ಕಲಬುರಗಿ: ಕರ್ನಾಟಕದ ಹೆಮ್ಮೆಯ ಐತಿಹಾಸಿಕ ಸ್ಮಾರಕ ಮಳಖೇಡ ರಾಷ್ಟ್ರಕೂಟ ಕೋಟೆ ಗೋಡೆ ಕುಸಿದು ಬಿದ್ದಿದ್ದು, ಇತಿಹಾಸಕಾರರ ಆಕ್ರೋಶಕ್ಕೆ ಕಾರಣವಾಗಿದೆ.ಕಲಬುರಗಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಇದೇ ವೇಳೆ ಮಳಖೇಡ ರಾಷ್ಟ್ರಕೂಟ ಕೋಟೆ ಗೋಡೆ ಕುಸಿದುಬಿದ್ದಿದೆ.
ಮಳೆಯಿಂದಾಗಿ ಕೋಟೆಯ ಗೋಡೆಗಳಲ್ಲಿ ನೀರು ನಿಂತಿದ್ದು, ಶುಕ್ರವಾರ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು ಶನಿವಾರವೂ ಮಳೆ ಮುಂದುವರೆದಿದೆ.
ನಿಂರತ ಮಳೆಗೆ ಕೋಟೆ ಗೋಡೆಗಳು ತೇವಗೊಂಡಿದ್ದು, ಮಣ್ಣು ಸಡಿಲವಾಗಿ ಕಲ್ಲಿನ ಗೋಡೆ ಕುಸಿದುಬಿದ್ದಿದೆ. ಗೋಡೆ ಕುಸಿಯುತ್ತಿರುವ ವಿಡಿಯೋ ಸಾಮಾಜಿಕ ಲದ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಇನ್ನು ಗೋಡೆ ಕುಸಿತ ಪ್ರಕರಣದಿಂದ ಕೋಟೆ ಅಕ್ಕಪಕ್ಕದ ನಿವಾಸಿಗಳು ಆತಂಕಗೊಂಡು, ಬೆಚ್ಚಿಬಿದ್ದಿದ್ದಾರೆ. ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿಯಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
Our Karnataka's proud historical monument, the Malkhed Rashtrakuta Fort, has collapsed today. Authorities should monitor the situation and repair it as soon as possible. 😔🙏#gulbarga #kalaburagi @bykarthikreddy@PLEKarnataka @Kalaburgivarthe @KlbDistPolice @KlbCityPolice… pic.twitter.com/ICRxOWTirL
— Karnataka Portfolio (@karnatakaportf) August 31, 2024
ಜೀರ್ಣೋದ್ಧಾರ ಮಾಡಿದ್ದ ಸರ್ಕಾರ ರಾಷ್ಟ್ರಕೂಟರ ಕಾಲದಲ್ಲಿ ನಿರ್ಮಿಸಿದ್ದ ಕೋಟೆ ಐತಿಹಾಸಿಕವಾಗಿ ಮಹತ್ವ ಪಡೆದುಕೊಂಡಿದ್ದು, ರಾಷ್ಟ್ರಕೂಟರ ರಾಜ ಅಮೋಘವರ್ಷ ನೃಪತುಂಗ ಮಳಖೇಡ (ಮಾನ್ಯಖೇಟ) ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು. ಆಸ್ಥಾನದಲ್ಲಿದ್ದ ಕವಿ ಶ್ರೀವಿಜಯ ‘ಕವಿರಾಜ ಮಾರ್ಗ’ ಗ್ರಂಥ ಬರೆದಿದ್ದ. ಇದು ಕನ್ನಡದ ಮೊದಲ ಉಪಲಬ್ದ ಕೃತಿಯಾಗಿದೆ. ಇಂತಹ ಐತಿಹಾಸಿಕ ಚರೀತ್ರೆಯುಳ್ಳ ಮಳಖೇಡ ಕೋಟೆಯನ್ನು 2016-18ರ ಅವಧಿಯಲ್ಲಿ ಅಂದಿನ ಸಚಿವರಾಗಿದ್ದ ಡಾ.ಶರಣಪ್ರಕಾಶ ಪಾಟೀಲ ಅವರು 5 ಕೋಟಿ ರೂ ಅನುದಾನ ನೀಡಿ ಜೀರ್ಣೋದ್ಧಾರ ಮಾಡಿಸಿದ್ದರು.