• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ತಾಂಡಾಗಳಲ್ಲಿ ತೀಜ್ ಹಬ್ಬದ ಸಂಭ್ರಮ ಕುಣಿದು ಸಂಭ್ರಮಿಸಿದ ಲಂಬಾಣಿ ಬೆಡಗಿಯರು

Any Mind by Any Mind
October 18, 2021
in ಕರ್ನಾಟಕ
0
ತಾಂಡಾಗಳಲ್ಲಿ ತೀಜ್ ಹಬ್ಬದ ಸಂಭ್ರಮ ಕುಣಿದು ಸಂಭ್ರಮಿಸಿದ ಲಂಬಾಣಿ ಬೆಡಗಿಯರು
Share on WhatsAppShare on FacebookShare on Telegram

ದಸರಾ ವೇಳೆ ಹಸಿರು ಬೆಳೆ ಪೋಷಿಸುವ ಸಂಕೇತವಾಗಿ ಬುಡಕಟ್ಟು ಜನಾಂಗ ಆಚರಣೆ ಮಾಡುವ ತೀಜ್‌ ಹಬ್ಬವನ್ನು ಗದಗ ತಾಲ್ಲೂಕಿನ ಬೆಳದಡಿ ತಾಂಡಾದಲ್ಲಿ ಲಂಬಾಣಿಗರು ಶುಕ್ರವಾರ ಸಂಜೆ ಸಂಭ್ರಮದಿಂದ ಆಚರಿಸಿದರು. ಸಕಾಲಕ್ಕೆ ಮಳೆ ಬಂದು, ಸಮೃದ್ದಿ ಬೆಳೆ ಬರಲಿ ತಾಂಡಾದಲ್ಲಿ ಆರೋಗ್ಯ ನೆಲೆಸಲಿ ಎಂದು ತೀಜ್‌(ಹುಲ್ಲಿನ ಬುಟ್ಟಿ) ಹೊತ್ತ ಯುವತಿಯರು ಹಾಡಿನ ಮೂಲಕ ಪ್ರಾರ್ಥನೆ ಮಾಡುವ ದೃಶ್ಯಗಳು ನಾಗಾವಿ, ಬೆಳದಡಿ ತಾಂಡಾಗಳಲ್ಲಿ ವಿಶೇಷವಾಗಿ ಕಂಡುಬಂದವು.

ADVERTISEMENT


ತಾಂಡಾಗಳಲ್ಲಿ ತೀಜ್‌ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡುತ್ತಾರೆ. ದುಡಿಯಲು ಗುಳೆಹೋದ, ನೌಕರಿಗಾಗಿ, ವ್ಯಾಪರಕ್ಕಾಗಿ ದೂರದ ಪಟ್ಟಣಗಳಿಗೆ ಹೋದ ಜನರು ದಸರಾ ಹಬ್ಬದ ಮುಂಚಿತವಾಗಿ ತಾಂಡಾಗಳಿಗೆ ಬರುತ್ತಾರೆ. ಮನೆಗೆ ಬಣ್ಣಹಚ್ಚಿ ಮಡಿ ಮಾಡುತ್ತಾರೆ. ದಸರಾ ಆಚರಣೆಯ 9 ದಿನ ಮುಂಚಿತವಾಗಿ ತಾಂಡಾದ ನಾಯಕ ಅಥವಾ ಸೇವಾಲಾಲ್‌ ಮಹಾರಾಜ್‌ ಭಗತ್‌ (ಪೂಜಾರಿ) ದೇವಿಗೆ ಹಾಗೂ ಸೇವಾಲಾಲರಿಗೆ ಪೂಜೆ ಮಾಡಿ 9 ಗೋಧಿ ಕಾಳುಗಳನ್ನು ತಾಂಡಾದ ಹಿರಿಯ ಮಹಿಳೆಯರಿಗೆ ನೀಡುತ್ತಾರೆ. ನಂತರ ಅದರ ಜೊತೆಗೆ ಹೆಚ್ಚಿನ ಕಾಳುಗಳನ್ನು ಸೇರಿಸಿ ಪ್ರತಿಯೊಂದು ಮನೆಯಲ್ಲಿ ಬಿದುರಿನ ಪುಟ್ಟಿಯಲ್ಲಿ ಮಣ್ಣು, ದೇಶಿ ಆಕಳ ಸಗಣಿ ಗೊಬ್ಬರ ಹಾಕಿ ಗೋಧಿ ಬೀಜಗಳನ್ನು ನೆಡುತ್ತಾರೆ ಹಾಗೂ ಅದಕ್ಕೆ ಸೂರ್ಯನ ಬೆಳಕು ತಾಗದಂತೆ ಮುಚ್ಚಿ ಇಡುತ್ತಾರೆ ಮತ್ತು ಪ್ರತಿದಿನ ಪ್ರಮಾಣಕ್ಕೆ ತಕ್ಕಷ್ಟು ನೀರು ಹಾಕುತ್ತಾರೆ. ಇದಕ್ಕೆ ತೀಜ್‌ ಬುರೆರೋ (ಮುಚ್ಚಿಡುವುದು) ಎಂದು ಕರೆಯುತ್ತಾರೆ.


9 ದಿನಗಳ ಕಾಲ ಸಂಜೆ ವೇಳೆ ನಡೆಯುವ ಈ ಹಬ್ಬದಲ್ಲಿ ಮದುವೆಯಾಗದ ತಾಂಡಾದ ಬಂಜಾರ ಬೆಡಗಿಯರು ಪ್ರಮುಖ ಪಾತ್ರವಹಿಸುತ್ತಾರೆ. ಅವರಿಗೆ ಹಿರಿಯ ಮಹಿಳೆಯರು ಮಾರ್ಗದರ್ಶನ ನೀಡುತ್ತಾರೆ. ಪ್ರತಿ ದಿನವೂ ರಾತ್ರಿ ಪೂಜೆಯ ನಂತರ ವೃತ್ತಾಕಾರದಲ್ಲಿ ಹೆಣ್ಣುಮಕ್ಕಳು ಕುಣಿದು ಕುಪ್ಪಳಿಸುತ್ತಾರೆ. ಬಂಜಾರ ಸಂಪ್ರದಾಯದ ಬಗ್ಗೆ, ದಸಾರ ಹಬ್ಬದ ಹಿನ್ನಲೆ ಬಗ್ಗೆ, ತೀಜ್‌ ಹಬ್ಬದ ಬಗ್ಗೆ ಹಾಡಿನ ರೂಪದಲ್ಲಿ ಹೇಳುತ್ತಾರೆ. ಕೆಲವೊಮ್ಮೆ ಒಡಪು ಇಟ್ಟು ಹಾಡುವಾಗ ಸ್ಪರ್ಧೆಗಳು ನಡೆಯುತ್ತವೆ ಹಾಗಾಗಿ ದಸರಾ ಒಂಭತ್ತು ದಿನವೂ ತಾಂಡಾಗಳಲ್ಲಿ ಸಂಭ್ರಮ ಮನೆ ಮಾಡಿರುತ್ತದೆ. ಕೊನೆಯ ದಿನ ಸಮೀಪದ ನದಿಗೆ ಅಥವಾ ಹಳ್ಳಕ್ಕೆ ಹೋಗಿ ಸಸಿಗಳನ್ನು ನೀರಿನಲ್ಲಿ ಬಿಡುತ್ತಾರೆ ಹಾಗೂ ಗಂಗಾಮಾತಗೆ ಪ್ರಾರ್ಥಿಸುತ್ತಾರೆ ನಂತರ ಬನ್ನಿ ಮುಡಿಯುತ್ತಾರೆ ಎಂದು ಬೆಳದಡಿ ತಾಂಡಾದ ನಾಯಕಣಿಯರಾದ ಗಿರಿಜವ್ವ ಚಂದು ನಾಯಕ, ಶೀಲವ್ವ ಮಾಂತೇಶ ಚವಾಣ, ಶಾಂತವ್ವ ಸೋಮನಾಥ ಮಾಳಗಿಮನಿ ಮಾಹಿತಿ ನೀಡಿದರು.


ಹಬ್ಬದ ಆಚರಣೆಯಲ್ಲಿ ಪರಸ್ಪರರಿಗೆ ತೀಜ್ ಹಂಚಿಕೊಂಡು ಬಾಳು ಯಾವತ್ತೂ ಹಸಿರಾಗಲಿ, ಒಳ್ಳೆಯದಾಗಲಿ ಎಂದು ಹಾರೈಸಲಾಗುತ್ತದೆ. ಬಂಜಾರ ಶೈಲಿಯ ಹೊಸ ಉಡುಗೆ ತೊಡುಗೆಗಳಿಂದ ಗಮನ ಸೆಳೆಯುತ್ತಾರೆ. ಹೀಗಾಗಿ ಇಂದಿಗೂ ನಮ್ಮ ಜನಾಂಗದ ಮಹಿಳೆಯರು ಉಡುಗೆ-ತೊಡುಗೆ ಬಿಟ್ಟಿಲ್ಲ ಎಂದು ಹಿರಿಯ ಮಹಿಳೆಯರಾದ ಸುವರ್ಣ ಟಿಕಪ್ಪ ನಾಯಕ, ಶೀಲವ್ವ ಕೇಶಪ್ಪ ಕಾರಭಾರಿ ಹೇಳಿದರು.

Tags: Dasara FestivalGadagGadag DistrictState Festival
Previous Post

ಶಾಶ್ವತ ನೀರಾವರಿ ಹೋರಾಟ ಸಮಿತಿಯಿಂದ ಕಟ್ಟೆ ಒಡೆದ ಕೆರೆಗಳ ವೀಕ್ಷಣೆ

Next Post

ಮಹದೇವಪುರ: ಅಧಿಕಾರಿಗಳ ನಿರ್ಲಕ್ಷ್ಯ, ಶಾಸಕರ ಸ್ವಾರ್ಥ ರಾಜಕಾರಣ – ಕತ್ತಲಲ್ಲಿ ಕಳೆಯುತ್ತಿದೆ 300 ಕ್ಕೂ ಹೆಚ್ಚು ಕುಟುಂಬಗಳು

Related Posts

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
0

ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮದೇ ಪಿಎ...

Read moreDetails
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
Next Post
ಮಹದೇವಪುರ: ಅಧಿಕಾರಿಗಳ ನಿರ್ಲಕ್ಷ್ಯ, ಶಾಸಕರ ಸ್ವಾರ್ಥ ರಾಜಕಾರಣ – ಕತ್ತಲಲ್ಲಿ ಕಳೆಯುತ್ತಿದೆ 300 ಕ್ಕೂ ಹೆಚ್ಚು ಕುಟುಂಬಗಳು

ಮಹದೇವಪುರ: ಅಧಿಕಾರಿಗಳ ನಿರ್ಲಕ್ಷ್ಯ, ಶಾಸಕರ ಸ್ವಾರ್ಥ ರಾಜಕಾರಣ - ಕತ್ತಲಲ್ಲಿ ಕಳೆಯುತ್ತಿದೆ 300 ಕ್ಕೂ ಹೆಚ್ಚು ಕುಟುಂಬಗಳು

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada