• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ಮೂರು ರಾಜ್ಯಗಳಿಗೆ ಲಿಂಕ್, ಏನಿದು ಕೋಟಿ ಕೋಟಿ ದೋಣಿದ ಕಥೆ..?

ಪ್ರತಿಧ್ವನಿ by ಪ್ರತಿಧ್ವನಿ
January 25, 2026
in Top Story, ಕರ್ನಾಟಕ, ದೇಶ, ಶೋಧ
0
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Share on WhatsAppShare on FacebookShare on Telegram

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?: ಮೂರು ರಾಜ್ಯಗಳಿಗೆ ಲಿಂಕ್, ಏನಿದು ಕೋಟಿ ಕೋಟಿ ದೋಣಿದ ಕಥೆ..?

ADVERTISEMENT

ಬೆಂಗಳೂರು: ಇಡೀ ದೇಶವೇ ಬೆಚ್ಚಿಬೀಳಿಸುವ ದೇಶದ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಮೂರು ರಾಜ್ಯಗಳಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಎರಡು ಕಂಟೇನರ್ ನಲ್ಲಿ ಅಕ್ರಮವಾಗಿ ಸಾಗ್ತಿಸುತ್ತಿದ್ದ 400ಕೋಟಿ ಹಣ ದರೋಡೆಯಾಗಿರುವ ದೂರು ದಾಖಲಾಗಿದೆ. ಹೀಗಾಗಿ ಎರಡು ಕಂಟೇನರ್ ಹುಡುಕಾಟಕ್ಕೆ ಕರ್ನಾಟಕ ಗೋವಾ ಹಾಗೂ ಮಹಾರಾಷ್ಟ್ರ ಮೂರು ರಾಜ್ಯಗಳ ಪೊಲೀಸರು! ಇಳಿದಿದ್ದಾರೆ.

ದರೋಡೆಯಾಗಿದೆ ಎನ್ನಲಾಗಿರುವ 400ಕೋಟಿ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟನಲ್ಲಿ ದರೋಡೆ ನಡೆದಿತ್ತು‌. ಆದರೆ ಇದು ತಡವಾಗಿ ಬೆಳಕಿಗೆ ಬಂದಿದೆ.

ಪ್ರಮುಖವಾಗಿ ಗೋವಾದಿಂದ ಕಂಟೇನರ್‌ನಲ್ಲಿ ನಾಲ್ಕುನೂರು ಕೋಟಿ ರೂಪಾಯಿ ಸಾಗಾಟದ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರ ನಿದ್ದೆಗೆಡಿಸಿದೆ. ಕಳೆದ 2025ರ ಅಕ್ಟೋಬರ್ 16 ರಂದು ನಡೆದಿದ್ದ ಈ ರಾಬರಿ ಪ್ರಕರಣ ಇದೀಗ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ.

ಅತ್ಯಂತ ದೊಡ್ಡ ದರೋಡೆ ಪ್ರಕರಣವಾಗಿರುವ ಇದನ್ನು ಖುದ್ದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗಂಭೀರವಾಗಿ ಪರಿಗಣಿಸಿದ್ದಾರೆ. ಪ್ರಕರಣದ ಕುರಿತು ತ್ವರಿತ ತನಿಖೆಗೆ ಆಗ್ರಹಿಸಿದ್ದಾರೆ.

ಮಹಾರಾಷ್ಟ್ರ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಎಂಬುವವರಿಗೆ ಸೇರಿದ ಹಣ ಇದಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ರಾಬರಿ ಬಯಲಾಗಿದ್ದೆ, ರಣರೋಚಕ..!

ಇನ್ನೂ ದೇಶದ ಅತಿದೊಡ್ಡ ರಾಬರಿ ಪ್ರಕರಣ ಬೆಳಕಿಗೆ ಬಂದಿರೋದೇ ರಣರೋಚಕವಾಗಿದೆ. ಕಂಟೇನರ್ ‌ದರೋಡೆಯ ನಂತರ ನಾಸಿಕ್ ಮೂಲದ ಸಂದೀಪ್ ಪಾಟೀಲ್ ಎನ್ನುವ ವ್ಯಕ್ತಿಯನ್ನು ಅಪಹರಣ ಮಾಡಲಾಗಿತ್ತು. ಗನ್ ಪಾಯಿಂಟ್ ಹಿಡಿದು ಬಿಲ್ಡರ್ ಕಿಶೋರ್ ಸಾಳ್ವೆ ಸಹಚರರು ಈ ಅಪಹರಣಕ್ಕೆ ಕಾರಣರಾಗಿದ್ದರು.

ಸಂದೀಪ್ ನನ್ನು ಒಂದೂವರೆ ತಿಂಗಳ ಒತ್ತೆಯಾಳಾಗಿಸಿಕೊಂಡು ಸಂದೀಪ್‌ಗೆ ಆರೋಪಿಗಳು ಚಿತ್ರಹಿಂಸೆ ನೀಡಿದ್ದರು.
ಕಂಟೇನರ್ ಹೈಜಾಕ್‌ಗೆ ನೀನೇ ಕಾರಣ ಎಂದು ಸಂದೀಪ್‌ಗೆ ಕಿಶೋರ್ ಸಹಚರರ ಕಿರುಕುಳ ನೀಡಿ, ಹಣದ ದರೋಡೆಗೆ ನೀನೇ ಕಾರಣ. 400 ಕೋಟಿ ರೂಪಾಯಿ ಕೊಡದಿದ್ರೆ, ನಿನ್ನ ಜೀವವೇ ಇರಲ್ಲ ಎಂದು ಬೆದರಿಕೆ ಹಾಕಿದ್ದರು.

ಸಂದೀಪ್ ಹೇಗೋ ಮಾಡಿ ಅಪಹರಣಕಾರರಿಂದ ತಪ್ಪಿಸಿಕೊಂಡು ತಕ್ಷಣ ನಾಸಿಕ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಾಲ್ಕು ನೂರು ಕೋಟಿ ದರೋಡೆಯ ಉಲ್ಲೇಖ..!

ಸಂದೀಪ್ ಪಾಟೀಲ್ ತಮ್ಮ ದೂರಿನಲ್ಲಿ ನಾಲ್ಕುನೂರು ಕೋಟಿ ರೂಪಾಯಿ ಹಣದ ವಾಹನ ಅಪಹರಿಸಿರುವುದು ಉಲ್ಲೇಖಿಸಿದ್ದಾರೆ.
ಈ ದೂರಿನನ್ವಯ ಐವರು ಆರೋಪಿಗಳ ಬಂಧನವಾಗಿದ್ದು, ಇಬ್ಬರಿಗಾಗಿ ಹುಡುಕಾಟ ನಡೆದಿದೆ. ಪ್ರಮುಖವಾಗಿ ಈ ಕೋಟ್ಯಂತರ ರೂಪಾಯಿ ದರೋಡೆಯ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಬಂಧನದ ಬಳಿಕವೇ ಕಂಟೇನರ್ ಹೈಜಾಕ್ ಪ್ರಕರಣ ಸುಖಾಂತ್ಯವಾಗುವ ಸಾಧ್ಯತೆಗಳಿವೆ.

ಮಹಾ ಚುನಾವಣೆಯಲ್ಲಿ ಹರಿಯಿತಾ ಈ ಹಣದ ಹೊಳೆ..?

ಅಲ್ಲದೆ ಈ ದರೋಡೆ ಪ್ರಕರಣ ಸಾಮಾನ್ಯವಾಗಿದ್ದಲ್ಲ, ಯಾಕೆಂದರೆ ಇದು ದೊಡ್ಡವರ ಕೈವಾಡವಿಲ್ಲದೆ ನಡೆಯುವ ಕೆಲಸವಲ್ಲ. ಇದರಲ್ಲಿ ಪ್ರಭಾವಿಗಳ ಪಾಲು ಇರಬಹುದು ಎಂಬ ಚರ್ಚೆಯು ಎಲ್ಲೆಡೆ ಜೋರಾಗಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ನಡೆದ ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಈ ಅಪಾರ ಪ್ರಮಾಣದ ಹಣದ ಹೊಳೆ ಹರಿಯಿತಾ ಎಂಬ ಚರ್ಚೆಗಳು ಇನ್ನೊಂದು ಆಯಾಮದಲ್ಲಿ ಹುಟ್ಟಿಕೊಂಡಿವೆ.

ಬೆಳಗಾವಿ ಎಸ್ ಪಿಗೆ ಸಹಕಾರಕ್ಕೆ ಮನವಿ..

ಇನ್ನೂ ಈ ದರೋಡೆ ಪ್ರಕರಣ ಭೇದಿಸಲು ಮಹಾರಾಷ್ಟ್ರ ಸರ್ಕಾರ ಬೆಳಗಾವಿ ಜಿಲ್ಲೆಯ ಎಸ್ ಪಿ ಅವರಲ್ಲಿ ಮನವಿ ಮಾಡಿದೆ. ಪ್ರಕರಣದ ತನಿಖೆಯಲ್ಲಿ ಸಹಕಾರ ನೀಡುವಂತೆ ಕೋರಿದೆ.

Tags: 10 mysterious places in the world5 best armored luxury suvs in the worldbiggest airport in the worldcheat codescountry with most golddhruv rathee latest videodhruv rathee shortsgta cheat codeshighesthighest paid jobhighest paid jobshighest paying careershighest paying jobhighest paying jobshighest paying occupationshighest salary jobslargest airport in the worldthe highest paying jobstop 10 highest budget movie in indiatop ten highest budget movie in india
Previous Post

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

Next Post

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada