• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜನರನ್ನು ಥಳಿಸುವ ಅಧಿಕಾರ ಪೊಲೀಸರಿಗಿಲ್ಲ, ಸರ್ಕಾರ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು: ಕರವೇ ಅದ್ಯಕ್ಷ ಟಿ.ಎ. ನಾರಾಯಣಗೌಡ

Any Mind by Any Mind
May 10, 2021
in ಕರ್ನಾಟಕ, ರಾಜಕೀಯ
0
ಜನರನ್ನು ಥಳಿಸುವ ಅಧಿಕಾರ ಪೊಲೀಸರಿಗಿಲ್ಲ, ಸರ್ಕಾರ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು: ಕರವೇ ಅದ್ಯಕ್ಷ ಟಿ.ಎ. ನಾರಾಯಣಗೌಡ
Share on WhatsAppShare on FacebookShare on Telegram

ರಾಜ್ಯಾದ್ಯಂತ ಕರೋನ ಹರಡುತ್ತಿರುವ ಹಿನ್ನೆಲೆ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಯಾಗುತ್ತಿದ್ದಂತೆ ಇಂದು (ಸೋಮವಾರ) ಬೆಳಗ್ಗೆ 10 ಗಂಟೆಯ ನಂತರ ಅನಗತ್ಯವಾಗಿ ಓಡಾಡುತ್ತಿರುವ ವಾಹನಗಳನ್ನು ಪೊಲೀಸರು ಜಪ್ತಿ ಮಾಡುವುದರ ಜೊತೆಗೆ ರಸ್ತೆಯಲ್ಲಿ ಜನರು ಕಂಡ ತಕ್ಷಣ ಅವರ ಮೇಲೆ ಲಾಠಿ ಪ್ರಯೋಗ ಮಾಡುತ್ತಿರುವ ಬಗ್ಗೆ ವರದಿಯಾದ ಬೆನ್ನಲ್ಲೇ ಪೋಲಿಸರ ಈ ಅಮಾನವೀಯ ವರ್ತನೆಯನ್ನು ಕರವೇ ಸಂಘಟನೆಯ ರಾಜ್ಯ ಅದ್ಯಕ್ಷ ಟಿ.ಎ ನಾರಾಯಣ ಗೌಡರು ವಿರೋಧಿಸಿದ್ದಾರೆ.

ADVERTISEMENT
ಕರವೇ ಅದ್ಯಕ್ಷ ಟಿ.ಎ.ನಾರಾಯಣಗೌಡ

ಪೋಲಿಸರ ಈ ನಡವಳಿಕೆಯಿಂದ ಅಸಮಾಧಾನಕೊಂಡ ಕರವೇ ಅದ್ಯಕ್ಷರಾದ ನಾರಾಯಣಗೌಡರು ತಮ್ಮ ಟ್ವೀಟರ್ ನಲ್ಲಿ, “ಲಾಕ್ ಡೌನ್ ನಿಯಮ ಉಲ್ಲಂಘಿಸಿದರೆಂಬ ಕಾರಣಕ್ಕೆ ಜನಸಾಮಾನ್ಯರ ಮೇಲೆ ನಿರ್ದಯವಾಗಿ ಲಾಠಿ ಬೀಸುವುದನ್ನು ಪೊಲೀಸ್ ಇಲಾಖೆ ಕೂಡಲೇ ಕೈಬಿಡಬೇಕು. ಹೀಗೆ ಜನರನ್ನು ಥಳಿಸುವ ಯಾವ ಅಧಿಕಾರವೂ ಪೊಲೀಸರಿಗಿಲ್ಲ. ಸರ್ಕಾರ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು” ಎಂದು ಬರೆದುಕೊಂಡಿದ್ದಾರೆ.

ಮುಂದುವರೆದು, “ಜನರು ಈಗಾಗಲೇ ಕೋವಿಡ್ ಸಂಕಷ್ಟಗಳಿಂದ ನರಳುತ್ತಿದ್ದಾರೆ. ಗಾಯದ ಮೇಲೆ ಬರೆ ಎಳೆದಂತೆ ಲಾಕ್ ಡೌನ್ ಕೂಡ ಬಂದಿದೆ. ಇದರ ಪರಿಣಾಮ ಬಡ, ಮಧ್ಯಮ ವರ್ಗದ ಜನರ ಮೇಲಾಗುತ್ತಿದೆ. ಈ ಜನರೇ ಇಂದು ಬೀದಿಯಲ್ಲಿ ಪೊಲೀಸರ ದೌರ್ಜನ್ಯಗಳಿಗೆ ಗುರಿಯಾಗುತ್ತಿದ್ದಾರೆ” ಎಂದು ಕಿಡಿಗಾರಿದ್ದಾರೆ.

“ದಕ್ಷಿಣದ ಇತರ ರಾಜ್ಯಗಳು ಲಾಕ್ ಡೌನ್ ಜತೆಗೇ ಆರ್ಥಿಕವಾಗಿ ದುರ್ಬಲವಾಗಿರುವ ಜನರಿಗಾಗಿ ಹಲವು ಯೋಜನೆ ಜಾರಿಗೆ ತಂದಿವೆ. ಆದರೆ ಕರ್ನಾಟಕ ಸರ್ಕಾರ ಇಂಥ ಯಾವುದೇ ಕ್ರಮ ಕೈಗೊಂಡಿಲ್ಲ. ಬಡವರ ಪಾಲಿಗೆ ಕೆಲಸವೂ ಇಲ್ಲ, ಆರೋಗ್ಯವೂ ಇಲ್ಲ, ಆಹಾರವೂ ಇಲ್ಲ ಎಂಬಂಥ ಸ್ಥಿತಿ ನಿರ್ಮಾಣವಾಗಿದೆ” ಎಂದು ನಾಡಿನ ಜನರ ಪರಿಸ್ಥಿತಿ ಕಂಡು ಬೇಸರ ವ್ಯಕ್ತಪಡಿಸಿದ್ದಾರೆ.

“ಕೋವಿಡ್ ಎರಡನೇ ಅಲೆ ನಿರೀಕ್ಷಿತವಾಗಿದ್ದರೂ ಸರ್ಕಾರ ಯಾವುದೇ ಮುಂಜಾಗ್ರತೆ ವಹಿಸದೆ ಇಷ್ಟು ದೊಡ್ಡ ಅನಾಹುತಗಳಿಗೆ ಕಾರಣವಾಗಿದೆ. ತನ್ನ ಹೊಣೆಯನ್ನು ಹೊರಲಾಗದೆ, ಎಲ್ಲ ಭಾರವನ್ನು ಜನರ ಮೇಲೇ ಹೊರೆಸುವುದು ಎಷ್ಟು ಸರಿ? ಇನ್ನಾದರೂ ಸರ್ಕಾರ ತನ್ನ ಜವಾಬ್ದಾರಿ ಅರಿತು ಕ್ರಿಯಾಶೀಲವಾಗಬೇಕು” ಎಂದು ಎಚ್ಚರಿಸಿದ್ದಾರೆ.

“ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಆಸ್ಪತ್ರೆ ಹಾಸಿಗೆ ಇಲ್ಲದೆ, ಆಮ್ಲಜನಕ ಇಲ್ಲದೆ, ಚಿಕಿತ್ಸೆ ಇಲ್ಲದೆ ಅಸುನೀಗುತ್ತಿರುವ ಜನರ ರಕ್ಷಣೆಗೆ ನಿಲ್ಲಬೇಕು. ಇದಕ್ಕಾಗಿ ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಎಲ್ಲ ಜನರಿಗೂ ತ್ವರಿತವಾಗಿ ಮೂರು ತಿಂಗಳೊಳಗೆ ಉಚಿತ ವ್ಯಾಕ್ಸಿನ್ ನೀಡಬೇಕು. ಜನರ ಜೀವ ರಕ್ಷಣೆಯೇ ಈಗ ಸರ್ಕಾರದ ಆದ್ಯ ಕರ್ತವ್ಯವಾಗಬೇಕು” ಎಂದು ಆಗ್ರಹಿಸಿದ್ದಾರೆ.

Tags: #Corona#Karave#LockDown#Police#TSnarayanagowda
Previous Post

Karnataka Lock-down: ಪೊಲೀಸರೇ ಲಾಠಿ ಸಂಭಾಷಣೆ ನಿಲ್ಲಿಸಿ, ನಿಯಮ ಮೀರಿದ್ರೆ ದಂಡ ವಿಧಿಸಿ -ರವಿ ಕೃಷ್ಣಾ ರೆಡ್ಡಿ

Next Post

ಲಾಕ್‌ಡೌನ್‌ ಹೆಸರಿನಲ್ಲಿ ನಡೆಯುತ್ತಿರುವ ಪೊಲೀಸ್‌ ಲಾಠಿಚಾರ್ಜ್‌ ಅನ್ನು ನಿಲ್ಲಿಸುವಂತೆ ಮಾನವ ಹಕ್ಕುಗಳ ಆಯೋಗಕ್ಕೆ ಒತ್ತಾಯ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಲಾಕ್‌ಡೌನ್‌ ಹೆಸರಿನಲ್ಲಿ ನಡೆಯುತ್ತಿರುವ ಪೊಲೀಸ್‌ ಲಾಠಿಚಾರ್ಜ್‌ ಅನ್ನು ನಿಲ್ಲಿಸುವಂತೆ ಮಾನವ ಹಕ್ಕುಗಳ ಆಯೋಗಕ್ಕೆ ಒತ್ತಾಯ

ಲಾಕ್‌ಡೌನ್‌ ಹೆಸರಿನಲ್ಲಿ ನಡೆಯುತ್ತಿರುವ ಪೊಲೀಸ್‌ ಲಾಠಿಚಾರ್ಜ್‌ ಅನ್ನು ನಿಲ್ಲಿಸುವಂತೆ ಮಾನವ ಹಕ್ಕುಗಳ ಆಯೋಗಕ್ಕೆ ಒತ್ತಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada