ಕರ್ನಾಟಕ | ಬೂಸ್ಟರ್ ಡೋಸ್ ಲಸಿಕೆ ಹಾಕಿಸಿಕೊಳ್ಳಲು ವಯಸ್ಕರ ಹಿಂದೇಟು : ಕಾರಣವೇನು ಗೊತ್ತೇ?
ಕರ್ನಾಟಕದಲ್ಲಿ ಏಪ್ರಿಲ್ 14ರ ಹೊತ್ತಿಗೆ 18 ರಿಂದ 59 ವರ್ಷದೊಳಗಿನ 8,041 ವ್ಯಕ್ತಿಗಳು ಮಾತ್ರ ಕೋವಿಡ್ -19 ಬೂಸ್ಟರ್ ಡೋಸ್ ತೆಗೆದುಕೊಂಡಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ...
Read moreDetailsಕರ್ನಾಟಕದಲ್ಲಿ ಏಪ್ರಿಲ್ 14ರ ಹೊತ್ತಿಗೆ 18 ರಿಂದ 59 ವರ್ಷದೊಳಗಿನ 8,041 ವ್ಯಕ್ತಿಗಳು ಮಾತ್ರ ಕೋವಿಡ್ -19 ಬೂಸ್ಟರ್ ಡೋಸ್ ತೆಗೆದುಕೊಂಡಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ...
Read moreDetailsಏಪ್ರಿಲ್ ೧೮ ವರ್ಷ ಮೇಲ್ಪಟ್ಟ ಎಲ್ಲರೂ ಬೂಸ್ಟರ್ ಪಡೆಯಬಹುದು ಎಂದು ಕೇಂದ್ರ ಸರಕಾರ ಪ್ರಕಟಿಸಿದ ಬೆನ್ನಲ್ಲೇ ಸೆರಮ್ ಇನ್ಸಿಟಿಟ್ಯೂಟ್ ಆಫ್ ಇಂಡಿಯಾ ಪ್ರತಿ ಡೋಸ್ ಗೆ ತೆರಿಗೆ ...
Read moreDetailsCovid-19 ವಿರುದ್ದ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿರುವ ದೇಶ ಅಂದರೆ ಅದು ಭಾರತ. ಲಸಿಕೆ ಅಭಿಯಾನ (Vaccination Drive)ದಲ್ಲಿ ಈ ಹಿಂದೆ ಹೊಸ ದಾಖಲೆಯನ್ನು ನಿರ್ಮಿಸಿದ ಭಾರತ ಇದೀಗ ...
Read moreDetailsಓಮೈಕ್ರಾನ್ ನಿಂದ ಎಚ್ಚೆತ್ತುಕೊಂಡ ಜನರ ಪೈಕಿ ಲಸಿಕೆ ಪಡೆಯುವಲ್ಲಿ ಮಧ್ಯ ವಯಸ್ಕರಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಕೊರೋನಾ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಮತ್ತೊಂದು ಸಾಧನೆಯ ಹಂತ ತಲುಪಿದೆ. 45 ರಿಂದ 59 ವರ್ಷದ ಮಧ್ಯ ವಯಸ್ಕರು ರಾಜ್ಯದಲ್ಲಿ ನೂರಕ್ಕೆ ...
Read moreDetailsಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಲಸಿಕಾ ಅಭಿಯಾನದ ಖರ್ಚು ನಿಭಾಯಿಸಲು ಅಂತರರಾಷ್ಟ್ರೀಯ ಬ್ಯಾಂಕುಗಳಿಮದ ಸಾಲ ಪಡೆಯಲು ಮುಂದಾಗಿದೆ. ಏಷಿಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕಿನಿಂದ ‘ಸುರಕ್ಷಿತ ಹಾಗೂ ಪರಿಣಾಮಕಾರಿ ಕೋವಿಡ್ ಲಸಿಕೆ’ ಪಡೆಯಲು 500 ಮಿಲಿಯನ್ ಡಾಲರ್ ಮೊತ್ತದ ಸಾಲ ಕೇಳಿದೆ! ಇದಲ್ಲದೇ, ಏಷಿಯಾ ಪೆಸಿಫಿಕ್ ವ್ಯಾಕ್ಸಿನ್ ಆ್ಯಕ್ಸೆಸ್ ಫೆಸಿಲಿಟಿ ಪ್ರೋಗ್ರಾಂ (Asia Pacific Vaccine Access Facility programme) ಅಡಿಯಲ್ಲಿ ಕೂಡಾ ನಾಲ್ಕು ಮಿಲಿಯನ್ ಡಾಲರ್ ಸಾಲವನ್ನು ಭಾರತ ಪಡೆಯಲಿದೆ. ಈ ಸಾಲವನ್ನು ತಾಂತ್ರಿಕ ವಿಭಾಗಗಳಾದ ಲಸಿಕಾ ಕೇಂದ್ರಗಳ ಅಭಿವೃದ್ದಿ ಹಾಗೂ ವೈದ್ಯಕೀಯ ತ್ಯಾಜ್ಯ ನಿರ್ವಹಣೆಗೆ ಬಳಸಲಾಗುವುದು. ಅಂದಹಾಗೆ ಲಸಿಕೆಗಳಿಗಾಗಿ ಭಾರತ ಮಾಡಿರುವುದು ಕೇವಲ ಇಷ್ಟು ಮಾತ್ರ ಸಾವಲ್ಲ. ಇದಕ್ಕು ಮೊದಲು ಏಷಿಯನ್ ಡೆವೆಲಪ್ಮೆಂಟ್ ಬ್ಯಾಂಕಿನಿಂದ ಲಸಿಕೆ ಖರೀದಿಗಾಗಿ 1.5 ಬಿಲಿಯನ್ ಡಾಲರ್ ಮೊತ್ತದ ಹಣ, ಸಾಲದ ರೂಪದಲ್ಲಿ ಭಾರತಕ್ಕೆ ಸಿಗಲಿದೆ. 670 ಮಿಲಿಯನ್ ಡೋಸ್ ಲಸಿಕೆ ಖರೀದಿಸಲು ಏಷಿಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕಿನಿಂದ ಸಾಲ ಪಡೆಯಲಾಗುತ್ತಿದೆ ಎಂದು ವರದಿಯಾಗಿದೆ. ಈವರೆಗೆ ಲಸಿಕಾ ಅಭಿಯಾನಕ್ಕೆ ಸರ್ಕಾರ ಎಷ್ಟು ಮೊತ್ತವನ್ನು ವ್ಯಯಿಸಿದೆ ಎಂಬ ಕುರಿತು ಅಧಿಕೃತ ಅಂಕಿ ಅಂಶಗಳು ಲಭ್ಯವಿಲ್ಲ. ಆದರೆ, ಸರ್ಕಾರವು ಒಂದು ಬಿಲಿಯನ್ ಡೋಸ್ ಲಸಿಕೆಗೆ ಅಂದಾಜು ರೂ.19,000 ಖರ್ಚು ಮಾಡಿದೆ. ಸುಪ್ರೀಂ ಕೋರ್ಟ್’ಗೆ ಸರ್ಕಾರ ನೀಡಿರುವ ಅಫಿಡವಿಟ್ ಹಾಗೂ ಪಾರ್ಲಿಮೆಂಟ್’ನಲ್ಲಿ ಸಚಿವರು ನೀಡಿರುವ ಉತ್ತರದ ಆಧಾರದ ಮೇಲೆ ಈ ಅಂದಾಜು ಲೆಕ್ಕ ಹಾಕಲಾಗಿದೆ. ಒಂದು ಬಿಲಿಯನ್ ಡೋಸ್ ಲಸಿಕೆ ನೀಡುವ ಸರ್ಕಾರದ ಸಾಧನೆಗೆ ಇತ್ತೀಚಿಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿತ್ತು. ಸರ್ಕಾರವೂ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಖುಶಿಪಟ್ಟಿತ್ತು. ಆದರೆ, ಲಸಿಕೆ ಪಡೆಯಲು ಭಾರತ ಅಂತರರಾಷ್ಟ್ರೀಯ ಬ್ಯಾಂಕುಗಳಲ್ಲಿ ಸಾಲ ಪಡೆಯುವ ಅಗತ್ಯವಿತ್ತೇ? ಎಲ್ಲಿ ಹೋಯಿತು PM CARES ನಿಧಿ? 2020ರ ಮಾರ್ಚ್ ತಿಂಗಳಲ್ಲಿ ಪ್ರಧಾನಿ ಮೋದಿ ಪಿಎಂ ಕೇರ್ಸ್ ನಿಧಿ ತೆರೆದಿರುವ ಘೋಷಣೆ ಮಾಡಿದರು. ಸಿಎಸ್ಆರ್ ನಿಧಿಯ ಹಣವನ್ನು ಪಿಎಂ ಕೇರ್ಸ್’ಗೆ ನೀಡಿದ್ದಲ್ಲಿ ಅಂತಹ ಕಂಪನಿಗಳಿಗೆ ತೆರಿಗೆ ವಿನಾಯಿತಿಯನ್ನೂ ಘೋಷಿಸಿದರು. ಆದರೆ, ಇದೊಂದು ಖಾಸಗಿ ಟ್ರಸ್ಟ್, ಮಾಹಿತಿ ಹಕ್ಕು ಕಾಯ್ದೆಯಡಿ ಬರುವುದಿಲ್ಲ ಎಂದು ಹೇಳಿ ನಿಧಿಯ ಪಾರದರ್ಶಕತೆಗೆ ಪರದೆ ಮುಚ್ಚಿದ್ರು. ಹಲವು ಸಂಸ್ಥೆಗಳು ನೀಡಿರುವ ವರದಿಯ ಪ್ರಕಾರ ಕೇವಲ 52 ದಿನಗಳಲ್ಲಿ ಈ ನಿಧಿಗೆ ಬರೋಬ್ಬರಿ 1.27 ಬಿಲಿಯನ್ ಡಾಲರ್ ಹಣ ಹರಿದು ಬಂದಿತ್ತು. ಇದು ಕೇವಲ ಬೃಹತ್ ಕಾರ್ಪೊರೇಟ್ ಕಂಪನಿ ಹಾಗೂ ಕೇಂದ್ರ ಸರ್ಕಾರದ ನೌಕರರ ಒಂದು ದಿನದ ಸಂಬಳದ ದೇಣಿಗೆಯ ಅಂದಾಜು ಲೆಕ್ಕಾಚಾರವಷ್ಟೇ. ವೈಯಕ್ತಿಕವಾಗಿ ನೀಡಿರುವ ದೇಣಿಗೆ ಮತ್ತು ಸಣ್ಣ ಪುಟ್ಟ ಸಂಸ್ಥೆಗಳ ದೇಣಿಗೆ ಇದರಲ್ಲಿ ಸೇರಿಲ್ಲ. ಪ್ರಧಾನ ಮಂತ್ರಿ ಪರಿಹಾರ ನಿಧಿ ಎಂಬ ಖಾತೆ ನೇರವಾಗಿ ಪ್ರಧಾನಿ ಕಚೇರಿಯಡಿ ಕಾರ್ಯನಿರ್ವಹಿಸುತ್ತಿದ್ದರೂ, ಅದನ್ನು ಪರಿಗಣಿಸಲಾಗಿಲ್ಲ. ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada