Tag: protest

ಶ್ರೀಲಂಕಾ ಶಾಸಕರ ಮನೆಗೆ ಬೆಂಕಿ, ಸಂಸದರ ಮೇಲೆ ಹಲ್ಲೆ!

ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ ನಡೆಯುತ್ತಿರುವ ಹಿಂಸಾಚಾರ ಮುಗಿಮುಟ್ಟಿದ್ದು, ಸೋಮವಾರ ಪ್ರತಿಭಟನಾಕಾರರು ಶಾಸಕ ಹಾಗೂ ಮಾಜಿ ಸಚಿವರ ಮನೆಗೆ ಬೆಂಕಿ ಹಚ್ಚಿ ಭಸ್ಮ ಮಾಡಿದ್ದಾರೆ. ಸರಕಾರದ ವಿರುದ್ಧದ ...

Read moreDetails

ಮದ್ಯಪ್ರಿಯರಿಗೆ ಶಾಕ್: ಮೇ 19ರವರೆಗೆ ಮದ್ಯ ಸಿಗಲ್ಲ!

ಕೆಎಸ್‍ಬಿಸಿಎಲ್ ಹೊಸ ನೀತಿಯಿಂದ ಸಂಕಷ್ಟ ಎದುರಾಗಿದೆ ಎಂದು ಆರೋಪಿಸಿರುವ ಮದ್ಯ ಮಾರಾಟ ವರ್ತಕರು ಇಂದಿನಿಂದ ಮೇ 19ರ ವರೆಗೆ ಮುಷ್ಕರ ನಡೆಸಲು ಮುಂದಾಗಿದ್ದಾರೆ.  ಇದರಿಂದ ಮದ್ಯ ಸಿಗುವುದು ...

Read moreDetails

ನಿರ್ಮಾಪಕರಿಗೆ ಬೆಲೆನೇ ಇಲ್ವಾ? : ನಟ ವಿನೋದ್ ರಾಜ್ ಕುಮಾರ್ ಪ್ರಶ್ನೆ

ಚಿತ್ರರಂಗದಲ್ಲಿ ಶೇ. 50 ರಷ್ಟು ಭರ್ತಿಗೆ ಅವಕಾಶ ನೀಡಿರುವ ಬಗ್ಗೆ ನಟ ವಿನೋದ್ ರಾಜ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದು, ಒಂದು ಚಿತ್ರ ತೆರೆ ಮೇಲೆ ಬರಲು ಚಿತ್ರತಂಡದ ...

Read moreDetails

ಮತಾಂತರ ನಿಷೇಧ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ : ಬಿಜೆಪಿಗೆ ಬುದ್ಧಿ ಇಲ್ಲ ಎಂದ ಪ್ರತಿಭಟನಾಕಾರರು / Bangaluru

ರಾಜ್ಯ ಬಿಜೆಪಿ ಸರ್ಕಾರ ತರಲು ಹೊರಟಿರುವ ಮತಾಂತರ ನಿಷೇಧ ಕಾಯ್ದೆ ವಿರುದ್ಧ ರಾಜ್ಯದೆಲ್ಲಡೆ ಆಕ್ರೋಶ ಭುಗಿಲೆದ್ದಿದೆ. ಇಂದು ಬೆಳಗ್ಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಿಂದ ಫ್ರೀಡಂ ಪಾರ್ಕ್ ...

Read moreDetails

ಬೆಳಗಾವಿ: ರಾಯಣ್ಣ ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ – DCP ವಿಕ್ರಮ್ ಆಮ್ಟೆ

ಬೆಳಗಾವಿಯಲ್ಲಿ ಎಂ.ಇ.ಎಸ್‌ ಸಂಘಟನೆಯ ಸದಸ್ಯರು ದಾಂದಲೆ ನಡೆಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಹಾಗೂ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ...

Read moreDetails

ಮೌಂಟ್ ಕಾರ್ಮಲ್ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ!

ನಗರದ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿದ್ದು, ಕಾಲೇಜು ಆಡಳಿತ ಮಂಡಳಿಯಿಂದ ಕೋವಿಡ್ ಕೇಸ್ ಗಳನ್ನು ಮುಚ್ಚಿಡುವ ಕೆಲಸವಾಗ್ತಿದೆ ಎಂದು ಆರೋಪಿಸಿ ವಸಂತನಗರದಲ್ಲಿರುವ ಕಾಲೇಜು ...

Read moreDetails

ಉತ್ತರಪ್ರದೇಶದ ಲಕ್ನೋದಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಿದ ಯುವಕರ ಮೇಲೆ ಲಾಠಿ ಚಾರ್ಜ್ !

2019ರ ಉತ್ತರ ಪ್ರದೇಶದ ಶಿಕ್ಷಕರ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಕ್ಯಾಂಡಲ್‌ಲೈಟ್ ಮೆರವಣಿಗೆ ಮಾಡುತ್ತಿದ್ದ ಪ್ರತಿಭಟನಾಕಾರರ ನೇಲೆ ಲಕ್ನೋ ಪೊಲೀಸರು ಶನಿವಾರ ಸಂಜೆ ಲಾಠಿಚಾರ್ಜ್ ...

Read moreDetails

ಕೃಷಿಕಾಯ್ದೆ ರದ್ದತಿ ರೈತರಿಗೆ ಸಿಕ್ಕ ಜಯ: ರೈತ ಮುಖಂಡ ಕುರುಬೂರು ಶಾಂತಕುಮಾರ್

ಕೃಷಿಕಾಯ್ದೆ ರದ್ದತಿಗೆ ‌ಕಡೆಗೂ ಪ್ರಧಾನಿ ನರೇಂದ್ರಮೋದಿ ಒಪ್ಪಿಗೆ ನೀಡಿದ್ದು ರೈತರಿಗೆ ಜಯ ಸಿಕ್ಕಂತಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದರು.

Read moreDetails

ಕೃಷಿ ಕಾನೂನು ವಾಪಸ್; ಭಾಗಶಃ ಗೆಲುವು ಎಂದ ಕರ್ನಾಟಕದ ರೈತ ಮುಖಂಡರು

ಒಂದು ವರ್ಷದ ಬಳಿಕ ಕೇಂದ್ರ ಸರ್ಕಾರವು ರೈತರ ಹೋರಾಟಕ್ಕೆ ಮಣಿದಿದೆ. ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ. ಮುಂಬರುವ ಸಂಸತ್ ಅಧಿವೇಶನದಲ್ಲಿ ಈ ಕಾಯ್ದೆಗಳನ್ನು ...

Read moreDetails

ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಜಯ್‌ ಪಾಟೀಲ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಬೆಳಗಾವಿಯ ಗ್ರಾಮಾಂತರ ಕ್ಷೇತ್ರದ  ಮಾಜಿ ಶಾಸಕ ಬೆಳಗಾವಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್‌ ಪಾಟೀಲ್‌ ಕಾಂಗ್ರಸ್‌ ನಾಯಕಿ, ಶಾಸಕಿ ಲಕ್ಷೀ ಹೆಬ್ಬಾಳ್ಕರ್‌ ಕುರಿತು ನೀಡಿರುವ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್‌ ...

Read moreDetails

ನಾವು ಸೈಕಲ್, ಎತ್ತಿನಗಾಡಿ, ಟಾಂಗಾ ಸವಾರಿ ಮೂಲಕ ಪ್ರತಿಭಟನೆ ನಡೆಸಿರುವುದು ಮನೋರಂಜನೆಗಲ್ಲ: ಸಿದ್ದರಾಮಯ್ಯ

ನಾವು ಸೈಕಲ್, ಎತ್ತಿನಗಾಡಿ, ಟಾಂಗಾ ಸವಾರಿ ಮೂಲಕ ಪ್ರತಿಭಟನೆ ನಡೆಸಿರುವುದು ಮನೋರಂಜನೆಗಲ್ಲ ಜನರ ಮಾತಿಗೆ ಕಾಂಗ್ರೆಸ್‌ ದ್ವನಿಯಾಗಿದೆ ಎಂದು ಸಿದ್ದರಾಮಯ್ಯ ಟ್ವೀಟರ್‌ ನಲ್ಲಿ ಬರೆದುಕೊಂಡಿದ್ದಾರೆ. ಕರ್ನಾಟಕದಲ್ಲಿ ಅಧಿವೇಶನ ...

Read moreDetails

ವಿಧಾನಸಭೆ ಪ್ರವೇಶಿಸಿದ 2ಎ ಮೀಸಲಾತಿ ಹೋರಾಟ; ಯತ್ನಾಳ್, ಬೆಲ್ಲದ್ ಧರಣಿ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತ ಹೋರಾಟ ಈಗ ವಿಧಾನಸಭೆಯನ್ನು ಪ್ರವೇಶಿಸಿದೆ. ಮಿಸಲಾತಿ ನೀಡುವ ಕುರಿತಾಗಿ ಸಿಎಂ ಬಸವರಾಜ ಬೊಮ್ಮಾಯಿ ಸದನದಲ್ಲಿಯೇ ಉತ್ತರ ನೀಡಬೇಕೆಂದು ಪಟ್ಟುಹಿಡಿದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ ಬೆಲ್ಲದ್ ವಿಧಾನಸಭೆಯಲ್ಲಿಯೇ ಧರಣಿ ನಡೆಸಿದ್ದಾರೆ. ಬಸನಗೌಡ ಪಾಟೀಲ ಯತ್ನಾಳ್ ಅವರು ಶೂನ್ಯವೇಳೆಯಲ್ಲಿ ಮೀಸಲಾತಿ ಕುರಿತ ವಿಚಾರವನ್ನು ಪ್ರಸ್ತಾಪಿಸಿದರು. ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗ 2ಎಗೆ ಸೇರಿಸುವ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಅವರು ನೀಡಿದ ಭರವಸೆಯನ್ನು ಯತ್ನಾಳ್ ಸದನದ ಗಮನಕ್ಕೆ ತಂದರು.  “ಎಸ್‌ಟಿ ಸಮುದಾಯಕ್ಕೆ ನೀಡಿರುವ ಮೀಸಲಾತಿಯನ್ನು ಶೇ.3ರಿಂದ ಶೇ.7.5ಕ್ಕೆ ಏರಿಸಿ ವಾಲ್ಮೀಕಿ, ಉಪ್ಪಾರ ಸೇರಿದಂತೆ ಇತರ ಎಸ್‌ಟಿ ಸಮುದಾಯಗಳಿಗೆ ಅನುಕೂಲ ಕಲ್ಪಿಸುವುದು ಹಾಗೂ ಕುರುಬ ಸಮಾಜವನ್ನು ಎಸ್‌ಟಿಗೆ ಸೇರಿಸುವುದಾಗಿ ಆರು ತಿಂಗಳ ಹಿಂದೆ ನಡೆದ ಸದನದಲ್ಲಿ ಸರ್ಕಾರದಿಂದ ಭರವಸೆ ನೀಡಿಲಾಗಿತ್ತು. ಇದರೊಂದಿಗೆ, ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗ 2ಎಗೆ ಸೇರಿಸಲು ಆರು ತಿಂಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿ ಎಸ್ ವೈ ಭರವಸೆ ನೀಡಿದ್ದರು,” ಎಂದು ಯತ್ನಾಳ್ ಹೇಳಿದ್ದಾರೆ.  ಈಗಾಗಲೇ, ಸರ್ಕಾರ ನೀಡಿದ ಗಡುವು ಸೆಪ್ಟೆಂಬರ್ 15ಕ್ಕೆ ಅಂತ್ಯವಾಗಿದೆ. ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಐದನೇ ಹಂತದ ಚಳವಳಿಯನ್ನು ಮಲೆ ಮಹದೇಶ್ವರ ಬೆಟ್ಟದಿಂದ ಆರಂಭಿಸಲಾಗಿದೆ, ಎಂದರು.  ಇದಕ್ಕೆ ಉತ್ತರ ನೀಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಹಾಗೂ ಕಾನೂನು ಸಚಿವರು ವಿಧಾನಪರಿಷತ್ ಕಲಾಪದಲ್ಲಿ ಭಾಗವಹಿಸುತ್ತಿರುವುದರಿಂದ ನಂತರ ಉತ್ತರ ನೀಡಲಾಗುವುದು, ಎಂದು ಹೇಳಿದರು.  ಇಷ್ಟಕ್ಕೆ ಸಮಾಧಾನಗೊಳ್ಳದ ಯತ್ನಾಳ್, ಸಿಎಂ ಯಾವಾಗ ಉತ್ತರ ನೀಡುತ್ತಾರೆ ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಪಟ್ಟು ಹಿಡಿದರು. ಯತ್ನಾಳ್ ತೆ ದನಿಗೂಡಿಸಿದ ಶಾಸಕ ಅರವಿಂದ ಬೆಲ್ಲದ್ ಸರ್ಕಾರ ತನ್ನ ಭರವಸೆ ಈಡೇರಿಸದ ಕಾರಣ ಜನರಲ್ಲಿ ಅಸಮಾಧಾನ ಹೆಚ್ಚಾಗುತ್ತಿದೆ, ಎಂದರು.  ಮೀಸಲಾತಿ ಕುರಿತ ವಿಚಾರಕ್ಕೆ ಸಂಬಂಧಿಸಿ ಉತ್ತರ ನೀಡಲು ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ ಶಾಸಕದ್ವಯರು, ಸಭಾಧ್ಯಕ್ಷರ ಪೀಠದ ಎದುರು ಧರಣಿ ನಡೆಸಿದರು. ಈ ವೇಳೆ ಇಬ್ಬರಿಗೂ ಬುದ್ದಿ ಹೇಳಲು ಮುಂದಾದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಉತ್ತರ ನೀಡುತ್ತಾರೆ ಎಂದು ಸಭಾಧ್ಯಕ್ಷರು ಹೇಳಿದ ಬಳಿಕವೂ ಆಡಳಿತ ಪಕ್ಷದ ಸದಸ್ಯರೇ ಈ ರೀತಿ ಧರಣಿ ನಡೆಸುವುದು ಸರಿಯಲ್ಲ ಎಂದರು.  ಸಿಎಂ ವಿದೇಶಕ್ಕೆ ಹೋಗಿಲ್ಲ. ವಿಧಾನಪರಿಷತ್ತಿಗೆ ಹೋಗಿದ್ದಾರೆ. ಧರಣಿಯನ್ನು ಕೈಬಿಡಿ ಎಂದು ಸಭಾಧ್ಯಕ್ಷರು ಹೇಳಿದ ನಂತರ ಯತ್ನಾಳ್ ಹಾಗೂ ಬೆಲ್ಲದ್ ಧರಣಿ ಕೈಬಿಟ್ಟರು.  ಕಳೆದ ಸುಮಾರು ಒಂದು ವರ್ಷದಿಂದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂಬ ಕುರಿತು ನಿರಂತರ ಹೊರಾಟ ನಡೆಯುತ್ತಲೇ ಇದೆ. ಹೊರಾಟದ ಮುಂಚೂಣಿಯಲ್ಲಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಮೀಸಲಾತಿ ನೀಡದಿದ್ದಲ್ಲಿ ಅಮರಣಾಂತ ಉಪವಾಸ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದರು.  ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳನ್ನು ಸೇರಿದಂತೆ ಅಂದಾಜು ಒಂದು ಕೋಟಿಯಷ್ಟು ಜನಸಂಖ್ಯೆಯನ್ನು ಪಂಚಮಸಾಲಿ ಸಮಾಜವನ್ನು ಹೊಂದಿದೆ. ಮೀಸಲಾತಿ ಹೋರಾಟದ ನೆಪದಲ್ಲಿ ಈ ಹಿಂದೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿರುದ್ದ ಹರಿಹಾಯ್ದಿದ್ದರು. ಮೀಸಲಾತಿಗಾಗಿ ಬೇಡಿಕೆ ಇಟ್ಟಿದ್ದಕ್ಕಿಂತಲೂ ಹೆಚ್ಚಾಗಿ ಇದೊಂದು ರಾಜಕೀಯ ಲಾಭಕ್ಕಾಗಿ ನಡೆಯುತ್ತಿರುವ ಹೋರಾಟದಂತೆ ಭಾಸವಾಗಿತ್ತು. ಹೊರಾಟದ ತೀವ್ರತೆ ಹೆಚ್ಚುತ್ತಿದ್ದಂತೆಯೇ, ಮಧ್ಯಪ್ರವೇಶಿಸಿದ ಮಾಜಿ ಸಿಎಂ ಯಡಿಯೂರಪ್ಪ, ಆರು ತಿಂಗಳಲ್ಲಿ ಈ ಕುರಿತಾಗಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಭರವಸೆ ನೀಡಿದ್ದರು. ಈಗ ಆರು ತಿಂಗಳು ಕಳೆದರೂ, ಈ ಕುರಿತಾಗಿ ಸರ್ಕಾರ ತುಟಿಪಿಟಕ್ಕೆನ್ನದ ಕಾರಣ ಮತ್ತೆ ಹೋರಾಟ ಮುಂದುವರೆಸುವ ಕುರಿತು ಯೋಜನೆಗಳನ್ನು ರೂಪಿಸಲಾಗುತ್ತಿದೆ. 

Read moreDetails

ಸಾರಿಗೆ ನೌಕರರಿಗೆ ಸಿಹಿ ಸುದ್ದಿ : ವಜಾಗೊಂಡಿದ್ದ 4200 ನೌಕರರನ್ನು ಕೆಲಸ ಸೇರಿಸಿಕೊಂಡ ಸಾರಿಗೆ ಇಲಾಖೆ !

ಸತತ 15 ದಿನಗಳ ಕಾಲ ಸಾರಿಗೆ ನಿಗಮಗಳ ವಿರುದ್ಧ ಸಮರ ಸಾರಿದ್ದ 4200 ಸಾರಿಗೆ ನೌಕರರಿಗೆ ಸರ್ಕಾರ ಶಾಕ್ ಮೇಲೆ ಶಾಕ್ ನೀಡಿತ್ತು. ಎಲ್ಲವೂ ಸರಿ ಇದ್ರೂ ...

Read moreDetails

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಿಸಾನ್ ಕಾಂಗ್ರೆಸ್ ಪ್ರತಿಭಟನೆ

ಪ್ರಧಾನಿ ಮೋದಿ ಜನುಮದಿನದ ಅಂಗವಾಗಿ ಕರ್ನಾಟಕ ಕಿಸಾನ್‌ ಕಾಂಗ್ರೆಸ್‌ ವತಿಯಿಂದ ನಗರದ ಪೆಟ್ರೋಲ್‌ ಬಂಕ್‌ ಮುಂಭಾಗ “ ಏಕ್‌ ರೂಪಿಯ ಮೋದಿ” ಎಂಬ ಹೆಸರಿನೊಂದಿಗೆ  ವಿಶಿಷ್ಟ ರೀತಿಯಲ್ಲಿ ...

Read moreDetails

ಬೆಂಗಳೂರು: ತಾಲಿಬಾನ್, ಪಾಕಿಸ್ತಾನದ ವಿರುದ್ಧ ಅಫ್ಘಾನ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಅಫ್ಘಾನಿಸ್ತಾನದ ವಿದ್ಯಾರ್ಥಿಗಳು ಬುಧವಾರ ಬೆಂಗಳೂರಿನಲ್ಲಿ ತಮ್ಮ ದೇಶವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧ ಮತ್ತು ಪಾಕಿಸ್ತಾನ್‌ ಅಫ್ಘಾನಿಸ್ತಾನದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ . ...

Read moreDetails

ರಾಮಮಂದಿರ ಭೂಮಿ ಖರೀದಿಯಲ್ಲಿ ಅಕ್ರಮ, ಇದು ದೇಶಕ್ಕೇ ಮಾಡಿದ ದೊಡ್ಡ ಅಪಮಾನ: ಡಿ.ಕೆ ಶಿವಕುಮಾರ್ ಕಿಡಿ

ರಾಮಮಂದಿರ ಭೂಮಿ ಖರೀದಿಯಲ್ಲಿ ದೊಡ್ಡ ಹಗರಣ ನಡೆದಿರುವುದು ಬೆಳಕಿಗೆ ಬಂದಿದ್ದು, ಇದು ಇಡೀ ದೇಶ ಹಾಗೂ ಜನರ ಭಾವನೆಗೆ ಮಾಡಿರುವ ಅಪಮಾನ. ಈ ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಬೇಕು ...

Read moreDetails

ಜಮ್ಮು ಕಾಶ್ಮೀರದಲ್ಲಿ 15 ಸಾವಿರ ಎಂಜಿನಿಯರ್ ಗಳ ಉದ್ಯೋಗ ಕಸಿದುಕೊಂಡ ಸರ್ಕಾರ

ಎಂಜಿನಿರ್‌ಗಳು ಈಗ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಜಮ್ಮು ಕಾಶ್ಮೀರದಾದ್ಯಂತ ವ್ಯಾಪಕ ಆಂದೋಲನವನ್ನು

Read moreDetails
Page 7 of 8 1 6 7 8

Welcome Back!

Login to your account below

Retrieve your password

Please enter your username or email address to reset your password.

error: Content is protected !!