ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನ ಹೊಂದಿ ಎರಡು ವರ್ಷ ಕಳೆದಿವೆ ಅದರೂ ಅವರ ಸಾವಿಗೆ ನಿಕರ ಕಾರಣವೇನು ಎಂದು ತಿಳಿದುಬಂದಿಲ್ಲ. ಇದರ ನಡುವೆಯೇ ಈಗ ಮುಂಬೈ ವಿಶೇಷ ನ್ಯಾಯಾಲಯಕ್ಕೆ ಎನ್ ಸಿಬಿ ಚಾರ್ಜ್ ಶೀಟ್ ಸಲ್ಲಿಸಿದೆ.
ಸುಶಾಂತ್ ಸಾವಿನ ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದ್ದು,. ಇದರ ಪ್ರಮುಖ ಆರೋಪಿ ಆಗಿರುವ ರಿಯಾ ಚಕ್ರವರ್ತಿ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಈಗ ವಿಶೇಷ ನ್ಯಾಯಾಲಯಕ್ಕೆ ಎನ್ ಸಿಬಿ ಚಾರ್ಜ್ ಶೀಟ್ ಸಲ್ಲಿಸಿದ್ದು, ರಿಯಾ ಚಕ್ರವರ್ತಿ ಮತ್ತವ ಸಹೋದರನಿಗೆ ಈಗ ಮತ್ತೆ ಸಂಕಷ್ಟ ಎದುರಾಗಿದೆ.
ಇಂದಿಗೂ ಸಹ ಸುಶಾಂತ್ ಸಾವಿಗೆ ನ್ಯಾಯ ಸಿಗಬೇಕು ಎಂದು ಸಮಾಜಿಕ ಜಾಲತಾಣದಲ್ಲಿ ಅನೇಕರು ಬರೆಯುತ್ತಲೇ ಇದ್ದಾರೆ.