ಯಾದಗಿರಿ : ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪರ್ವ ಜೋರಾಗಿದೆ. ಈ ಎಲ್ಲದರ ನಡುವೆ ಒಂದು ಲಕ್ಷ ರೂಪಾಯಿ ಮೌಲ್ಯದ 10 ಸಾವಿರ ನಾಣ್ಯಗಳನ್ನು ವ್ಯಕ್ತಿಯೊಬ್ಬ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದು ಎಲ್ಲರ ಗಮನ ಸೆಳೆದಿದೆ.
ಯಾದಗಿರಿಯ ರಾಮಸಮುದ್ರ ಗ್ರಾಮದ ಯೆಂಕಪ್ಪ ಈ ರೀತಿ ಭಿಕ್ಷೆ ಬೇಡಿದ ಹಣದಿಂದ ನಾಮಪತ್ರ ಸಲ್ಲಿಸಿದ್ದಾರೆ. ಯಾದಗಿರಿ ತಹಶೀಲ್ದಾರ್ ಕಚೇರಿಗೆ ತೆರಳಿದ ಅವರು 10 ಸಾವಿರ ನಾಣ್ಯಗಳನ್ನು ನೀಡಿದ್ದಾರೆ.
ಚುನಾವಣೆಗೆ ನಾಮಪತ್ರ ಸಲ್ಲಿಸಲು ಯೆಂಕಪ್ಪ ಸಾರ್ವಜನಿಕರಿಂದಲೇ ಹಣ ಸಂಗ್ರಹ ಮಾಡಿದ್ದಾರೆ. ರಥಯಾತ್ರೆ ನಡೆಸಿ ಒಂದು ಲಕ್ಷ ರೂಪಾಯಿ ಸಂಗ್ರಹಿಸಿದ್ದಾರೆ.