• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಡದಿ ಹೋರಾಟಕ್ಕೆ ತಾತ್ಕಾಲಿಕ ವಿರಾಮ? ಜೆಡಿಎಸ್ ಪಾದಯಾತ್ರೆ ಮುಂದೂಡಿಕೆ ಸಾಧ್ಯತೆ

ಪ್ರತಿಧ್ವನಿ by ಪ್ರತಿಧ್ವನಿ
July 28, 2026
in Top Story
0
ಬಿಡದಿ ಹೋರಾಟಕ್ಕೆ ತಾತ್ಕಾಲಿಕ ವಿರಾಮ? ಜೆಡಿಎಸ್ ಪಾದಯಾತ್ರೆ ಮುಂದೂಡಿಕೆ ಸಾಧ್ಯತೆ
Share on WhatsAppShare on FacebookShare on Telegram

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜುಲೈ 31ರಿಂದ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್‌ನ ಪಾದಯಾತ್ರೆ ಮುಂದೂಡಲ್ಪಡುವ ಸಾಧ್ಯತೆಗಳು ಹೆಚ್ಚಾಗಿವೆ. ಇದೇ ವೇಳೆ, ಈ ವಿಚಾರದಲ್ಲಿ ಬಿಜೆಪಿ ಕೂಡ ತನ್ನ ಮುಂದಿನ ನಡೆ ಕುರಿತು ಚರ್ಚೆ ನಡೆಸುತ್ತಿದ್ದು, ಅಂತಿಮ ತೀರ್ಮಾನವನ್ನು ಇನ್ನಷ್ಟೇ ಪ್ರಕಟಿಸುವ ನಿರೀಕ್ಷೆಯಿದೆ.

ADVERTISEMENT

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ಮತ್ತು ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಪ್ರತ್ಯೇಕವಾಗಿ ಹೋರಾಟ ನಡೆಸುತ್ತಿವೆ. ಇದೇ ವೇಳೆ, ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿರುವ ಬಿಡದಿ ಭಾಗದ ರೈತರು ಕೂಡ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

Dk Shivakumar Delhi Meeting:  ಡಿಕೆಶಿ ನೇತೃತ್ವದಲ್ಲಿ ರಾಜ್ಯ ಸಂಸದರ ಸಭೆ #pratidhvani

ಜೆಡಿಎಸ್ ಈಗಾಗಲೇ ಜುಲೈ 31 ಹಾಗೂ ಆಗಸ್ಟ್ 1 ಮತ್ತು 2ರಂದು ಬಿಡದಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸುವುದಾಗಿ ಘೋಷಿಸಿತ್ತು. ಆದರೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡುವ ಚಿಂತನೆ ನಡೆದಿದೆ.

ಜುಲೈ 30ರಂದು ಚೆನ್ನಮ್ಮ ಅವರ ಅಂತ್ಯಕ್ರಿಯೆ ಹಾಗೂ ಸಂಬಂಧಿತ ಧಾರ್ಮಿಕ ಕಾರ್ಯಗಳು ನಡೆಯಲಿರುವುದರಿಂದ ದೇವೇಗೌಡರ ಕುಟುಂಬ ಮತ್ತು ಪಕ್ಷದ ಪ್ರಮುಖ ನಾಯಕರು ಆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಕಾರಣದಿಂದ ಅದರ ಮರುದಿನವೇ ಪಾದಯಾತ್ರೆ ಆರಂಭಿಸುವುದು ಸಾಧ್ಯವಾಗದ ಹಿನ್ನೆಲೆಯಲ್ಲಿ, ಪಾದಯಾತ್ರೆಯನ್ನು ಮುಂದೂಡಿ ಹೊಸ ದಿನಾಂಕ ಘೋಷಿಸುವ ಬಗ್ಗೆ ಜೆಡಿಎಸ್ ನಾಯಕರು ಚರ್ಚೆ ನಡೆಸುತ್ತಿದ್ದಾರೆ.

ಆಗಿನ ರಾಜಕಾರಣ ಬೇರೆ, ಈಗ ಎಲ್ಲದ್ದಕ್ಕೂ ಹಣವೇ ಮುಖ್ಯ..! | BK Hariprasad | pratidhvani

ಇತ್ತ, ಜೆಡಿಎಸ್‌ನ ನಿರ್ಧಾರ ಹಾಗೂ ಪ್ರಸ್ತುತ ರಾಜಕೀಯ ಬೆಳವಣಿಗೆಗಳನ್ನು ಗಮನಿಸುತ್ತಿರುವ ಬಿಜೆಪಿ ಕೂಡ ತನ್ನ ಪಾದಯಾತ್ರೆಯ ಬಗ್ಗೆ ಶೀಘ್ರದಲ್ಲೇ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧದ ಹೋರಾಟ ಮುಂದುವರಿದಿರುವ ಹಿನ್ನೆಲೆಯಲ್ಲಿ, ಜೆಡಿಎಸ್ ಮತ್ತು ಬಿಜೆಪಿ ಮುಂದಿನ ರಾಜಕೀಯ ಹೆಜ್ಜೆಗಳತ್ತ ರಾಜ್ಯದ ಗಮನ ಕೇಂದ್ರೀಕೃತವಾಗಿದೆ.

Tags: bengaluruBidadi FarmersBidadi NewsBidadi ProtestBidadi Townshipbjp karnatakaBreaking NewsChennamma Deve GowdaFarmers protestHD Deve GowdaHD KumaraswamyJDSkarnataka newsKarnataka Politicsland acquisitionlatest karnataka newsPadayatrapolitical protestRamanagara newsTownship Project
Previous Post

ಹೈಕಮಾಂಡ್‌ ಅಂಗಳದಲ್ಲಿ ಸಂಪುಟ ವಿಸ್ತರಣೆಯ ಚೆಂಡು : ಯಾರಿಗೆಲ್ಲ ಒಲಿಯಲಿದೆ ಮಂತ್ರಿಗಿರಿ?

Next Post

ರಾಷ್ಟ್ರಧ್ವಜಕ್ಕೆ ಅವಮಾನ, ಪ್ರಧಾನಿಗೆ ಅವಹೇಳನ ಆರೋಪ; ಸಿಜೆಪಿ–ಕಾಂಗ್ರೆಸ್ ವಿರುದ್ಧ ದೂರು

Related Posts

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ
Top Story

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಹಿರೇಬಾಗೇವಾಡಿಯಲ್ಲಿ ಪಂಜಿನ ಮೆರವಣಿಗೆ, ರಸ್ತೆ ತಡೆ ಪ್ರತಿಭಟನೆ

by ಪ್ರತಿಧ್ವನಿ
August 6, 2026
0

ಬೆಳಗಾವಿ: ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಬುಧವಾರ ಸಂಜೆ...

Read moreDetails
ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

August 5, 2026
 ‘ಜಸ್ಟಿಸ್ ಫಾರ್ ಮಾನಸ’ ಅಭಿಯಾನ ಆರಂಭ:ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ

 ‘ಜಸ್ಟಿಸ್ ಫಾರ್ ಮಾನಸ’ ಅಭಿಯಾನ ಆರಂಭ:ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ

August 5, 2026
ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

August 5, 2026
ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

August 5, 2026
Next Post
ರಾಷ್ಟ್ರಧ್ವಜಕ್ಕೆ ಅವಮಾನ, ಪ್ರಧಾನಿಗೆ ಅವಹೇಳನ ಆರೋಪ; ಸಿಜೆಪಿ–ಕಾಂಗ್ರೆಸ್ ವಿರುದ್ಧ ದೂರು

ರಾಷ್ಟ್ರಧ್ವಜಕ್ಕೆ ಅವಮಾನ, ಪ್ರಧಾನಿಗೆ ಅವಹೇಳನ ಆರೋಪ; ಸಿಜೆಪಿ–ಕಾಂಗ್ರೆಸ್ ವಿರುದ್ಧ ದೂರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada