ಪಶು ಸಂಗೋಪನೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ ಶಿಕ್ಷಕನನ್ನು ಬೆಂಗಳೂರು ಪೊಲಿಸರು ಬಂಧಿಸಿದ್ದಾರೆ.
ಸಂಜಯನಗರದ ನಿವಾಸಿ ಜ್ಞಾನದೇವ್ ಜಾಧವ್ ಬಂಧಿತ ಆರೋಪಿ.
ಪಶು ಸಂಗೋಪನೆ ಸಚಿವರು ನನಗೆ ಆಪ್ತರು ಅಂತಾ ಹೇಳಿಕೊಂಡಿದ್ದ ಜ್ಞಾನದೇವ್ ಜಾಧವ್, ಇಲಾಖೆಯ ಎಫ್ಡಿಎ, ಎಸ್ಡಿಎ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ನಕಲಿ ಆದೇಶ ಪ್ರತಿ ಸೃಷ್ಟಿ ಮಾಡಿದ್ದ.
ಪಶುಸಂಗೋಪನೆ ಇಲಾಖೆಯ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಆದೇಶ ಮತ್ತು ಹೆಸರನ್ನ ನಕಲಿ ಮಾಡಿ ದಾಖಲೆ ಸೃಷ್ಟಿಸಿದ್ದ. ನೇಮಕಾತಿ ಪ್ರಕ್ರಿಯೆಯನ್ನ ಥೇಟ್ ಸರ್ಕಾರಿ ನೇಮಕಾತಿಯಂತೆ ನಡೆಸಿದ್ದ.
ಜುಲೈ 30ರ ಒಳಗೆ ಅಕ್ಷೇಪಗಳಿದ್ದರೆ ಅರ್ಜಿ ಸಲ್ಲಿಸುವಂತೆ ಇಲಾಖೆ ಹೆಸರಿನಲ್ಲಿ ಆದೇಶ ಹೊರಡಿಸಿದ್ದ. ಹೀಗೆ ಹುದ್ದೆಗೆ ಅರ್ಜಿ ಸಲ್ಲಿಸಿದ 63 ಅಭ್ಯರ್ಥಿಗಳಿಂದ ತಲಾ 2 ಲಕ್ಷ ಹಣ ಪಡೆದಿದ್ದ. ಕೆಲ ಅಭ್ಯರ್ಥಿಗಳು ಇಲಾಖೆಯನ್ನ ಸಂಪರ್ಕಿಸಿದಾಗ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.
ಜಾಧವ್ ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.