• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೃತಿ ಕುಮಾರಿಗೆ ಮನಬಂದಂತೆ ಇರಿದ ಪಾತಕಿ, ನೋಡ್ತಾ ಇದ್ರೂ ಸಹಾಯಕ್ಕೆ ಬಾರದ ಯುವತಿಯರು

ಪ್ರತಿಧ್ವನಿ by ಪ್ರತಿಧ್ವನಿ
July 26, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಕೋರಮಂಗಲದ ಪಿಜಿಯೊಂದರಲ್ಲಿ (Murder in PG) ನಡೆದ ಕೃತಿ ಕುಮಾರಿ ಎಂಬ ಯುವತಿಯ ಮರ್ಡರ್ (Krithi Kumari Murder Case) ವಿಡಿಯೋ ಸಿಸಿಟಿವಿಯಲ್ಲಿ (CCTV Footage) ಲಭ್ಯವಾಗಿದ್ದು, ಇದೀಗ ವೈರಲ್‌ (Viral video) ಆಗಿದೆ.

ADVERTISEMENT

ಯುವತಿ ರಕ್ತದ ಮಡುವಿನಲ್ಲಿ ಬಿದ್ದು ಸಹಾಯಕ್ಕಾಗಿ (Help) ಆರ್ತನಾದ ಮಾಡುತ್ತಿದ್ದರೂ ಅಲ್ಲಿದ್ದ ಇತರ ಯುವತಿಯರು ಆಕೆಯ ಸಹಾಯಕ್ಕೆ ಬರದೆ ತಮ್ಮಷ್ಟಕ್ಕೇ ಹೋಗಿದ್ದುದು ಕೂಡ ಈ ವಿಡಿಯೋದಲ್ಲಿ ದಾಖಲಾಗಿದೆ.ಜು.23ರಂದು ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ನಡೆದಿತ್ತು. ಆರೋಪಿ ಅಭಿಷೇಕ್ ಕೃತಿ ಕುಮಾರಿಯನ್ನು ಎರಡೇ ನಿಮಿಷದಲ್ಲಿ ಕೊಲೆಮಾಡಿ ಪರಾರಿಯಾಗಿದ್ದಾನೆ.

ಕತ್ತು, ಎದೆ, ಹೊಟ್ಟೆ ಭಾಗ ಸೇರಿ ಹಲವು ಕಡೆ ಇರಿದಿದ್ದಾನೆ. ಕತ್ತನ್ನು ಕೋಳಿ ಕತ್ತಿನಂತೆ ಕೊಯಿದಿದ್ದಾನೆ. ಮೊದಲು ಪಿಜಿ ರೂಮಿನ ಬಾಗಿಲು ಬಡಿದ ಕೊಲೆಗಾರ, ಆಕೆ ಬಾಗಿಲು ತೆರೆದ ಕೂಡಲೇ ಒಳಹೋಗಿದ್ದಾನೆ. ನಂತರ ಕೆಲವು ಸೆಕೆಂಡ್‌ನಲ್ಲಿ ಆಕೆ ಆತನಿಂದ ಪಾರಾಗಲು ಹೊರಗೋಡಿ ಬಂದಿದ್ದು, ಆಕೆಯನ್ನು ಕಾರಿಡಾರ್‌ನಲ್ಲೇ ತಡೆದ ಪಾತಕಿ ಮನಬಂದಂತೆ ಇರಿದಿದ್ದಾನೆ.ಪ್ರಾಣ ಉಳಿಸಿಕೊಳ್ಳಲು ಕೃತಿ ಕುಮಾರಿ ಒದ್ದಾಡಿದ್ದಾಳೆ.

ರಕ್ತದ ಮಡುವಿನಲ್ಲಿದ್ದ ಕೃತಿ ಕುಮಾರಿ ಆರ್ತನಾದ ಮಾಡಿದರೂ ಪಿಜಿಯಲ್ಲಿದ್ದ ಮೂವರು ಯುವತಿಯರು ಮಾತ್ರ ಹತ್ತಿರ ಬಂದಿಲ್ಲ. ಮಾನವೀಯತೆಯನ್ನೇ ಮರೆತಂತೆ ವರ್ತಿಸಿದ ಇವರು ಕೃತಿ ಕುಮಾರಿಯ ಹತ್ತಿರ ಕೂಡ ಹೋಗಿಲ್ಲ. ಕೈಯಲ್ಲಿದ್ದ ಮೊಬೈಲ್ ಫೋನ್‌ ನೋಡ್ತಾ ಆಚೆ ಹೋಗಿದ್ದಾರೆ. ಈ ಎಲ್ಲಾ ದೃಶ್ಯಗಳು ಪಿಜಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಅಭಿಷೇಕ್‌ಗಾಗಿ ಹುಡುಕಾಟ ಆರಂಭಿಸಿದ್ದಾರೆ. ಕೊಲೆಮಾಡಿದ ಬಳಿಕ ಆರೋಪಿ ಅಭಿಷೇಕ್ ಬಟ್ಟೆ ಬದಲಿಸಿಕೊಂಡು ಪರಾರಿಯಾಗಿದ್ದಾನೆ. ಆತ ಭೋಪಾಲ್‌ಗೆ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಕೋರಮಂಗಲ ಪೊಲೀಸರು ಆರೋಪಿಯನ್ನ ಆರೆಸ್ಟ್ ಮಾಡಲು ಭೋಪಾಲ್‌ಗೆ ತೆರಳಿದ್ದಾರೆ.

ಯಾರು ಕೊಲೆಗಾರ? ʼʼಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು.

ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆʼʼ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ. ಕೊರಮಂಗಲ ಪೊಲೀಸರು ಸದ್ಯ ಆರೋಪಿಯ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಎರಡು ದಿನದ ಹಿಂದೆಯಷ್ಟೇ ಕೃತಿ ಪಿಜಿಗೆ ಸೇರಿದ್ದರು. ಆಕೆ ಪಿಜಿಗೆ ಆಗಮಿಸುವ ವೇಳೆಯೂ ಈ ಯುವಕ ಲಗೇಜ್‌ ತೆಗದುಕೊಂಡು ಬಂದಿದ್ದ. ಆಗ ಯುವಕನನ್ನು ಒಳ ಬಿಡುವುದಿಲ್ಲ ಎಂದು ಪಿಜಿ ಸೆಕ್ಯೂರಿಟಿ ತಡೆದಿದ್ದರು. ಪಿಜಿ ಸೆಕ್ಯುರಿಟಿ ಬಳಿ, ಆತ ತನ್ನ ಸಹೋದರ ಎಂದು ಹೇಳಿ ಬೇಗ ಕಳುಹಿಸುತ್ತೇನೆ ಎಂದು ಕೃತಿ ಒಳ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ.

Tags: #[pratidhvanidigital#police departmentcrimehome ministerHuman Rights Commission
Previous Post

ಇ ಬ್ಯಾಟರಿಗಳನ್ನು ಲಿಫ್ಟ್ ನಲ್ಲಿ ಒಯ್ಯದಿರಿ ಜೋಕೆ..!! ಯಾಕಂತೀರಾ ಈ ಸ್ಟೋರಿ ನೋಡಿ.

Next Post

ನನ್ನ ರಾಜಕೀಯ ಜೀವನಕ್ಕೆ ಮಸಿ ಬಳಿಯುವ ಹುನ್ನಾರ !ಮೂಡ ಹಗರಣದ ಬಗ್ಗೆ ಸಿಎಂ ಸಿದ್ದು ಕಿಡಿ !

Related Posts

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು, ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ...

Read moreDetails
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
Next Post
ನನ್ನ ರಾಜಕೀಯ ಜೀವನಕ್ಕೆ ಮಸಿ ಬಳಿಯುವ ಹುನ್ನಾರ !ಮೂಡ ಹಗರಣದ ಬಗ್ಗೆ ಸಿಎಂ ಸಿದ್ದು ಕಿಡಿ !

ನನ್ನ ರಾಜಕೀಯ ಜೀವನಕ್ಕೆ ಮಸಿ ಬಳಿಯುವ ಹುನ್ನಾರ !ಮೂಡ ಹಗರಣದ ಬಗ್ಗೆ ಸಿಎಂ ಸಿದ್ದು ಕಿಡಿ !

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada