Tag: Bangladesh

ಹಿಂಸಾಚಾರಕ್ಕೆ ತಿರುಗಿದ ಮೀಸಲಾತಿ ವಿರೋಧಿ ಪ್ರತಿಭಟನೆ:40ಕ್ಕೂ ಹೆಚ್ಚು ಮಂದಿ ಸಾವು!

ಢಾಕಾ :ಬಾಂಗ್ಲಾದೇಶದಲ್ಲಿ ನಾಗರಿಕ ಸೇವೆಗಳಿಗೆ ನೇಮಕಾತಿ ವಿಚಾರದಲ್ಲಿ ಸರ್ಕಾರ ಮೀಸಲಾತಿ ನಿರ್ಣಯವನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಗಲಭೆಯಲ್ಲಿ ಇದುವರೆಗೂ 40 ಕ್ಕೂ ಹೆಚ್ಚು ...

Read moreDetails

ಅಭ್ಯಾಸ ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದ ಭಾರತ

ಟಿ20 ವಿಶ್ವಕಪ್ ನ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶ (India vs Bangladesh) ವಿರುದ್ದ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ...

Read moreDetails

ಬಾಂಗ್ಲಾ ವಿರುದ್ಧ ಭರ್ಜರಿಯಾಗಿ ಸರಣಿ ಗೆದ್ದ ಯುಎಸ್ ಎ

ಬಾಂಗ್ಲಾದೇಶದ ವಿರುದ್ಧ ಯುಎಸ್ ಎ ಭರ್ಜರಿಯಾಗಿ ಜಯ ಸಾಧಿಸಿದೆ. ಬಾಂಗ್ಲಾ ವಿರುದ್ಧದ ಸರಣಿಯನ್ನು ಯುಎಸ್ ಎ 1-2 ಅಂತರದಿಂದ ಗೆದ್ದು ಬೀಗಿದೆ. ಮೊದಲೆರಡು ಪಂದ್ಯಗಳನ್ನು ಯುಎಸ್ ಎ ...

Read moreDetails

ಇಂದು ಭಾರತ-ಬಾಂಗ್ಲಾದೇಶ ಮಧ್ಯೆ ಕದನ

ಪುಣೆ: ಮೊದಲ ಪಂದ್ಯದಲ್ಲಿ ಸ್ವಲ್ಪ ಕಷ್ಟವೆನಿಸಿದ್ರೂ ಆಸ್ಟ್ರೇಲಿಯಾ ತಂಡವನ್ನು ಭಾರತ ಸೋಲಿಸಿತು. ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಸುಲಭ ಜಯ ಸಾಧಿಸಿತ್ತು. ಆದ್ರೆ ಹೈವೋಲ್ಟೇಜ್​ ಪಂದ್ಯವಾಗಿದ್ದ ಪಾಕಿಸ್ತಾನ ವಿರುದ್ಧ ...

Read moreDetails

ಬಾಂಗ್ಲಾದೇಶದಲ್ಲಿನ ಹಿಂಸಾಚಾರ ಖಂಡಿಸಿ ಬೆಂಗಳೂರಲ್ಲಿಇಸ್ಕಾನ್ ನಿಂದ ಕೃಷ್ಣ ಕೀರ್ತನೆ ಹಾಡಿ ವಿನೂತನ ಪ್ರತಿಭಟನೆ !

ಬಾಂಗ್ಲಾದೇಶದಲ್ಲಿ  ಹಿಂದೂಗಳ ಮೇಲಿನ ಹಲ್ಲೆ ದೇಗುಲಗಳ ಮೇಲಿನ ದಾಳಿ ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಚರ್ಚೆ ಆಗುತ್ತಿದೆ. ಈ ಘಟನೆಯನ್ನು ವಿರೋಧಿಸಿ ಕ್ರಮಕ್ಕೆ ಆಗ್ರಹಿಸಿ ಇಂದು ಇಸ್ಕಾನ್‌ ಕ್ಯಾಂಪಸ್‌ ನಲ್ಲಿ ವಿನೂತನ ಮಾದರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಕಪ್ಪುಪಟ್ಟಿ ಧರಿಸಿ, ಹರೇಕೃಷ್ಣ ಗೀತೆ ಹಾಡಿ, ಕಾಲ್ನಡಿಗೆ ಮಾಡಿ ಪ್ರತಿಭಟನೆ ! ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ಹಲ್ಲೆ ಹಾಗೂ ಧಾರ್ಮಿಕ ಕ್ಷೇತ್ರಗಳ ಧ್ವಂಸಕ್ಕೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಈ ಘಟನೆ ಈಗ ಸಾಕಷ್ಟು ...

Read moreDetails

ಭಾರತ ಸರ್ಕಾರದ ಮೇಲೆ ಭರವಸೆಯಿಲ್ಲ- ಬಾಂಗ್ಲಾ ಹಿಂದೂಗಳ ಆಕ್ರೋಶ

ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳ ಮೇಲೆ ಹಾಗೂ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸೆಗೆ ಭಾರತ ಸರ್ಕಾರ ನೀಡಿರುವ ಪ್ರತಿಕ್ರಿಯೆ ಕುರಿತು ಅಲ್ಲಿನ ಹಿಂದೂ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಬಾಂಗ್ಲಾದಲ್ಲಿ ಹಿಂದೂಗಳಿಗೆ ರಕ್ಷಣೆ ಸಿಗುತ್ತಿಲ್ಲವಾದರೂ, ಬಿಜೆಪಿ ಕಾಟಾಚಾರಕ್ಕೆ ಮಾತ್ರ ತನ್ನ ಸಹಾನುಭೂತಿ ತೋರುತ್ತಿದೆ. ಬಾಂಗ್ಲಾದೇಶ ಸರ್ಕಾರದ ಮೇಲೆ ಒತ್ತಡ ಹೇರುವ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಬಾಂಗ್ಲಾದೇಶ್ ಜಯಿತೊ ಹಿಂದೂ ಮೊಹಾಜೊತೆ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಗೋಬಿಂದ ಚಂದ್ರ ಪ್ರಮಾಣಿಕ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ದುರ್ಗಾ ಪೂಜೆಯ ಪೆಂಡಾಲ್’ಗಳಲ್ಲಿ ಕುರಾನ್’ಗೆ ಅಪಚಾರವೆಸಗಲಾಗಿದೆ ಎಂಬ ಆರೋಪದಡಿ ಅಕ್ಟೋಬರ್ 13ರ ನಂತರ ಹಲವು ಕಡೆಗಳಲ್ಲಿ ಹಿಂದೂಗಳ ಮೇಲೆ ದಾಳಿ ನಡೆಸಲಾಗಿತ್ತು. ಸುಮಾರು ಆರು ದಿನಗಳ ಕಾಲ ನಿರಂತರವಾಗಿ ಹಲವೆಡೆ ಈ ದಾಳಿಗಳು ನಡೆದಿದ್ದವು. ಈ ದಾಳಿಗಳನ್ನು ಖಂಡಿಸಿ ಬಾಂಗ್ಲಾದೇಶದ ಹಲವು ಪ್ರಗತಿಪರ ಸಂಘಟನೆಗಳು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದವು.  ಭಾರತದಲ್ಲಿಯೂ ಹಿಂದೂಪರ ಸಂಘಟನೆಗಳು ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದವು. ಭಜರಂಗದಳ, ವಿಶ್ವ ಹಿಂದೂ ಪರಿಷತ್, ಆರ್‌ಎಸ್ಎಸ್, ಹಿಂದೂ ಮಹಾಸಭಾ ಸೇರಿದಂತೆ ಹಲವು ಸಂಘಟನೆಗಳು ತೀವ್ರವಾಗಿ ಈ ದಾಳಿಗಳನ್ನು ಖಂಡಿಸಿದ್ದವು. ಆದರೆ, ಸರ್ಕಾರದ ಮಟ್ಟದಲ್ಲಿ ಯಾವ ರೀತಿ ಬಾಂಗ್ಲಾದೇಶದ ಮೇಲೆ ಒತ್ತಡ ಹೇರಲಾಗಿದೆ ಎಂದು ಗಮನಿಸಿದರೆ, ನಿರಾಶದಾಯಕ ಉತ್ತರ ಸಿಕ್ಕಿದೆ, ಎಂದು ಬಾಂಗ್ಲಾದೇಶದ ಹಿಂದೂ ಸಂಘಟನೆಗಳು ಆರೋಪಿಸಿವೆ.  ಈ ಕುರಿತಾಗಿ ‘ದಿ ವೈರ್’ಗೆ ಸಂದರ್ಶನ ನೀಡಿರುವ ಗೋಬಿಂದ ಚಂದ್ರ ಪ್ರಮಾಣಿಕ್, ಕಳೆದ ಹಲವು ವರ್ಷಗಳಲ್ಲಿ ಬಾಂಗ್ಲಾದೇಶದ ಹಿಂದೂಗಳ ಮೇಲೆ ನಡೆದಿರುವ ದಾಳಿಗಳಲ್ಲಿ ಆಡಳಿತರೂಢ ಅವಾಮಿ ಲೀಗ್ ನಾಯಕರ ಕೈವಾಡ ಇರುವುದು ಬೆಳಕಿಗೆ ಬಂದಿದೆ. ಸರ್ಕಾರವು ಕೋಮುವಾದಿ ಶಕ್ತಿಗಳ ಬೆಂಬಲಕ್ಕೆ ನಿಂತಿರುವುದು ಈ ಹಿಂದೆಯೂ ಸಾಬೀತಾಗಿದೆ. ಹಾಗಾಗಿ ಇಲ್ಲಿ ಪದೇ ಪದೇ ಹಿಂದೂಗಳ ಮೇಲೆ ದಾಳಿಗಳು ನಡೆಯುತ್ತಲೇ ಇವೆ, ಎಂದಿದ್ದಾರೆ.  “ಹಲವು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿ, ಆರೋಪಿಗಳನ್ನು ಬಂಧಿಸಿದ್ದರೂ ಇಲ್ಲಿನ ಪರಿಸ್ಥಿತಿಯಲ್ಲಿ ಗಮನಾರ್ಹ ಬದಲಾವಣೆಯಾಗಿಲ್ಲ. ಅಕ್ಟೋಬರ್ 18-19ರಂದು ಕೂಡಾ ಹಿಂದೂಗಳ ಮೇಲೆ ದಾಳಿ ನಡೆಸಲಾಗಿದೆ. ಭಾರತದಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ದಾಳಿಗೆ ಪ್ರತಿಯಾಗಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಸಿರುವ ಸಾಧ್ಯತೆಗಳಿವೆ ಎಂದು ಈಗಾಗಲೇ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಆದರೆ, ಇದು ಸ್ವೀಕಾರಾರ್ಹವಾದ ಉತ್ತರವಲ್ಲ,” ಎಂದು ಅವರು ಹೇಳಿದ್ದಾರೆ.  ಮುಂದುವರೆದು, ಬಹುತೇಕ ಅವಾಮಿ ಲೀಗ್ ನಾಯಕರು ಬಿಜೆಪಿ, ಆರ್‌ಎಸ್ಎಸ್ ಹಾಗೂ ವಿಶ್ವ ಹಿಂದೂ ಪರಿಷತ್ತನ್ನು ಭಯೋತ್ಪಾದಕ ಸಂಘಟನೆಗಳಂತೆ ಗುರುತಿಸುವ ಕಾರಣದಿಂದ, ಇಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಬಿಜೆಪಿಯನ್ನು ಇಷ್ಟಪಡದ ನಾಯಕರು ಸರ್ಕಾರದಲ್ಲಿ ಹೆಚ್ಚಾಗಿರುವುದರಿಂದ ಭಾರತ ಸರ್ಕಾರದ ಮಾತುಗಳಿಗೆ ಇಲ್ಲಿ ಬೆಲೆಯಿಲ್ಲದಂತಾಗಿದೆ. ಇತ್ತೀಚಿನ ದಿನಗಳಲ್ಲಿ ಆರ್‌ಎಸ್ಎಸ್ ಹಾಗು ವಿ ಹೆಚ್ ಪಿ ಕುರಿತಾಗಿ ಅವಾಮಿ ಲೀಗ್ ನಾಯಕರು ಬೃಹತ್ ಅಭಿಯಾನವನ್ನೇ ಆರಂಭಿಸಿರುವ ಕಾರಣ ಇಲ್ಲಿ ಹಿಂದೂಗಳ ವಿರುದ್ದ ಅಸಹನೆ ಹೆಚ್ಚಾಗಿದೆ, ಎಂದು ಗೋಬಿಂದ್ ಹೇಳಿದ್ದಾರೆ.  “ಬಾಂಗ್ಲಾದೇಶದ ಹಿಂದೂಗಳು ಭಾರತ ಸರ್ಕಾರದ ನಡವಳಿಕೆಯ ವಿರುದ್ದ ತೀವ್ರವಾದ ಆಕ್ರೋಶವನ್ನು ಹೊಂದಿದ್ದಾರೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ನೇರವಾಗಿ ಎಚ್ಚರಿಕೆ ನೀಡುವ ಮಟ್ಟಿಗೆ ತಲುಪಿದ್ದರೂ, ಭಾರತ ಸರ್ಕಾರ ಇಲ್ಲಿನ ಹಿಂದೂಗಳ ಮೇಲಿನ ದಾಳಿಯನ್ನು ಕನಿಷ್ಟ ಖಂಡಿಸುವ ಹೇಳಿಕೆಯನ್ನೂ ನೀಡಿಲ್ಲ. ಬಾಂಗ್ಲಾ ಸರ್ಕಾರಕ್ಕೆ ಎಚ್ಚರಿಕೆಯನ್ನೂ ರವಾನಿಸಿಲ್ಲ. ಬದಲಾಗಿ, ಹಿಂದೂಗಳ ಮೇಲಿನ ದಾಳಿಗೆ ಕ್ರಮ ಕೈಗೊಂಡ ಶೇಖ್ ಹಸೀನಾ ಅವರಿಗೆ ಭಾರತದ ವಿದೇಶಾಂಗ ಇಲಾಖೆ ಅಭಿನಂದನೆ ತಿಳಿಸಿದೆ. ವಿಶ್ವ ಸಂಸ್ಥೆ ಹಾಗೂ ಅಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆ ಈ ದಾಳಿಯನ್ನು ತೀವ್ರವಾಗಿ ಖಂಡಿಸಿವೆ. ಇಂತಹ ಸಂದರ್ಭದಲ್ಲಿ ಭಾರತ ಸರ್ಕಾರದ ಮೌನ ನಿಜಕ್ಕೂ ಬೇಸರ ಮೂಡಿಸಿದೆ,” ಎಂದು ಗೋಬಿಂದ್ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.  ಇನ್ನು ಭಾರತೀಯ ಮೂಲದ ಹಿಂದೂ ಸಂಸ್ಥೆಗಳ ಬಳಿ ಮನವಿ ಮಾಡಿದರೂ, ಅವರ ನೆರವು ದಕ್ಕದೇ ಇರುವುದು ಮತ್ತಷ್ಟು ನೋವಿಗೆ ಕಾರಣವಾಗಿದೆ ಎಂದು ಹೇಳಿರುವ ಗೋಬಿಂದ್ ಪ್ರಮಾಣಿಕ್, ಬಿಜೆಪಿ, ಆರ್ಎಸ್ಎಸ್ ಹಾಗೂ ವಿ ಹೆಚ್ ಪಿ ಸಂಸ್ಥೆಯೊಂದಿಗೆ ನಿರಂತರವಾಗಿ ನಾವು ಸಂಪರ್ಕದಲ್ಲಿ ಇದ್ದೇವೆ. ಬಾಂಗ್ಲಾ ಸರ್ಕಾರದ ಮೇಲೆ ಒತ್ತಡ ಹೇರಲು ಅವರಲ್ಲಿ ವಿನಂತಿಸಿಕೊಂಡಿದ್ದೇವೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ದಿವಂಗತ ಸುಷ್ಮಾ ಸ್ವರಾಜ್, ಆರ್ಎಸ್ಎಸ್’ನ ಹಿರಿಯ ನಾಯಕ ರಾಮ್ ಮಾಧವ್ ಅವರು ನಮ್ಮ ಕುರಿತಾಗಿ ಅಪಾರ ಸಹಾನುಭೂತಿ ಹೊಂದಿದ್ದರು. ಇತರರು ನಮ್ಮನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ನಮಗೆ ಅರ್ಥವಾಗದ ಯಾವುದೋ ಕಾರಣಕ್ಕಾಗಿ ಬಾಂಗ್ಲಾ ಸರ್ಕಾರದ ಮೇಲೆ ಒತ್ತಡ ಹೇರಲು ಹಿಂಜರಿಯುತ್ತಿದ್ದಾರೆ, ಎಂದು ಹೇಳಿದ್ದಾರೆ.  ಪಶ್ಚಿಮ ಬಂಗಾಳದ ನಾಯಕರಾದ ದಿಲೀಪ್ ಘೋಷ್ ಹಾಗೂ ಸುವೆಂದು ಅಧಿಕಾರಿ ಅಲ್ಪ ಮಟ್ಟಿನ ಬೆಂಬಲವನ್ನು ನಮಗೆ ನಿಡಿದ್ದು ಖುಶಿ ತಂದಿದೆ. ಆದರೆ, ಭಾರತ ಸರ್ಕಾರದ ಮೇಲೆ ನಮಗೆ ಎಳ್ಳಷ್ಟೂ ಭರವಸೆ ಉಳಿದಿಲ್ಲ, ಎಂದು ಗೋಬಿಂದ್ ಅವರು ಹೇಳಿರುವುದು ಆರ್ಎಸ್ಎಸ್ ಹಾಗೂ ಬಿಜೆಪಿಯ ಹಿಂದೂ ಪ್ರೇಮಕ್ಕೆ ಹಿಡಿದಿರುವ ಕೈಗನ್ನಡಿಯಾಗಿದೆ. 

Read moreDetails
Page 2 of 2 1 2

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!