• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಲಿಂಗಾಯತರನ್ನು ಕೆಣಕಿದ್ದ ಕಾಂಗ್ರೆಸ್​, ಈಗ ಪಂಚಮಸಾಲಿಗಳ ಸರದಿ..!

ಕೃಷ್ಣ ಮಣಿ by ಕೃಷ್ಣ ಮಣಿ
January 26, 2023
in ರಾಜಕೀಯ
0
ಲಿಂಗಾಯತರನ್ನು ಕೆಣಕಿದ್ದ ಕಾಂಗ್ರೆಸ್​,  ಈಗ ಪಂಚಮಸಾಲಿಗಳ ಸರದಿ..!
Share on WhatsAppShare on FacebookShare on Telegram

2013ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದ ಕಾಂಗ್ರೆಸ್​ ಪಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ಉತ್ತಮ ಆಡಳಿತವನ್ನೂ ನೀಡಿತ್ತು. 5 ವರ್ಷಗಳಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿ ಸಿದ್ದರಾಮಯ್ಯ ಉತ್ತಮ ಆಡಳಿತಗಾರ ಎನಿಸಿಕೊಂಡಿದ್ದರು. ಆದರೆ ಕೊನೆಯಲ್ಲಿ ಸರ್ಕಾರ ತೆಗೆದುಕೊಂಡ ನಿರ್ಣಯ ಸರ್ಕಾರ ಸೋಲುಂಡು ವಿಪಕ್ಷ ಸ್ಥಾನವನ್ನು ಸೆರುವಂತಾಯ್ತು. ನಾನು ಧರ್ಮವನ್ನು ಒಡೆಯುವುದಕ್ಕೆ ಮುಂದಾಗಿಲ್ಲ ಎಂದು ಸಿದ್ದರಾಮಯ್ಯ ಪರಿಪರಿಯಾಗಿ ಕೇಳಿಕೊಂಡರೂ ಜನರು ಕೇಳಿಸಿಕೊಳ್ಳುವ ವ್ಯವದಾನ ತೋರಿಸಲಿಲ್ಲ. ಸಿದ್ದರಾಮಯ್ಯ ಲಿಂಗಾಯತ ಹಾಗು ವೀರಶೈವ ಸಮುದಾಯಗಳನ್ನು ಬೇರೆ ಬೇರೆ ಮಾಡಲು ಪ್ರಯತ್ನಿಸಿದ್ದಾರೆ ಎನ್ನುವುದೇ ಜನರ ಭಾವನೆಯನ್ನು ಕೆರಳಿಸಿತ್ತು. 5 ವರ್ಷಗಳ ಕಾಲ ಸದೃಢ ಆಡಳಿತ ನೀಡಿದ್ದ ಕಾಂಗ್ರೆಸ್​ ಪಕ್ಷ ನೂರರ ಗಡಿ ದಾಟಲಾರದೆ ರಾಜ್ಯದಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿತ್ತು. ಇದೀಗ ಲಿಂಗಾಯತರಲ್ಲಿ ಪಂಚಮಸಾಲಿಗಳ ಬೇಡಿಕೆ ಈಡೇರಿಸದ ಆಕ್ರೋಶ ಹೆಚ್ಚಾಗಿದೆ. 

ADVERTISEMENT

ಪಂಚಮಸಾಲಿಗಳ ಕೆಂಗಣ್ಣಿಗೆ ಕೇಸರಿ ಪಾಳಯ ಗುರಿ..!

ಲಿಂಗಾಯತರಲ್ಲೇ ಒಂದು ಒಳಪಂಗಡ ಆಗಿರುವ ಪಂಚಮಸಾಲಿಗಳು ಬಹುಪಾಲು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿದ್ದಾರೆ. 2A ಮೀಸಲಾತಿ ಕೊಡಬೇಕು ಎಂದು ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಸರ್ಕಾರ ಕೂಡ ಹಿಂದುಳಿದ ವರ್ಗಗಳ ಆಯೋದದ ಮೂಲಕ ಕುಲಶಾಸ್ತ್ರ ಅಧ್ಯಯನ ಮಾಡಿ ವರದಿ ನೀಡಲು ಸೂಚಿಸಿತ್ತು. ಈ ನಡುವೆ ಕಳೆದ ವರ್ಷದ ಡಿಸೆಂಬರ್​ನಲ್ಲಿ ಮಧ್ಯಂತರ ವರದಿಯೂ ಸಲ್ಲಿಕೆ ಆಯ್ತು. ಆದರೆ ಪಂಚಮಸಾಲಿಗಳ ಬೇಡಿಕೆ ಈಡೆರಲಿಲ್ಲ. ರಾಜ್ಯ ಸರ್ಕಾರ 2A ಮೀಸಲಾತಿ ಕೇಳಿದ್ದ ಪಂಚಮಸಾಲಿಗಳನ್ನು ಈಗಾಗಲೇ 3B ಪ್ರವರ್ಗದಲ್ಲಿ ಇದ್ದವರನ್ನು 2D ಪ್ರವರ್ಗಕ್ಕೆ ಬದಲಾವಣೆ ಮಾಡಿ ಮೀಸಲಾತಿ ಕೊಟ್ಟಿದ್ದೇವೆ ಎಂದಿತ್ತು. ಅದೂ ಅಲ್ಲದೆ ಕೇವಲ ಪಂಚಮಸಾಲಿಗಳಿಗೆ 2A ಮೀಸಲಾತಿ ಕೇಳಿದ್ದಕ್ಕೆ ಎಲ್ಲಾ ಲಿಂಗಾಯತರನ್ನು 2Dಗೆ ತಂದು ಕೂರಿಸಿತ್ತು. ಇದು ಪಂಚಮಸಾಲಿ ಸಮುದಾಯದ ಕಣ್ಣು ಕೆಂಪಾಗುವಂತೆ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಇದರ ಹೊಡೆತ ಕೇಸರಿ ಪಾಳಯವನ್ನು ಮನೆಗೆ ಕಳುಹಿಸುವ ಎಲ್ಲಾ ಸಾಧ್ಯತೆಗಳು ಇವೆ. 

ಸರ್ಕಾರ ಹಾಗು ಸಿಎಂ ಜೊತೆಗೆ ಚರ್ಚೆ ನಡೆಸಲ್ಲ..!

ಪಂಚಮಸಾಲಿಗಳ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವುದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸ್ವಾಮೀಜಿ, ಸಂಕ್ರಾಂತಿ ದಿನದಿಂದಲೂ ಸತ್ಯಾಗ್ರಹ ಮಾಡಲು ಮಾಡುತ್ತಿದ್ದೇವೆ. ಮೀಸಲಾತಿ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಲೆಗೆ ತುಪ್ಪ ಸವರಿದ್ದಾರೆ. ಇನ್ನು ಮುಂದೆ ಸಿಎಂ ಜೊತೆಗೆ ಯಾವುದೇ ಚರ್ಚೆ ಮಾಡುವುದಿಲ್ಲ. ಮೀಸಲಾತಿ ವಿಚಾರದಲ್ಲಿ ಮೋದಿ ಹಾಗು ಅಮಿತ್​ ಷಾಗೆ ಪತ್ರ ಬರೆದಿದ್ದೇವೆ. ಸ್ಪಂದಿಸುವ ನಿರೀಕ್ಷೆ ಇದೆ. ಚುನಾವಣೆಗೂ ಮುನ್ನವೇ ಮೀಸಲಾತಿ ವಿಚಾರದಲ್ಲಿ ಸ್ಪಷ್ಟತೆ ಸಿಗದಿದ್ದರೆ, 224 ಕ್ಷೇತ್ರದಲ್ಲೂ ಪ್ರವಾಸ ಮಾಡುತ್ತೇನೆ. ಸಮುದಾಯ ಮೀಸಲಾತಿ ಪರವಾಗಿ ಯಾರಿದ್ದಾರೆ..? ಮೀಸಲಾತಿ ವಿರುದ್ಧವಾಗಿ ಯಾರಿದ್ದಾರೆ ಅನ್ನೋ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡ್ತೇನೆ ಎಂದಿದ್ದಾರೆ. ಇದು ಬಿಜೆಪಿ ಪಾಳಯಕ್ಕೆ ನುಂಗಲಾರದ ತುತ್ತಾಗಿದೆ. 

ಕಾಂಗ್ರೆಸ್​ಗೆ  ಎದುರಾದ ಸ್ಥಿತಿ ಬಿಜೆಪಿಗೂ ಎದುರಾಗುತ್ತಾ..? 

2018ರಲ್ಲಿ ಲಿಂಗಾಯತ ಸಮುದಾಯ ಕಾಂಗ್ರೆಸ್​​ ವಿರುದ್ಧ ತಿರುಗಿಬಿದ್ದಿತ್ತು. ಉತ್ತರ ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಾದ್ಯಂತ ಕಾಂಗ್ರೆಸ್​ ಹಿನ್ನೆಡೆಗೆ ಕಾರಣವಾಗಿತ್ತು. ಇದೀಗ ಪಂಚಮಸಾಲಿ ಸಮುದಾಯವೇ ಹೆಚ್ಚಾಗಿ ವಾಸ ಮಾಡುವ ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಬೆಳಗಾವಿ ಸೇರಿದಂತೆ ಸಾಕಷ್ಟು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬಿಜೆಪಿಗೆ ಹಿನ್ನಡೆ ಆಗುವ ಭೀತಿ ಎದುರಾಗಿದೆ. ಪಂಚಮಸಾಲಿ ಸಮುದಾಯದ ಮತದಾರರು ಹಲವಾರು ಕ್ಷೇತ್ರಗಳಲ್ಲಿ ನಿರ್ಣಾಯಕರಾಗಿದ್ದಾರೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ ಕ್ಷೇತ್ರವಾರು ಪ್ರಚಾರ ಮಾಡಿದರೆ ಸಂಕಷ್ಟ ಎದುರಾಗುವ ಭೀತಿ ಜೊತೆಗೆ ಕಟ್ಟರ್​ ಬಿಜೆಪಿ ಕಾರ್ಯಕರ್ತರಾಗಿರುವ ಪಂಚಮಸಾಲಿಗಳು ಪಕ್ಷನಿಷ್ಠೆ ಪಾಲಿಸುತ್ತಾರೆ ಎನ್ನುವ ನಂಬಿಕೆ ಬಿಜೆಪಿಯಲ್ಲ್ಲಿದೆ. ಆದರೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಯಾವ ಪ್ರಮಾಣದಲ್ಲಿ ಜನರನ್ನು ಮೀಸಲಾತಿ ವಿಚಾರದಲ್ಲಿ ಎಷ್ಟರ ಮಟ್ಟಿಗೆ ಪ್ರಚೋದಿಸುತ್ತಾರೆ ಎನ್ನುವುದರ ಆಧಾರದಲ್ಲಿ ಕೇಸರಿ ಪಾಳಯಕ್ಕೆ ಸಂಕಷ್ಟ ತಂದೊಡ್ಡಲಿದೆ. 

Tags: BJPCongress Partyಬಿಜೆಪಿಸಿದ್ದರಾಮಯ್ಯ
Previous Post

PSI ಅಕ್ರಮಕ್ಕೆ ಸಿಕ್ಕಿದೆ ಮಗದೊಂದು ಸಾಕ್ಷ್ಯ..!? ಸರ್ಕಾರದಿಂದ ಜಾಣನಡೆ !!

Next Post

PSI ನೇಮಕಾತಿ ಅಕ್ರಮಕ್ಕೆ ಸಿಕ್ಕಿದೆ ಮಗದೊಂದು ಸಾಕ್ಷ್ಯ..!? ಸರ್ಕಾರದಿಂದ ಜಾಣನಡೆ..

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post
PSI ನೇಮಕಾತಿ ಅಕ್ರಮಕ್ಕೆ ಸಿಕ್ಕಿದೆ ಮಗದೊಂದು ಸಾಕ್ಷ್ಯ..!? ಸರ್ಕಾರದಿಂದ ಜಾಣನಡೆ..

PSI ನೇಮಕಾತಿ ಅಕ್ರಮಕ್ಕೆ ಸಿಕ್ಕಿದೆ ಮಗದೊಂದು ಸಾಕ್ಷ್ಯ..!? ಸರ್ಕಾರದಿಂದ ಜಾಣನಡೆ..

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada