• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಪ್ರೇತ ಸಿನಿಮಾದ ಆಡಿಯೋ ಲಾಂಚ್

ಪ್ರತಿಧ್ವನಿ by ಪ್ರತಿಧ್ವನಿ
November 2, 2023
in Top Story, ಸಿನಿಮಾ
0
ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಪ್ರೇತ ಸಿನಿಮಾದ ಆಡಿಯೋ ಲಾಂಚ್
Share on WhatsAppShare on FacebookShare on Telegram

ಪ್ರೇತ ಸಿನಿಮಾ ಮೂಲಕ ಕಲಾಕರ್ ಹರೀಶ್ ರಾಜ್ ಮತ್ತೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವುದು ಗೊತ್ತೇ ಇದೆ. ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಈ ಚಿತ್ರದ ಆಡಿಯೋ ಲಾಂಚ್ ಇತ್ತೀಚೆಗಷ್ಟೆ ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಜೆಸಿ ನಗರದಲ್ಲಿ ನಡೆದ ದಸರಾ ಸಂಭ್ರಮದಲ್ಲಿ ಸಚಿವರಾದ ಬೈರತಿ ಸುರೇಶ್ ತಮ್ಮದೇ ಕ್ಷೇತ್ರದ ಕಲಾವಿದರಾದ ಹರೀಶ್ ರಾಜ್ ನಟನೆಯ ಪ್ರೇತ ಸಿನಿಮಾದ ಆಡಿಯೋ ಲಾಂಚ್ ಮಾಡಿ ಶುಭ ಹಾರೈಸಿದ್ದಾರೆ. ಈ ವೇಳೆ ಕಾಂತಾರದ ಚೆಲುವೆ ಸಪ್ತಮಿ ಗೌಡ ವಿಶೇಷ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮದ ಮೆರಗು ಹೆಚ್ಚಿಸಿದರು.

ADVERTISEMENT

ಪ್ರೇತ ಸಿನಿಮಾದ ದೂರದ ಊರಿಗೆ ಎಂಬ ಹಾಡು HRP ಆಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯ ಬರೆದಿರುವ ಭಾವುಕ ಗೀತೆಗೆ ನವೀನ್ ಸಜ್ಜು ಧ್ವನಿಯಾಗಿದ್ದು, ಪ್ರವೀಣ್ ಶ್ರೀನಿವಾಸ್ ಮೂರ್ತಿ ಟ್ಯೂನ್ ಹಾಕಿದ್ದಾರೆ. ಹರೀಶ್ ರಾಜ್ ಹಾಗೂ ಅಹಿರಾ ಶೆಟ್ಟಿ ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಈಗಾಗಲೇ ಈ ಗಾನಬಜಾನ ಕೇಳುಗರ ಗಮನ ಸೆಳೆಯುತ್ತಿದೆ.

ಅಭಿನಯದ ಜೊತೆಗೆ ಡೈರೆಕ್ಷನ್​ನಲ್ಲಿಯೂ ಅನುಭವ ಹೊಂದಿರುವ ಹರೀಶ್ ರಾಜ್ ಅವರ ‘ಹರೀಶ್ ರಾಜ್ ಪ್ರೊಡಕ್ಷನ್’ನ ಐದನೇ ಕೊಡುಗೆ ಪ್ರೇತ. ಈ ಪ್ರೊಡಕ್ಷನ್ ಮೂಲಕ ಈಗಾಗಲೇ ‌ನಾಲ್ಕು ಸಿನಿಮಾಗಳು ನಿರ್ಮಾಣವಾಗಿದ್ದು, ಇದೀಗ ‘ಪ್ರೇತ’ ಸಿನಿಮಾವನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದಾರೆ. ಅವರೇ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಪ್ರೇತ ಪ್ಯಾನ್ ಇಂಡಿಯಾ ಸಿನಿಮಾ. ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿಬರುತ್ತಿದೆ. ವಿರಾಜಪೇಟೆ ಮತ್ತು ಮಡಿಕೇರಿ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

ಈವರೆಗೆ ‘ಕಲಾಕಾರ್’, ‘ಗನ್’, ‘ಶ್ರೀ ಸತ್ಯನಾರಾಯಣ’, ‘ಕಿಲಾಡಿ ಪೊಲೀಸ್’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು 3 ವರ್ಷದ ಗ್ಯಾಪ್​ ಬಳಿಕ ಮತ್ತೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ.ಶೀರ್ಷಿಕೆಯೇ ಹೇಳುವಂತೆ ‘ಪ್ರೇತ’ ಒಂದು ಹಾರರ್​ ಕಥೆಯುಳ್ಳ ಸಿನಿಮಾ. ಹರೀಶ್ ರಾಜ್​ ಅವರೇ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ. ಹರೀಶ್ ರಾಜ್​ ಜೊತೆ ಅಮೂಲ್ಯ ಭಾರದ್ವಾಜ್, ಅಹಿರಾ ಶೆಟ್ಟಿ, ಬಿ.ಎಂ. ವೆಂಕಟೇಶ್, ಅಮಿತ್ ಅವರು ಪಾತ್ರವರ್ಗದಲ್ಲಿ ಇದ್ದಾರೆ. ಕಿರಣ್ ಆರ್. ಹೆಮ್ಮಿಗೆ ಸಂಭಾಷಣೆ ಬರೆದಿದ್ದಾರೆ. ಶಿವಶಂಕರ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಪ್ರವೀಣ್ ಶ್ರೀನಿವಾಸ್ ಮೂರ್ತಿ ಅವರ ಸಂಗೀತ ಈ ಚಿತ್ರಕ್ಕಿದೆ. ಜೀವನ್ ಪ್ರಕಾಶ್ ಅವರು ಸಂಕಲನ, ಮಂಜು ಅವರು ಕಲಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಗೀತೆಗಳಿಗೆ ಪ್ರಮೋದ್ ಮರವಂತೆ ಅವರು ಸಾಹಿತ್ಯ ಬರೆದಿದ್ದಾರೆ.

Tags: audio launchBAIRATI SURESHPraveen Srinivas MurthyPretha movie
Previous Post

ಕಮಲ್ ‘ಇಂಡಿಯನ್-2’ಗೆ ಕಿಚ್ಚ ಸಾಥ್

Next Post

ಸಂಸದರ ಐಫೋನ್‌ ಕದ್ದಾಲಿಕೆ : ಕೇಂದ್ರದಿಂದ ಆಪಲ್‌ಗೆ ನೋಟಿಸ್

Related Posts

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
0

ಕನ್ನಡದ ಮೊದಲ ದಿನಪತ್ರಿಕೆ ಮಂಗಳೂರ ಸಮಾಚಾರ ಕ್ರೈಸ್ತ ಧರ್ಮ ಪ್ರಚಾರಕ್ಕೆ ಸ್ವಿಟ್ಜ್ ರ್ ಲೆಂಡ್ ನಿಂದ ಭಾರತಕ್ಕೆ ಆಗಮಿಸಿದ ಮಿಶನರಿಗಳು ಬಾಸೆಲ್ ಮಿಶನ್ ಎಂಬ ಒಂದು ಸಂಸ್ಥೆಯನ್ನು...

Read moreDetails
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ಸಂಸದರ ಐಫೋನ್‌ ಕದ್ದಾಲಿಕೆ : ಕೇಂದ್ರದಿಂದ ಆಪಲ್‌ಗೆ ನೋಟಿಸ್

ಸಂಸದರ ಐಫೋನ್‌ ಕದ್ದಾಲಿಕೆ : ಕೇಂದ್ರದಿಂದ ಆಪಲ್‌ಗೆ ನೋಟಿಸ್

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada