• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ ಜನತೆಗೆ ಭವಿಷ್ಯದ ಭರವಸೆ ನೀಡಿದ ಬಜೆಟ್‌: ಸಚಿವ ಡಾ.ಕೆ.ಸುಧಾಕರ್‌

ಪ್ರತಿಧ್ವನಿ by ಪ್ರತಿಧ್ವನಿ
February 17, 2023
in ಕರ್ನಾಟಕ
0
ರಾಜ್ಯದ ಜನತೆಗೆ ಭವಿಷ್ಯದ ಭರವಸೆ ನೀಡಿದ ಬಜೆಟ್‌: ಸಚಿವ ಡಾ.ಕೆ.ಸುಧಾಕರ್‌
Share on WhatsAppShare on FacebookShare on Telegram

ಬೆಂಗಳೂರು: ನವ ಕರ್ನಾಟಕದ ನಿರ್ಮಾಣದ ಗುರಿಯೊಂದಿಗೆ 2023 ನೇ ಸಾಲಿನ ಬಜೆಟ್‌ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ನಾಡಿನ ಜನತೆಗೆ ಭವಿಷ್ಯದ ಭರವಸೆ ನೀಡಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ADVERTISEMENT

ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ವಿವಿಧ ಸಮುದಾಯಗಳ ಸಬಲೀಕರಣ ಮೊದಲಾದವುಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದೂರದೃಷ್ಟಿ ತೋರಿದ್ದಾರೆ. ರೈತರಿಗೆ ನೀಡುವ ಶೂನ್ಯ ಬಡ್ಡಿ ದರದ ಸಾಲದ ಮಿತಿ 3 ರಿಂದ 5 ಲಕ್ಷ ರೂ.ಗೆ ಏರಿಕೆ, ಶಾಲಾ ಮಕ್ಕಳ ಸಾರಿಗೆಗಾಗಿ 100 ಕೋಟಿ ರೂ. ವೆಚ್ಚದಲ್ಲಿ ʼಮಕ್ಕಳ ಬಸ್ಸುʼ, ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ 9,698 ಕೋಟಿ ರೂ. ಅನುದಾನ, ಮೊದಲಾದ ಕ್ರಮಗಳು ಮುಖ್ಯಮಂತ್ರಿಯವರ ʼಕಾಮನ್‌ ಮ್ಯಾನ್‌ʼ ದೃಷ್ಟಿಯನ್ನು ತೋರಿದೆ. ಚುನಾವಣಾ ವರ್ಷದಲ್ಲಿ ಜನಪ್ರಿಯತೆಗೆ ಜೋತು ಬೀಳದೆ, ಕೇಂದ್ರದ ಮಾರ್ಗದರ್ಶನ ಹಾಗೂ ಸಹಯೋಗದಲ್ಲಿ ಡಬಲ್‌ ಎಂಜಿನ್‌ ಸರ್ಕಾರದ ಲಾಭವನ್ನು ಸರ್ವ ಜನತೆಯ ಕಲ್ಯಾಣಕ್ಕೆ ದೊರಕಿಸುವ ನಿಟ್ಟಿನಲ್ಲಿ ಇದು ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.

ʼಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯʼ ಎಂಬ ಸಂಕಲ್ಪದೊಂದಿಗೆ, ʼಮನೆ ಮನೆಗೆ ಆರೋಗ್ಯʼ ಕಾರ್ಯಕ್ರಮದಡಿ ಆರೋಗ್ಯ ಶಿಬಿರ, ಕೋಲಾರ, ಬಾಗಲಕೋಟೆ, ಯಾದಗಿರಿ, ರಾಮನಗರ ಮೊದಲಾದೆಡೆ ಕ್ರಿಟಿಕಲ್‌ ಕೇರ್‌ ಬ್ಲಾಕ್‌, ಮೆದುಳು ಆರೋಗ್ಯ ಯೋಜನೆಯನ್ನು 25 ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ ವಿಸ್ತರಣೆ, ಡಯಾಲಿಸಿಸ್‌ ಸೈಕಲ್‌ ಸಂಖ್ಯೆ 1 ಲಕ್ಷಕ್ಕೆ ಹೆಚ್ಚಳ, 6 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆಗೆ ʼವಾತ್ಸಲ್ಯʼ ಯೋಜನೆ, 129 ತಾಲೂಕು ಹಾಗೂ ಎಲ್ಲಾ ಜಿಲ್ಲೆಗಳಲ್ಲಿ ಲ್ಯಾಬ್‌ ಸ್ಥಾಪನೆ, ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ 720 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಆರೋಗ್ಯ ವಲಯಕ್ಕೆ ಭರಪೂರ ಕೊಡುಗೆಗಳನ್ನು ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ರೇಷ್ಮೆ ಬೆಳೆಗಾರರಿಗೆ ಕೊಡುಗೆ

ಏಷ್ಯಾದಲ್ಲಿಯೇ ಅತಿ ದೊಡ್ಡ 2 ನೇ ರೇಷ್ಮೆ ಮಾರುಕಟ್ಟೆಯನ್ನು ಶಿಡ್ಲಘಟ್ಟ ಹೊಂದಿದೆ. ಇಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್‌ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಿಸಲಾಗುತ್ತದೆ. ಇದು ಕೋಲಾರ, ಚಿಕ್ಕಬಳ್ಳಾಪುರ ಭಾಗದ ರೇಷ್ಮೆ ಬೆಳೆಗಾರರಿಗೆ ಸಂಭ್ರಮ ತಂದಿದೆ. 32 ರೀಲಿಂಗ್‌ ಘಟಕಗಳ ಸ್ಥಾಪನೆಗೆ 10 ಕೋಟಿ ರೂ., ಶ್ರೆಡ್ಡರ್ಸ್‌ಗಳಿಗಾಗಿ 12 ಕೋಟಿ ರೂ., ಹೀಗೆ ಮೊದಲಾದ ನೆರವು ಘೋಷಿಸಲಾಗಿದೆ. ರೇಷ್ಮೆ ಬೆಳೆಗಾರರ ಬದುಕಿಗೆ ಸುಧಾರಣೆಯ ಹೊಸ ನೋಟ ನೀಡಿದ ಮುಖ್ಯಮಂತ್ರಿಯವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.

ದ್ರಾಕ್ಷಿ ಬೆಳೆಗಾರರ ನೆರವಿಗೆ ದ್ರಾಕ್ಷಾರಸ ಮಂಡಳಿಯ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಇದು ಕೂಡ ಚಿಕ್ಕಬಳ್ಳಾಪುರ ಭಾಗದ ದ್ರಾಕ್ಷಿ ರೈತರಿಗೆ ಬಹಳ ಅನುಕೂಲವಾಗಲಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವಲ್ಲಿ ಕೆ.ಸಿ.ವ್ಯಾಲಿ ಯೋಜನೆ ಮಹತ್ವದ ಪಾತ್ರ ವಹಿಸಿದೆ. ಈ ಯೋಜನೆಯಿಂದ ಜಿಲ್ಲೆಯ ಅಂತರ್ಜಲದ ಪ್ರಮಾಣ ಕೂಡ ಹೆಚ್ಚಾಗಿದೆ. ಈ ನೀರನ್ನು ಇನ್ನಷ್ಟು ಮಟ್ಟಿಗೆ ಕೃಷಿಗೆ ಯೋಗ್ಯವಾಗಿಸಲು ತೃತೀಯ ಹಂತದ ಸಂಸ್ಕರಣಾ ಕ್ರಮಗಳನ್ನು ತರುವುದಾಗಿ ಬಜೆಟ್‌’ನಲ್ಲಿ ತಿಳಿಸಲಾಗಿದೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್‌, ಇದು ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್‌. ರಾಜ್ಯದ ಮಹಿಳೆಯರಿಗೆ ವರ್ಷಕ್ಕೆ 6 ಸಾವಿರ ರೂ. ನೀಡುವುದು ಐತಿಹಾಸಿಕ. ಬಜೆಟ್‌ ಗಾತ್ರ 3 ಲಕ್ಷ ಕೋಟಿ ರೂ.ಗೆ ತಲುಪಿರುವುದು ಕೂಡ ದಾಖಲೆ ಎಂದರು.

ಬಜೆಟ್‌ ಮಂಡನೆ ಆರಂಭಕ್ಕೆ ಮುನ್ನವೇ ಕಿವಿಗೆ ಹೂ ಇಟ್ಟುಕೊಂಡು ಬಂದವರಿಗೆ ನೈತಿಕತೆ ಇಲ್ಲ. ಪೂರ್ವಗ್ರಹಪೀಡಿತರಾದ ಸಿದ್ದರಾಮಯ್ಯನವರು ಸಿಎಂ ಆಗಿ ಬಜೆಟ್‌ ಮಂಡಿಸುವಾಗ ಯಾವುದಾದರೂ ವಿರೋಧ ಪಕ್ಷ ಹೀಗೆ ನಡೆದುಕೊಂಡಿತ್ತೇ? ಹೀಗೆ ವರ್ತಿಸುವುದು ಔಚಿತ್ಯವೇ? ಇವರು ಹೊಸ ಪರಂಪರೆಗೆ ನಾಂದಿ ಹಾಡಿದ್ದು, ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ. ಬಜೆಟ್‌ನ ಪರಂಪರೆಯನ್ನು ಕಾಂಗ್ರೆಸ್‌’ನವರು ಹಾಳು ಮಾಡಿದ್ದು, ಜನರೇ ಅವರ ಕಿವಿಗೆ ಹೂ ಇಡಲಿದ್ದಾರೆ ಎಂದರು.

Tags: Minister K Sudhakar
Previous Post

ಇದು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್‌: ಸಿದ್ದರಾಮಯ್ಯ

Next Post

ಮಹಾಶಿವರಾತ್ರಿಗೆ ಸಾಂಸ್ಕೃತಿಕ ನಗರಿ ಸಜ್ಜು: ತ್ರಿನೇಶ್ವರನಿಗೆ ಚಿನ್ನದ ಕೊಳಗ ಹಸ್ತಾಂತರ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಮಹಾಶಿವರಾತ್ರಿಗೆ ಸಾಂಸ್ಕೃತಿಕ ನಗರಿ ಸಜ್ಜು: ತ್ರಿನೇಶ್ವರನಿಗೆ ಚಿನ್ನದ ಕೊಳಗ ಹಸ್ತಾಂತರ

ಮಹಾಶಿವರಾತ್ರಿಗೆ ಸಾಂಸ್ಕೃತಿಕ ನಗರಿ ಸಜ್ಜು: ತ್ರಿನೇಶ್ವರನಿಗೆ ಚಿನ್ನದ ಕೊಳಗ ಹಸ್ತಾಂತರ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada