ಕಲಘಟಗಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕಲಘಟಗಿ ವತಿಯಿಂದ ಕಲಘಟಗಿಯ ಗುಡ್ ನ್ಯೂಸ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ನಾಡಿನ ಕಾರ್ಮಿಕ ಸಚಿವರಾದ ಸನ್ಮಾನ್ಯ ಶ್ರೀ ಸಂತೋಷ್ ಲಾಡ್ ರವರು ಭಾಗವಹಿಸಿ ಮಾತನಾಡಿದರು.
ತಾಯಿಯೇ ಮೊದಲ ಗುರು ಎಂದು ಹೇಳಲಾಗುತ್ತದೆ ಆದರೂ ಅಕ್ಷರ ಕಲಿಸುವ ಗುರುಗಳಿಗೆ ಸಮಾಜದಲ್ಲಿ ಪೋಷಕರಿಗಿಂತಲೂ ದೊಡ್ಡ ಸ್ಥಾನವಿದೆ. ಶಿಕ್ಷಕರು ಮಕ್ಕಳಿಗೆ ಅಕ್ಷರದ ಜೊತೆಗೆ ಬದುಕಿನ ದಾರಿಯನ್ನು ಕೂಡ ಧಾರೆ ಎರೆಯುತ್ತಾರೆ. ಹೀಗಾಗಿ ಪೋಷಕರು ಮತ್ತು ಸಮಾಜದಷ್ಟೇ ಶಿಕ್ಷಕರು ಕೂಡ ಮನುಷ್ಯನ ಜೀವನದ ಅವಿಭಾಜ್ಯ ಅಂಗ ಎಂದು ಸಚಿವರಾದ ಸಂತೋಷ್ ಲಾಡ್ ಅಭಿಪ್ರಾಯಪಟ್ಟಿದ್ದಾರೆ.
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಜರುಗಿದ ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೂ ಮಾನ್ಯ ಸಚಿವರು ಶುಭಾಶಯ ತಿಳಿಸಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಮಿತ್ರರು ಉಪಸ್ಥಿತರಿದ್ದರು