• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಲಾದ ಚಿನ್ನಾಭರಣ ಕಳ್ಳತ!

Any Mind by Any Mind
October 16, 2023
in Top Story, ಕರ್ನಾಟಕ
0
ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಲಾದ ಚಿನ್ನಾಭರಣ ಕಳ್ಳತ!
Share on WhatsAppShare on FacebookShare on Telegram

ಉಪ್ಪಿನಂಗಡಿ: ಪೆರ್ನೆಯ ಕಳೆಂಜ – ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಲಾದ ಚಿನ್ನಾಭರಣಗಳು ಕಳ್ಳತನ ನಡೆದಿದ್ದು ಅ.15ರಂದು ಬೆಳಕಿಗೆ ಬಂದಿದೆ. ಈ ಬಗ್ಗೆ ದೇವಾಲಯದ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ಎನ್. ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ಕಳೆದ ಡಿಸೆಂಬರ್‌ನಲ್ಲಿ ಈ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ವೇಳೆ ಭಕ್ತಾರೊಬ್ಬರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ ಮಾಲೆಯನ್ನು ಸಮರ್ಪಿಸಿದ್ದರು. ಇದಲ್ಲದೆ ಎರಡು ಪವನಿನ ಇನ್ನೊಂದು ಚಿನ್ನದ ಸರವೂ ನಾಪತ್ತೆಯಾಗಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಸರಕಾರ ದೇವಾಲಯಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದ್ದು, ಅಧಿಕಾರ ಸ್ವೀಕರಿಸಿದ ಅವರು ಅ.15ರಂದು ಭಕ್ತಾದಿಗಳ ಸಮ್ಮುಖದಲ್ಲಿ ಮಹಜರು ನಡೆಸಿದಾಗ ಚಿನ್ನದ ಸರಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿವೆ.

ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ
ದೇವಸ್ಥಾನದಲ್ಲಿ ಈಗಾಗಲೇ ಕಮಿಟಿ ಇದ್ದು ಅದನ್ನು ಹೊರತಾಗಿ ಬೇರೊಂದು ಖಾಸಗಿ ಟ್ರಸ್ಟ್ ಅನ್ನು ಸ್ಥಾಪಿಸಿ ದೇಗುಲದಿಂದ ಕಳ್ಳತನ ನಡೆಸಲಾಗಿದೆ. ದೇಗುಲದ ಭದ್ರತಾ ಕೊಠಡಿಯ ಕೀಲಿಕೈಯನ್ನು ಅನಧಿಕೃತವಾಗಿ ಸೃಷ್ಟಿ ದೇಗುಲಕ್ಕೆ ಕನ್ನ ಹಾಕಿದ್ದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕಮಿಟಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಪೊಲೀಸ್ ದೂರು ನೀಡಿರುವ ದೇವಾಲಯದ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ, ಕಬ್ಬಿಣದ ಕಪಾಟನ್ನು ದೇವಾಲಯದ ಕಾರ್ಯಾಲಯದಿಂದ ಕಳವುಗೈದು ಅದನ್ನು ಒಡೆದು ಅದರಲ್ಲಿದ್ದ ದಾಖಲೆಪತ್ರಗಳನ್ನು ನಾಶ ಮಾಡಲಾಗಿದೆ. ಅದರಲ್ಲಿದ್ದ ನಗದು, ಬೆಳ್ಳಿ ವಸ್ತುಗಳನ್ನು ಕಳವು ಮಾಡಲಾಗಿದೆ. ಆ ಖಾಲಿ ಕಪಾಟು ಭದ್ರತಾ ಕೊಠಡಿಯಲ್ಲಿರುವುದು ಕಂಡು ಬಂದಿದೆ.

ಭದ್ರತಾ ಕೊಠಡಿಯ ಕೀಲಿಕೈಯನ್ನು ಅನಧಿಕೃತವಾಗಿ ಹುಟ್ಟು ಹಾಕಿದ ಖಾಸಗಿ ಟ್ರಸ್ಟ್ ಮತ್ತು ಅದಕ್ಕೆ ಪೂರಕವಾದ ಸಮಿತಿಗೆ ದೇವಾಲಯದ ಮಾಜಿ ಅಧ್ಯಕ್ಷ ರೋಹಿತಾಕ್ಷ ಬಾಣಬೆಟ್ಟು, ಟಸ್ಟ್ ಅಧ್ಯಕ್ಷ ಭರತ್ ಕುಮಾರ್ ಆರಿಗ ಪಟ್ಟೆಗುತ್ತು, ಪಡ್ನೂರು ಗ್ರಾಮದ ಅವಿನಾಶ್ ಜೈನ್ ಪರಂಗಾಜೆ ಹಾಗೂ ಇದಕ್ಕೆ ಪೂರಕವಾದ ಸಮಿತಿಯ ಸದಸ್ಯರು ಇದಕ್ಕೆ ಕಾರಣಕರ್ತರಾಗಿದ್ದು, ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಮಿತಿಯ ಎಲ್ಲರ ಕೈವಾಡವಿದೆ – ಸಾರ್ವಜನಿಕರ ಗಂಭೀರ ಆರೋಪ
ಇನ್ನು ದೂರಿನಲ್ಲಿ ಉಲ್ಲೇಖವಾಗಿರುವ ಹೆಸರು ಮಾತ್ರವಲ್ಲದೆ, ಆ ಟ್ರಸ್ಟ್ನ ಕಾರ್ಯದರ್ಶಿ ಅಶೋಕ್ ಕುಮಾರ್ ಮುಳಿಪಡ್ಪು, ಗೌರವ ಸದಸ್ಯ ಎಂ ನಾರಾಯಣ ಭಟ್, ಸದಸ್ಯರುಗಳಾದ ಬಿ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಚಂದಪ್ಪ ಪೂಜಾರಿ ಕಳೆಂಜ ಕೆಳಗಿನಮನೆ, ನವೀನ್ ಕುಮಾರ್ ಪದಬರಿ, ಕೇಶವ ಪೂಜಾರಿ, ಲೋಕೇಶ್ ಗೌಡ, ಸುರೇಶ್ ಕುಮಾರ್ ಕೋಡಿ, ಪ್ರಶಾಂತ್ ಆಚಾರ್ಯ ನೇಂಜ, ರಘುನಾಥ ಮಲ್ಲಡ್ಕ, ಸುರೇಶ್ ಪೂಜಾರಿ ನೂಜೆ, ಶಿವಪ್ರಸಾದ್ ಪಚ್ಚಾಡಿ ಇವರ ಕೈವಾಡ ಸಂಶಯವಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Tags: godGoldTheftVishnumurthy temple
Previous Post

ನಕಲಿಗೂ ಕೊಡುವೆ, ಲೂಟಿಗೂ ಕೊಡುವೆ, ಸ್ವಲ್ಪ ತಾಳ್ಮೆಯಿಂದ ಕಾಯಿರಿ: ಡಿಕೆಶಿ

Next Post

ನಕಲಿ ಸ್ವಾಮಿ, ಲೂಟಿ ರವಿ, ಮಾಜಿ ಸಿಎಂ, ಬ್ಲಾಕ್ ಮೇಲರ್ ಎಲ್ಲರಿಗೂ ಉತ್ತರ ಕೊಡ್ತಿನಿ: ಡಿಸಿಎಂ ಡಿಕೆಶಿ ಗರಂ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಕಾಂಗ್ರೆಸ್‌ 141 ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ: ಡಿಕೆಶಿ

ನಕಲಿ ಸ್ವಾಮಿ, ಲೂಟಿ ರವಿ, ಮಾಜಿ ಸಿಎಂ, ಬ್ಲಾಕ್ ಮೇಲರ್ ಎಲ್ಲರಿಗೂ ಉತ್ತರ ಕೊಡ್ತಿನಿ: ಡಿಸಿಎಂ ಡಿಕೆಶಿ ಗರಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada