ನನ್ನ ಪತಿಯನ್ನು ಭೇಟಿ ಮಾಡಲು ನನಗೆ ಅರ್ಹೆತೆ ಇಲ್ಲವೇ? ಸೋನಮ್ ಧರ್ಮ ಪತ್ನಿ ಅಳಲು!
ಶಿಕ್ಷಣ ತಜ್ಞ, ವಿಜ್ಞಾನಿ ಹಾಗೂ ಸಾಮಾಜಿಕ ಹೋರಾಟಗಾರರಾದ ಸೋನಮ್ ವಾಂಗ್ಚುಕ್ ರವರನ್ನು NIA ಅಧಿಕಾರುಗಳು ಬಂಧಿಸಿದ್ದಾರೆ. ಇತ್ತ ಅವರ ಪತ್ನಿ ಗೀತಾಂಜಲಿ ಜಿ ಆಂಗ್ಮೋ ಅವರಿಗೆ ತಮ್ಮ ...
Read moreDetailsಶಿಕ್ಷಣ ತಜ್ಞ, ವಿಜ್ಞಾನಿ ಹಾಗೂ ಸಾಮಾಜಿಕ ಹೋರಾಟಗಾರರಾದ ಸೋನಮ್ ವಾಂಗ್ಚುಕ್ ರವರನ್ನು NIA ಅಧಿಕಾರುಗಳು ಬಂಧಿಸಿದ್ದಾರೆ. ಇತ್ತ ಅವರ ಪತ್ನಿ ಗೀತಾಂಜಲಿ ಜಿ ಆಂಗ್ಮೋ ಅವರಿಗೆ ತಮ್ಮ ...
Read moreDetailsಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ವಿಶೇಷ ಯೋಜನೆ. ಬೆಂಗಳೂರು, ಆ. 9: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ...
Read moreDetails"ಬಿಜೆಪಿಗರು ಮಾಡಬೇಕಾಗಿರುವ ಹೋರಾಟ ಕೇಂದ್ರ ಗೃಹಸಚಿವ ಅಮಿತ್ ಶಾ ಮಗ ಬಿಸಿಸಿಐ ಮುಖ್ಯಸ್ಥರಾಗಿದ್ದ, ಐಸಿಸಿ ಅಧ್ಯಕ್ಷ ಜಯ್ ಶಾ ವಿರುದ್ಧವೇ ಹೊರತು ರಾಜ್ಯ ಸರಕಾರದ ವಿರುದ್ಧವಲ್ಲ. ಐಪಿಎಲ್ ...
Read moreDetailsಅಕ್ರಮ ವಲಸಿಗರ ಗಡಿಪಾರು ಮಾಡಲು ಆರಂಭಿಸಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಕ್ರಮ ವಲಸಿಗರಿಗೆ ಉಚಿತ ವಿಮಾನ ಟಿಕೆಟ್ ಹಾಗೂ ಬೋನಸ್ ಕೂಡ ನೀಡಿದ್ದಾರೆ. ಟ್ರಂಪ್ ಸ್ವಯಂ-ಗಡೀಪಾರು ...
Read moreDetailsAICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಲವು ರಾಜ್ಯಗಳ ರಾಜ್ಯಾಧ್ಯಕ್ಷರನ್ನ ಬದಲು ಮಾಡ್ತೇವೆ ಎಂದು ನೀಡಿದ್ದ ಹೇಳಿಕೆ ಭಾರೀ ಸದ್ದು ಮಾಡ್ತಿದೆ. ಒಡಿಸ್ಸಾದಲ್ಲಿ ಹಿಂದುಳಿದ ವರ್ಗದವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದೇವೆ, ...
Read moreDetailsನವದೆಹಲಿ: ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ದೇಶದ ಚುಕ್ಕಾಣಿ ಹಿಡಿದಿದ್ದಾರೆ. ಅವರ ನೇತೃತ್ವದ ಮಂತ್ರಿ ಮಂಡಲ ಕೂಡ ರಚನೆಯಾಗಿದೆ. ಮಂತ್ರಿ ಮಂಡಲದಲ್ಲಿ ಜೆ.ಪಿ. ನಡ್ಡಾ ಕೂಡ ...
Read moreDetailsಬೆಂಗಳೂರು: ಕೆಪಿಸಿಸಿ ಅಧ್ಯಕ್ಷಗಿರಿಗೆ (KPCC President) ನಾನು ಲಾಬಿ ಮಾಡಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೇನು ...
Read moreDetailsಬೆಂಗಳೂರು: ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನ ನನಗೆ ನೀಡಿದರೆ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಚಿವ ಕೆಎನ್ ರಾಜಣ್ಣ (KN Rajanna) ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ...
Read moreDetailsತೆಹ್ರಾನ್: ಇರಾನ್ ಅಧ್ಯಕ್ಷರಿದ್ದ ಹೆಲಿಕಾಪ್ಟರ್ ಅಪಘಾತವಾಗಿರುವ ಘಟನೆ ನಡೆದಿದೆ. ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ ಇರಾನ್ (Iran) ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೆ ...
Read moreDetailsಬಿಜೆಪಿ ಸರ್ಕಾರದಲ್ಲಿ RSS ನ ಕೆಲವು ಕಾಣದ ಕೈಗಳು ಕೆಲಸ ಮಾಡುತ್ತವೇ ಅನ್ನೋದು ಬಹಳ ವರ್ಷಗಳಿಂದ ಬಂದಿರೋ ಆರೋಪ. ಹಲವಾರು ಕಡೆ ಇದಕ್ಕೆ ಸ್ಪಷ್ಟ ನಿದರ್ಶನವು ಸಿಕ್ಕಿದೆ. ...
Read moreDetailsಮೂಲ : ಸುಧೀಂದ್ರ ಕುಲಕರ್ಣಿ Boycott’ Isn’t the Counter to Modi’s Attempt to Bypass the Indian Constitution ದ ಕ್ವಿಂಟ್ 28 ಮೇ ...
Read moreDetails97 ವರ್ಷಗಳ ಹಿಂದೆ ಹಾಲಿ ಸಂಸತ್ ಭವನವನ್ನು 83 ಲಕ್ಷ ರೂ.ಗಳಲ್ಲಿ ನಿರ್ಮಿಸಲಾಗಿತ್ತು. ಜ.18, 1927 ರಂದು ಆಗಿನ ವೈಸ್ ರಾಯ್ ಲಾರ್ಡ್ ಇರ್ವಿನ್ ಉದ್ಘಾಟನೆ ಮಾಡಿದ್ದರು. ...
Read moreDetailsವಿಶ್ವವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮ ಉದ್ಘಾಟನೆಗಾಗಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರಿಗೆ ಸರಕಾರ ಅಧಿಕೃತವಾಗಿ ಆಹ್ವಾನ ನೀಡಲಾಯಿತು. ಗುರುವಾರ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ಸಹಕಾರ ಹಾಗೂ ...
Read moreDetailsಬುಡಕಟ್ಟು ನಾಯಕಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಎನ್ಡಿಎ ರಾಷ್ಟ್ರಪತಿ (President) ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ʼಸಮಕಾಲೀನ ಭಾರತದಲ್ಲಿ ದಲಿತ ರಾಜಕಾರಣʼದ ಕುರಿತು ಚಿಂತಕ ...
Read moreDetailsಕೇಂದ್ರ ಬಜೆಟ್ ಅಧಿವೇಶನ ಆರಂಭಕ್ಕೂ ಮೊದಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಾಡಿದ ಭಾಷಣದಲ್ಲಿ ಉಲ್ಲೇಖಿಸಿದ ಕೇಂದ್ರ ಸರ್ಕಾರದ ʼರಾಷ್ಟ್ರೀಯ ಹೆದ್ದಾರಿ ನಿರ್ಮಾಣದʼ ಸಾಧನೆಯ ಬಗ್ಗೆ ಈಗ ಪ್ರಶ್ನೆಗಳು ...
Read moreDetailsಅಕ್ಟೋಬರ್ 16ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಎಲ್ಲರ ದೃಷ್ಟಿ ಕೇಂದ್ರೀಕೃತವಾಗಿದ್ದು ಪಕ್ಷದ ರಾಷ್ಟ್ರಾಧ್ಯಕ್ಷರ ಆಯ್ಕೆಯ ಮೇಲೆ. 2022ರ ಸೆಪ್ಟೆಂಬರ್ ಒಳಗಾಗಿ ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಹಾಗೂ ಪಕ್ಷದಲ್ಲಿನ ಭಿನ್ನಮತೀಯರಿಗೆ ಸೋನಿಯ ಗಾಂಧಿ ನೀಡಿದ ಸಂದೇಶ ಎಲ್ಲೆಡೆ ಸುದ್ದಿ ಮಾಡಿತ್ತು. ಆದರೆ, ಇವೆಲ್ಲದರ ನಡುವೆ ಚರ್ಚೆಯಾದ ಕಾಂಗ್ರೆಸ್’ನ ಪ್ರಮುಖ ರಾಜಕೀಯ ತಂತ್ರಗಾರಿಕೆಯ ವಿಚಾರ ಬೆಳಕಿಗೆ ಬರದೇ ಉಳಿದು ಹೋಯಿತು. ಸಭೆಯ ವೇಳೆ, ಪಂಜಾಬಿನ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ಕುರಿತು ಕಾಂಗ್ರೆಸ್ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಚರ್ಚೆ ನಡೆಸಿದರು. ದಲಿತ ನಾಯಕನನ್ನು ಸಿಎಂ ಪದವಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಚರಣ್ ಜೀತ್ ಸಿಂಗ್ ಚನ್ನಿ ಅವರು ಭಾವನಾತ್ಮಕವಾಗಿ ಆಡಿದ ನುಡಿಗಳನ್ನು ನೆನಪಿಸಿಕೊಂಡರು. ಇದೇ ರೀತಿ, ಹಿಂದುಳಿದ ವರ್ಗಗಳ ನಾಯಕರಾದ ಅಶೋಕ್ ಗೆಹ್ಲೋಟ್, ಕಮಲ್ ನಾಥ್ ಹಾಗೂ ಭೂಪೇಶ್ ಬಾಘೇಲ್ ಅವರು ಕೂಡಾ ಇದೇ ರಿತಿ ಭಾವನಾತ್ಮಕವಾಗಿ ಧನ್ಯವಾದಗಳನ್ನು ಅರ್ಪಿಸಿದ್ದರು ಎಂಬ ವಿಚಾರ ನೆನಪಿಸಿಕೊಂಡರು. ಈ ಚರ್ಚೆಯನ್ನು ಸಾರಾಸಗಟಾಗಿ ನಾವು ನಿರ್ಲಕ್ಷಿಸುವಂತಿಲ್ಲ. ಏಕೆಂದರೆ, ಇದು ಕೇವಲ ಮೂರು ರಾಜ್ಯಗಳ ಸಿಎಂ ಆಯ್ಕೆಯ ಕುರಿತು ನಡೆದ ಚರ್ಚೆಯಲ್ಲ, ಬದಲಾಗಿ ದೇಶದಾದ್ಯಂತ ಕಾಂಗ್ರೆಸ್ ಎಂಬ ಮುಳುಗುತ್ತಿರುವ ಹಡಗನ್ನು ಮತ್ತೆ ಮೇಲೆತ್ತಲು ಕಾಂಗ್ರೆಸ್ ಪಕ್ಷ ರೂಪಿಸುತ್ತಿರುವ ತಂತ್ರಗಾರಿಕೆಯ ಭಾಗವೆಂದೇ ಇದನ್ನು ಪರಿಗಣಿಸಬೇಕಾಗಿದೆ. ದಲಿತ ಹಾಗೂ ಹಿಂದುಳಿದ ನಾಯಕರಿಗೆ ಸ್ಥಾನಮಾನ ನೀಡಿ, ಸಮಾಜದಲ್ಲಿ ದೌರ್ಜನ್ಯಕ್ಕೆ ಒಳಗಾದ ಹಾಗೂ ಕಡೆಗಣಿಸಲ್ಪಟ್ಟ ಸಮುದಾಯಗಳ ಆಶಾಕಿರಣವಾಗಿ ಬಿಂಬಿಸಿಕೊಳ್ಳುವ ಅಭಿಲಾಷೆ ರಾಹುಲ್ ಗಾಂಧಿ ಅವರ ಚರ್ಚೆಯಲ್ಲಿ ಎದ್ದು ಕಾಣಿಸುತ್ತಿದೆ. ಬಿಜೆಪಿಯಲ್ಲಿ ಹಿಂ.ವ. ಹಾಗೂ ದಲಿತರ ಕಡೆಗಣನೆ: ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ದಲಿತ ನಾಯಕರನ್ನು ಮುನ್ನಲೆಗೆ ತರುವ ತಂತ್ರಗಾರಿಕೆ ರೂಪಿಸಲು ಇರುವ ಮೊದಲ ಕಾರಣ, ಬಿಜೆಪಿಯಲ್ಲಿ ಮೇಲ್ಜಾತಿಯ ನಾಯಕರಿಗೆ ಸಿಗುವ ವಿಫುಲ ಅವಕಾಶಗಳು. ಈಶಾನ್ಯ ರಾಜ್ಯಗಳ ಹೊರತಾಗಿ, ಹಿಂದುಳಿದ ವರ್ಗದಿಂದ ಸಿಎಂ ಆಗಿರುವ ಏಕೈಕ ಬಿಜೆಪಿ ನಾಯಕನೆಂದರೆ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್. ಇವರ ಹೊರತಾಗಿ, ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿಯೂ ಮೇಲ್ಜಾತಿಯ ನಾಯಕರೇ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ಅಸ್ಸಾಂನಲ್ಲಿ ಬುಡಕಟ್ಟು ಜನಾಂಗದ ಅತ್ಯಮತ ಪ್ರಬಲ ನಾಯಕರಾಗಿದ್ದ ಸರ್ಬಾನಂದ ಸೋನೋವಾಲ್ ಅನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಅಲ್ಲಿ ಬ್ರಾಹ್ಮಣರಾದ ಹಿಮಂತ ಬಿಸ್ವಾ ಸರ್ಮಾ ಅವರನ್ನು ಸಿಎಂ ಆಗಿ ನೇಮಿಸಲಾಗಿದೆ. ಈ ಎಲ್ಲಾ ವಿಚಾರಗಳನ್ನು ಗಮನಿಸಿದಾಗ ದಲಿತರಿಗೆ ಹಾಗೂ ಹಿಂದುಳಿದ ವರ್ಗದ ನಾಯಕರಿಗೆ ಉನ್ನತ ಸ್ಥಾನಕ್ಕೇರಲು ಬಿಜೆಪಿಯಲ್ಲಿ ಅವಕಾಶಗಳು ಕಡಿಮೆಯಿರುವುದು ಸ್ಪಷ್ಟವಾಗುತ್ತಿದೆ. ಈ ಅವಕಾಶವನ್ನು ಕಾಂಗ್ರೆಸ್ ತನ್ನ ಲಾಭಕ್ಕಾಗಿ ಬಳಸಿಕೊಳ್ಳುವ ತಂತ್ರಗಾರಿಕೆಯನ್ನು ಈಗ ರೂಪಿಸುತ್ತಿದೆ. ನಿಚ್ಚಳವಾಗಿ ಗೋಚರಿಸುತ್ತಿರುವ ಕಾಂಗ್ರೆಸ್’ನ ದಲಿತ ಪರ ನೀತಿ: ಕಾಂಗ್ರೆಸ್ ತನ್ನ ದಲಿತ ಓಲೈಕೆ ನಿತಿಯನ್ನು ಕೇವಲ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮಾತ್ರ ತೋರಿಸುತ್ತಿಲ್ಲ. ಬದಲಾಗಿ ದೇಶದಾದ್ಯಂತ ದಲಿತ ನಾಯಕರಿಗೆ ಮಣೆ ಹಾಕುವ ಕಾರ್ಯಕ್ಕೆ ‘ಕೈ’ ಹಾಕಿದೆ. ಇತ್ತೀಚಿಗೆ ಗುಜರಾತ್’ನ ಶಾಸಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್’ಗೆ ಬೆಂಬಲ ಸೂಚಿಸಿದ್ದಾರೆ. ಇದರಿಂದಾಗಿ ಗುಜರಾತ್ ರಾಜ್ಯದಲ್ಲಿ ಕಾಂಗ್ರೆಸ್ ತನ್ನ ನೆಲೆಯನ್ನು ಮತ್ತಷ್ಟು ವಿಸ್ತರಿಸಿಕೊಳ್ಳುವ ಲೆಕ್ಕಾಚಾರದಲ್ಲಿ ತೊಡಗಿದೆ. ಬಿಹಾರದಲ್ಲಿ ಯಾದವ ಮತಗಳ ಮೇಲೆ ಅವಲಂಬಿತವಾಗಿರುವ ಪಪ್ಪು ಯಾದವ್ ನೇತೃತ್ವದ ಜನ ಅಧಿಕಾರ್ ಪಾರ್ಟಿಯನ್ನು ಕಾಂಗ್ರೆಸ್ ಜತೆ ವಿಲೀನಗೊಳಿಸುವ ಕುರಿತು ಮಾತುಕತೆಗಳು ನಡೆಯುತ್ತಿವೆ. ಈ ವಿಲೀನ ಪ್ರಕ್ರಿಯೆ ಪೂರ್ಣಗೊಂಡಲ್ಲಿ ಬಿಹಾರದ ಕೋಸಿ ಭಾಗದಲ್ಲಿನ ಯಾದವ ಮತ್ತು ಅಲ್ಪಸಂಖ್ಯಾತ ಮತಗಳ ಮೇಲೆ ಕಾಂಗ್ರೆಸ್ ಹಿಡಿತ ಸಾಧಿಸಲಿದೆ. ಇಷ್ಟಕ್ಕೇ ನಿಲ್ಲಿಸದೇ, ದೇಶದೆಲ್ಲೆಡೆ ಪ್ರಸಿದ್ದಿ ಪಡೆದಿರುವ ದಲಿತ ಹಾಗೂ ಹಿಂದುಳಿದ ವರ್ಗದ ಪ್ರಗತಿಪರ ಹಾಗೂ ಬುದ್ದಿಜೀವಿಗಳನ್ನು ಸಂಪರ್ಕಿಸಿ ಅವರ ಮೂಲಕ ಮತಗಳನ್ನು ಸೆಳೆಯುವ ಯೋಜನೆಯನ್ನೂ ಹಮ್ಮಿಕೊಳ್ಳಲಾಗಿದೆ. ಕರ್ಮಠ ಎಡ ಹಾಗೂ ಬಲ ಪಂಥೀಯರಂತೆ ಇಲ್ಲದೇ, ಕಾಂಗ್ರೆಸ್ ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ವಿಫುಲ ಅವಕಾಶವನ್ನು ನೀಡುತ್ತದೆ ಎಂಬ ಸಂದೇಶ ಸಾರುವ ಎಲ್ಲಾ ಯತ್ನಗಳು ಸಾಂಗವಾಗಿ ಜರುಗುತ್ತಿವೆ. ಕಾಂಗ್ರೆಸ್ರಾಷ್ಟ್ರಾಧ್ಯಕ್ಷಸ್ಥಾನದಲಿತರಿಗೆದಕ್ಕುವುದೇ? ...
Read moreDetailsಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಹೆಸರು ಮುಂಚೂಣಿಯಲ್ಲಿರುವುದೇಕೆ?
Read moreDetailsವರ್ಷ ಕಳೆದರೂ ಬರಲಿಲ್ಲ ಅಧ್ಯಕ್ಷ-ಉಪಾಧ್ಯಕ್ಷರು!
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada