Tag: Farmers Suicide

ಬ್ಯಾಂಕ್‌ ನೋಟಿಸ್‌ಗೆ ನೊಂದು ರೈತ ಆತ್ಮಹತ್ಯೆಗೆ ಶರಣು

ಬೀದರ್: ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಬೀದರ್ ತಾಲೂಕಿನ ಕಪಲಾಪುರ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್ ಸಂಗಬಸಪ್ಪ ಬಿರಾದಾರ ತಮ್ಮ ಜಮೀನಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ...

Read moreDetails

ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನ ರೈತರು ಅನ್ನೋಕಾಗುತ್ತಾ..? ಡಿ.ಕೆ ಶಿವಕುಮಾರ್ ವಿವಾದಿತ ಹೇಳಿಕೆ..!

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಡಿಕೆ ಶಿವಕುಮಾರ್, ‘ಎಲ್ಲಿದೆ ಹೇಳಿ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ? ಎಲ್ಲ ಸುಳ್ಳು’ ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್ ...

Read moreDetails

ರಾಜ್ಯದಲ್ಲಿ ಅನ್ನದಾತರ ಆತ್ಮಹತ್ಯೆ.. ಇಂದು ಬರ ಜಿಲ್ಲೆಗಳ ಘೋಷಣೆ ಬಗ್ಗೆ ಚರ್ಚೆ..

ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟಿದೆ. ಕರಾವಳಿ ಹಾಗು ಮಲೆನಾಡು ಭಾಗದಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಿದ್ದರೂ ಸರಾಸರಿಯಷ್ಟು ಮಳೆ ಬಿದ್ದಿಲ್ಲ. ಅದರಲ್ಲೂ ಬಯಲು ಪ್ರದೇಶದಲ್ಲಿ ಮಳೆಯ ಪ್ರಮಾಣ ...

Read moreDetails

ಲಖೀಂಪುರ್‌ ಖೇರಿ ಪ್ರಕರಣ; ಮುಖ್ಯ ಆರೋಪಿ ಆಶಿಶ್‌ ಮಿಶ್ರಾ ಆಸ್ಪತ್ರೆಗೆ ದಾಖಲು

ಅಕ್ಟೋಬರ್‌ 3ರಂದು ಉತ್ತರ ಪ್ರದೇಶದ ಲಖೀಂಪುರ್‌ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿ ನಾಲ್ವರು ರೈತರ ಸಾವಿಗೆ ಕಾರಣರಾಗಿದ್ದ ಕೇಂದ್ರ ಗೃಹ ಖಾತೆ ರಾಜ್ಯ ...

Read moreDetails

ಲಖೀಂಪುರ್ ಹಿಂಸಾಚಾರವನ್ನ ಖಂಡಿಸಿ ʻರೈಲ್ ರೋಕೋʼ ಚಳುವಳಿ ನಡೆಸಿದ ರೈತರು

ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಅಕ್ಟೋಬರ್‌ 3ರಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಶಾಂತಯುತವಾಗಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವನ ...

Read moreDetails

ರೈತ ಮುಷ್ಕರ – ಅಲ್ಲಿ ರೈತರೇ ಏಕಿರಬೇಕು? ಕೃಷಿ ಬಿಕ್ಕಟ್ಟು ಕೇವಲ ರೈತರ ಸಮಸ್ಯೆಯೇ?

ಸಮಕಾಲೀನ ಇತಿಹಾಸದಲ್ಲಿ ಕಂಡು ಕೇಳರಿಯದಂತಹ ಒಂದು ಸಾರ್ವಜನಿಕ ಮುಷ್ಕರ ದೆಹಲಿಯಲ್ಲಿ ಕಳೆದ ಹತ್ತು ತಿಂಗಳಿನಿಂದ ನಡೆಯುತ್ತಿದೆ. ಈ ಮುಷ್ಕರದ ರೂವಾರಿಗಳು ದೇಶದ ರೈತಾಪಿ ಸಮುದಾಯ. ಕೇಂದ್ರ ಸರ್ಕಾರ ...

Read moreDetails

ಪ್ರಧಾನಿ ಮೋದಿ-ಕ್ಯಾ.ಅಮರೀಂದರ್‌ ಸಿಂಗ್‌ ಭೇಟಿ; ಕೃಷಿ ಕಾಯ್ದೆಗಳ ಕುರಿತು ಚರ್ಚೆಗಳ ಸಾಧ್ಯತೆ

ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಈ ಬಾರಿಯ ದೆಹಲಿ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಸಾಧ್ಯತೆಗಳಿವೆ.  ಕಳೆದ ಸುಮಾರು ಹತ್ತು ತಿಂಗಳಿನಿಂದ ನಡೆಯುತ್ತಿರುವ ರೈತ ಆಂದೋಲನ ಹಾಗೂ ಲಖೀಂಪುರ ಖೇರಿಯಲ್ಲಿ ನಡೆದಂತಹ ರೈತರ ಹತ್ಯೆಯ ಕುರಿತಾಗಿ ಕ್ಯಾಪ್ಟನ್ ಸಿಂಗ್ ಅವರು ಪ್ರಧಾನಿಯೊಂದಿಗೆ ಚರ್ಚಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ರೈತ ಆಂದೋಲನದಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಪ್ರಧಾನಿಯೊಂದಿಗೆ ಚರ್ಚಿಸಿ, ಕೃಷಿ ಕಾನೂನು ತಿದ್ದುಪಡಿಯನ್ನು ವಾಪಸ್ ಪಡೆಯಲು ಸಿಂಗ್ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿದ್ದಾರೆ ಎಂದು ಹೇಳಲಾಗಿದೆ.  ಲಖೀಂಪುರ ಖೇರಿಯಲ್ಲಿ ನಡೆದ ಘಟನೆಗೆ ಪಂಜಾಬ್’ನಲ್ಲಿ ಪ್ರತಿರೋಧ ಉಂಟಾದರೆ ಪರಿಸ್ಥಿತಿ ಕೈ ಮೀರಿ ಹೋಗುವ ಸಾಧ್ಯತೆಗಳಿವೆ. ಹಾಗಾಗಿ ಈ ಘಟನೆಯ ಹಿಂದಿನ ಪ್ರಮುಖ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಈ ಘಟನೆಯ ಕುರಿತು ಸಮಗ್ರ ತನಿಖೆಯ ವಿಚಾರವಾಗಿ ಪ್ರಧಾನಿಯೊಂದಿಗೆ ಸಿಂಗ್ ಚರ್ಚೆ ನಡೆಸಲಿದ್ದಾರೆ.  ಕೆಲವು ದಿನಗಳ ಹಿಂದೆ ತಾವು ಕಾಂಗ್ರೆಸ್ ತೊರೆಯುವುದಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದರು. ಆದರೆ, ಬಿಜೆಪಿ ಸೇರುವುದಿಲ್ಲ ಎಂಬ ವಿಚಾರವನ್ನೂ ಸ್ಪಷ್ಟಪಡಿಸಿದ್ದರು. ಈಗ ದೆಹಲಿ ಭೇಟಿ ನೀಡುತ್ತಿರುವುದು ಸಂಪೂರ್ಣ ರಾಜಕೀಯ ಭೇಟಿಯಾಗಿರಲಿದ್ದು, ಹಲವು ರಾಜಕೀಯ ಮುಖಂಡರನ್ನು ಸಿಂಗ್ ಅವರು ಭೇಟಿಯಾಗಲಿದ್ದಾರೆ.  ಅಮರಿಂದರ್ ಸಿಂಗ್ ಸಿಎಂ ಆಗಿದ್ದ ವೇಳೆ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಮೇಜರ್ ಅಮರ್‌ದೀಪ್ ಸಿಂಗ್ ಅವರು ಕಾಂಗ್ರೆಸ್ ವಿರುದ್ದ ತೀವ್ರವಾಗಿ ಕಿಡಿಕಾರಿದ್ದಾರೆ. ಅಮರೀಂದರ್ ಸಿಂಗ್ ಅವರಿಗೆ ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಅಪಮಾನ ಮಾಡಿದೆ. ಇದರ ಪರಿಣಾಮವನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎದುರಿಸಲಿದೆ. ಕಾಂಗ್ರೆಸ್ 16 ಸೀಟುಗಳನ್ನು ಗೆಲ್ಲಲು ಕೂಡಾ ಪರದಾಡಲಿದೆ, ಎಂದಿದ್ದಾರೆ.  “ನಾವು ಸರ್ಕಾರ ರಚಿಸುತ್ತೇವೆ. ಕಾದು ನೋಡಿ. ಕಾಂಗ್ರೆಸ್ ಹೊರತಾಗಿಯೂ ಹಲವಾರು ರಾಜಕೀಯ ಪಕ್ಷಗಳಿವೆ. ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವು ಆಯ್ಕೆಗಳಿವೆ. ನಾವು ವಾಪಸ್ ಬಂದೇ ಬರುತ್ತೇವೆ,” ಎಂದು ಅಮರ್‌ದೀಪ್ ಸಿಂಗ್ ಹೇಳಿದ್ದಾರೆ.  ಇನ್ನು, ಪಂಜಾಬ್’ನಲ್ಲಿ ನೂತನ ಸರ್ಕಾರ ರಚನೆಯಾದ ಬಳಿಕ, ಹಿಂದಿನ ಸಿಎಂನ ಕಾರ್ಯದರ್ಶಿಗಳಿಗೆ, ಸಲಹೆಗಾರರಿಗೆ ನೀಡಿದ್ದ ಭದ್ರತೆಯನ್ನು ಏಕಾಏಕಿ ಹಿಂಪಡೆದಿರುವುದನ್ನು ಖಂಡಿಸಿರುವ ಅಮರ್‌ದೀಪ್ ಸಿಂಗ್, ಇದು ದ್ವೇಷ ರಾಜಕಾರಣ. ಯಾವುದೇ ನೊಟಿಸ್ ನೀಡದೆ ನಮಗೆ ನಿಡಿರುವ ಭದ್ರತೆ ವಾಪಸ್ ಪಡೆಯಲಾಗಿದೆ. ಸದ್ಯಕ್ಕೆ ನಾವು ಕೂಡಾ ಕಾಂಗ್ರೆಸ್ ಭಾಗವಾಗಿಯೇ ಇದ್ದೇವೆ. ನಮ್ಮ ನಾಯಕ ರಾಷ್ಟ್ರಮಟ್ಟದ ನಾಯಕ, ಎಂದು ಅವರು ಹೇಳಿದ್ದಾರೆ. 

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!