ದೆಹಲಿ : ರಾಜ್ಯದಲ್ಲಿ ಈ ಬಾರಿ ಹೇಗಾದರೂ ಮಾಡಿ ಅಧಿಕಾರ ಉಳಿಸಿಕೊಳ್ಳಬೇಕೆಂಬ ತವಕದಲ್ಲಿ ಬಿಜೆಪಿಯಿದೆ. ಹೀಗಾಗಿ ಪ್ರತಿಯೊಂದು ಕ್ಷೇತ್ರಕ್ಕೂ ಅಭ್ಯರ್ಥಿಗಳನ್ನು ಅಳೆದು ತೂಗಿ ಆಯ್ಕೆ ಮಾಡುತ್ತಿದೆ. ಇಲ್ಲಿಯವರೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಇಂದು ಆಗಲಿದೆ ಎಂದು ಹೇಳಲಾಗ್ತಿದ್ದು. ಅದರೀಗ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿಯೇ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಯಾವ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಂಡಿದೆ. ನಾಳೆ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗಲಿದೆ ಎಂದಿದ್ದಾರೆ.
ಈ ಬಾರಿ ಹಾಲಿ 16 ಶಾಸಕರಿಗೆ ಟಿಕೆಟ್ ನೀಡದಿರಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ. ಶಿವಮೊಗ್ಗದಿಂದ ಕೆ.ಎಸ್ ಈಶ್ವರಪ್ಪ, ಬೈಂದೂರಿನ ಸುಕುಮಾರ ಶೆಟ್ಟಿ, ಪುತ್ತೂರಿನ ಸಂಜೀವ ಮಠಂದೂರು, ಅಥಣಿಯ ಮಹೇಶ್ ಕುಮಟಳ್ಳಿ, ಮೂಡಿಗೆರೆ ಎಂ.ಪಿ ಕುಮಾರಸ್ವಾಮಿ, ಭಟ್ಕಳದ ಸುನೀಲ್ ನಾಯ್ಕ್ ಸೇರಿದಂತೆ ಒಟ್ಟು 16 ಮಂದಿ ಟಿಕೆಟ್ ವಂಚಿತರಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ.