• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹರ್ಷ ಹತ್ಯೆ | ಕರ್ನಾಟಕದಲ್ಲಿ ಕೇರಳ ಮಾದರಿಯ ಭಯೋತ್ಪಾದನೆ ಹುಟ್ಟುಹಾಕಲಾಗುತ್ತಿದೆ : ಸಂಸದ ತೇಜಸ್ವಿ ಸೂರ್ಯ ಆರೋಪ

ಶರಣು ಚಕ್ರಸಾಲಿ by ಶರಣು ಚಕ್ರಸಾಲಿ
February 23, 2022
in ಕರ್ನಾಟಕ, ದೇಶ
0
ಹರ್ಷ ಹತ್ಯೆ | ಕರ್ನಾಟಕದಲ್ಲಿ ಕೇರಳ ಮಾದರಿಯ ಭಯೋತ್ಪಾದನೆ ಹುಟ್ಟುಹಾಕಲಾಗುತ್ತಿದೆ : ಸಂಸದ ತೇಜಸ್ವಿ ಸೂರ್ಯ ಆರೋಪ
Share on WhatsAppShare on FacebookShare on Telegram

ಶಿವಮೊಗ್ಗದಲ್ಲಿ (Shivamogga) ನಡೆದ ಭಜರಂಗದಳದ ಕಾರ್ಯಕರ್ತನ ಹತ್ಯೆಯು (murdered Bajrang Dal activist) ಒಂದು ಪ್ರತ್ಯೇಕವಾದ ಕೊಲೆಯಲ್ಲ, ಅದು ಭಯೋತ್ಪಾದಕ ಕೃತ್ಯ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ (BJP MP Tejasvi Surya) ಹೇಳಿದ್ದಾರೆ.

ADVERTISEMENT

ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬವನ್ನು ಮಂಗಳವಾರ ಭೇಟಿ ಮಾಡಿದ ನಂತರ ಬಿಜೆಪಿಯ ಯುವ ಘಟಕದ ಮುಖ್ಯಸ್ಥ ಸೂರ್ಯ ಈ ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 20 ರಂದು ರಾತ್ರಿ ಆರು ಜನರಿಂದ ಹತ್ಯೆಗೀಡಾದ ಹರ್ಷ, ಹಿಂದೂತ್ವದ (hindutva ) ಕಾರಣಕ್ಕಾಗಿ ಕೆಲಸ ಮಾಡಿದ್ದರಿಂದ ಹತ್ಯೆಯಾಗಿದ್ದಾನೆ ಹೊರತು ಯಾವುದೇ ವೈಯಕ್ತಿಕ ಕಾರಣಗಳಿಗಾಗಿ ಅಲ್ಲ ಎಂದು ಸೂರ್ಯ ಹೇಳಿದ್ದಾರೆ.

“ಕರ್ನಾಟಕದಲ್ಲಿ (Karnataka) ಹಿಂದೂ ಕಾರ್ಯಕರ್ತರ (Hindu activists) ಸರಣಿ ಕೊಲೆಗಳು ಕೆಲವು ಮೂಲಭೂತ ಇಸ್ಲಾಮಿಕ್ ಸಂಘಟನೆಗಳ (radical Islamic organisations) ಯೋಜಿತ ಪಿತೂರಿಯಾಗಿದೆ. ಈ ಘಟನೆಗಳನ್ನು ಪ್ರತ್ಯೇಕ ಕೊಲೆ ಪ್ರಕರಣಗಳೆಂದು ಪರಿಗಣಿಸದೆ, ಭಯೋತ್ಪಾದಕ ಕೃತ್ಯಗಳೆಂದು ಪರಿಗಣಿಸಬೇಕು. ಇದನ್ನು ಪ್ರತ್ಯೇಕ ಪ್ರಕರಣಗಳೆಂದು ಪರಿಗಣಿಸುವುದರಿಂದ ತನಿಖೆ ಹಳಿತಪ್ಪುವ ಅಪಾಯವಿದ್ದು, ನಿಜವಾದ ಅಪರಾಧಿಗಳನ್ನು ಬಂಧಿಸಲು ಸಾಧ್ಯವಿಲ್ಲ. ಹಾಗಾಗಿ, ಹರ್ಷ ಪ್ರಕರಣವನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು” ಎಂದು ಸೂರ್ಯ ಆಗ್ರಹಿಸಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), (Popular Front of India (PFI) ಸೋಷಿಯಲಿಸ್ಟ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) (Socialist Democratic Party of India (SDPI)) ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಂತಹ (Campus Front of India) ಸಂಘಟನೆಗಳು ಕರ್ನಾಟಕ ಮತ್ತು ದೇಶದ ವಿವಿಧ ಭಾಗಗಳಿಗೆ “ಕೇರಳ ಮಾದರಿಯ ಭಯೋತ್ಪಾದನೆ” ಯನ್ನು (Kerala model of terror) ಹುಟ್ಟುಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ವಿಶೇಷ ಭಯೋತ್ಪಾದನಾ ನಿಗ್ರಹ ಘಟಕವನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದ ಸೂರ್ಯ, ಮುಂಬರುವ ರಾಜ್ಯ ಬಜೆಟ್‌ನಲ್ಲಿ ಹೊಸ ಸೆಲ್ ಸ್ಥಾಪಿಸಲು ಹೊಸ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವಾರಜ್‌ ಬೊಮ್ಮಾಯಿ ಅವರನ್ನು ಒತ್ತಾಯಿಸಿದರು.

“ರಾಷ್ಟ್ರೀಯ ತನಿಖಾ ಸಂಸ್ಥೆಯ ಸಮನ್ವಯದೊಂದಿಗೆ ಭಯೋತ್ಪಾದಕ ಕೃತ್ಯಗಳನ್ನು ಮೇಲ್ವಿಚಾರಣೆ ಮಾಡಲು, ಗುಪ್ತಚರ ಮಾಹಿತಿ ಸಂಗ್ರಹಿಸಲು, ಪೂರ್ವಭಾವಿಯಾಗಿ ಮತ್ತು ತನಿಖೆ ಮಾಡಲು ರಾಜ್ಯಕ್ಕೆ ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿರುವ ಕಾನೂನು ಅಗತ್ಯವಿದೆ. ಈಗಿರುವ ಪೊಲೀಸ್ ಬಲವು ಭಯೋತ್ಪಾದನೆಯ ಬೆದರಿಕೆಯನ್ನು ಎದುರಿಸಲು ಅಸಮರ್ಪಕವಾಗಿದೆ. ಬಜೆಟ್ ಅಧಿವೇಶನದಲ್ಲಿ KCOCA ಕಾಯ್ದೆಯನ್ನು ತಿದ್ದುಪಡಿ ಮಾಡಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಆಗ್ರಹಿಸಿದ್ದಾರೆ.

“ಕೆಸಿಒಸಿಎ ಕಾಯ್ದೆಯ ತಿದ್ದುಪಡಿಯು ಹಿಂಸಾಚಾರ ಘಟನೆಗಳಲ್ಲಿ ತೊಡಗಿರುವ ಸಂಸ್ಥೆಗಳನ್ನು ‘ಸಂಘಟಿತ ಅಪರಾಧ ಸಿಂಡಿಕೇಟ್’ ಎಂದು ಘೋಷಿಸಲು ಸಹಾಯ ಮಾಡುತ್ತದೆ ಮತ್ತು ಅಂತಹ ಚಟುವಟಿಕೆಗಳಲ್ಲಿ ತೊಡಗಿರುವ ಸಂಸ್ಥೆಗಳ ಸಂಬಂಧವನ್ನು ಮುರಿಯಲು ಸಹಾಯ ಮಾಡುತ್ತದೆ” ಎಂದು ಸೂರ್ಯ ವಿವರಿದ್ದಾರೆ.

ಉತ್ತರ ಪ್ರದೇಶದ ಮಾದರಿಯಲ್ಲಿ ಕರ್ನಾಟಕವು ರಾಜ್ಯದಲ್ಲಿನ ಮೂಲಭೂತವಾದಿ ಸಂಘಟನೆಗಳ ಬಗ್ಗೆ ದಸ್ತಾವೇಜನ್ನು ಸಿದ್ಧಪಡಿಸುವ ಅಗತ್ಯವಿದೆ. ರಾಜ್ಯವು ನ್ಯಾಯಾಂಗ ಪರೀಕ್ಷೆಗೆ ನಿರಾಕರಿಸಲಾಗದ ಸಾಕ್ಷ್ಯಗಳ ಆಧಾರದ ಮೇಲೆ ಸಮಗ್ರ ದಾಖಲೆಯನ್ನು ಸಿದ್ಧಪಡಿಸಬೇಕು ಮತ್ತು ಕೇಂದ್ರಕ್ಕೆ ಮನವಿ ಮಾಡಬೇಕು. ಹೀಗೆ ಮಾಡಿದರೆ ಮಾತ್ರ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಕೊನೆಗೊಳಿಸಲು ಸಾಧ್ಯವಾಗುತ್ತದೆ. ಈ ಕೂಡಲೇ ಸಿಎಂ ಅವರು ಈ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Tags: BJPCongress PartyHarshahindu activistಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

UP Electons 2022 | ನಾಲ್ಕನೇ ಹಂತದ ಮತದಾನ; ಲಖೀಂಪುರದತ್ತ ಎಲ್ಲರ ಚಿತ್ತ; ಇಲ್ಲಿದೆ ಪ್ರಮುಖ 10 ಅಂಶಗಳು

Next Post

ನಿತೀಶ್ ಕುಮಾರ್ ಮುಂದಿನ ರಾಷ್ಟ್ರಪತಿ? ಬಿಹಾರ ರಾಜಕೀಯದಲ್ಲಿ ಹೀಗೊಂದು ಚರ್ಚೆ ಆರಂಭ

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
Next Post
ನಿತೀಶ್ ಕುಮಾರ್ ಮುಂದಿನ ರಾಷ್ಟ್ರಪತಿ? ಬಿಹಾರ ರಾಜಕೀಯದಲ್ಲಿ ಹೀಗೊಂದು ಚರ್ಚೆ ಆರಂಭ

ನಿತೀಶ್ ಕುಮಾರ್ ಮುಂದಿನ ರಾಷ್ಟ್ರಪತಿ? ಬಿಹಾರ ರಾಜಕೀಯದಲ್ಲಿ ಹೀಗೊಂದು ಚರ್ಚೆ ಆರಂಭ

Please login to join discussion

Recent News

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada