• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೋದಿ-ಯೋಗಿ ನಡುವಿನ ಭಿನ್ನಮತಕ್ಕೆ ಕದನ ವಿರಾಮ, ಮತ್ತೊಂದು ಸುತ್ತಿನ ಪ್ರಹಸನ ಸಾಧ್ಯತೆ

ಯದುನಂದನ by ಯದುನಂದನ
June 9, 2021
in ದೇಶ
0
ಮೋದಿ-ಯೋಗಿ ನಡುವಿನ ಭಿನ್ನಮತಕ್ಕೆ ಕದನ ವಿರಾಮ, ಮತ್ತೊಂದು ಸುತ್ತಿನ ಪ್ರಹಸನ ಸಾಧ್ಯತೆ
Share on WhatsAppShare on FacebookShare on Telegram

ಕಳೆದ ವಾರ ಉತ್ತರ ಪ್ರದೇಶದ ರಾಜಕಾರಣದಲ್ಲಿ ದೊಡ್ಡ ಸಂಚಲನ‌ ಸೃಷ್ಟಿಯಾಗಿತ್ತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಡುವೆ ಭಾರೀ ಬಿರುಕು ಮೂಡಿದೆ. ತಕ್ಷಣವೇ ಅದನ್ನು ಸರಿಪಡಿಸದಿದ್ದರೆ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲಬೇಕಾಗುತ್ತದೆ ಎಂಬ ಕಾರಣಕ್ಕೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರು ಮೋದಿ ಮತ್ತು ಯೋಗಿ ನಡುವಿನ‌ ಕಂದಕ ಮುಚ್ಚಲು ಸಾಕಷ್ಟು ಬೆವರು ಹರಿಸಿದರು. ಇಷ್ಟೆಲ್ಲಾ ಕಸರತ್ತಿನ ಬಳಿಕ ಮಾಧ್ಯಮಗಳಿಗೆ ಸಂದರ್ಶನ ನೀಡಿದ ಯೋಗಿ ಆದಿತ್ಯನಾಥ್ ‘ಬಿಜೆಪಿಯಲ್ಲಿ ಬಿರುಕು ಉಂಟಾಗಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ’ ಎಂದು ಹೇಳಿದ್ದರು. ಇತರೆ ಬಿಜೆಪಿ ನಾಯಕರು ‘ಇದು ಮುಗಿದ ಅಧ್ಯಾಯ, ಎಲ್ಲವೂ ಸರಿಹೋಯಿತು’ ಎಂದು ಹೇಳಿ ಉತ್ತರ ಪ್ರದೇಶದ ಪ್ರಹಸನಕ್ಕೆ ಇತಿಶ್ರೀ ಹಾಡಲು ಯತ್ನಿಸಿದರು.

ADVERTISEMENT

ಆದರೆ, ದೆಹಲಿ ಮತ್ತು ಉತ್ತರ ಪ್ರದೇಶ ಬಿಜೆಪಿ ನಾಯಕರ ಪ್ರಕಾರ ಸಮಸ್ಯೆ ಸಂಪೂರ್ಣವಾಗಿ ಬಗೆಹರಿದಿಲ್ಲ. ಬೆಂಕಿ‌ ಸಂಪೂರ್ಣವಾಗಿ ಆರಿಲ್ಲ. ಸದ್ಯ ಆರ್‌ಎಸ್‌ಎಸ್ ನಾಯಕರ ಮಧ್ಯ ಪ್ರವೇಶದಿಂದ ಕದನ ವಿರಾಮ ಘೋಷಿಸಲಾಗಿದೆಯಷ್ಟೇ. ಮೋದಿ ಮತ್ತು ಯೋಗಿ ನಡುವಿನ ಭಿನ್ನಮತ ಭುಗಿಲೇಳಲು ಕಾರಣವಾಗಿದ್ದ ಉತ್ತರ ಪ್ರದೇಶ ಸಂಪುಟ ಪುನರ್ರಚನೆ ಬಿಕ್ಕಟ್ಟು ಕೂಡ ಬಗೆಹರಿದಿಲ್ಲ.

ಸಮಸ್ಯೆ ಬಗೆಹರಿಸಲು ದೆಹಲಿಯ ಬಿಜೆಪಿ ನಾಯಕರು ಮತ್ತು ನಾಗಪುರದ ಆರ್‌ಎಸ್‌ಎಸ್ ಮುಖಂಡರು ಇನ್ನಷ್ಟು ಕಸರತ್ತು ನಡೆಸಬೇಕಾಗುತ್ತದೆ. ಆದರಿದು ಸೂಕ್ತ ಸಮಯವಲ್ಲ. ಈಗಾಗಲೇ ಬಿಜೆಪಿ ಮೇಲೆ ‘ಕರೋನಾದಿಂದ ಜನ ಸಾಯುತ್ತಿದ್ದರೂ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ’ ಎಂಬ ಆರೋಪ ಕೇಳಿಬರುತ್ತಿದೆ. ಆದುದರಿಂದ ಸಾಧ್ಯವಾದಷ್ಟು ಸಮಸ್ಯೆಯನ್ನು ಸದ್ದಿಲ್ಲದಂತೆ ಬಗೆಹರಿಸಬೇಕು ಮತ್ತು ಕರೋನಾ ಬಗೆಗಿನ ಚರ್ಚೆ ಕಡಿಮೆ ಆಗುವವರೆಗೆ ಕಾಯಬೇಕು ಎಂದು ಕದನ ವಿರಾಮ ಘೋಷಿಸಲಾಗಿದೆಯಂತೆ.

ಉದಾಹರಣೆಗೆ ಉತ್ತರ ಪ್ರದೇಶದ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಸಿಂಗ್ ವಾರಾಂತ್ಯದಲ್ಲಿ ಯೂಪಿ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಆ ಸಂದರ್ಭದಲ್ಲಿ ಅವರು ರಾಜ್ಯಪಾಲರಿಗೆ ಲಕೋಟೆಯೊಂದನ್ನು ನೀಡಿದ್ದಾರೆ. ಅದು ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಶಾಸಕರಿಂದ ನಡೆಸಿರುವ ಸಹಿ ಸಂಗ್ರಹದ ವಿವರ ಎಂದು ಹೇಳಲಾಗುತ್ತಿದೆ. ಇದರಿಂದ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿ ಪಟ್ಟದಿಂದ ಕೆಳಗೆ ಇಳಿಸುವ ಪ್ರಯತ್ನಗಳು ನಡೆಯುತ್ತಿರಬಹುದು ಎಂಬ ಸುದ್ದಿಗಳು ಸರಿದಾಡುತ್ತಿವೆ.‌ ಆದರೆ ಅಭಿವೃದ್ಧಿ ಅಜೆಂಡಾವನ್ನು ಗಂಗಾ ನದಿಯಲ್ಲಿ ತೇಲಿ ಬಿಟ್ಟಿರುವ (ಬೇಕಿದ್ದರೆ ಶವಗಳ ಜೊತೆ ಎಂದು ಸೇರಿಸಿಕೊಳ್ಳಬಹುದು) ಬಿಜೆಪಿಗೆ ಈಗ ಉತ್ತರ ಪ್ರದೇಶದಲ್ಲಿ ಮತ್ತೆ ಜನರ ಮುಂದೆ ಹೋಗಲು ಉಳಿದಿರುವುದು ಅವರ ಅದೇ ಹಳೆಯ ಹಿಂದುತ್ವದ ಅಜೆಂಡಾ. ಯೋಗಿ ಆದಿತ್ಯನಾಥ್ ಬಿಜೆಪಿ ಹಿಂದುತ್ವದ ಐಕಾನ್. ಆದುದರಿಂದ ಏನೇ ಸಮಸ್ಯೆಯಾದರೂ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಆಗಿ ಮುಂದುವರೆಯುವುದು ಬಹುತೇಕ ನಿಶ್ಚಿತವಾಗಿದೆ.

ವೆರೈಟಿ ವೆರೈಟಿ ವದಂತಿಗಳು

ಯೋಗಿ-ಮೋದಿ ನಡುವೆ ಮುನಿಸು ಇದೆ, ಯೋಗಿ ಬದಲಾಗುತ್ತಾರೆ, ಬದಲಾಗಲ್ಲ ಎಂದಷ್ಟೇಯಲ್ಲ ಇನ್ನೂ ಹತ್ತು ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ. ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಉತ್ತರಪ್ರದೇಶದ ಸಂಪುಟ ಪುನರ್ರಚನೆ ಆಗಲಿದೆ. ಮೋದಿಯವರ ಆಪ್ತ ಮಾಜಿ ಅಧಿಕಾರಿ ಎ.ಕೆ. ಶರ್ಮಾ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೆ ಮೋದಿ-ಯೋಗಿ ನಡುವೆ ವಿರಸ ಉಂಟಾಗುತ್ತದೆ. ಮೋದಿ ತಮ್ಮ ಪ್ರಭಾವ ಬಳಸಿ ಎ.ಕೆ. ಶರ್ಮಾ ಅವರನ್ನು ಸಂಪುಟಕ್ಕೆ ಸೇರಿಸಬಹುದು. ಆದರೆ ಸೋಷಿಯಲ್ ಮೀಡಿಯಾ ವೆಬ್ ಸೈಟ್ ಗಳಿಂದ ಮೋದಿ ಫೋಟೋವನ್ನೇ ತೆಗಸಿದ ಯೋಗಿ ಸುಲಭದಲ್ಲಿ ಸೋಲನ್ನು ಒಪ್ಪಿಕೊಳ್ಳುವುದಿಲ್ಲ. ಒತ್ತಡಕ್ಕೆ ಮಣಿದು ಎ‌.ಕೆ. ಶರ್ಮಾ ಅವರನ್ನು ಮಂತ್ರಿಯನ್ನಾಗಿ ನೇಮಿಸಿಕೊಂಡರೂ ಅಧಿಕಾರ ಕೊಡುವುದಿಲ್ಲ. ಇನ್ನೊಂದೆಡೆ ಪ್ರಮುಖ ಖಾತೆ ಪಡೆದು ಪರೋಕ್ಷವಾಗಿ ಎ.ಕೆ. ಶರ್ಮಾ ಅವರನ್ನು ಮುನ್ನಲೆಗೆ ತರಲು ಮೋದಿ-ಶಾ ಜೋಡಿ ಯತ್ನಿಸುತ್ತಾರೆ. ಈ ಮೂಲಕ ಬಿಜೆಪಿಯ ಆಂತರಿಕ ಕಲಹ ಮುಂದುವರೆಯಬಹುದು. ಹೀಗೆ ನಾನಾ ರೀತಿಯ ವದಂತಿಗಳಿವೆ ವಾಸ್ತವ ಏನೆಂದು ಗೊತ್ತಾಗಲು ಸ್ವಲ್ಪ ಸಮಯ ಬೇಕಾಗುತ್ತದೆ.

ಮುಂದಿನ ಸುತ್ತಿನಲ್ಲಿ ಸಮಸ್ಯೆ ಬಗೆಹರಿಯುವ ಸಾಧ್ಯತೆ

ಕರೋನಾ ಕಷ್ಟ ಪ್ರಧಾನಿ ಮೋದಿ ಮತ್ತು ಯೋಗಿ ಇಬ್ಬರನ್ನೂ ಸಮಾನವಾಗಿ ಕಾಡುತ್ತಿದೆ. ಸದ್ಯ ಮೋದಿ-ಯೋಗಿ ಸಮಾನ ಸಾಮರ್ಥ್ಯ ಉಳ್ಳವರು ಎಂದು ಹೇಳಲಾಗುತ್ತಿದೆ. ಬಿಜೆಪಿಯ ಮಾರ್ಗದರ್ಶಕ ಸಂಸ್ಥೆ ಆರ್‌ಎಸ್‌ಎಸ್ ಗೆ 2022ರಲ್ಲಿ ಉತ್ತರ ಪ್ರದೇಶ ಗೆಲ್ಲಲು ಯೋಗಿ ಆದಿತ್ಯನಾಥ್ ಬೇಕು. 2024ರಲ್ಲಿ ದೆಹಲಿಯಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಮೋದಿಯೂ ಬೇಕಾಗಿದೆ.‌ ಇದೇ ಕಾರಣಕ್ಕೆ ದತ್ತಾತ್ರೇಯ ಹೊಸಬಾಳೆ ಅವರೇ ಖುದ್ದು ಅಖಾಡಕ್ಕಿಳಿದು ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದಾರೆ‌‌. ಆದರೂ ಪ್ರಯೋಜನ ಆಗುತ್ತಿಲ್ಲ. ಕರೋನಾ ಕಡಿಮೆ ಆದ ಮೇಲೆ, ಎಲ್ಲಕ್ಕಿಂತ ಹೆಚ್ಚಾಗಿ ಚುನಾವಣೆ ಸಮೀಪಿಸುತ್ತಿದಂತೆ ಅನಿವಾರ್ಯವಾಗಿ ಮೋದಿ-ಯೋಗಿ ರಾಜಿ ಆಗಬಹುದು ಎಂಬ ನಿರೀಕ್ಷೆ ಬೆಳಸಿಕೊಂಡಿದೆ‌. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರ ನಿರೀಕ್ಷೆಯಂತೆ ಉತ್ತರ ಪ್ರದೇಶ ಬಿಜೆಪಿ ಬಿಕ್ಕಟ್ಟಿನ ಬಗ್ಗೆ ಅಥವಾ ಮೋದಿ-ಯೋಗಿ ನಡುವಿನ ಭಿನ್ನತದ ಬಗ್ಗೆ ಕಾಲವೇ ನಿರ್ಧರಿಸಬೇಕಾಗಿದೆ‌

Previous Post

ಸಂಕಷ್ಟದ ಪರಿಸ್ಥಿತಿಯನ್ನೇ ಅಧಿಕಾರಕ್ಕೇರಲು ಏಣಿ ಮಾಡಿಕೊಳ್ಳುತ್ತಿವೆ- ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಕೆ ವಾಗ್ಧಾಳಿ

Next Post

ಆದಿತ್ಯನಾಥ್ ಆಪ್ತ ಸಹಾಯಕ ಅನೂಪ್ ಪಾಂಡೆ ಚುನಾವಣಾ ಆಯುಕ್ತರಾಗಿ ಆಯ್ಕೆ; ಪ್ರತಿಪಕ್ಷಗಳಿಂದ ಪ್ರಶ್ನೆಗಳ ಸುರಿಮಳೆ.!

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

December 1, 2025
Next Post
ಆದಿತ್ಯನಾಥ್ ಆಪ್ತ ಸಹಾಯಕ ಅನೂಪ್ ಪಾಂಡೆ ಚುನಾವಣಾ ಆಯುಕ್ತರಾಗಿ ಆಯ್ಕೆ; ಪ್ರತಿಪಕ್ಷಗಳಿಂದ ಪ್ರಶ್ನೆಗಳ ಸುರಿಮಳೆ.!

ಆದಿತ್ಯನಾಥ್ ಆಪ್ತ ಸಹಾಯಕ ಅನೂಪ್ ಪಾಂಡೆ ಚುನಾವಣಾ ಆಯುಕ್ತರಾಗಿ ಆಯ್ಕೆ; ಪ್ರತಿಪಕ್ಷಗಳಿಂದ ಪ್ರಶ್ನೆಗಳ ಸುರಿಮಳೆ.!

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada