿದೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada