• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಳೆದ ಐದು ವರ್ಷಗಳಲ್ಲಿ ಸರ್ಕಾರದಿಂದ ದೇವಸ್ಥಾನಗಳಿಗೆ ಹೆಚ್ಚು ಅನುದಾನ : ಇದರಲ್ಲಿ ಬಿಜೆಪಿ ಪಾಲೇ ಹೆಚ್ಚು!

ಪ್ರತಿಧ್ವನಿ by ಪ್ರತಿಧ್ವನಿ
January 11, 2022
in ಕರ್ನಾಟಕ
0
ಕಳೆದ ಐದು ವರ್ಷಗಳಲ್ಲಿ ಸರ್ಕಾರದಿಂದ ದೇವಸ್ಥಾನಗಳಿಗೆ ಹೆಚ್ಚು ಅನುದಾನ : ಇದರಲ್ಲಿ ಬಿಜೆಪಿ ಪಾಲೇ ಹೆಚ್ಚು!
Share on WhatsAppShare on FacebookShare on Telegram

ಒಂದು ಕಡೆ ರಾಜ್ಯ ಸರ್ಕಾರದ ಅಧೀನದಲ್ಲಿರುವ ದೇವಾಲಯಗಳನ್ನು ಧಾರ್ಮಿಕ ದತ್ತಿ ಇಲಾಖೆಯ ನಿಯಂತ್ರಣದಿಂದ ಮುಕ್ತಗೊಳಿಸಲು ಕಾನೂನನ್ನು ಜಾರಿ ಮಾಡಲು ಬೊಮ್ಮಾಯಿ ಸರ್ಕಾರ ಚಿಂತಿಸುತ್ತಿದ್ದರೆ, ಇತ್ತ ದೇವಸ್ಥಾನಗಳಿಗೆ ಕಳೆದ ಐದು ವರ್ಷಗಳಲ್ಲಿ ಅತಿ ಹೆಚ್ಚು ಅನುದಾನ ಬಿಡುಗಡೆ ಮಾಡಿದೆ ಎಂದು ಸರ್ಕಾರಿ ಅಂಕಿ ಅಂಶಗಳೇ ಸಾರಿ ಹೇಳುತ್ತಿವೆ.

ADVERTISEMENT

ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ಬಗ್ಗೆ ಮತ್ತು ದೇವಸ್ಥಾನಗಳು ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಹಣಕಾಸಿನ ನಿಯಂತ್ರಣಕ್ಕೆ ಒಳಪಡದಂತೆ ಕಾನೂನನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದರು.

ಡಿಸೆಂಬರ್ 29ರಂದು ನಡೆದ ಸಭೆಯಲ್ಲಿ ದೇವಸ್ಥಾನದ ಹಣವನ್ನು ಬಳಸಲು ವಿವಿಧ ನೀತಿ ನಿಯಮಗಳನ್ನು ಈ ಹಿಂದೆ ಅಧಿಕಾರಿಗಳು ಪಾಲಿಸಬೇಕಿತ್ತು. ನಾವು ದೇವಸ್ಥಾನಗಳನ್ನು ಇನ್ಮುಂದೆ ಕಾನೂನಿನಿಂದ ಮುಕ್ತಗೊಳಿಸಲು ಯೋಚಿಸುತ್ತಿದ್ದೇವೆ. ದೇವಸ್ಥಾನಗಳು ಇನ್ಮುಂದೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುವಂತೆ ನಮ್ಮ ಸರ್ಕಾರ ಮಾಡುತ್ತದೆ ಎಂದು ಸಭೆಯಲ್ಲಿ ಬೊಮ್ಮಾಯಿ ಸ್ಪಷ್ಟಪಡಿಸಿದ್ದರು.

ಕಳೆದ ಐದು ವರ್ಷಗಳಲ್ಲಿ ರಾಜ್ಯ ಸರ್ಕಾರವು ಧಾರ್ಮಿಕ ದತ್ತಿ ಇಲಾಖೆಯ ಅಧಿನದಲ್ಲಿರುವ 34,563 ದೇವಸ್ಥಾನಗಳಿಗೆ 2020-21 ಅವಧಿಯಲ್ಲಿ ರಾಜ್ಯ ಸರ್ಕಾರ 465 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ವಿಧಾನ ಪರಿಷತ್ತಿನಲ್ಲಿ ಮಾಹಿತಿ ನೀಡಿದ್ದಾರೆ. ಇದು ಕಳೆದ ಐದು ವರ್ಷಗಳಲ್ಲಿ ಸರ್ಕಾರವು ದೇವಸ್ಥಾನಗಳಿಗೆ ಅತಿ ಹೆಚ್ಚು ಅನುದಾನ ಬಿಡುಗಡೆ ಮಾಡಿದ್ದನ್ನು ತೋರಿಸುತ್ತದೆ.

ಅಂಕಿ-ಅಂಶಗಳ ಪ್ರಕಾರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು 2017-18ರ ಅವಧಿಯಲ್ಲಿ 447 ಕೋಟಿ ರೂಪಾಯಿ, 2018-19ರ ಅವಧಿಯಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವು 248 ಕೋಟಿ ರೂಪಾಯಿ, 2019-20ರ ಅವಧಿಯಲ್ಲಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು 294 ಕೋಟಿ ರೂಪಾಯಿ ಬಿಡುಗಡೆ ಮಾಡಿತ್ತು. ಕಳೆದ ವರ್ಷ ಅನುದಾನವನ್ನ 465 ಕೋಟಿ ರೂಪಾಯಿಗಳಿಗೆ ಏರಿಕೆ ಮಾಡಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಇದು ಬಿಜೆಪಿ ಷಡ್ಯಂತ್ರ ಎಂದು ಆರೋಪಿಸಿದ್ದಾರೆ. ದೇವಸ್ತಾನಗಳನ್ನು ಸರ್ಕಾರದ ಅಧೀನದಿಂದ ಮುಕ್ತಗೊಳಿಸುವ ಬಿಜೆಪಿ ಸರ್ಕಾರದ ಆಲೋಚನೆ ಹಿಂದೆ ಬೇರೆಯದ್ದೇ ಕುತಂತ್ರ ಅಡಗಿದೆ. ದೇವಸ್ಥಾನಗಳಿಂದ ಸಂಗ್ರಹವಾದ ಹಣವನ್ನ ಇತರೆ ಧರಾಮಿಕ ಸಂಸ್ಥೆಗಳ ನಿರ್ವಹಣೆಗಾಗಿ ಬಳಸಲಾಗುತ್ತಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ದ ಅವರು ಹರಿಹಾಯ್ದಿದ್ದಾರೆ.

ಇದು ಶೇ.80ರಷ್ಟು ಹಿಂದೂ ಸಮುದಾಯದ ಆಸ್ತಿಯನ್ನು ಕಬಳಿಸಿ ಅದನ್ನು ನಿರ್ದಿಷ್ಟವಾಗಿ ಎರಡು ಮೂರು ಸಮುದಾಯಗಳಿಗೆ ಹಂಚುವ ಸಂಚನ್ನು ರಾಜ್ಯ ಸರ್ಕಾರ ರೂಪಿಸಿದೆ. ಒಂದು ವೇಳೆ ಸರ್ಕಾರ ಈ ಕ್ರಮಕ್ಕೆ ಮುಂದಾದರೆ ರಾಜ್ಯದಲ್ಲಿ 1,000 ವರ್ಷಗಳ ಹಿಂದೆ ನಡೆದಿದ್ದ ಹೋರಾಟಕ್ಕೆ ಅಪಮಾನ ಮಾಡಿದಂತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು, “ಕಾಂಗ್ರೆಸ್ ನಾಯಕರು ಮೊಘಲ್ ದೊರೆ ಔರಂಗಜೇಬ್ ಮತ್ತು ಬ್ರಿಟಿಷರ ರೀತಿಯಲ್ಲಿ ದೇವಸ್ಥಾನಗಳಿಂದ ಬಂದ ಹಣವನ್ನು ಬಳಸಿಕೊಳ್ಳಲು ಬಯಸುತ್ತಿದ್ದಾರೆ. ಭಕ್ತರು ದೇವಸ್ಥಾನಗಳಿಗೆ ನೀಡುವ ದೇಣಿಗೆಯನ್ನು ಸಾಮಾಜಿಕ ಉದ್ದೇಶಗಳಿಗಾಗಿ ಇನ್ಮುಂದೆ ಬಳಸಬೇಕು. ದೇವಸ್ಥಾನಗಳನ್ನು ಮುಖ್ಯಮಂತ್ರಿಗಳು ಮುಕ್ತಗೊಳಿಸುವ ಬಗ್ಗೆ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ,” ಎಂದಿದ್ದಾರೆ.

ಸರ್ಕಾರ ಅಂಕಿ-ಅಂಶಗಳ ಪ್ರಕಾರ ರಾಜ್ಯದ 205 ದೇವಾಲಯಗಳು ವಾರ್ಷಿಕ 25 ಲಕ್ಷ ರೂಪಾಯಿ ಆದಾಯ ತಂದು ಕೊಡುತ್ತವೆ. 139 ದೇವಸ್ಥಾನಗಳು ವಾರ್ಷಿಕ 10 ಲಕ್ಷ ರೂಪಾಯಿ ಮತ್ತು 34,219 ದೇವಾಲಯಗಳು ವಾರ್ಷಿಕ 5 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಸರ್ಕಾರಕ್ಕೆ ನೀಡುತ್ತವೆ.

ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳು ಕೋವಿಡ್ ಪೂರ್ವ ಸುಮಾರು 200 ಕೋಟಿ ರೂಪಾಯಿ ಆದಾಯ ಸರ್ಕಾರದ ಬೊಕ್ಕಸಕ್ಕೆ ಹರಿದು ಬಂದಿತ್ತು. ಅದರಲ್ಲಿ ಶೇ.90 ರಷ್ಟು ದೊಡ್ಡ ದೊಡ್ಡ ದೇವಾಲಯಗಳ ಕೊಡುಗೆ ಹೆಚ್ಚಿತ್ತು.

ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ಕಾಯ್ದೆ 1997 ಪ್ರಕಾರ 5-10 ಲಕ್ಷ ಆದಾಯವಿರುವ ದೇವಸ್ಥಾನಗಳ ನಿರ್ವಹಣೆಗೆ ಹಣವನ್ನು ಬಳಸಲಾಗುತ್ತದೆ. ಖರ್ಚು ವೆಚ್ಚದ ಇತಿಮಿತಿಯನ್ನು ಸೆಕ್ಷೆನ್ 19ರ ಪ್ರಕಾರ ಪೂರ್ವಾನುಮತಿಯೊಂದಿಗೆ ಬಳಸಲಾಗುತ್ತದೆ. ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಪ್ರತಿ ವರ್ಷ ಬಿಡುಗಡೆ ಮಾಡುವ ಹಣವನ್ನ ಸರ್ಕಾರದ ವಶದಲ್ಲಿರುವ ದೇವಾಲಯದ ಭೂಮಿ ಪರಿಹಾರಕ್ಕಾಗಿ, ದೇವಸ್ಥಾನಗಳ ಅಭಿವೃದ್ಧಿ ಮತ್ತು ತೀರ್ಥಯಾತ್ರೆಗೆ ಬಳಕೆಯಾಗುತ್ತಿದೆ.

ಕಳೆದ ತಿಂಗಳು ನಡೆದ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರವು ದೇವಸ್ಥಾನಗಳಲ್ಲಿ ಮೂಲಭೂತ ಸೌಕರ್ಯವನ್ನು ಹೆಚ್ಚಿಸಲು ರಾಜ್ಯ ಬಿಜೆಪಿ ಸರ್ಕಾರವು 125 ಕೋಟಿ ರೂಪಾಯಿ ಮಂಜೂರು ಮಾಡಿರುವುದಾಗಿ ಸದನದಲ್ಲಿ ಮಾಹಿತಿ ನೀಡಲಾಗಿತ್ತು. 2017-18ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 42 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದು ಇಲ್ಲಿಯವರೆಗೂ ಗರಿಷ್ಠವಾಗಿತ್ತು. ಬಿಜೆಪಿ ಸರ್ಕಾರವು ವಿವಿಧ ಮಠಗಳ ಅಭಿವೃದ್ದಿಗೆ 127 ಕೋಟಿ ರೂಪಾಯಿಗಳ ಅನುದಾನವನ್ನ ಬಿಡುಗಡೆ ಮಾಡಿದೆ.

ಒಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ದೇವಸ್ಥಾನಗಳನ್ನು ಸರ್ಕಾರ ಅಧೀನದಿಂದ ಮುಕ್ತಗೊಳಿಸುವ ಬಗ್ಗೆ ಯೋಚನೆ ಮಾಡಿರುವುದು ಒಂದು ವರ್ಗದ ಜನರಿಗೆ ಖುಷಿ ನೀಡಿದೆ. ಇದು ನಾಳೆ ಯಾವ ಪರಿಣಾಮಗಳನ್ನು ಸೃಷ್ಟಿಸಲಿದೆ ಎಂಬುದನ್ನು ಕಾದುನೋಡಬೇಕು.‌

Tags: Temples in Karnataka got highest allocation of funds under BJP in last 5 years
Previous Post

ಪಾದಯಾತ್ರೆ ಪಾಲಿಟಿಕ್ಸ್ : ಕಾಂಗ್ರೆಸಿಗೆ ಒಂದು ಪ್ರತ್ಯೇಕ ನಿಯಮ ಮಾಡಲು ಸಾಧ್ಯವಿಲ್ಲ – ಆರಗ ಜ್ಞಾನೇಂದ್ರ

Next Post

Watch : ದೆಹಲಿಯ ಚಾಂದಿನಿ ಚೌಕ್ನಲ್ಲಿ ಅಗ್ನಿ ಅವಘಡ : 80 ಹೆಚ್ಚು ಅಂಗಡಿಗಳು ಭಸ್ಮ

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
Watch : ದೆಹಲಿಯ ಚಾಂದಿನಿ ಚೌಕ್ನಲ್ಲಿ ಅಗ್ನಿ ಅವಘಡ : 80 ಹೆಚ್ಚು ಅಂಗಡಿಗಳು ಭಸ್ಮ

Watch : ದೆಹಲಿಯ ಚಾಂದಿನಿ ಚೌಕ್ನಲ್ಲಿ ಅಗ್ನಿ ಅವಘಡ : 80 ಹೆಚ್ಚು ಅಂಗಡಿಗಳು ಭಸ್ಮ

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada