• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಹು ನಿರೀಕ್ಷಿತ “45” ಚಿತ್ರಕ್ಕೆ ಸಿಜೆ ಕೆಲಸ ಇನ್ನೂ ನಡೆಯುತ್ತಿದೆ. ಹಾಗಾಗಿ ಚಿತ್ರ ಬಿಡುಗಡೆ ವಿಳಂಬವಾಗಿದೆ ಹೆಸರಾಂತ ವಿ.ಎಫ್.ಎಕ್ಸ್ ತಂತ್ರಜ್ಞ ಯಶ್ ಗೌಡ ಹೇಳಿಕೆ .

ಪ್ರತಿಧ್ವನಿ by ಪ್ರತಿಧ್ವನಿ
August 21, 2025
in Top Story, ಕರ್ನಾಟಕ, ಸಿನಿಮಾ
0
ಬಹು ನಿರೀಕ್ಷಿತ “45” ಚಿತ್ರಕ್ಕೆ ಸಿಜೆ ಕೆಲಸ ಇನ್ನೂ ನಡೆಯುತ್ತಿದೆ. ಹಾಗಾಗಿ ಚಿತ್ರ ಬಿಡುಗಡೆ ವಿಳಂಬವಾಗಿದೆ ಹೆಸರಾಂತ ವಿ.ಎಫ್.ಎಕ್ಸ್ ತಂತ್ರಜ್ಞ ಯಶ್ ಗೌಡ ಹೇಳಿಕೆ .
Share on WhatsAppShare on FacebookShare on Telegram

ಕೆನಡಾದ ಪ್ರತಿಷ್ಠಿತ “MARZ” ಸಂಸ್ಥೆ ವಿ.ಎಫ್.ಎಕ್ಸ್ ಕಾರ್ಯ ನಿರ್ವಹಿಸುತ್ತಿರುವ ಮೊದಲ ಕನ್ನಡ ಚಿತ್ರವಿದು .

ADVERTISEMENT

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಯವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ “45” ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

Assembly: ಡಿಕೆಶಿ ಅವ್ರೇ ಜನ್ರ ಹತ್ರ ಮಾರುವೇಷದಲ್ಲಿ ಹೋಗಿ ಕೇಳಿ ಹೇಳ್ತಾರೆ ಎಂದ..Munirathna  #pratidhvani #dks

ಕೆಲವು ತಿಂಗಳ ಹಿಂದೆ ವಿಶೇಷ ಟೀಸರ್ ಮೂಲಕ ಚಿತ್ರತಂಡ ಆಗಸ್ಟ್ 15ರಂದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂಬ ವಿಷಯವನ್ನು ಹಂಚಿಕೊಂಡಿತ್ತು. ಕನ್ನಡದ ಮೂರು ಜನ ಹೆಸರಾಂತ ನಾಯಕನಟರ ಅಭಿಮಾನಿಗಳು ಈ ಸುದ್ದಿ ಕೇಳಿ ಸಂತಸಗೊಂಡು, ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದರು. ಕೆನಡಾದ ಪ್ರತಿಷ್ಠಿತ “MARZ” ಸಂಸ್ಥೆ ಈ ಚಿತ್ರಕ್ಕೆ ವಿ.ಎಫ್.ಎಕ್ಸ್ ಕಾರ್ಯ ನಿರ್ವಹಿಸುತ್ತಿದ್ದು, ಈ ಸಂಸ್ಥೆ ವಿ.ಎಫ್.ಎಕ್ಸ್ ಮಾಡುತ್ತಿರುವ ಮೊದಲ ಕನ್ನಡ ಚಿತ್ರವಿದು. ಈ ಚಿತ್ರಕ್ಕೆ ಹಾಲಿವುಡ್ ನ ಖ್ಯಾತ ತಂತ್ರಜ್ಞರಿಂದ ಸಿಜಿ ವರ್ಕ್ ನಡೆಯುತ್ತಿದ್ದು, ಇಂಡಿಯಾದಲ್ಲೇ ಅತೀ ಹೆಚ್ಚು ಸಿಜಿ(ವಿ.ಎಫ್.ಎಕ್ಸ್) ಅಳವಡಿಸಲಾಗುತ್ತಿರುವ ಮೊದಲ ಚಿತ್ರ ಕೂಡ ಇದು. ಹಾಗಾಗಿ ವಿ.ಎಫ್.ಎಕ್ಸ್ ಕಾರ್ಯ ಇನ್ನೂ ಪೂರ್ಣವಾಗಿರದ ಹಿನ್ನೆಲೆಯಲ್ಲಿ ಆಗಸ್ಟ್ 15 ರಂದು “45” ಚಿತ್ರ ಬಿಡುಗಡೆಯಾಲಿಲ್ಲ.‌

ಈ ಕುರಿತು ಮಾತನಾಡಿರುವ ಕೆನಡಾದ ಹೆಸರಾಂತ ವಿ.ಎಫ್.ಎಕ್ಸ್ ಸಂಸ್ಥೆ “MARZ” ಸಂಸ್ಥೆಯ ಮುಖ್ಯಸ್ಥ ಹಾಗೂ ತಂತ್ರಜ್ಞ ಯಶ್ ಗೌಡ, ನಮ್ಮ “MARZ” ಸಂಸ್ಥೆ ಸುಮಾರು ಹದಿನೈದು ವರ್ಷಗಳಿಂದ 500ಕ್ಕೂ ಅಧಿಕ ಹಾಲಿವುಡ್ ಚಿತ್ರಗಳಿಗೆ ವಿ.ಎಫ್.ಎಕ್ಸ್ ಕಾರ್ಯ ಮಾಡಿದೆ. ಸೂರಜ್ ಪ್ರೊಡಕ್ಷನ್ ಸಂಸ್ಥೆ‌ ಮೂಲಕ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ಹಾಗೂ ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅವರು ನಾಯಕರಾಗಿ ನಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ “45”ಗೆ ನಮ್ಮ ಸಂಸ್ಥೆ ವಿ.ಎಫ್.ಎಕ್ಸ್ ಕಾರ್ಯ ಮಾಡುತ್ತಿರುವುದು ನಮಗೆ ಹೆಮ್ಮೆ. ಇದು ನಮ್ಮ ಸಂಸ್ಥೆ ವಿ.ಎಫ್.ಎಕ್ಸ್ ಮಾಡುತ್ತಿರುವ ಮೊದಲ ಕನ್ನಡ ಚಿತ್ರ. ಈ ಚಿತ್ರದಲ್ಲಿ ಗ್ರಾಫಿಕ್ಸ್ ಮಹತ್ವದ ಪಾತ್ರ ವಹಿಸಲಿದೆ. ಆ ಕೆಲಸ ನಮ್ಮ “MARZ” ನಲ್ಲಿ ಬಿರುಸಿನಿಂದ ಸಾಗಿದೆ. ಗ್ರಾಫಿಕ್ ಕೆಲಸಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದರಿಂದ ಈ ಚಿತ್ರ ಆಗಸ್ಟ್ 15 ರಂದು ಬಿಡುಗಡೆ ಮಾಡಲು ಆಗಲಿಲ್ಲ. ಹಾಗಾಗಿ ಕನ್ನಡ ಸಿನಿಮಾ ಪ್ರೇಮಿಗಳಲ್ಲಿ ನಾವು ಕ್ಷಮೆ ಕೇಳುತ್ತೇವೆ. ಸೆಪ್ಟೆಂಬರ್ 16 ರ ಒಳಗೆ ವಿ.ಎಫ್.ಎಕ್ಸ್ ಕಾರ್ಯ ಮುಕ್ತಾಯವಾಗಲಿದೆ. ಆನಂತರ ಇನ್ನೊಂದು ತಿಂಗಳು ಕೆಲವು ಕೆಲಸಗಳಿರುತ್ತದೆ. ಅಕ್ಟೋಬರ್ 16 ರ ಒಳಗೆ ಚಿತ್ರ ತೆರೆಗೆ ಬರಲು ಸಿದ್ದವಾಗುತ್ತದೆ. ಚಿತ್ರ ಬಿಡುಗಡೆ ಸ್ವಲ್ಪ ತಡವಾದರೂ ಅತ್ಯುತ್ತಮ ತಂತ್ರಜ್ಞಾನದಿಂದ ಕೂಡಿರುವ ಚಿತ್ರವಾಗಿ “45” ನಿಮ್ಮ ಮುಂದೆ ಬರಲಿದೆ. ಬಿಡುಗಡೆ ದಿನಾಂಕವನ್ನು ನಿರ್ಮಾಪಕರು ಸದ್ಯದಲ್ಲೇ ತಿಳಿಸಲಿದ್ದಾರೆ ಎಂದು ಹೇಳಿದ್ದಾರೆ.

Tags: 45 Kannada Movie45 kannada movie release date45 kannada movie songs45 kannada movie teaser45 kannada movie trailer45 kannada movie update45 movie kannada trailerkannada best moviesKannada moviekannada movie makingkannada movie reviewkannada movie songskannada movie teaserkannada movieskannada new moviekannada new movieskaravali kannada moviekd kannada moviekd kannada movie songmaarutha kannada movienew kannada movierudhiram kannada movie
Previous Post

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

Next Post

ವಿಧಾನಸಭೆಯ ಮುಂಗಾರು ಅಧಿವೇಶನದ ನೇರ ಪ್ರಸಾರ – ದಿನ 8

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
Next Post

ವಿಧಾನಸಭೆಯ ಮುಂಗಾರು ಅಧಿವೇಶನದ ನೇರ ಪ್ರಸಾರ - ದಿನ 8

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada