• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರದ ಮುಚ್ಚುಮರೆ ನಡುವೆ ಹೊಸ ತಿರುವು ಪಡೆಯುವುದೇ ಬಿಟ್ ಕಾಯಿನ್ ಹಗರಣ

Shivakumar by Shivakumar
November 6, 2021
in ಕರ್ನಾಟಕ
0
ಬಿಟ್ ಕಾಯಿನ್ ಹಗರಣ: ಶ್ರೀಕಿ ನಡೆಸಿದ ವಹಿವಾಟಿನ ಮಾಹಿತಿ ಮುಚ್ಚಿಡುತ್ತಿರುವುದೇಕೆ?
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಬಿಟ್ ಕಾಯಿನ್ ಹಗರಣ ಇನ್ನು ಒಂದೆರಡು ದಿನಗಳಲ್ಲಿ ಮಹತ್ವದ ತಿರುವು ಪಡೆಯುವ ಸಾಧ್ಯತೆಗಳಿವೆ.

ಅದರಲ್ಲೂ ಆಡಳಿತ ಸರ್ಕಾರ ಮತ್ತು ಆಡಳಿತ ಪಕ್ಷದ ಚುಕ್ಕಾಣಿ ಹಿಡಿದ ಇಬ್ಬರು ಪ್ರಮುಖರ ಹೆಸರು, ಈ ಬಹುಕೋಟಿ ಹಗರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಜೊತೆ ತಳಕು ಹಾಕಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಕರಣ ತೀವ್ರ ಕುತೂಹಲ ಕೆರಳಿಸಿದೆ.

ಸರ್ಕಾರ ಮತ್ತು ಆಡಳಿತ ಪಕ್ಷದ ಸೂತ್ರಧಾರರೇ ಹಗರಣದ ರೂವಾರಿಗಳು, ವಾಸ್ತವವಾಗಿ ಪ್ರಮುಖ ಅರೋಪಿ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕಿಯೇ ತನಿಖಾಧಿಕಾರಿಗಳ ಮುಂದೆ ಈ ಬೆಚ್ಚಿಬೀಳಿಸುವ ಹೇಳಿಕೆ ನೀಡಿದ್ದು, ಆ ಇಬ್ಬರು ಸೂತ್ರಧಾರರೇ ತನ್ನನ್ನು ಬಳಸಿಕೊಂಡು ಸಾವಿರಾರು ಕೋಟಿ ಮೊತ್ತದ ಬಿಟ್ ಕಾಯಿನ್ ವಹಿವಾಟು ನಡೆಸಿದ್ದಾರೆ ಎಂದು ಆತ ಹೇಳಿದ್ದಾನೆ ಎಂಬ ಮಾಹಿತಿಗಳ ಹಿನ್ನೆಲೆಯಲ್ಲಿ ಪ್ರಕರಣ ಮಹತ್ವ ಪಡೆದುಕೊಂಡಿದೆ.

ಈ ನಡುವೆ ಪ್ರಕರಣ ಅಂತಹ ಗಂಭೀರತೆಯ ಹಿನ್ನೆಲೆಯಲ್ಲೇ ಪ್ರತಿಪಕ್ಷ ನಾಯಕರು ಆ ಕುರಿತ ತನ್ನ ವಾಗ್ದಾಳಿ ಮತ್ತು ಸರಣಿ ಸವಾಲುಗಳನ್ನು ತೀವ್ರಗೊಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ರಾಜಕಾರಣಿಗಳು ಯಾವ ಪಕ್ಷದವರೇ ಇರಲಿ ಅವರ ಹೆಸರುಗಳನ್ನು ಸರ್ಕಾರ ಕೂಡಲೇ ಬಹಿರಂಗಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಒತ್ತಾಯಿಸಿದ್ದರೆ, ಹಗರಣದ ಕುರಿತ ಮಹತ್ವದ ದಾಖಲೆಗಳನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರತಿಪಕ್ಷ ನಾಯಕರು ಸೋಮವಾರ ಹಗರಣದ ಕುರಿತ ಮಹತ್ತರವಾದ ದಾಖಲೆ ಬಿಡುಗಡೆ ಮಾಡಲಿದ್ದು, ಆ ಬಳಿಕ ಪ್ರಕರಣ ತೆಗೆದುಕೊಳ್ಳಲಿರುವ ತಿರುವು ಕುತೂಹಲ ಮೂಡಿಸಿದೆ.

ಈ ನಡುವೆ ಸರ್ಕಾರ ಕೂಡ ಸಿಸಿಬಿ ನಡೆಸಿದ ತನಿಖೆಯ ಮಾಹಿತಿಯಲ್ಲಿ ರಾಜಕಾರಣಿಗಳಿಗೆ ಸಂಬಂಧಿಸಿದ ವಿವರ, ಒಟ್ಟು ವಹಿವಾಟಿನ ಮಾಹಿತಿ, ಹ್ಯಾಕ್ ಮಾಡಿ ನಡೆಸಿದ ಆ ವಹಿವಾಟಿನ ಫಲಾನುಭವಿಗಳು ಯಾರು? ಆ ಫಲಾನುಭವಿಗಳಿಗೂ ಪ್ರಮುಖ ಆರೋಪಿ ಶ್ರೀಕಿಗೂ ಇರುವ ನಂಟು ಏನು, ಯಾವೆಲ್ಲಾ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ ಮತ್ತು ಹಾಗೆ ಹ್ಯಾಕ್ ಮಾಡಿ ದೋಚಿದ ಸಾವಿರಾರು ಕೋಟಿ ಮೌಲ್ಯದ ಬಿಟ್ ಕಾಯಿನ್ ಗಳನ್ನು  ಯಾರ ಖಾತೆಗಳಿಗೆ ಜಮಾ ಆಗಿವೆ? ಹಾಗೇ ಹ್ಯಾಕರ್ ಶ್ರೀಕಿ ಸರ್ಕಾರದ ಯಾವೆಲ್ಲಾ ಖಾತೆಗಳಿಂದ ಎಷ್ಟು ಹಣ ಹ್ಯಾಕ್ ಮಾಡಿದ್ದಾನೆ ಮತ್ತು ಹಾಗೆ ದೋಚಿದ ಸಾರ್ವಜನಿಕ ಹಣ ಈಗ ಏನಾಗಿದೆ? ಆ ಹಣ ವಾಪಸ್ ಪಡೆಯಲಾಗಿದೆಯೇ ? ಅಥವಾ ತನಿಖಾಧಿಕಾರಿಗಳಿಗೆ ಸಂಪೂರ್ಣ ವಹಿವಾಟು ಜಾಡು ಸಿಕ್ಕೇ ಇಲ್ಲವೇ? ಎಂಬ ಎಲ್ಲಾ ಪ್ರಶ್ನೆಗಳಿಗೆ ಮೂಕಸಾಕ್ಷಿಯಾಗಿದ್ದು, ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲು ಮುಂದಾಗಿಲ್ಲ.

ADVERTISEMENT

ಸರ್ಕಾರದ ಇಂತಹ ನಡೆ ಕೂಡ ಪ್ರತಿಪಕ್ಷಗಳ ಅರೋಪಗಳಿಗೆ ಪುಷ್ಟಿ ನೀಡುತ್ತಿದ್ಸು, ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಆ ಹಿನ್ನೆಲೆಯಲ್ಲಿ ಹಗರಣದಲ್ಲಿ ಭಾರತೀಯ ಜನತಾ ಪಕ್ಷದ ನಾಯಕರ ಪಾತ್ರದ ಕುರಿತು ಹಲವು ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿವೆ.  ಮುಖ್ಯವಾಗಿ ಬಿಜೆಪಿ ಸರ್ಕಾರ ತನ್ನ ನಾಯಕ ಮೋದಿಯವರು ಹೇಳುವಂತೆ “ನಾ ಖಾವೂಂಗಾ, ಖಾನೆದೂಂಗಾ…” ಎಂಬುದನ್ನು ನಿಜವಾಗಿಯೂ ಪಾಲಿಸುವುದೇ ಆದರೆ ಈ ಹತ್ತಾರು ಸಾವಿರ ಕೋಟಿ ರುಪಾಯಿ ಹಗರಣ ವಿಷಯದಲ್ಲಿ ಪಾರದರ್ಶಕವಾಗಿ ನಡೆದುಕೊಳ್ಳಬೇಕಿತ್ತು. ಆದರೆ ಹಗರಣ ವಿಷಯದ, ತನಿಖೆಯಲ್ಲಿ ಕಂಡುಬಂದ ಮಾಹಿತಿ, ಬಳಿಕ ಎಫ್ ಬಿಐ ಮತ್ತಿತರ ವಿದೇಶಿ ತನಿಖಾ ಸಂಸ್ಥೆಗಳು ಕೇಳಿದ ಮಾಹಿತಿ, ಸಿಬಿಐ ಇಂಟರ್ ಪೋಲ್ ಕೋರಿದ ಮಾಹಿತಿ, ಇಡಿ ತನಿಖೆಗೆ ವಹಿಸುವ ಪ್ರಸ್ತಾಪ, ಆರೋಪಿ ಶ್ರೀಕಿಯ ಹಿನ್ನೆಲೆ, ಆತನ ಕುಟುಂಬ ಹೊಂದಿರುವ ರಾಜಕಾರಣಿಗಳ ನಂಟು ಸೇರಿದಂತೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸದೇ ಮುಚ್ಚಿಡುತ್ತಿದೆ.

ಹಾಗೇ ಆರೋಪಿ ಶ್ರೀಕಿ ಜನ್ ಧನ್ ಖಾತೆಯ ಖಾತೆಗಳೂ ಸೇರಿದಂತೆ ಸರ್ಕಾರದ ವಿವಿಧ ಹಣಕಾಸು ವಹಿವಾಟಿನ ಖಾತೆಗಳನ್ನೂ ಹ್ಯಾಕ್ ಮಾಡಿ ದೋಚಿದ ಸಾರ್ವಜನಿಕ ಹಣದ ಕುರಿತ ಮಾಹಿತಿಯನ್ನು ಕೂಡ ಸರ್ಕಾರ ಮುಚ್ಚಿಡುತ್ತಿರುವುದು ಯಾಕೆ? ಎಷ್ಟು ಮೊತ್ತದ ಹಣವನ್ನು ಯಾವೆಲ್ಲಾ ಸರ್ಕಾರಿ ಖಾತೆಗಳಿಂದ ದೋಚಲಾಗಿದೆ? ಹಾಗೆ ದೋಚಿದ ಹಣವನ್ನು ಶ್ರೀಕಿ ಯಾರೆಲ್ಲಾ ಖಾತೆಗೆ ವರ್ಗಾಯಿಸಿದ್ದಾನೆ? ಹಾಗೆ ಶ್ರೀಕಿಯಿಂದ ಹಣ ಮತ್ತು ಬಿಟ್ ಕಾಯಿನ್ ವರ್ಗಾವಣೆ ಮಾಡಿಕೊಂಡ ವಂಚಕರು ಯಾರು? ಅವರಿಗೂ ಶ್ರೀಕಿಗು ಇರುವ ಸಂಬಂಧವೇನು? ಎಂಬ ಮಾಹಿತಿಯನ್ನು ಸರ್ಕಾರ ಯಾಕೆ ಮುಚ್ಚಿಡುತ್ತಿದೆ?

ಡಿಜಿಟಲ್ ಇಂಡಿಯಾದ ಘೋಷಣೆ ಮೂಲಕ ದೇಶದಲ್ಲಿ ಚಲಾವಣೆಯಲ್ಲಿದ್ದ 14 ಲಕ್ಷ ಕೋಟಿ ಮೊತ್ತದ ನೋಟುಗಳನ್ನು ಏಕಾಏಕಿ ರದ್ದು ಮಾಡಿ, ದೇಶದ ಕೋಟ್ಯಂತರ ಜನರನ್ನು ರಾತ್ರೋರಾತ್ರಿ ಸಂಕಷ್ಟಕ್ಕೆ ತಳ್ಳಿದ ಪ್ರಧಾನಿ ಮೋದಿಯವರ ಡಿಜಿಟಲ್ ಇಂಡಿಯಾ ಎಷ್ಟು ಸುರಕ್ಷಿತ ಎಂಬುದನ್ನೂ ಈ ಬಹುಕೋಟಿ ಹಗರಣ ಬಯಲುಮಾಡಿದೆ. ಹಾಗಾಗಿ ಅಂತಿಮವಾಗಿ ಈ ಹಗರಣದಲ್ಲಿ ಒಂದು ಕಡೆ ಬಿಜೆಪಿಯ ರಾಜ್ಯ ಸರ್ಕಾರ ಮತ್ತು ಪಕ್ಷದ ಸೂತ್ರಧಾರರ ಹೆಸರುಗಳು ತಳಕು ಹಾಕಿಕೊಂಡಿದ್ದರೆ, ಮತ್ತೊಂದು ಕಡೆ ಪ್ರಧಾನಿ ಮೋದಿಯವರ ಟಿಜಿಟಲ್ ಇಂಡಿಯಾ ಎಂಬ ಘೋಷಣೆಯನ್ನು ನಗೆಪಾಟಲಿಗೆ ಈಡು ಮಾಡಿದೆ.

ಹಾಗಾಗಿ, ಈ ಹಗರಣದ ವಿಷಯದಲ್ಲಿ ರಾಜ್ಯ ಬಿಜೆಪಿಯ ಇಬ್ಬರು ಪ್ರಮುಖರ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಜನರಿಗೆ ಉತ್ತರದಾಯಿಗಳಾಗಿ ವಾಸ್ತವಾಂಶವನ್ನು ಬಹಿರಂಗಪಡಿಸುವುದು ಬಿಜೆಪಿ ಸರ್ಕಾರದ ಹೊಣೆ. ಹಾಗೇ ಜನ್ ಧನ್ ಖಾತೆ ಸೇರಿದಂತೆ ವಿವಿಧ ಸರ್ಕಾರಿ ಖಾತೆಗಳಿಂದಲೇ ಹಣ ದೋಚಿದ ಹಿನ್ನೆಲೆಯಲ್ಲಿ ಡಿಜಿಟಲ್ ಇಂಡಿಯಾ ಘೋಷಣೆಯ ಸೂತ್ರಧಾರರು ಕೂಡ ನೈತಿಕ ಹೊಣೆ ಹೊರಬೇಕಿದೆ. ಸಾರ್ವಜನಿಕ ಹಣದ ಸುರಕ್ಷತೆಗೆ ಡಿಜಿಟಲ್ ಇಂಡಿಯಾದ ಕೊಡುಗೆ ಬಗ್ಗೆ ಮಾಹಿತಿ ನೀಡಬೇಕಿದೆ.

Tags: BitcoinBJPCBICBI inquiryCongress PartyCovid 19digitalisationEnforcement DirectoratefbiScamಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್ ಸರ್ಕಾರ ದಲಿತರ ಕಲ್ಯಾಣಕ್ಕಾಗಿ ಬಿಜೆಪಿಗಿಂತ ನಾಲ್ಕು ಪಟ್ಟು ಹೆಚ್ಚಿನ ಕೊಡುಗೆ ನೀಡಿದೆ: ರಾಮಲಿಂಗ ರೆಡ್ಡಿ

Next Post

ಗ್ರಾಮ ದೇವರಿಗೆ ಹಚಿದ ದೀಪವನ್ನು ಪ್ರತಿ ಮನೆಗಳಿಗೆ ತೆರಳಿ ಜ್ಯೋತಿ ಬೆಳಗುವ ಮೂಲಕ ದೀಪಾವಳಿಯನ್ನು ಆಚರಿಸಲಾಗುವುದು

Related Posts

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ
ಕರ್ನಾಟಕ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

by ಪ್ರತಿಧ್ವನಿ
February 1, 2026
0

ಬೆಳಗಾವಿ : ರಾಜಕೀಯ ಒತ್ತಡ, ಬೆದರಿಕೆಗಳು, ಗುಂಪು ಗಲಾಟೆಯ ನಡುವೆಯೂ ಅಕ್ರಮ ಗಣಿಗಾರಿಕೆಗೆ ತಲೆಬಾಗದೆ, ಸ್ಥಳದಲ್ಲೇ ಕಠಿಣ ಕ್ರಮ ಕೈಗೊಂಡ ಮಹಿಳಾ ಭೂ ವಿಜ್ಞಾನಿ ಬಿಂದನ್ ಪಾಟೀಲ...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post
ಗ್ರಾಮ ದೇವರಿಗೆ ಹಚಿದ ದೀಪವನ್ನು ಪ್ರತಿ ಮನೆಗಳಿಗೆ  ತೆರಳಿ ಜ್ಯೋತಿ  ಬೆಳಗುವ ಮೂಲಕ ದೀಪಾವಳಿಯನ್ನು ಆಚರಿಸಲಾಗುವುದು

ಗ್ರಾಮ ದೇವರಿಗೆ ಹಚಿದ ದೀಪವನ್ನು ಪ್ರತಿ ಮನೆಗಳಿಗೆ ತೆರಳಿ ಜ್ಯೋತಿ ಬೆಳಗುವ ಮೂಲಕ ದೀಪಾವಳಿಯನ್ನು ಆಚರಿಸಲಾಗುವುದು

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada