ಫೆಬ್ರವರಿ 16 ರಂದು ನಡೆಯಲಿರುವ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಾಗೂ ಮುಂಬರುವ ವಿಧಾನ ಪರಿಷತ್ ಚುನಾವಣೆಗಳಿಗೆ ಸಂಬಂಧಿಸಿದಂತೆ ಮಾನ್ಯ (BSYBJP) ಅವರ ನಿವಾಸದಲ್ಲಿ ಇಂದು ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾನ್ಯ (hdkumaraswamy)
ಅವರ ನೇತೃತ್ವದಲ್ಲಿ ಪ್ರಮುಖರೊಂದಿಗೆ ಮಾತುಕತೆ ನಡೆಸಲಾಗಿದೆ.
![](https://pratidhvani.com/wp-content/uploads/2024/01/IMG-20240121-WA0049-1024x682.webp)
ಈ ನಿಟ್ಟಿನಲ್ಲಿ ಕಾರ್ಯಕರ್ತರಲ್ಲಿ ಗೊಂದಲಕ್ಕೆ ಆಸ್ಪದ ಉಂಟಾಗದಂತೆ ಪರಿಷತ್ ಚುನಾವಣೆಗಳಲ್ಲಿ ಪರಸ್ಪರ ಒಮ್ಮತ ಹಾಗೂ ವಿಶ್ವಾಸದ ವಾತಾವರಣದಲ್ಲಿ ಚುನಾವಣೆ ಎದುರಿಸಲು ಆರೋಗ್ಯಕರ ಚರ್ಚೆ ನಡೆಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
![](https://pratidhvani.com/wp-content/uploads/2024/01/IMG-20240121-WA0048-1024x682.webp)
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ಕುಮಾರಸ್ವಾಮಿ, ವಿರೋಧ ಪಕ್ಷ ನಾಯಕರಾದ ಆರ್ ಅಶೋಕ್, ಮಾಜಿ ಉಪ ಮುಖ್ಯಮಂತ್ರಿಗಳಾದ ಕಾರಜೋಳ, ಅಶ್ವತ್ ನಾರಾಯಣ್, ಜೆಡಿಎಸ್ ಪಕ್ಷದ ನಾಯಕರುಗಳಾದ ಜಿ.ಟಿ ದೇವೇಗೌಡರು, ಬಂಡೆಪ್ಪ ಕಾಶಂಪೂರ್, ನಿಖಿಲ್ ಕುಮಾರಸ್ವಾಮಿ, MLC ಎಸ್.ಎಲ್ ಬೋಜೇಗೌಡರು, ಕೆ.ಎ ತಿಪ್ಪೇಸ್ವಾಮಿ ಅವರುಗಳು ಭಾಗವಹಿಸಿದ್ದರು.