• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಭಾರತದ ಕಳಪೆ ಪ್ರದರ್ಶನ: ಪಾಕಿಸ್ತಾನಕ್ಕೆ ಭರ್ಜರಿ ಜಯ

Any Mind by Any Mind
October 24, 2021
in ಕ್ರೀಡೆ
0
ಭಾರತದ ಕಳಪೆ ಪ್ರದರ್ಶನ: ಪಾಕಿಸ್ತಾನಕ್ಕೆ ಭರ್ಜರಿ ಜಯ
Share on WhatsAppShare on FacebookShare on Telegram

ADVERTISEMENT

ಭಾರತ ಮತ್ತು ಪಾಕಿಸ್ತಾನ ನಡುವಿನ ರೋಚಕ ಹಣಾಹಣಿಯಲ್ಲಿ ಪಾಕಿಸ್ತಾನ ಹತ್ತು ವಿಕೆಟ್’ಗಳ ಭರ್ಜರಿ ಜಯ ಸಾಧಿಸಿದೆ. ಸಂಘಟಿತ ಪ್ರದರ್ಶನ ನೀಡಿದ ತಂಡವು ಭಾರತವನ್ನು ಅಂತರದಲ್ಲಿ ಮಣಿಸಿದೆ. ಇದರೊಂದಿಗೆ ಯಾವುದೇ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತದ ಎದುರು ಮೊದಲು ಜಯ ದಾಖಲಿಸಿ ಇತಿಹಾಸ ನಿರ್ಮಿಸಿದೆ.
ಅದ್ಭುತವಾದ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನವನ್ನು ಪಾಕಿಸ್ತಾನವು ನೀಡಿತು. ಮೊಹಮ್ಮದ್ ರಿಜ್ವಾನ್ ಹಾಗೂ ಬಾಬರ್ ಅಜಂ ಭಾರತದ ಗುರಿಯನ್ನು ಅನಾಯಸವಾಗಿ ತಲುಪಿದರು.


ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅತ್ಯಂತ ಕಳಪೆ ಆರಂಭ ಪಡೆಯಿತು. ಆರು ರನ್ ಆಗುವಷ್ಟರಲ್ಲಿ ಆರಂಭಿಕರಾದ ರೋಹಿತ್ ಶರ್ಮಾ (0) ಮತ್ತು ಕೆ ಎಲ್ ರಾಹುಲ್ (3) ಪೆವಿಲಿಯನ್ ಸೇರಿದ್ದರು. ಇದಾದ ಬಳಿಕ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ತಂಡಕ್ಕೆ ಅಲ್ಪ ಮಟ್ಟಿನ ಚೇತರಿಕೆ ನೀಡಿದರು. ಆದರೆ, ತಂಡದ ಮೊತ್ತ 31 ಆಗುವಷ್ಟರಲ್ಲಿ ಸೂರ್ಯಕುಮಾರ್ ಯಾದವ್ (11) ಔಟ್ ಆಗಿದ್ದರಿಂದ ತಂಡ ಮತ್ತೆ ಸಂಕಷ್ಟಕ್ಕೆ ಸಿಲುಕಿತು.


ಈ ವೇಳೆ ಒಂದಾದ ಕೊಹ್ಲಿ ಹಾಗೂ ರಿಷಬ್ ಪಂತ್ 53 ರನ್’ಗಳನ್ನು ಸೇರಿಸುವಲ್ಲಿ ಯಶಸ್ವಿಯಾದರು. ಇವರಿಬ್ಬರ ಜೊತೆಯಾಟದ ಫಲವಾಗಿ ತಂಡವು ಉತ್ತಮ ಮೊತ್ತವನ್ನು ಪೇರಿಸುವಲ್ಲಿ ಯಶಸ್ವಿಯಾಯಿತು. 39 ರನ್ನಿಗೆ ವಿಕೆಟ್ ಒಪ್ಪಿಸಿದ ಪಂತ್ ಬಳಿಕ ಕ್ರೀಸ್’ಗೆ ಇಳಿದ ರವೀಂದ್ರ ಜಡೇಜ (13) ಹಾಗೂ ಹಾರ್ದಿಕ್ ಪಾಂಡ್ಯ (11) ಹೆಚ್ಚಿನ ಕೊಡುಗೆ ನೀಡುವಲ್ಲಿ ವಿಫಲವಾದರು. ಕೊನೆಗೆ ಇಪ್ಪತ್ತು ಓವರ್’ಗಳ ಅಂತ್ಯಕ್ಕೆ ಭಾರತವು ಏಳು ವಿಕೆಟ್ ನಷ್ಟಕ್ಕೆ 151 ರನ್ ಕಲೆ ಹಾಕಿತು.


ಪಾಕಿಸ್ತಾನ ಪರ ಬೌಲಿಂಗ್ ಮಾಡಿದ ಶಾಹಿನ್ ಅಫ್ರಿದಿ ನಾಲ್ಕು ಓವರ್’ಗಳಲ್ಲಿ 31 ರನ್ ನೀಡಿ ಆರಂಭಿಕ ಆಟಗಾರರು ಸೇರಿದಂತೆ ಒಟ್ಟು ಮೂರು ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು. ಇವರ ಬಳಿಕ ಹಸನ್ ಅಲಿ ಎರಡು, ಶಾದಾಬ್ ಖಾನ್ ಹಾಗೂ ಹ್ಯಾರಿಸ್ ರೌಫ್ ತಲಾ ಒಂದು ವಿಕೆಟ್ ಪಡೆದರು.


ಉತ್ತಮ ಬೌಲಿಂಗ್ ಸಾಧನೆ ಮಾಡಿದ ಶಹೀನ್ ಅಫ್ರಿದಿ ಪಂದ್ಯ ಪುರುಷ ಪ್ರಶಸ್ತಿಗೆ ಭಾಜನರಾದರು. ಒಟ್ಟಾರೆ, ಪಾಕಿಸ್ತಾನವು ವಿಶ್ವಕಪ್ ಟೂರ್ನಿಯಲ್ಲಿ ಭಾರತವನ್ನು ಮೊದಲ ಬಾರಿಗೆ ಸೋಲಿಸಿದ ಸಂಭ್ರಮಾಚರಣೆಯಲ್ಲಿ ಇದ್ದರೆ, ಭಾರತ ತಂಡದ ಅಭಿಮಾನಿಗಳು ನಿರಾಶರಾಗಿದ್ದಾರೆ.


ಕೊಹ್ಲಿ ಆಕರ್ಷಕ ಅರ್ಧಶತಕ:
49 ಬಾಲ್’ಗಳನ್ನು ಎದುರಿಸಿದ ವಿರಾಟ್ ಕೊಹ್ಲಿ ಐದು ಬೌಂಡರಿ ಹಾಗೂ ಒಂದು ಸಿಕ್ಸ್ ಸೇರಿ ಒಟ್ಟು 57 ರನ್ ಹೊಡೆದರು. ಇವರ ಅರ್ಧ ಶತಕದಿಂದ ಭಾರತವು ಅಲ್ಪ ಮೊತ್ತಕ್ಕೆ ಕುಸಿಯುವುದು ತಪ್ಪಿತು.


ಅಂದ ಹಾಗೆ ವಿಶ್ವಕಪ್ ಪಂದ್ಯಾವಳಿಯಲ್ಲಿ ಮೊದಲ ಬಾರಿಗೆ ವಿರಾಟ್ ಕೊಹ್ಲಿ ಪಾಕಿಸ್ತಾನದ ಎದುರು ಔಟ್ ಆದರು. ಇದಕ್ಕೂ ಮೊದಲು 2012ರಲ್ಲಿ ಕೊಲಂಬೋದಲ್ಲಿ ನಡೆದ ಪಂದ್ಯದಲ್ಲಿ 78* ರನ್, 2014 ಮೀರ್ಪುರ್’ನಲ್ಲಿ 36* ರನ್, 2016 ಕೊಲ್ಕತ್ತಾದಲ್ಲಿ 55* ರನ್ ಮಾಡಿ ಔಟಾಗದೆ ಉಳಿದಿದ್ದರು.


ಇಂದಿನ ಅರ್ಧ ಶತಕದ ಬಳಿಕ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಯಾವುದೇ ತಂಡದ ಎದುರು ಅತೀ ಹೆಚ್ಚು ರನ್ ಬಾರಿಸಿದವರ ಪಟ್ಟಿಯಲ್ಲಿ ಕೊಹ್ಲಿ ಸ್ಥಾನಕ್ಕೇರಿದ್ದಾರೆ. ಕೊಹ್ಲಿಗಿಂತ ಮುಂಚೆ ವೆಸ್ಟ್ ಇಂಡೀಸ್ ತಂಡದ ಕ್ರಿಸ್ ಗೈಲ್ ಆಸ್ಟ್ರೇಲಿಯಾ ಎದುರು 274 ರನ್ ಬಾರಿಸಿದ್ದರೆ, ವೆಸ್ಟ್ ಇಂಡೀಸ್ ಎದುರು ಶ್ರೀಲಂಕಾದ ತಿಲಕರತ್ನೆ ದಿಲ್ಶಾನ್ 238 ರನ್ ಹೊಡೆದಿದ್ದಾರೆ. ಶ್ರೀಲಂಕಾದ ಮಾಜಿ ಕಪ್ತಾನ ಮಹೇಲ ಜಯವರ್ಧನೆ ನ್ಯೂಜಿಲ್ಯಾಂಡ್ ಎದುರು 226 ರನ್ ಕಲೆ ಹಾಕಿದ್ದಾರೆ. ಆ ನಂತರ ಕೊಹ್ಲಿ ಪಾಕಿಸ್ತಾನದ ಎದುರು 226 ರನ್ ಕಲೆ ಹಾಕಿ ನಾಲ್ಕನೇ ಸ್ಥಾನದಲ್ಲಿದ್ದಾರೆ.


ಪಾಕಿಸ್ತಾನಕ್ಕೆ ಭರ್ಜರಿ ಆರಂಭ:
152 ರನ್’ಗಳ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನಕ್ಕೆ ರಿಜ್ವಾನ್ ಹಾಗೂ ಬಾಬರ್ ಅಜಾಂ ಉತ್ತಮ ಆರಂಭ ನೀಡಿದರು. ಪವರ್ ಪ್ಲೇಯಲ್ಲಿ 43 ರನ್ ಕಲೆ ಹಾಕುವ ಮೂಲಕ, ಚೇಸಿಂಗ್’ಗೆ ಉತ್ತಮ ಅಡಿಪಾಯ ಹಾಕಿಕೊಟ್ಟರು. ಆ ನಂತರದಲ್ಲಿ ಕ್ರೀಸ್ ಕಚ್ಚಿ ನಿಂತ ಇಬ್ಬರೂ ಆಟಗಾರರು ಕೊನೆಯವರೆಗೂ ವಿಕೆಟ್ ಕಳೆದುಕೊಳ್ಳದೆ ಪಾಕಿಸ್ತಾನವನ್ನು ಗಡಿ ಮುಟ್ಟಿಸಿದರು.


ಮೊಹಮ್ಮದ್ ಇಜ್ವಾನ್ ಅಜೇಯ 79 (55), ಬಾಬರ್ ಅಜಂ 68 (52) ರನ್ ಬಾರಿಸಿದರು. ಇಬ್ಬರೂ ತಲಾ ಆರು ಬೌಂಡರಿ ಹೊಡೆದರು. ರಿಜ್ವಾನ್ ಬ್ಯಾಟಿನಿಂದ ಮೂರು ಆಕರ್ಷಕ ಸಿಕ್ಸರ್’ಗಳು ಸಿಡಿದರೆ, ಬಾಬಾರ್ ಅಜಂ ಎರಡು ಸಿಕ್ಸರ್ ಬಾರಿಸಿ ರಿಜ್ವಾನ್’ಗೆ ಕೊನೆಯವರೆಗೂ ಉತ್ತಮ ಸಾಥ್ ನೀಡಿದರು.


ಇದೊಂದು ದಾಖಲೆ ಜೊತೆಯಾಟವಾಗಿದ್ದು, ಪಾಕಿಸ್ತಾನದ ಪರ ಯಾವುದೇ ವಿಕೆಟ್’ಗೆ ಅತಿ ಹೆಚ್ಚು ರನ್ ಬಾರಿಸಿದ ಜೋಡಿಯಾಗಿ ಇವರಿಬ್ಬರು ನಿಂತಿದ್ದಾರೆ. ಇದರ ಹಿಂದೆ, 2012ರ ಅಹಮದಾಬಾದ್ ಪಂದ್ಯದಲ್ಲಿ ಮೊಹಮ್ಮದ್ ಹಫೀಜ್ ಹಾಗೂ ಶೋಯೆಬ್ ಮಲಿಕ್ ನಾಲ್ಕನೇ ವಿಕೆಟ್’ಗೆ 106 ರನ್ ಜೊತೆಯಾಟವಾಡಿದ್ದು ದಾಖಲೆಯಾಗಿತ್ತು.

Previous Post

ಶತಕೋಟಿ ಲಸಿಕೆ ನೀಡಿಕೆ; ಹಲವು ಸವಾಲುಗಳನ್ನ ಮೆಟ್ಟಿ ನಿಂತ ಭಾರತ ಎಂದ ಮೋದಿ

Next Post

20 ತಿಂಗಳ ಬಳಿಕ ಪ್ರಾಥಮಿಕ ಶಾಲೆ ಇಂದಿನಿಂದ ಆರಂಭ : ಮೊದಲ ದಿನವೇ ಶಿಕ್ಷಕರಿಂದ ಪ್ರತಿಭಟನೆ!

Related Posts

Top Story

Lakshmi Hebbalkar: ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
October 7, 2025
0

ನವೆಂಬರ್ 19ಕ್ಕೆ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ಪರಿಶೀಲನೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ...

Read moreDetails
ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

October 5, 2025
Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

September 30, 2025
ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

September 21, 2025
ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

September 18, 2025
Next Post
ಗ್ರಾಮೀಣ ಭಾರತದ 97% ಹಿಂದುಳಿದ ವರ್ಗಗಳ ಪೋಷಕರು ಶಾಲೆ ಮತ್ತೆ ತೆರೆಯಲು ಬಯಸುತ್ತಾರೆ: ಸಮೀಕ್ಷೆ

20 ತಿಂಗಳ ಬಳಿಕ ಪ್ರಾಥಮಿಕ ಶಾಲೆ ಇಂದಿನಿಂದ ಆರಂಭ : ಮೊದಲ ದಿನವೇ ಶಿಕ್ಷಕರಿಂದ ಪ್ರತಿಭಟನೆ!

Please login to join discussion

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada