ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಬಹುಮತ ಸಾಧಿಸಿದ್ದು, ಜೆಡಿಯು ನಾಯಕ ನಿತೀಶ್ ಕುಮಾರ್ ಇಂದು 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇಂದು ಬಿಹಾರದಲ್ಲಿ ಹೊಸ ಅಧ್ಯಾಯ ಆರಂಭಿಸಿರುವ ನಿತೀಶ್ ಕುಮಾರ್ ಹಾಗೂ ನೂತನ ಸರ್ಕಾರದ ಸಚಿವರಿಗೆ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಶುಭ ಹಾರೈಸಿದ್ದಾರೆ.
आदरणीय श्री नीतीश कुमार जी को बिहार के मुख्यमंत्री पद की शपथ लेने पर हार्दिक बधाई। मंत्रिपरिषद् के सदस्य के रूप में शपथ लेने वाले बिहार सरकार के सभी मंत्रियों को हार्दिक शुभकामनाएँ।
आशा है नई सरकार जिम्मेदारीपूर्ण लोगों की आशाओं और अपेक्षाओं पर खरा उतर अपने वादों एवं घोषणाओं को…
— Tejashwi Yadav (@yadavtejashwi) November 20, 2025
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ́ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಜಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಹಾರ ಸರ್ಕಾರದ ಎಲ್ಲಾ ಸಚಿವರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳು. ನೂತನ ಸರ್ಕಾರವು ಜವಾಬ್ದಾರಿಯುತವಾಗಿ ಜನರ ಆಶಯಗಳು ಮತ್ತು ನಿರೀಕ್ಷೆಗಳಿಗೆ ತಕ್ಕಂತೆ ಇರುತ್ತದೆ. ಜೊತೆಗೆ ಚುನಾವಣೆ ಸಮಯದಲ್ಲಿ ನೀಡಿದ ತನ್ನ ಭರವಸೆಗಳು ಮತ್ತು ಘೋಷಣೆಗಳನ್ನು ಈಡೇರಿಸುತ್ತದೆ. ಬಿಹಾರದ ಜನರ ಜೀವನದಲ್ಲಿ ಸಕಾರಾತ್ಮಕ ಮತ್ತು ಗುಣಾತ್ಮಕ ಬದಲಾವಣೆಗಳನ್ನು ತರುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.











