• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕ್ಷಮೆಯಾಚನೆ ಸುದ್ದಿಯನ್ನು ನಿರಾಕರಿಸಿದ ತೇಜಸ್ವಿ ಸೂರ್ಯ!

Any Mind by Any Mind
May 7, 2021
in ಕರ್ನಾಟಕ
0
ಕ್ಷಮೆಯಾಚನೆ ಸುದ್ದಿಯನ್ನು ನಿರಾಕರಿಸಿದ ತೇಜಸ್ವಿ ಸೂರ್ಯ!
Share on WhatsAppShare on FacebookShare on Telegram
ADVERTISEMENT

ಬಿಬಿಎಂಪಿಯ ದಕ್ಷಿಣ ವಲಯದ ಕೋವಿಡ್‌ ವಾರ್ಡ್‌ ರೂಮ್‌ಗೆ ಗುರುವಾರ ಸಂಜೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಮುಸ್ಲಿಂ ಸಿಬ್ಬಂದಿಯ ಬಳಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕ್ಷಮೆ ಕೋರಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ. ಆದರೆ, ಈ ರೀತಿ ಯಾವುದೇ ಕ್ಷಮಾಪಣೆ ಪ್ರಸಂಗ ನಡೆದಿಲ್ಲ, ಈ ಸುದ್ದಿ ನಕಲಿ ಎಂದು ತೇಜಸ್ವಿ ಸೂರ್ಯ ಅವರ ಕಛೇರಿಯ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹೇಳಿದೆ.

ಬೆಡ್ ಬ್ಲಾಕಿಂಗ್ ಹಗರಣವನ್ನು ಬಯಲಿಗೆಳೆದಿದ್ದ ವೇಳೆ ತೇಜಸ್ವಿ ಸೂರ್ಯ,  ಉದ್ದೇಶ ಪೂರ್ವಕವಾಗಿ 17 ಮುಸ್ಲಿಂ ನೌಕರರ ಹೆಸರು ಮಾತ್ರ ಉಲ್ಲೇಖಿಸಿ ನೇರ ಆರೋಪ ಮಾಡಿದ್ದರು. ಆದರೆ, 206 ಜನ ಕಾರ್ಯನಿರ್ವಹಿಸುವ  ವಾರ್ ರೂಮ್ ನ ಹಾಸಿಗೆ ನಿಯೋಜನೆ ವಿಭಾಗದಲ್ಲಿ ಕೇವಲ ಒಬ್ಬ ಮುಸ್ಲಿಂ ಯುವಕ ಮಾತ್ರ ಕೆಲಸ ಮಾಡುತ್ತಿದ್ದರು. ಬೆಡ್ ಬ್ಲಾಕಿಂಗ್ ಹಗರಣಕ್ಕೂ ಉದ್ದೇಶಪೂರ್ವಕವಾಗಿ ಕೋಮು ಬಣ್ಣ ನೀಡಿದ್ದಾರೆ ಎಂದು ತೇಜಸ್ವಿ ಸೂರ್ಯನ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

When one has no news, they create fake news. https://t.co/MfBPuSAW2R pic.twitter.com/r7jHrq1OdD

— Tejasvi Surya Office (@Offtejasvisurya) May 7, 2021

ಬೆಡ್‌ ಬ್ಲಾಕಿಂಗ್‌ ಹಗರಣಕ್ಕೂ ತೇಜಸ್ವಿ ಸೂರ್ಯ ಹೆಸರು ಉಲ್ಲೇಖಿಸಿರುವ ಸಿಬ್ಬಂದಿಗಳಿಗೂ ಸಂಬಂಧವಿಲ್ಲವೆನ್ನುವುದು ಬೆಳಕಿಗೆ ಬರುತ್ತಿದ್ದಂತೆ ರಾಷ್ಟ್ರೀಯ ಮಟ್ಟದಲ್ಲಿ ತೇಜಸ್ವಿ ಸೂರ್ಯ ಛೀಮಾರಿಯನ್ನು ಎದುರಿಸಿದ್ದರು. ಸರ್ಕಾರದ ಹುಳುಕುಗಳನ್ನು ಮರೆ ಮಾಚಲು ತೇಜಸ್ವಿ ಉದ್ದೇಶ ಪೂರ್ವಕವಾಗಿ ಬೆಡ್‌ ಬ್ಲಾಕಿಂಗ್‌ ದಂಧೆಗೆ ಕೋಮು ಆಯಾಮ ನೀಡಿದ್ದಾರೆ ಎಂದು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದವು.

ವ್ಯಾಪಕ ಆಕ್ರೋಶಕ್ಕೊಳಗಾದ ಬಳಿಕ ತೇಜಸ್ವಿ ಸೂರ್ಯ ವಿಷಾದ ವ್ಯಕ್ತಪಡಿಸಿದ್ದಾರೆ ಎನ್ನಲಾದ ಕಾಲ್‌ ರೆಕಾರ್ಡ್‌ ಒಂದು ವೈರಲ್‌ ಆಗಿತ್ತು. ಅದಾದ ಬಳಿಕ, ಬಿಬಿಎಂಪಿ ಹೆಲ್ಪ್‌ ಲೈನ್‌ ಕೂಡಾ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂದು ದೂರುಗಳು ಕೇಳಿ ಬಂದಿದ್ದವು. ತೇಜಸ್ವಿ ಸೂರ್ಯ ಕೋವಿಡ್‌ ವಾರ್‌ ರೂಮಿನ ಸಿಬ್ಬಂದಿಗಳಿಗೆ ಮಾಡಿದ ಅಪಮಾನದ ಬಳಿಕ ಹಲವಾರು ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರಾಗಿದ್ದರು ಎಂದು ವಾರ್‌ ರೂಮಿನ ಮೂಲಗಳು ತಿಳಿಸಿದ್ದವು.

ತೇಜಸ್ವಿ ಸೂರ್ಯ ಬೆಡ್ ಹಗರಣ ಬಯಲಿಗೆಳೆದ ನಂತರ BBMP ಹೆಲ್ಪ್ ಲೈನ್ ಕರೆ ಸಂಪರ್ಕವೇ ಆಗುತ್ತಿಲ್ಲ

ಅದಲ್ಲದೆ, ಬೆಡ್‌ ಬುಕಿಂಗ್‌ ಹಗರಣದಲ್ಲಿ ಬಿಜೆಪಿ ಶಾಸಕನ ಹೆಸರೇ ಕೇಳಿ ಬಂದಿದ್ದು, ತೇಜಸ್ವಿ ಸೂರ್ಯನ ವಿರುದ್ಧ ಆಕ್ರೋಶ ಹೆಚ್ಚಾಗಲು ಕಾರಣವಾಗಿತ್ತು. ಈ ಎಲ್ಲಾ ಕಾರಣಗಳಿಂದ ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ತೇಜಸ್ವಿ ಸೂರ್ಯ ಬಿಬಿಎಂಪಿ ವಾರ್‌ ರೂಮಿಗೆ ಧಾವಿಸಿ ಸಿಬ್ಬಂದಿಗಳ ಜೊತೆ ಮಾತನಾಡಿದ್ದರು.

ಈ ವೇಳೆ ಸಿಬ್ಬಂದಿಗಳ ಬಳಿ ಕ್ಷಮೆ ಕೇಳಿ ಯಾರೂ ಈ ವಿಷಯವನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ. ಧೈರ್ಯದಿಂದ ಇರಿ ಎಂದು ಸಂಸದರು ವಿಶ್ವಾಸ ತುಂಬಿದ್ದಾಗಿ ಸಿಬ್ಬಂದಿ ಹೇಳಿದ್ದಾರೆ.

‘ಪ್ರಕರಣದ ನಂತರ ಬಹಳಷ್ಟು ಸಿಬ್ಬಂದಿ ಕೆಲಸಕ್ಕೆ ಬರುತ್ತಿರಲಿಲ್ಲ. ಈ ಸಂದರ್ಭದಲ್ಲಿ ರಜೆ ಹಾಕುವುದು ಬೇಡ. ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಕರ್ತವ್ಯಕ್ಕೆ ಹಾಜರಾಗಿ ಎಂದು ಸಂಸದರು ಹೇಳಿರುವುದಾಗಿಯೂ ವಾರ್‌ ರೂಮ್‌ ಸಿಬ್ಬಂದಿ ತಿಳಿಸಿದ್ದರು.

ಸ್ವತಃ, ತೇಜಸ್ವಿಯೇ, ನನಗೆ ಬೇರೆಯವರು ಕೊಟ್ಟ ಪಟ್ಟಿಯನ್ನು ಓದಿದ್ದೇನೆ. ಮುಸ್ಲಿಮರನ್ನು ಉದ್ದೇಶಪೂರ್ವಕವಾಗಿ ಗುರಿಮಾಡಿರಲಿಲ್ಲ ಎಂದು ಸಮರ್ಥನೆ ನೀಡಿದ್ದರು.

ಬೆಣ್ಣೆ ತಿಂದ ಕೋತಿ ಮೇಕೆ ಮೂತಿಗೆ ಒರೆಸಿತು – ಬೆಡ್ ದಂಧೆಯಲ್ಲಿ ಬಿಜೆಪಿ ಶಾಸಕ ಶಾಮೀಲು?

ಇದೇ ಆಧಾರದ ಮೇಲೆ ದಿ ನ್ಯೂಸ್‌ ಮಿನಿಟ್‌, ಪ್ರಜಾವಾಣಿ ಸೇರಿದಂತೆ ಹಲವು ಸುದ್ದಿ ಸಂಸ್ಥೆಗಳು ʼತೇಜಸ್ವಿ ಸೂರ್ಯʼ ಕ್ಷಮೆ ಕೇಳಿರುವುದಾಗಿ ವರದಿ ಮಾಡಿತ್ತು. ಈ ವರದಿ ಪ್ರಕಟವಾಗುತ್ತಿದ್ದಂತೆಯೇ, ತೇಜಸ್ವಿ ಅವರ ದುಡುಕುತನ ಹಾಗೂ ಬೇಜವಾಬ್ದಾರಿತನಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.

ಆದರೆ, ಕ್ಷಮೆ ಕೇಳಿದ ವರದಿ ಬಳಿಕ ಟ್ರಾಲ್‌ಗೆ ಒಳಗಾದ ತೇಜಸ್ವಿ ಸೂರ್ಯ ತಮ್ಮ ಕಛೇರಿಯ ಅಧಿಕೃತ ಖಾತೆ ಮೂಲಕ ಸುದ್ದಿಯನ್ನು ನಕಲಿಯೆಂದು ಹೇಳಿದ್ದಾರೆ.

ವಾರ್ ರೂಮಿನಿಂದ ತನ್ನ ಬೆಂಬಲಿಗನನ್ನು ಹೊರ ಹಾಕಿದ  ಅಧಿಕಾರಿಯ‌ ಮೇಲೆ BJP ಶಾಸಕ ಸತೀಶ್ ರೆಡ್ಡಿ ಬೆಂಬಲಿಗರಿಂದ ಹಲ್ಲೆ
Previous Post

ಕೇಂದ್ರದಿಂದ ಆಕ್ಸಿಜನ್‌ ಪೂರೈಕೆ: ರಾಜ್ಯದ ಸಹಸ್ರಾರು ರೋಗಿಗಳ‌ ಪ್ರಾಣವನ್ನು ಸುಪ್ರೀಂ ಕೋರ್ಟ್ ಉಳಿಸಿದೆ -ಸಿದ್ದರಾಮಯ್ಯ

Next Post

ಕೋವಿಡ್‌ ಬಿಕ್ಕಟ್ಟು: ದುಬಾರಿ ವೆಚ್ಚದ ಯೋಜನೆ ಕೈಬಿಡಿ, ಆ ಹಣ ಆರೋಗ್ಯ ಕ್ಷೇತ್ರಕ್ಕೆ ಬಳಸಿ- KRS ಪಕ್ಷದಿಂದ ಆಗ್ರಹ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಕೋವಿಡ್‌ ಬಿಕ್ಕಟ್ಟು: ದುಬಾರಿ ವೆಚ್ಚದ ಯೋಜನೆ  ಕೈಬಿಡಿ, ಆ ಹಣ ಆರೋಗ್ಯ ಕ್ಷೇತ್ರಕ್ಕೆ ಬಳಸಿ- KRS ಪಕ್ಷದಿಂದ ಆಗ್ರಹ

ಕೋವಿಡ್‌ ಬಿಕ್ಕಟ್ಟು: ದುಬಾರಿ ವೆಚ್ಚದ ಯೋಜನೆ ಕೈಬಿಡಿ, ಆ ಹಣ ಆರೋಗ್ಯ ಕ್ಷೇತ್ರಕ್ಕೆ ಬಳಸಿ- KRS ಪಕ್ಷದಿಂದ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada