ಜಮೀನಿನ ಖಾತೆ ಬದಲಾವಣೆಗಾಗಿ ರೈತರೊಬ್ಬರಿಂದ 2 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಲೆ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆದಿದೆ.
ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ, ಗುಮಾಸ್ತ ಪ್ರಸನ್ನ ಲೋಕಾಯುಕ್ತ ಬಲೆಗೆ ಬಿದ್ದಿರುವ ಆರೋಪಿಗಳು ಎಂದು ತಿಳಿದು ಬಂದಿದೆ. ಇತ್ತ ಲೋಕಾಯುಕ್ತ ಅಧಿಕಾರಿಗಳು ಸೋಮಲಿಂಗಪ್ಪ ಮನೆ ಹಾಗೂ ಕಚೇರಿಯಲ್ಲಿ ಶೋಧ ಕಾರ್ಯ ನಡೆಸಿದ್ದು 10 ಲಕ್ಷಕ್ಕೂ ಹೆಚ್ಚು ಅಧಿಕ ನಗದು ನಗದು ದೊರೆತಿದೆ ಎಂದು ತಿಳಿದು ಬಂದಿದೆ.
ಇತ್ತ ಬಂಧಿತರನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ಆರೋಪಿಗಳಿಬ್ಬರನ್ನು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ ಮತ್ತು ಅಲ್ಲಿಂದ ಹಿಂಡಲಗಾ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದಾರೆ.