ಕೋವಿಡ್ ತಡೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಇಂದು ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಹಲವು ಯೋಜನೆಗಳ ಜಾರಿಗೆ ಮುಂದಾಗಿದೆ. ಈಗಾಗಲೇ ನಗರದಲ್ಲಿ ಮೂರನೇ ಕೊರೋನಾದ ಮುನ್ಸೂಚನೆ ರೀತಿಯಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿದ್ದು, ಆರಂಭಿಕ ಹಂತದಲ್ಲೇ ಕೊರೋನಾ ಕಟ್ಟಿಹಾಕಿ ಮೂರನೇ ಅಲೆಯನ್ನು ತಡೆಯುವ ಲೆಕ್ಕಾಚಾರ ಬಿಬಿಎಂಪಿಯದ್ದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಕಂದಾಯ ಸಚಿವ ಆರ್ ಅಶೋಕ್ ಸಭೆ ನಡೆಸಿ, ಹಲವು ತೀರ್ಮಾನಗಳನ್ನು ಕೈಗೊಂಡರು. ಆಗಸ್ಟ್ 15ರ ಬಳಿಕ ಹಲವು ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾತನಾಡಿದ ಆರ್ ಅಶೋಕ್, ಈ ತಿಂಗಳಲ್ಲಿ ಸಾಲು ಸಾಲು ಹಬ್ಬಗಳು ಬರಲಿವೆ. ದೇವಸ್ಥಾನಗಳಿಗೆ ಹೆಚ್ಚು ಜನ ಬರುವ ಸಾಧ್ಯತೆ ಇದೆ. ಹೀಗಾಗಿ ದೇವಸ್ಥಾನಗಳಿಗೆ ನಿರ್ಬಂಧ ಮಾಡುವ ಬಗ್ಗೆ ಹೆಚ್ಚಿನ ಗಮನ ಕೊಡಲಾಗುವುದು ಎಂದರು. ನಿರಂತರ ಹಬ್ಬ ಬರುವುದರಿಂದ ಮುಂಜಾಗ್ರತ ಕ್ರಮ ಕೈಗೊಳ್ಳಬೇಕಿದೆ. ಈ ತಿಂಗಳು ಪೂರ್ತಿ ನಿಯಮ ತರುವ ಬಗ್ಗೆ ಆಡಳಿತ ಮಂಡಳಿಯ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು. ಕೋವಿಡ್ ಹೆಚ್ಚಾಗಿ ಅಪಾರ್ಟ್ ಮೆಂಟ್ ಗಳಲ್ಲೇ ಕಂಡುಬರುತ್ತಿರುವುದರಿಂದ ಕೋವಿಡ್ ಸೋಂಕು ಕಂಡುಬರುವ ಅಪಾರ್ಟ್ ಮೆಂಟ್ ಗಳ ಜಿಮ್, ಸ್ವಿಮ್ಮಿಂಗ್ ಪೂಲ್ ಬಂದ್ ಮಾಡಿಸಲಾಗುವುದು. ಮಾರ್ಷಲ್ಸ್ ಕೂಡಾ ಭೇಟಿ ನೀಡಿ ಪರಿಶೀಲಿಸಬಹುದು. ಯಾರೂ ತಡೆಯುವಂತಿಲ್ಲ. ಜೊತೆಗೆ ಕೋವಿಡ್ ಸೋಂಕು ಕಂಡು ಬಂದ ಅಪಾರ್ಟ್ ಮೆಂಟ್ ನ ಎಲ್ಲಾರ ಆರೋಗ್ಯ ಪರಿಶೀಲಿಸಬೇಕು. ಆ ಒಂದು ಫ್ಲೋರ್ ಅನ್ನು ಸೀಲ್ ಡೌನ್ ಮಾಡಲು ...
Read moreDetails