
ಮಂಡ್ಯ: ಸಂಸದರಾಗಿ ಆಯ್ಕೆಯಾದ ಬಳಿಕ ಕೇಂದ್ರ ಸಚಿವ ರಾಗಿ ಕಾರ್ಯನಿರ್ವಹಿಸುತ್ತಿರುವ ಎಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೊದಲ ದಿಶಾ ಸಭೆ ನಡೆಯುತ್ತಿದೆ.ಆದರೆ ಈ ಒಂದು ಸೇವೆಗೆ ಜಲ ಉಸ್ತುವಾರಿ ಸಚಿವರು ಆದಂತಹ ಚೆಲುವರಾಯಸ್ವಾಮಿ ಗೈರಾಗಿದ್ದಾರೆ.
ಇಂದು ದಿಶಾ ಸಭೆ ಕರೆಯುವ ಮೂಲಕ ಚಲುವರಾಯಸ್ವಾಮಿಗೆ ಕುಮಾರಸ್ವಾಮಿ ಟಕ್ಕರ್ ನೀಡಿದ್ದಾರೆ. ಇಂದಿನ ದಿಶಾ ಸಭೆಗೆ ಸಚಿವ ಚಲುವರಾಯಸ್ವಾಮಿ ಗೈರು ಖಚಿತವಾಗಿದೆ.ಸದ್ಯ ವಿದೇಶ ಪ್ರವಾಸದಲ್ಲಿರುವುದರಿಂದ ಚಲುವರಾಯಸ್ವಾಮಿ ಸಭೆಗೆ ಗೈರಾಗಲಿದ್ದಾರೆ. ಮತ್ತೊಂದೆಡೆ ಜಿಲ್ಲೆಯಲ್ಲಿ ಉಳಿದ ಕಾಂಗ್ರೆಸ್ ಶಾಸಕರಾದರೂ ಸಭೆಯಲ್ಲಿ ಭಾಗಿಯಾಗುತ್ತಾರಾ? ರಾಜಕೀಯ ಮರೆತು ಅಭಿವೃದ್ಧಿ ವಿಚಾರದಲ್ಲಿ ಒಂದಾಗುತ್ತಾರಾ ಎಂಬ ಚರ್ಚೆ ಸಹ ಇದೆ.