• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಾರೆ: ಯತ್ನಾಳ್‌ಗೆ ಡಿಕೆಶಿ ಟಾಂಗ್

Any Mind by Any Mind
August 23, 2021
in ಕರ್ನಾಟಕ, ರಾಜಕೀಯ
0
ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಾರೆ: ಯತ್ನಾಳ್‌ಗೆ ಡಿಕೆಶಿ ಟಾಂಗ್
Share on WhatsAppShare on FacebookShare on Telegram
ADVERTISEMENT

‘ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಿರುತ್ತಾರೆ. ಪ್ರಮುಖ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಇಂತಹ ಕುತಂತ್ರ ಅನುಸರಿಸುತ್ತಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅಫ್ಘಾನಿಸ್ತಾನದ ವಿದ್ಯಾರ್ಥಿಗಳ ಪ್ರತಿನಿಧಿಗಳ ಜತೆ ಸೋಮವಾರ ಪ್ರತ್ಯೇಕ ಮಾತುಕತೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಈ ವೇಳೆ, ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಅವಹೇಳನಕಾರಿಯಾಗಿ ಮಾತನಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ದೇಶದಲ್ಲಿ ಕೋವಿಡ್ ಜತೆಗೆ ನಿರುದ್ಯೋಗ, ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಇನ್ನಿಲ್ಲದ ತೊಂದರೆ ಆಗುತ್ತಿದೆ. ಇದೆಲ್ಲವನ್ನು ಮರೆಸಲು ಈ ರೀತಿ ಮಾತನಾಡಿ ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಇಂತಹ ಹೇಳಿಕೆ ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು.

ವಿನಯ್ ಕುಲಕರ್ಣಿ ಅವರ ಜತೆ ಕಾಂಗ್ರೆಸ್ ಪಕ್ಷ ಇದೆ:

‘ವಿನಯ್ ಕುಲಕರ್ಣಿ ಅವರು ಪಕ್ಷದ ಹಿರಿಯ ನಾಯಕರು, ಮಂತ್ರಿಯಾಗಿ ನನ್ನೊಟ್ಟಿಗೆ ಕೆಲಸ ಮಾಡಿದ್ದಾರೆ. ದ್ವೇಷ ರಾಜಕೀಯದಿಂದ ಅವರಿಗೆ ನೋವಾಗಿದೆ. ನ್ಯಾಯಾಲಯದಲ್ಲಿ ಅವರ ಪ್ರಕರಣ ಯಾವ ಹಂತದಲ್ಲಿದೆ ಎಂದು ಗೊತ್ತಿದೆ.

ವಿನಯ್ ಕುಲಕರ್ಣಿಗೆ ಕಾಂಗ್ರೆಸ್ ಪಕ್ಷ ಬೆಂಬಲವಾಗಿ ನಿಲ್ಲುತ್ತದೆ - ಡಿಕೆ ಶಿವಕುಮಾರ್ #DKShivakumar

ಚುನಾವಣೆಗೂ ಮುನ್ನ ಹಾಗೂ ಚುನಾವಣೆ ನಂತರ ಯಾವ, ಯಾವ ನಾಯಕರು ಯಾವ ರೀತಿ ಭಾಷಣ ಮಾಡಿದ್ದಾರೆ ಎಂಬುದು ನಿಮ್ಮ ಬಳಿಯೇ ಇದೆ. ಅವರು ಜೈಲಿನಲ್ಲಿ ಹಾಗೂ ಹೊರಗೆ ಅನುಭವಿಸಿದ ನೋವು ಹಂಚಿಕೊಂಡಿದ್ದಾರೆ. ಅದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಅವರು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು ಹೋಗುತ್ತಾರೆ. ಅವರ ಕುಟುಂಬ, ಕಾರ್ಯಕರ್ತರು, ಪಕ್ಷ ಅವರ ಬೆನ್ನಿಗೆ ನಿಲ್ಲಲಿದೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಅವರಿಗೆ ಹಾಗೂ ನನಗೆ ಅರಿವಿದೆ. ಕಾನೂನಿನಲ್ಲಿ ಅವರಿಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ’ ಎಂದರು.

ಆಫ್ಘಾನ್ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಬೇಕು:

‘ಅಫ್ಘಾನಿಸ್ತಾನ ವಿದ್ಯಾರ್ಥಿಗಳ ಪ್ರತಿನಿಧಿಗಳು ಬಂದು ನನ್ನ ಭೇಟಿ ಮಾಡಿದ್ದರು. ಅಲ್ಲಿನ ಘಟನೆಯಿಂದ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ನಮ್ಮ ರಾಜ್ಯದಲ್ಲಿ ಅವರಿಗೆ ಧೈರ್ಯ ನೀಡಬೇಕು. ಅವರ ದೇಹ ಮಾತ್ರ ಇಲ್ಲಿದ್ದು, ಅವರ ಮನಸ್ಸು ಅಲ್ಲಿರುವ ಪೋಷಕರ ಮೇಲಿದೆ.

ಬೆಂಗಳೂರು ಶಿಕ್ಷಣ ಹಬ್ ಆಗಿದ್ದು, ಅನೇಕ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಇಲ್ಲಿದ್ದಾರೆ. ಅವರಿಗೆ ಧೈರ್ಯ ತುಂಬಬೇಕು. ಧರ್ಮ ಯಾವುದೇ ಆಗಿರಲಿ, ಮಾನವೀಯತೆ ದೃಷ್ಟಿಯಿಂದ ಅವರಿಗೆ ಧೈರ್ಯ ತುಂಬಬೇಕು. ಅಫ್ಘಾನಿಸ್ತಾನದಲ್ಲಿರುವ ಕನ್ನಡಿಗರನ್ನು ವಾಪಸ್ ಕರೆತರುವುದು ಭಾರತ ಸರ್ಕಾರಕ್ಕೆ ಸಂಬಂಧಿಸಿದ ವಿಚಾರ. ಈಗ ನಾನು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಮಾತನಾಡಲಿ’ ಎಂದು ತಿಳಿಸಿದರು.

ಅಫ್ಘಾನಿಸ್ತಾನ ಆಗಲಿ ಯಾವ್ದೇ ದೇಶ ಆಗಲಿ, ಮಕ್ಳೆಲ್ಲಾ ನಮ್ಮ ಮಕ್ಳೇ ಅಲ್ವಾ? ಅವರಿಗೆ ಧೈರ್ಯ ತುಂಬೇಕು DK Shivakumar
Tags: Afghan-Taliban TalksAfghanistanCrisisCongress PartyD K Shivakumarಬಿಜೆಪಿ
Previous Post

ಕೋವಿಡ್ ಮಾರ್ಗಸೂಚಿ ಕೇಂದ್ರ ಸಚಿವರಿಗೆ ಅನ್ವಯವಾಗುವುದಿಲ್ಲವೇ?: ರಾಮಲಿಂಗಾ ರೆಡ್ಡಿ

Next Post

ಮೈಸೂರು: ವಾರಾಂತ್ಯ ಕರ್ಫ್ಯೂ ಉಲ್ಲಂಘನೆ, 116 ವಾಹನಗಳನ್ನು ವಶಪಡಿಸಿಕೊಂಡ ಪೋಲಿಸ್

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಮೈಸೂರು: ವಾರಾಂತ್ಯ ಕರ್ಫ್ಯೂ ಉಲ್ಲಂಘನೆ, 116 ವಾಹನಗಳನ್ನು ವಶಪಡಿಸಿಕೊಂಡ ಪೋಲಿಸ್

ಮೈಸೂರು: ವಾರಾಂತ್ಯ ಕರ್ಫ್ಯೂ ಉಲ್ಲಂಘನೆ, 116 ವಾಹನಗಳನ್ನು ವಶಪಡಿಸಿಕೊಂಡ ಪೋಲಿಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada