• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಸರ್ಕಾರವೇ ಅಡ್ಡಿ; ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
February 14, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕೆಟ್ಟ ಕೆಲಸ ಮಾಡುವುದರಲ್ಲಿ ಬಿಜೆಪಿಯವರು ಎತ್ತಿದ ಕೈ: ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿ

ADVERTISEMENT

“ಬಿಜೆಪಿಯವರು ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟನೆ ನಾಟಕ ಮಾಡುವ ಬದಲು ಕರ್ನಾಟಕದ ಪಾಲಿನ ತೆರಿಗೆ ಹಣ ಕೊಡಿಸಲಿ. ಒಳ್ಳೆಯ ಕೆಲಸ ಮಾಡದೇ ಇದ್ದರೂ ಕೆಟ್ಟ ಕೆಲಸ ಮಾಡುವುದರಲ್ಲಿ ಬಿಜೆಪಿಯವರು ಎತ್ತಿದ ಕೈ. ಕರ್ನಾಟಕದ ಅಭಿವೃದ್ದಿಗೆ ಕೇಂದ್ರ ಸರ್ಕಾರವೇ ಅಡ್ಡಿ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಕಿಡಿಕಾರಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸುರೇಶ್ ಅವರು ಶುಕ್ರವಾರ ಬೆಳಿಗ್ಗೆ ಮಾತನಾಡಿದರು.

ರಾಜ್ಯಗಳು ಹೆಚ್ಚಿನ ತೆರಿಗೆ ಪಾಲು ಕೇಳುವುದು ಸಣ್ಣತನ ಎನ್ನುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ರಾಜ್ಯಗಳ ಸಣ್ಣತನ ಎನ್ನುವುದಕ್ಕಿಂತ ರಾಜ್ಯಗಳ ಆರ್ಥಿಕ ಸ್ಥಿತಿಯನ್ನು ಕೇಂದ್ರ ಸರ್ಕಾರ ಹಾಳು ಮಾಡುತ್ತಿದೆ. ಇತರೇ ರಾಜ್ಯಗಳಲ್ಲಿ ನಮ್ಮ ತೆರಿಗೆ ಹಣವನ್ನು ಕೇಂದ್ರ ಬಿಜೆಪಿ ಸರ್ಕಾರ ವೃಥಾ ವ್ಯಯ ಮಾಡುತ್ತಿದೆ. ದಕ್ಷಿಣ ಭಾರತದಲ್ಲಿ ಎಲ್ಲವೂ ಬಿಜೆಪಿಯೇತರ ಸರ್ಕಾರಗಳೇ ಇವೆ. ದಕ್ಷಿಣ ಭಾರತಕ್ಕೆ ಸದಾ ಅನ್ಯಾಯ ಮಾಡಲಾಗುತ್ತಿದೆ. ಜನ ಎಚ್ಚೆತ್ತುಕೊಳ್ಳಬೇಕಾಗಿದೆ. ಅಭಿವೃದ್ದಿಗೆ ಹಣ ನೀಡದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವ ಬೆಂಗಳೂರಿಗೆ ಕೆಟ್ಟ ಹೆಸರು ತರಬೇಕು ಎನ್ನುವುದು ಬಿಜೆಪಿಯ ಹುನ್ನಾರ” ಎಂದರು.

ಮೆಟ್ರೋ ದರ ಏರಿಕೆ ಕಾಂಗ್ರೆಸ್ ಸರ್ಕಾರದ ವಿಚಾರ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ರಾಜ್ಯ ಮತ್ತು ಕೇಂದ್ರ ಸರ್ಕಾರಗಳು 10: 10 ಅನುಪಾತದಲ್ಲಿ ಅನುದಾನ ನೀಡಿವೆ. ಶೇ 80 ರಷ್ಟು ಅನುದಾನವನ್ನು ಕೇಂದ್ರ ಸರ್ಕಾರದ ಭದ್ರತೆ ಮೇಲೆ ಸಾಲ ನೀಡಲಾಗಿದೆ. ಇದರ ಭಾರವನ್ನು ರಾಜ್ಯ ಸರ್ಕಾರವೇ ಹೊರಬೇಕು. ಆದರೆ ಮೆಟ್ರೋ ನಿರ್ವಹಣೆ ಕೇಂದ್ರ ಸರ್ಕಾರ ಮಾಡುತ್ತದೆ” ಎಂದರು.

ರಾಜ್ಯದ ಮೇಲೆ ಪ್ರೀತಿ ಇದ್ದರೆ ಹೆಚ್ಚಿನ ಅನುದಾನ ನೀಡಿ:

“ಬೆಲೆ ಏರಿಕೆಯಲ್ಲಿ ರಾಜ್ಯ ಸರ್ಕಾರದ ಯಾವುದೇ ಕೈವಾಡವಿಲ್ಲ. ಕರ್ನಾಟಕದ ಮೇಲೆ ಪ್ರೀತಿ ಇದೆ ಎಂದಾದರೇ ಹೆಚ್ಚಿನ ಅನುದಾನ ನೀಡಿ ಕನ್ನಡಿಗರ ಮೇಲಿನ ಹೊರೆಯನ್ನು ಕಡಿಮೆ ಮಾಡಲಿ. ಶೇ10 ರಷ್ಟು ಅನುಪಾತದ ಬದಲು ಶೇ 40 ರಷ್ಟು ನೀಡಲಿ. ಅದರ ಬದಲು ಬಡ್ಡಿದರ ಕಟ್ಟಬೇಕು ಎಂದರೆ ಹೇಗೆ? ಇದನ್ನು ಎಲ್ಲಾ ನಿಗದಿ ಮಾಡಿರುವುದೇ ಕೇಂದ್ರ ಸರ್ಕಾರ. ಇದರ ಬಗ್ಗೆ ವಿರೋಧ ಮಾಡುತ್ತಿರುವ ಒಂದಷ್ಟು ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮುಂದೆ ಮಾತನಾಡಿ ಅನುದಾನ ಹೆಚ್ಚಿಸಲಿ” ಎಂದರು.

ರಾಜ್ಯ ಸರ್ಕಾರ ಪ್ರಧಾನಿಯವರಿಗೆ ಪತ್ರ ಬರೆದರೆ ಮೆಟ್ರೋ ದರ ಕಡಿಮೆಯಾಗುತ್ತದೆ ಎನ್ನುವ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ರಾಜ್ಯ ಸರ್ಕಾರ ಪತ್ರ ಏಕೆ ಬರೆಯಬೇಕು?. ನಮ್ಮ ಪಾಲಿನ ತೆರಿಗೆ ಹಣ ಕೇಳಿದ್ದೇವೆ ಅದನ್ನು ಕೊಡಿಸಲಿ. ಅವರ ನೈಪುಣ್ಯತೆ, ಬದ್ಧತೆಯನ್ನು ಈ ವಿಚಾರದಲ್ಲಿ ತೋರಿಸಲಿ” ಎಂದು ತಿರುಗೇಟು ನೀಡಿದರು.

ಮುನಿರತ್ನ ತಲೆಗೆ ಮೊಟ್ಟೆ ಏಟು ಬಿದ್ದು ತಲೆಕೆಟ್ಟು ಹೋಗಿದೆ

ಶಾಸಕ ಮುನಿರತ್ನ ಅವರು ಬೆಂಗಳೂರು ಅಭಿವೃದ್ಧಿಯಾಗುತ್ತಿಲ್ಲ. ಸುಮಾರು 20 ವರ್ಷಗಳ ಹಿಂದಕ್ಕೆ ಹೋಗಿದೆ. ಶೇ.35 ರಷ್ಟು ಲಂಚ ಕೇಳುತ್ತಿದ್ದಾರೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಲೋಕಸಭಾ ಸದಸ್ಯರಾದ ತಜ್ಞ ವೈದ್ಯರೊಬ್ಬರು ಮುನಿರತ್ನ ಅವರ ತಲೆಗೆ ಮೊಟ್ಟೆ ಏಟು ಬಿದ್ದು, ಆಸಿಡ್ ದಾಳಿಯಾಗಿ ಪೆಟ್ಟು ಬಿದ್ದಿದೆ. ತಲೆಗೆ ಏಟಾಗಿ ಒಂದೆರಡು ಇಂಚು ಒಳಗೆ ಹೋಗಿದೆ, ಹೀಗಾಗಿ ತಲೆಕೆಟ್ಟು ಹೋಗಿದೆ ಎಂದು ಹೇಳಿದ್ದರು. ಮತ್ತೊಮ್ಮೆ ಪರಿಶೀಲಿಸಿಕೊಳ್ಳಬೇಕು” ಎಂದು ವ್ಯಂಗ್ಯವಾಡಿದರು.

ಬೆಂಗಳೂರು ಹೈದರಾಬಾದ್ ಗಿಂತ ಹಿಂದಕ್ಕೆ ಉಳಿದಿದೆ, ಈ ಆರೋಪಗಳನ್ನು ಮಾಡಿರುವ ನನ್ನ ಮೇಲೆ ಮತ್ತೆ ಪ್ರಕರಣ ದಾಖಲಿಸಬಹುದು ಎನ್ನುವ ಮುನಿರತ್ನ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಮೊದಲೇ ಮಾಡಿಟ್ಟುಕೊಂಡಿರುವ ಕುತಂತ್ರಗಳನ್ನು ಈ ರೀತಿ ಸಾರ್ವಜನಿಕವಾಗಿ ತಿಳಿಸುತ್ತಿದ್ದಾರೆ. ಅವರು ನಡೆದು ಬಂದ ದಾರಿ ನೋಡಿದರೆ ಎಲ್ಲವೂ ತಿಳಿಯುತ್ತದೆ. ಅವರು ಯಾವ ಠಾಣೆಗಳಲ್ಲಿ ಇರುತ್ತಿದ್ದರು ಎನ್ನುವ ಇತಿಹಾಸವಿದೆ. ಈಗ ಪಲಾಯನ ಮಾಡಲು ಈ ರೀತಿಯ ಹೇಳಿಕೆಗಳನ್ನು ಮುಂಚಿತವಾಗಿಯೇ ನೀಡುತ್ತಿದ್ದಾರೆ” ಎಂದರು.

ಪಂಚತಾರ ಹೋಟೆಲ್ ಬಿಜೆಪಿ ಸಂಸ್ಕೃತಿ

ಪಂಚತಾರ ಹೋಟೆಲ್ ಅಲ್ಲಿ ಕುಳಿತುಕೊಂಡು ಶಿವಕುಮಾರ್ ಅವರು ಶೇ 35 ರಷ್ಟು ಕಮಿಷನ್ ಕೇಳುತ್ತಾರೆ ಎನ್ನುವ ಬಗ್ಗೆ ಕೇಳಿದಾಗ, “ಶಿವಕುಮಾರ್ ಅವರು ಪಂಚತಾರ ಹೋಟೆಲ್ ಗಳಿಗೆ ಹೋಗುವುದಿಲ್ಲ. ಅದೇನಿದ್ದರು ಬಿಜೆಪಿಯವರ ಸಂಸ್ಕೃತಿ. ಮುನಿರತ್ನ ಮೊದಲು ಅವರ ಮೇಲಿರುವ ಎಲ್ಲಾ ಆರೋಪಗಳಿಂದ ಮುಕ್ತರಾಗಿ ಹೊರಬರಲಿ ಆನಂತರ ಮಿಕ್ಕ ವಿಚಾರಗಳನ್ನು ಮಾತನಾಡೋಣ” ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯಾಗಿ ಆ ಸ್ಥಾನಕ್ಕೆ ಡಿ.ಕೆ.ಸುರೇಶ್ ಅವರು ಬರುತ್ತಾರೆ ಎನ್ನುವ ವಿಚಾರದ ಬಗ್ಗೆ ಕೇಳಿದಾಗ, “ನಾನು ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ. ಅಧ್ಯಕ್ಷರ ಬದಲಾವಣೆ ಎನ್ನುವುದು ಪಕ್ಷದ ವರಿಷ್ಠರ ತೀರ್ಮಾನ. ಇದಕ್ಕೆ ಅಧ್ಯಕ್ಷರು ಬದ್ಧವಾಗಿದ್ದಾರೆ, ಬೇರೆಯವರೂ ಬದ್ಧರಾಗಿ ಇರುತ್ತಾರೆ. ಇದನ್ನು ಬೇರೆಯವರು ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ನಾನು ಯಾವುದೇ ಸ್ಥಾನಗಳ ಆಕಾಂಕ್ಷಿಯಲ್ಲ. ಜನ ನನಗೆ ವಿಶ್ರಾಂತಿ ನೀಡಿದ್ದಾರೆ. ನಾನು ಈಗ ವಿಶ್ರಾಂತಿಯಲ್ಲಿದ್ದೇನೆ” ಎಂದರು.” ಎಂದರು.

ರಾಜ್ಯ ಉಸ್ತುವಾರಿಯೂ ಬದಲಾಗುತ್ತಿದ್ದಾರೆ ಎನ್ನುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನನಗೆ ಮಾಹಿತಿಯಿಲ್ಲ. ಇದು ಎಐಸಿಸಿ ಮಟ್ಟದಲ್ಲಿ ತೀರ್ಮಾನವಾಗುವ ವಿಚಾರ” ಎಂದರು.

ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಬೇಕು ಎನ್ನುವ ಸಿದ್ದರಾಮಯ್ಯ ಅವರ ಅಪೇಕ್ಷೆಯ ಬಗ್ಗೆ ಕೇಳಿದಾಗ, “ಅವರು ನಮ್ಮ ಶಾಸಕಾಂಗದ ನಾಯಕರು. ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯಿಲ್ಲ. ಆದರೆ ಬೇರೆಯವರು ಬೇರೆ ಬೇರೆ ರೀತಿ ವ್ಯಾಖ್ಯಾನಗಳನ್ನು ಮಾಡುತ್ತಿದ್ದಾರೆ. ಇದರ ಬಗ್ಗೆ ಯಾವುದೇ ಚರ್ಚೆಯಿಲ್ಲದೇ ಇರುವ ಕಾರಣ ಇದು ಅಪ್ರಸ್ತುತ ವಿಚಾರ” ಎಂದರು.

ದೇವೇಗೌಡರು ಮೋದಿಗೆ ಹತ್ತಿರವಿದ್ದಾರೆ

ಕಾವೇರಿ- ಗೋದಾವರಿ ಜೋಡಣೆ ಬಗ್ಗೆ ದೇವೇಗೌಡರ ಮಾತಿನ ಬಗ್ಗೆ ಕೇಳಿದಾಗ, “ಕಾವೇರಿ ಮತ್ತು ಗೋದಾವರಿ ನದಿ ಜೋಡಣೆ ಕನಸಿನ ಯೋಜನೆ. ಆದರೆ ಇಲ್ಲಿ ನಮ್ಮ ಕರ್ನಾಟಕ ರಾಜ್ಯದ ಪಾಲಿನ ನೀರು ಎಷ್ಟು ಎಂದು ಮೊದಲು ನಿಗದಿಯಾಗಲಿ. ಈ ಯೋಜನೆಯಿಂದ ಹೆಚ್ಚು ತಮಿಳುನಾಡು, ಆಂಧ್ರ, ತೆಲಂಗಾಣಕ್ಕೆ ಉಪಯೋಗವಾಗಲಿದೆ. ಇದು ಯಾವಾಗ ಅನುಷ್ಠಾನವಾಗುತ್ತದೆ ಎನ್ನುವ ಸ್ಪಷ್ಟತೆಯಿಲ್ಲ. ಈ ಎಲ್ಲಾ ವಿಚಾರಗಳ ಬಗ್ಗೆ ಮೊದಲು ಸ್ಪಷ್ಟತೆ ದೊರೆಯಲಿ. ದೇವೇಗೌಡರ ಕಾಳಜಿಯನ್ನು ಮೆಚ್ಚಬೇಕು. ಆದರೆ ಕರ್ನಾಟಕದ ಪಾಲಿನ ಬಗ್ಗೆ ಅವರು ಮಾತನಾಡಬೇಕಿತ್ತು. ಮೋದಿಯವರಿಗೆ ಹತ್ತಿರವಿರುವ ದೇವೇಗೌಡರು ನಮಗೆ ಹೆಚ್ಚಿನ ನೀರಿನ ಪಾಲನ್ನು ಕೊಡಿಸಬಹುದು” ಎಂದರು.

Tags: BJPDevaraj ArasDK Shivakumardk sureshHD DevegowdaKaveri-GodavariKPCCmpMunirathnanamma metroNarendra ModiPanchatara Hotelsiddaramaiah
Previous Post

ರಾಜಕೀಯ ಅಪರಾಧೀಕರಣ ಮತ್ತು ಪ್ರಜಾಪ್ರಭುತ್ವ

Next Post

ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಮಾಡ್ತೀನಿ

Related Posts

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ
ಇದೀಗ

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

by ಪ್ರತಿಧ್ವನಿ
January 28, 2026
0

ಮಹಾರಾಷ್ಟ್ರ: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅಸುನೀಗಿರುವುದಕ್ಕೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ,...

Read moreDetails
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
Next Post

ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಮಾಡ್ತೀನಿ

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada