Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಲಿಂಗಾಯತರನ್ನು ಕೆಣಕಿದ್ದ ಕಾಂಗ್ರೆಸ್​, ಈಗ ಪಂಚಮಸಾಲಿಗಳ ಸರದಿ..!

ಕೃಷ್ಣ ಮಣಿ

ಕೃಷ್ಣ ಮಣಿ

January 26, 2023
Share on FacebookShare on Twitter

2013ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದ ಕಾಂಗ್ರೆಸ್​ ಪಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ಉತ್ತಮ ಆಡಳಿತವನ್ನೂ ನೀಡಿತ್ತು. 5 ವರ್ಷಗಳಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿ ಸಿದ್ದರಾಮಯ್ಯ ಉತ್ತಮ ಆಡಳಿತಗಾರ ಎನಿಸಿಕೊಂಡಿದ್ದರು. ಆದರೆ ಕೊನೆಯಲ್ಲಿ ಸರ್ಕಾರ ತೆಗೆದುಕೊಂಡ ನಿರ್ಣಯ ಸರ್ಕಾರ ಸೋಲುಂಡು ವಿಪಕ್ಷ ಸ್ಥಾನವನ್ನು ಸೆರುವಂತಾಯ್ತು. ನಾನು ಧರ್ಮವನ್ನು ಒಡೆಯುವುದಕ್ಕೆ ಮುಂದಾಗಿಲ್ಲ ಎಂದು ಸಿದ್ದರಾಮಯ್ಯ ಪರಿಪರಿಯಾಗಿ ಕೇಳಿಕೊಂಡರೂ ಜನರು ಕೇಳಿಸಿಕೊಳ್ಳುವ ವ್ಯವದಾನ ತೋರಿಸಲಿಲ್ಲ. ಸಿದ್ದರಾಮಯ್ಯ ಲಿಂಗಾಯತ ಹಾಗು ವೀರಶೈವ ಸಮುದಾಯಗಳನ್ನು ಬೇರೆ ಬೇರೆ ಮಾಡಲು ಪ್ರಯತ್ನಿಸಿದ್ದಾರೆ ಎನ್ನುವುದೇ ಜನರ ಭಾವನೆಯನ್ನು ಕೆರಳಿಸಿತ್ತು. 5 ವರ್ಷಗಳ ಕಾಲ ಸದೃಢ ಆಡಳಿತ ನೀಡಿದ್ದ ಕಾಂಗ್ರೆಸ್​ ಪಕ್ಷ ನೂರರ ಗಡಿ ದಾಟಲಾರದೆ ರಾಜ್ಯದಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿತ್ತು. ಇದೀಗ ಲಿಂಗಾಯತರಲ್ಲಿ ಪಂಚಮಸಾಲಿಗಳ ಬೇಡಿಕೆ ಈಡೇರಿಸದ ಆಕ್ರೋಶ ಹೆಚ್ಚಾಗಿದೆ. 

ಹೆಚ್ಚು ಓದಿದ ಸ್ಟೋರಿಗಳು

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!

PRATAP SIMHA | ರಾಜಕೀಯ ಲಾಭಕ್ಕಾಗಿ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಗೆ ದಲಿತರ ಮೇಲೆ ನೈಜ ಕಾಳಜಿ ಇಲ್ಲ

ಪಂಚಮಸಾಲಿಗಳ ಕೆಂಗಣ್ಣಿಗೆ ಕೇಸರಿ ಪಾಳಯ ಗುರಿ..!

ಲಿಂಗಾಯತರಲ್ಲೇ ಒಂದು ಒಳಪಂಗಡ ಆಗಿರುವ ಪಂಚಮಸಾಲಿಗಳು ಬಹುಪಾಲು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿದ್ದಾರೆ. 2A ಮೀಸಲಾತಿ ಕೊಡಬೇಕು ಎಂದು ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಸರ್ಕಾರ ಕೂಡ ಹಿಂದುಳಿದ ವರ್ಗಗಳ ಆಯೋದದ ಮೂಲಕ ಕುಲಶಾಸ್ತ್ರ ಅಧ್ಯಯನ ಮಾಡಿ ವರದಿ ನೀಡಲು ಸೂಚಿಸಿತ್ತು. ಈ ನಡುವೆ ಕಳೆದ ವರ್ಷದ ಡಿಸೆಂಬರ್​ನಲ್ಲಿ ಮಧ್ಯಂತರ ವರದಿಯೂ ಸಲ್ಲಿಕೆ ಆಯ್ತು. ಆದರೆ ಪಂಚಮಸಾಲಿಗಳ ಬೇಡಿಕೆ ಈಡೆರಲಿಲ್ಲ. ರಾಜ್ಯ ಸರ್ಕಾರ 2A ಮೀಸಲಾತಿ ಕೇಳಿದ್ದ ಪಂಚಮಸಾಲಿಗಳನ್ನು ಈಗಾಗಲೇ 3B ಪ್ರವರ್ಗದಲ್ಲಿ ಇದ್ದವರನ್ನು 2D ಪ್ರವರ್ಗಕ್ಕೆ ಬದಲಾವಣೆ ಮಾಡಿ ಮೀಸಲಾತಿ ಕೊಟ್ಟಿದ್ದೇವೆ ಎಂದಿತ್ತು. ಅದೂ ಅಲ್ಲದೆ ಕೇವಲ ಪಂಚಮಸಾಲಿಗಳಿಗೆ 2A ಮೀಸಲಾತಿ ಕೇಳಿದ್ದಕ್ಕೆ ಎಲ್ಲಾ ಲಿಂಗಾಯತರನ್ನು 2Dಗೆ ತಂದು ಕೂರಿಸಿತ್ತು. ಇದು ಪಂಚಮಸಾಲಿ ಸಮುದಾಯದ ಕಣ್ಣು ಕೆಂಪಾಗುವಂತೆ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಇದರ ಹೊಡೆತ ಕೇಸರಿ ಪಾಳಯವನ್ನು ಮನೆಗೆ ಕಳುಹಿಸುವ ಎಲ್ಲಾ ಸಾಧ್ಯತೆಗಳು ಇವೆ. 

ಸರ್ಕಾರ ಹಾಗು ಸಿಎಂ ಜೊತೆಗೆ ಚರ್ಚೆ ನಡೆಸಲ್ಲ..!

ಪಂಚಮಸಾಲಿಗಳ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವುದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸ್ವಾಮೀಜಿ, ಸಂಕ್ರಾಂತಿ ದಿನದಿಂದಲೂ ಸತ್ಯಾಗ್ರಹ ಮಾಡಲು ಮಾಡುತ್ತಿದ್ದೇವೆ. ಮೀಸಲಾತಿ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಲೆಗೆ ತುಪ್ಪ ಸವರಿದ್ದಾರೆ. ಇನ್ನು ಮುಂದೆ ಸಿಎಂ ಜೊತೆಗೆ ಯಾವುದೇ ಚರ್ಚೆ ಮಾಡುವುದಿಲ್ಲ. ಮೀಸಲಾತಿ ವಿಚಾರದಲ್ಲಿ ಮೋದಿ ಹಾಗು ಅಮಿತ್​ ಷಾಗೆ ಪತ್ರ ಬರೆದಿದ್ದೇವೆ. ಸ್ಪಂದಿಸುವ ನಿರೀಕ್ಷೆ ಇದೆ. ಚುನಾವಣೆಗೂ ಮುನ್ನವೇ ಮೀಸಲಾತಿ ವಿಚಾರದಲ್ಲಿ ಸ್ಪಷ್ಟತೆ ಸಿಗದಿದ್ದರೆ, 224 ಕ್ಷೇತ್ರದಲ್ಲೂ ಪ್ರವಾಸ ಮಾಡುತ್ತೇನೆ. ಸಮುದಾಯ ಮೀಸಲಾತಿ ಪರವಾಗಿ ಯಾರಿದ್ದಾರೆ..? ಮೀಸಲಾತಿ ವಿರುದ್ಧವಾಗಿ ಯಾರಿದ್ದಾರೆ ಅನ್ನೋ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡ್ತೇನೆ ಎಂದಿದ್ದಾರೆ. ಇದು ಬಿಜೆಪಿ ಪಾಳಯಕ್ಕೆ ನುಂಗಲಾರದ ತುತ್ತಾಗಿದೆ. 

ಕಾಂಗ್ರೆಸ್​ಗೆ  ಎದುರಾದ ಸ್ಥಿತಿ ಬಿಜೆಪಿಗೂ ಎದುರಾಗುತ್ತಾ..? 

2018ರಲ್ಲಿ ಲಿಂಗಾಯತ ಸಮುದಾಯ ಕಾಂಗ್ರೆಸ್​​ ವಿರುದ್ಧ ತಿರುಗಿಬಿದ್ದಿತ್ತು. ಉತ್ತರ ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಾದ್ಯಂತ ಕಾಂಗ್ರೆಸ್​ ಹಿನ್ನೆಡೆಗೆ ಕಾರಣವಾಗಿತ್ತು. ಇದೀಗ ಪಂಚಮಸಾಲಿ ಸಮುದಾಯವೇ ಹೆಚ್ಚಾಗಿ ವಾಸ ಮಾಡುವ ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಬೆಳಗಾವಿ ಸೇರಿದಂತೆ ಸಾಕಷ್ಟು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬಿಜೆಪಿಗೆ ಹಿನ್ನಡೆ ಆಗುವ ಭೀತಿ ಎದುರಾಗಿದೆ. ಪಂಚಮಸಾಲಿ ಸಮುದಾಯದ ಮತದಾರರು ಹಲವಾರು ಕ್ಷೇತ್ರಗಳಲ್ಲಿ ನಿರ್ಣಾಯಕರಾಗಿದ್ದಾರೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ ಕ್ಷೇತ್ರವಾರು ಪ್ರಚಾರ ಮಾಡಿದರೆ ಸಂಕಷ್ಟ ಎದುರಾಗುವ ಭೀತಿ ಜೊತೆಗೆ ಕಟ್ಟರ್​ ಬಿಜೆಪಿ ಕಾರ್ಯಕರ್ತರಾಗಿರುವ ಪಂಚಮಸಾಲಿಗಳು ಪಕ್ಷನಿಷ್ಠೆ ಪಾಲಿಸುತ್ತಾರೆ ಎನ್ನುವ ನಂಬಿಕೆ ಬಿಜೆಪಿಯಲ್ಲ್ಲಿದೆ. ಆದರೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಯಾವ ಪ್ರಮಾಣದಲ್ಲಿ ಜನರನ್ನು ಮೀಸಲಾತಿ ವಿಚಾರದಲ್ಲಿ ಎಷ್ಟರ ಮಟ್ಟಿಗೆ ಪ್ರಚೋದಿಸುತ್ತಾರೆ ಎನ್ನುವುದರ ಆಧಾರದಲ್ಲಿ ಕೇಸರಿ ಪಾಳಯಕ್ಕೆ ಸಂಕಷ್ಟ ತಂದೊಡ್ಡಲಿದೆ. 

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮೊದಲು ಪ್ರಧಾನಿ ಮೋದಿ ಬಳಿ ತೆರಳಿ ಭಾವುಕರಾದ ಸಿದ್ದಿ ಮಹಿಳೆ ಹೀರಾಬಾಯಿ .. !
Top Story

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮೊದಲು ಪ್ರಧಾನಿ ಮೋದಿ ಬಳಿ ತೆರಳಿ ಭಾವುಕರಾದ ಸಿದ್ದಿ ಮಹಿಳೆ ಹೀರಾಬಾಯಿ .. !

by ಪ್ರತಿಧ್ವನಿ
March 23, 2023
Dr.RAJU : ಯಾವ ಹಣ್ಣು ಸೇವಿಸಿದ್ರೆ ಶುಗರ್‌ ಹೆಚ್ಚಾಗುತ್ತೆ..ಯಾವ ಹಣ್ಣು ತಿನ್ನಲೇಬಾರದು..? #PRATIDHAVNI
ಇದೀಗ

Dr.RAJU : ಯಾವ ಹಣ್ಣು ಸೇವಿಸಿದ್ರೆ ಶುಗರ್‌ ಹೆಚ್ಚಾಗುತ್ತೆ..ಯಾವ ಹಣ್ಣು ತಿನ್ನಲೇಬಾರದು..? #PRATIDHAVNI

by ಪ್ರತಿಧ್ವನಿ
March 25, 2023
ಸಿದ್ದರಾಮಯ್ಯ ಎಲೆಕ್ಷನ್ ಗೆ ನಿಲ್ಲಲು ಕ್ಷೇತ್ರ ಹುಡುಕುತ್ತಿರೋದು ನೋಡಿದ್ರೆ ಅನುಕಂಪ ಬರ್ತಿದೆ : ಹೆಚ್ ಡಿಕೆ ವ್ಯಂಗ್ಯ : Siddaramaiah v/s H D Kumaraswamy
Top Story

ಸಿದ್ದರಾಮಯ್ಯ ಎಲೆಕ್ಷನ್ ಗೆ ನಿಲ್ಲಲು ಕ್ಷೇತ್ರ ಹುಡುಕುತ್ತಿರೋದು ನೋಡಿದ್ರೆ ಅನುಕಂಪ ಬರ್ತಿದೆ : ಹೆಚ್ ಡಿಕೆ ವ್ಯಂಗ್ಯ : Siddaramaiah v/s H D Kumaraswamy

by ಪ್ರತಿಧ್ವನಿ
March 21, 2023
ʼಕೆ ಜಿ ಎಫ್ʼ ,  ʼಕಾಂತಾರ ʼ ಚಿತ್ರಗಳ ನಂತರ ಭಾರತದಾದ್ಯಂತ ಕನ್ನಡದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಹಾರಿಸಿದ “ಕಬ್ಜ”..  KABZAA ‘Box Office’ Collection..!
ಸಿನಿಮಾ

ಬಾಕ್ಸ್‌ ಆಫೀಸ್‌ನಲ್ಲಿ ಕಬ್ಜ ಹವಾ.. ಚಿತ್ರತಂಡದಿಂದ ಸೆಲೆಬ್ರೇಷನ್‌..!

by ಪ್ರತಿಧ್ವನಿ
March 20, 2023
Rahul Gandhi in karnataka : ಕರ್ನಾಟಕಕ್ಕೆ ರಾ. ಗಾ ..! ಯುವ ಕ್ರಾಂತಿ ಸಮಾವೇಶ #PRATIDHVANI
ಇದೀಗ

Rahul Gandhi in karnataka : ಕರ್ನಾಟಕಕ್ಕೆ ರಾ. ಗಾ ..! ಯುವ ಕ್ರಾಂತಿ ಸಮಾವೇಶ #PRATIDHVANI

by ಪ್ರತಿಧ್ವನಿ
March 20, 2023
Next Post
PSI ನೇಮಕಾತಿ ಅಕ್ರಮಕ್ಕೆ ಸಿಕ್ಕಿದೆ ಮಗದೊಂದು ಸಾಕ್ಷ್ಯ..!? ಸರ್ಕಾರದಿಂದ ಜಾಣನಡೆ..

PSI ನೇಮಕಾತಿ ಅಕ್ರಮಕ್ಕೆ ಸಿಕ್ಕಿದೆ ಮಗದೊಂದು ಸಾಕ್ಷ್ಯ..!? ಸರ್ಕಾರದಿಂದ ಜಾಣನಡೆ..

ಅದಾನಿ ಬೆದರಿಕೆಗೆ ಬಗ್ಗಲ್ಲ, ನಮ್ಮ ವಿರುದ್ಧ ಮೊಕದ್ದಮೆ ಹೂಡಲಿ: ಹಿಂಡೆನ್‌ಬರ್ಗ್ ರಿಸರ್ಚ್ ಸವಾಲು

ಅದಾನಿ ಬೆದರಿಕೆಗೆ ಬಗ್ಗಲ್ಲ, ನಮ್ಮ ವಿರುದ್ಧ ಮೊಕದ್ದಮೆ ಹೂಡಲಿ: ಹಿಂಡೆನ್‌ಬರ್ಗ್ ರಿಸರ್ಚ್ ಸವಾಲು

ನಮ್ಮ ರಾಷ್ಟ್ರೀಯ ಭದ್ರತೆ ಸಾಕ್ಷ್ಯಚಿತ್ರದಿಂದ ಧಕ್ಕೆಯಾಗುವಷ್ಟು ದುರ್ಬಲವಾಗಿದೆಯೇ? ತರೂರ್‌ ಪ್ರಶ್ನೆ

ನಮ್ಮ ರಾಷ್ಟ್ರೀಯ ಭದ್ರತೆ ಸಾಕ್ಷ್ಯಚಿತ್ರದಿಂದ ಧಕ್ಕೆಯಾಗುವಷ್ಟು ದುರ್ಬಲವಾಗಿದೆಯೇ? ತರೂರ್‌ ಪ್ರಶ್ನೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist