ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಬಲ ನಾಯಕರು ಸೋಲಿನ ರುಚಿ ಕಂಡಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯ ಕ್ಷೇತ್ರದತ್ತ ಪ್ರಬಲ ಬಿಜೆಪಿ ನಾಯಕರು ದೃಷ್ಟಿ ನೆಟ್ಟಿದ್ದಾರೆ. ಲೋಕಸಭಾ ಚುನಾವಣೆಗೆ ಇನ್ನೂ 10 ತಿಂಗಳು ಬಾಕಿ ಇರುವಾಗಲೇ ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಪಡೆದುಕೊಳ್ಳಲು ಲಾಭಿ ನಡೆಸಿದ್ದಾರೆ.

ಮುಂದಿನ ಐದು ವರ್ಷಗಳ ಕಾಲ ಅಧಿಕಾರವಿರದೇ ಇರಲು ಸಿದ್ಧವಿರದ ಪ್ರಬಲ ಬಿಜೆಪಿ ನಾಯಕರು ಲೋಕಸಭಾ ಚುನಾವಣೆ ಮೂಲಕವಾದರೂ ಅಧಿಕಾರ ಮರಳಿ ಪಡೆಯುವ ಕನಸು ಕಾಣ್ತಿದ್ದಾರೆ. ಹಾಗಾದರೆ ಆ ನಾಯಕರು ಯಾರು ಅನ್ನೋದಕ್ಕೆ ಇಲ್ಲಿದೆ ಮಾಹಿತಿ
ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸೋತಿರುವ ಬಿ.ಶ್ರೀರಾಮುಲು ಬಳ್ಳಾರಿ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ವರುಣ ಹಾಗೂ ಚಾಮರಾಜನಗರದಲ್ಲಿ ಸೋತಿರುವ ವಿ.ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸೋಕೆ ತಯಾರಿ ನಡೆಸಿದ್ದಾರೆ. ಇನ್ನುಳಿದಂತೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸೋತಿರುವ ಸುಧಾಕರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ, ಹಾಸನದಿಂದ ಸೋತಿರುವ ಪ್ರೀತಂ ಗೌಡ ಹಾಸನ ಲೋಕಸಭಾ ಕ್ಷೇತ್ರ, ಚಿಕ್ಕಮಗಳೂರಿನಲ್ಲಿ ಸೋತಿರುವ ಶೋಭಾ ಕರಂದ್ಲಾಜೆ ಚಿಕ್ಕಮಗಳೂರು – ಉಡುಪಿ ಲೋಕಸಭಾ ಕ್ಷೇತ್ರ, ಚನ್ನಪಟ್ಟಣದಲ್ಲಿ ಸೋತಿರುವ ಸಿ.ಪಿ ಯೋಗೀಶ್ವರ್ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಹಾಗೂ ಬೀಳಗಿಯಲ್ಲಿ ಸೋತಿರುವ ಮುರುಗೇಶ್ ನಿರಾಣಿ ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಪಡೆದುಕೊಳ್ಳುವ ಲೆಕ್ಕಾಚಾರದಲ್ಲಿದ್ದಾರೆ.