• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಮಹಾದ್ರೋಹ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ

Any Mind by Any Mind
January 13, 2024
in ಕರ್ನಾಟಕ, ರಾಜಕೀಯ
0
ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಮಹಾದ್ರೋಹ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ
Share on WhatsAppShare on FacebookShare on Telegram

ಕೇಂದ್ರದಲ್ಲಿ ಆಡಳಿತ ನಡೆಸ್ತಿರೋ ಪಿಎಂ ಮೋದಿ(Narendra Modi) ನೇತೃತ್ವದ ಬಿಜೆಪಿ(BJP India) ಸರ್ಕಾರದ ವಿರುದ್ಧ ಕೈ ವಕ್ತಾರ ಲಕ್ಷ್ಮಣ್(M Lakshman) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ(State Government) ಮಹಾ ದ್ರೋಹವಾಗಿದೆ. 4.81 ಲಕ್ಷ ಕೋಟಿ ತೆರಿಗೆಯನ್ನ ಕೇಂದ್ರ ಸರ್ಕಾರ ಸಂಗ್ರಹ ಮಾಡುತ್ತದೆ. ಆದರೆ ಅನುದಾನ ಸರಿಯಾಗಿ ನೀಡುತ್ತಿಲ್ಲ ಎಂದು ಕೆಪಿಸಿಸಿ(KPCC) ವಕ್ತಾರ ಎಂ.ಲಕ್ಷ್ಮಣ್ ಕೆಂಡ ಕಾರಿದ್ದಾರೆ.

ADVERTISEMENT

ಮೈಸೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವ್ರು, ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ವಿವಿಧ ಮೂಲಗಳಿಂದ ಹರಿದು ಹೋಗುವ ಸಂಪನ್ಮೂಲಗಳ ವಿವರ ಮುಂದಿಟ್ಟ ಎಂ. ಲಕ್ಷ್ಮಣ್, ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಮಹಾ ದ್ರೋಹವಾಗಿದೆ. ಆದಾಯ ಮತ್ತು ಕಾರ್ಪೋರೇಟ್ ತೆರಿಗೆ 2.23 ಲಕ್ಷ ಕೋಟಿ. ಜಿಎಸ್ ಟಿ 1.40 ಲಕ್ಷ ಕೋಟಿ ರೂ. ಪೆಟ್ರೋಲ್, ಡೀಸೆಲ್ ಇಂಧನದ ಮೇಲೆ ವಿಧಿಸುವ ಸೆಸ್ ಚಾರ್ಜುಗಳಿಂದ 26 ರಿಂದ 30 ಸಾವಿರ ಕೋಟಿ ಸಂಗ್ರಹವಾಗುತ್ತದೆ. ರಾಜ್ಯ ವಲಯದಿಂದ ಸಂಗ್ರಹವಾಗುವ ಕಸ್ಟಮ್ ತೆರಿಗೆಗಳಿಂದ 30 ಸಾವಿರ ಕೋಟಿ. ಜಿಎಸ್ ಟಿ ಪ್ರತಿ ತಿಂಗಳು 15 ಸಾವಿರ ಕೋಟಿ ಸಂಗ್ರಹವಾಗುತ್ತಿದೆ. ಹೆದ್ದಾರಿ ಟೋಲ್ ಗಳಿಂದ 3 ಸಾವಿರ ಕೋಟಿ ಸಂಗ್ರಹವಾಗುತ್ತದೆ. ಇವೆಲ್ಲವನ್ನೂ ಸೇರಿಸಿ ಒಟ್ಟು 4.81 ಲಕ್ಷ ಕೋಟಿ ತೆರಿಗೆಯನ್ನ ಕೇಂದ್ರ ಸರ್ಕಾರ ಸಂಗ್ರಹ ಮಾಡುತ್ತದೆ. ಮಹಾರಾಷ್ಟ್ರದ ಬಳಿಕ ಟ್ಯಾಕ್ಸ್ ಕಟ್ಟುವ ಎರಡನೇ ರಾಜ್ಯ ನಮ್ಮದು. ಅದರಲ್ಲಿ ನಮಗೆ ಶೇ. 42 ರಷ್ಟು ವಾಪಸ್ ಕೊಡಬೇಕು. ಆದರೆ ಅವರು ಕೇವಲ 10% ನಷ್ಟನ್ನೂ ನಮಗೆ ಕೊಡುತ್ತಿಲ್ಲ. ಈ ಮೂಲಕ ನಮ್ಮ‌ ರಾಜ್ಯಕ್ಕೆ ಮಲತಾಯಿ ಧೋರಣೆ ತೋರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 10 ವರ್ಷಗಳಲ್ಲಿ10 ಲಕ್ಷ ಕೋಟಿ ಸಾಲ ಇತ್ತು. ಮೋದಿ ಪ್ರಧಾನಿಯಾದ ಬಳಿಕ 10 ವರ್ಷಗಳಲ್ಲಿ 123 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ದೇಶದ ಒಟ್ಟು ಸಾಲ 258 ಲಕ್ಷ ಕೋಟಿ ಒಟ್ಟು ಸಾಲ ಇದೆ. ದೇಶದ ಪ್ರತಿಯೊಬ್ಬ ಪ್ರಜೆ ಮೇಲೂ 4 ಲಕ್ಷ ಸಾಲ ಇದೆ. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ಕಾರ್ಪೋರೇಟ್ ಕಂಪನಿಗಳ 20 ಲಕ್ಷ ಕೋಟಿ ಸಾಲ ಮನ್ನಾ ಆಗಿದೆ. ರೈತರ ಸಾಲ ಮಾತ್ರ ಮನ್ನಾ ಮಾತ್ರ ಮಾಡಿಲ್ಲ. ರಾಜ್ಯಕ್ಕೆ ಕೇಂದ್ರ ದೊಡ್ಡ ದ್ರೋಹ ಮಾಡಿದೆ. ಅದನ್ನು ನಮ್ಮ‌ ಬಿಜೆಪಿ ನಾಯಕರು ಎಂದೂ ಪ್ರಶ್ನೆ ಮಾಡಿಲ್ಲ ಎಂದು ಎಂ.ಲಕ್ಷ್ಮಣ್ ಹರಿಹಾಯ್ದರು.

ಬರಪರಿಹಾರವನ್ನ ರಾಜ್ಯ ಸರ್ಕಾರ ಬಿಡುಗಡೆ ಮಾಡಿಲ್ಲ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಎಂ.ಲಕ್ಷ್ಮಣ್ , ನಮ್ಮ ಸರ್ಕಾರದ ವಿರುದ್ದ ಅನಾವಶ್ಯಕ ಅರೋಪ ಗಳನ್ನು ಮಾಡುತ್ತಾರೆ. ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುತ್ತಾರೆ. ರಾಜ್ಯದಲ್ಲಿ ಬರದಿಂದ 35,000ಕೋಟಿ ನಷ್ಟ ಆಗಿದೆ ಎಂದು ಕೇಂದ್ರ ಸಮಿತಿಯೇ ವರದಿ ಮಾಡಿದೆ, ಕೇಂದ್ರದಿಂದ ಬಿಡಿಗಾಸು ಅನುದಾನ ಬಂದಿಲ್ಲ. ಬಿಜೆಪಿ ನಾಯಕರು ಈ ವಿಚಾರ ಪ್ರಶ್ನೆ ಮಾಡೋದು ಬಿಟ್ಟು ಸರ್ಕಾರದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದೆ. ಇಡಿ ದೇಶದಲ್ಲೇ ಅಧಿಕಾರಕ್ಕೆ ಬಂದ 7 ತಿಂಗಳಲ್ಲಿ ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸಿದ ಸರ್ಕಾರ ನಮ್ಮ ಕಾಂಗ್ರೆಸ್ ಸರ್ಕಾರ ಎಂದು ಎದೆಯುಬ್ಬಿಸಿ ಹೇಳುತ್ತೇವೆ. ಇದನ್ನು ಸಹಿಸದೆ ಅನಾವಶ್ಯಕ ಆರೋಪ ಮಾಡುತ್ತಿದ್ದಾರೆ ಎಂದು ಗುಡುಗಿದರು.

Previous Post

ನಾನು ಯಾವತ್ತೂ ನನ್ನ ಎದುರಾಳಿಯನ್ನು ನೋಡಲ್ಲ: ಕಾಂಗ್ರೆಸ್‌ ನಾಯಕರಿಗೆ ಪ್ರತಾಪ್‌ ಸಿಂಹ ಟಾಂಗ್‌

Next Post

ಸಚಿವ ಎಂ.ಬಿ.ಪಾಟೀಲ ಕೊಟ್ಟ ಸುಳಿವು; ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; ₹2 ಕೋಟಿ ಮೌಲ್ಯದ ಸಾಮಗ್ರಿ ವಶ

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
Next Post
ಸಚಿವ ಎಂ.ಬಿ.ಪಾಟೀಲ ಕೊಟ್ಟ ಸುಳಿವು; ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; ₹2 ಕೋಟಿ ಮೌಲ್ಯದ ಸಾಮಗ್ರಿ ವಶ

ಸಚಿವ ಎಂ.ಬಿ.ಪಾಟೀಲ ಕೊಟ್ಟ ಸುಳಿವು; ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; ₹2 ಕೋಟಿ ಮೌಲ್ಯದ ಸಾಮಗ್ರಿ ವಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada